Homeಚಳವಳಿಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

ಗಳಿಸಿಕೊಂಡಿದ್ದನ್ನೂ ಕಳೆದುಕೊಳ್ಳಬೇಕಿರುವ ಟ್ರಾನ್ಸ್-ಕ್ವಿಯರ್ ಸಮುದಾಯ : ಕಾರ್ತಿಕ್ ಬಿಟ್ಟು

- Advertisement -
- Advertisement -

ಪಾದರಸದಂತಹ ವ್ಯಕ್ತಿತ್ವದ ಕಾರ್ತಿಕ್ ಬಿಟ್ಟು ಹುಟ್ಟಿದ್ದು ಬೆಂಗಳೂರಿನಲ್ಲಿ. ದೆಹಲಿಯಲ್ಲಿ ಬೆಳೆದು ಹಾರ್ವರ್ಡ್‍ನಲ್ಲಿ ನ್ಯೂರೋ ಬಿಹೇವಿಯರ್ ವಿಜ್ಞಾನದಲ್ಲಿ ಪಿಎಚ್‍ಡಿ ಮಾಡಿದ್ದಾರೆ. ಜಗತ್ತಿನ ಯಾವುದೇ ಮೂಲೆಯಲ್ಲಿ ನಡೆಯುವ ಅನ್ಯಾಯಗಳ ವಿರುದ್ಧ ಸಿಡಿಯುವ ಸಂಗಾತಿ, ಸ್ಥಳೀಯ ದುರ್ಬಲ ಸಮುದಾಯಗಳ ಪರವಾಗಿ ಕೆಲಸ ಮಾಡಲು ಆದ್ಯತೆ. ರೋಹಿತ್ ವೇಮುಲಾ ಆತ್ಮಹತ್ಯೆಯಾದಾಗ ಅದೇ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕನಾಗಿದ್ದು, ದನಿಯೆತ್ತಿದ್ದರು. ಇದೀಗ ಅಶೋಕಾ ವಿಶ್ವವಿದ್ಯಾಲಯದಲ್ಲಿ ಅಧ್ಯಾಪಕರು ಮತ್ತು ವಿಜ್ಞಾನಿ. ಕರ್ನಾಟಕ ಜನಶಕ್ತಿ, ಡಬ್ಲ್ಯುಎಸ್‍ಎಸ್ ಮತ್ತು ಟ್ರಾನ್ಸ್‍ಜೆಂಡರ್ ಸಂಘಟನೆಗಳ ಸದಸ್ಯರು. ಇವರ ಈ ಲೇಖನವನ್ನು ಕನ್ನಡಕ್ಕೆ ರಾಜಶೇಖರ್ ಅಕ್ಕಿಯವರು ಅನುವಾದ ಮಾಡಿದ್ದಾರೆ.

ಇಂದು ಭಾರತದ ಟ್ರಾನ್ಸ್‌ಜೆಂಡರ್ ಮತ್ತು ಕ್ವೀಯರ್ (ಲೈಂಗಿಕ ಅಲ್ಪಸಂಖ್ಯಾತ) ಸಮುದಾಯಗಳು ಸಂದಿಗ್ಧದಲ್ಲಿ ಇದ್ದಾರೆ. ಒಂದೆಡೆ ಭಾರತೀಯ ನ್ಯಾಯಾಲಯಗಳು ಎನ್‍ಎಎಲ್‍ಎಸ್‍ಏ ತೀರ್ಪಿನ ಅಡಿಯಲ್ಲಿ ನಮಗೆ ಹಿಂದೆಂದೂ ಇಲ್ಲದಂತಹ ನಮ್ಮನ್ನು ನಾವು ನಾವೇ ಇಚ್ಛಿಸಿದ ಲಿಂಗದೊಂದಿಗೆ ಗುರುತಿಸಿಕೊಳ್ಳುವ ಹಕ್ಕನ್ನು ನೀಡಿದ್ದಾರೆ. ಇದರಿಂದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ನಮ್ಮ ದೇಹಗಳು ಹೇಗೆ ಕಾಣಿಸಿಕೊಂಡರೂ ನಮ್ಮ ಗುರುತಿನ ದಾಖಲೆಗಳಲ್ಲಿಯೂ ನಮ್ಮ ಆಯ್ಕೆಯ ಲಿಂಗದೊಂದಿಗೆ ಗುರುತಿಸಕೊಳ್ಳಬಹುದಾಗಿದೆ. ಈ ತೀರ್ಪಿನ ಮುಖಾಂತರ ಉಚ್ಚ ನ್ಯಾಯಾಲಯವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಈ ದೇಶದಲ್ಲಿ ಆದ ಅನ್ಯಾಯವನ್ನು ಗುರುತಿಸಿದೆ ಹಾಗೂ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ, ಉಚಿತ ಆರೋಗ್ಯ ಸೇವೆ, ವಸತಿ ಮುಂತಾದ ಸವಲತ್ತುಗಳನ್ನು ನೀಡಬೇಕೆಂದು ಹೇಳಿದೆ. ಸೆಕ್ಷನ್ 377ಅನ್ನು ತೆಗೆದುಹಾಕುವುದರಿಂದ ನ್ಯಾಯಾಲಯಗಳು ಒಂದು ಬಲವಾದ ಸಂದೇಶವನ್ನೂ ನೀಡಿದಂತಾಗಿದೆ.

ಇದೇ ಹೊತ್ತಿನಲ್ಲಿ ಶಾಸಕಾಂಗವು ಟ್ರಾನ್ಸ್‌ಜೆಂಡರ್ ಸಮುದಾಯವನ್ನು ಅಪರಾಧೀಕರಿಸುವ ಮಸೂದೆಗಳನ್ನು ಅತ್ಯಂತ ತ್ವರಿತ ಗತಿಯಲ್ಲಿ ಜಾರಿ ಮಾಡುತ್ತಿದೆ; ಇದರಿಂದ ಪರಿಸ್ಥಿತಿ ಮೊದಲಿಗಿಂತಲೂ ಹದಗೆಡಲಿದೆ. ಬಿಜೆಪಿ ಸರಕಾರವು 2015ರಲ್ಲಿ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ರಕ್ಷಣೆ) ಮಸೂದೆ ರಚಿಸಿತು. ಈ ಮಸೂದೆಯ ಹೆಸರೇ ಅತ್ಯಂತ ಗೊಂದಲಮಯವಾಗಿದೆ; ಏಕೆಂದರೆ, ರಾಜ್ಯಸಭೆಯಲ್ಲಿ ಡಿಎಮ್‍ಕೆಯ ತಿರುಚಾ ಶಿವ ಅವರು, ಟ್ರಾನ್ಸ್‌ಜೆಂಡರ್ ಸಮುದಾಯ ಸಹಾಯದಿಂದ ಇದೇ ಹೆಸರಿನಲ್ಲಿ ರಚಿಸಲಾದ ಮಸೂದೆಯನ್ನು ಮಂಡಿಸಿದ್ದರು. ಆದರೆ ಲೋಕಸಭೆಯಲ್ಲಿ ಈ ಮಸೂದೆಯನ್ನು ತಂದಾಗ ಮೂಲ ಮಸೂದೆಯಲ್ಲಿದ್ದ ಎಲ್ಲಾ ಸಕಾರಾತ್ಮಕ ಅಂಶಗಳು ಕಣ್ಮರೆಯಾಗಿದ್ದವು. ಲೋಕಸಭೆಯಲ್ಲಿ ಮಂಡಿಸಿದ ಮಸೂದೆಯಲ್ಲಿ ಆರೋಗ್ಯ ಸೇವೆ, ಶಿಕ್ಷಣ ಮತ್ತು ಉದ್ಯೋಗದಲ್ಲಿ ತಾರತಮ್ಯ ಮಾಡಿದರೆ ಇರಬೇಕಾದ ದಂಡ ಇರಲಿಲ್ಲ ಹಾಗೂ ಈ ಕ್ಷೇತ್ರಗಳಲ್ಲಿ ಮೀಸಲಾತಿ ಅವಕಾಶವನ್ನು ಕಲ್ಪಿಸದೇ ಸಾಂಪ್ರದಾಯಿಕ ಭಿಕ್ಷಾಟನೆಯನ್ನು ಅಪರಾಧೀಕರಿಸಲಾಯಿತು. ಟ್ರಾನ್ಸ್‌ಜೆಂಡರ್ ಸಮುದಾಯವು ದೀರ್ಘಕಾಲಿಕ ಹೋರಾಟ ನಡೆಸಿದ ನಂತರ 2019ರ ಅವೃತ್ತಿಯಲ್ಲಿ ಆ ತಿದ್ದುಪಡಿಗಳನ್ನು ಹಿಂಪಡೆಯಲಾಯಿತು.

ಆದರೂ, ಸುಪ್ರೀಂಕೋರ್ಟಿನ ಎನ್‍ಏಎಲ್‍ಎಸ್‍ಏ ತೀರ್ಪಿನಲ್ಲಿ ಅಡಕವಾದ ಸ್ವ ಇಚ್ಛೆಯಿಂದ ತಮಗಿಷ್ಟವಾದ ಲಿಂಗವನ್ನು ಗುರುತಿಸುವ ಹಕ್ಕನ್ನು ಈ ಮಸೂದೆ ಉಲ್ಲಂಘಿಸುತ್ತದೆ. ಈಗ ಆ ವ್ಯಕ್ತಿಗಳು ಮೊದಲು ತಾವು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳೆಂದು ಸರಕಾರಕ್ಕೆ ಬಹಿರಂಗಪಡಿಸಬೇಕು ಹಾಗೂ ಜಿಲ್ಲಾ ನ್ಯಾಯಾಧೀಶರ ನೇತೃತ್ವದ ಸಮಿತಿಯಿಂದ ತಮ್ಮ ಗುರುತಿನ ದಾಖಲೆಗಳನ್ನು ಪಡೆಯಲು ಮನವಿ ಸಲ್ಲಿಸಬೇಕು ಎನ್ನುವುದನ್ನು ಕಡ್ಡಾಯಗೊಳಿಸಿದೆ. ಹಾಗೂ ನಮ್ಮ ಆಯ್ಕೆಯ ಯಾವುದೇ ಇತರ ಲಿಂಗದಲ್ಲಿ ಗುರುತಿನ ದಾಖಲೆಗಳನ್ನು ಪಡೆಯಬೇಕಾದರೆ ಶಸ್ತ್ರಚಿಕಿತ್ಸೆಯ ದಾಖಲೆಗಳನ್ನು ಸಲ್ಲಿಸಬೇಕು ಎಂತಲೂ ಹೇಳಿದೆ. ಇದರ ಅರ್ಥ, ಒಬ್ಬ ಟ್ರಾನ್ಸ್ ಪುರುಷ, ಹಾರ್ಮೋನುಗಳನ್ನು ಸೇವಿಸಿ, ಗಡ್ಡವನ್ನು ಬೆಳೆಸಿದರೂ, ಒಂದು ವೇಳೆ ಆತ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಇಚ್ಛಿಸದಿದ್ದರೆ ತನ್ನ ಆಯ್ಕೆಯ ಲಿಂಗಕ್ಕೆ ವಿರುದ್ಧವಾದ ಲಿಂಗದ ಗುರುತಿನೊಂದಿಗೇ ಜೀವಿಸಬೇಕಾಗುತ್ತದೆ. ಈ ಮಸೂದೆಯು ಬೇರೆ ಬೇರೆ ರೀತಿಯ ಟ್ರಾನ್ಸ್ ವ್ಯಕ್ತಿಗಳ ಮೇಲಿನ ಲೈಂಗಿಕ ದೌರ್ಜನ್ಯಕ್ಕೆ ಬೇರೆ ಬೇರೆ ಪ್ರಮಾಣದ ಶಿಕ್ಷೆ ನೀಡುವ ತಾರತಮ್ಯವನ್ನೂ ಹೊಂದಿದೆ.

ಬಹುಶಃ ನಮ್ಮ ಹಕ್ಕುಗಳ ಮೇಲೆ ಇಂತಹ ಕಾನೂನು ದಾಳಿಗೆ ಪ್ರತಿಕ್ರಿಯೆಯಾಗಿಯೇ, ನಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳ ಅವಶ್ಯಕತೆ ಎಲ್ಲರಿಗೂ ಕಾಣಿಸುವಂತಾಗಲಿ ಎಂದು ಟ್ರಾನ್ಸ್‌ಜೆಂಡರ್ ಸಮುದಾಯವು 2019ರ ಚುನಾವಣೆಗಳಲ್ಲಿ ಗಟ್ಟಿಯಾಗಿ ತೊಡಗಿಸಿಕೊಂಡಿತ್ತು. ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಚುನಾವಣೆಯಲ್ಲಿ ಬಹಳ ಹಿಂದಿನಿಂದ ಭಾಗವಹಿಸುತ್ತಿದ್ದರೂ, 2019ರ ಚುನಾವಣೆ ಮುಂಚೆಗಿಂತ ಭಿನ್ನವಾಗಿತ್ತು. ದೇಶದ ವಿವಿಧೆಡೆಯಲ್ಲಿ 2019ರ ಚುನಾವಣೆಯಲ್ಲಿ ಭಾಗವಹಿಸಿದ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರ ಸಂಖ್ಯೆ ಗಣನೀಯವಾಗಿತ್ತು. ಹಾಗೂ ಅದಕ್ಕಿಂತ ಮುಖ್ಯವಾಗಿ ಟ್ರಾನ್ಸ್‌ಜೆಂಡರ್ ಸಮುದಾಯದ ವಿಷಯಗಳನ್ನು ರಾಜಕೀಯ ಪಕ್ಷಗಳ ಚುನಾವಣಾ ಪ್ರಣಾಳಿಕೆಗಳಲ್ಲಿ ವಿವರವಾಗಿ ಉಲ್ಲೇಖಸಿದ್ದು 2019ರ ಚುನಾವಣೆಗಳಲ್ಲಿ.

ಪ್ರಸ್ತುತ ಮಸೂದೆಯ ವಿರುದ್ಧ ಹೋರಾಟ ಮಾಡುವ ಭರವಸೆಯನ್ನು ಕೆಲವು ರಾಜಕೀಯ ಪಕ್ಷಗಳ ಪ್ರಣಾಳಿಕೆಗಳು ಸ್ಪಷ್ಟವಾಗಿ ಹೇಳಿದವು; ಕಾಂಗ್ರೆಸ್ ಪಕ್ಷ, ಸಿಪಿಎಮ್ ಹಾಗೂ ಹೊಸದಾಗಿ ರಚಿತಗೊಂಡ ವಂಚಿತ್ ಬಹುಜನ್ ಅಘಾಡಿ ಪಕ್ಷದ ಪ್ರಣಾಳಿಕೆಗಳು ಈ ಭರವಸೆಯನ್ನು ಒಳಗೊಂಡ ಕೆಲವು ಪಕ್ಷಗಳು. ಅದರೊಂದಿಗೆ, ಹಲವಾರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳು ಚುನಾವಣೆಗೂ ಸ್ಪರ್ಧಿಸಿದರು; ಅಲಹಾಬಾದ್‍ನಲ್ಲಿ ಭವಾನಿ ಸಿಂಗ್ ಆಪ್‍ನಿಂದ ಸ್ಪರ್ಧಿಸಿದರೆ, ಇತರ ಅಭ್ಯರ್ಥಿಗಳು ಸ್ವತಂತ್ರ ಅಭ್ಯರ್ಥಿಗಳಾಗಿ ಸ್ಪರ್ಧಿಸಿದರು; ಅವರೆಂದರೆ ಎರ್ನಾಕುಲಮ್‍ದಿಂದ ‘ಚಿಂಚು’ ಅಸ್ವಥಿ ರಾಜಪ್ಪನ್, ಅಹ್ಮದಾಬಾದ್‍ನಿಂದ ರಾಜು ಮಾತಾಜಿ, ಮುಂಬಯಿಯಲ್ಲಿ ಜತಿನ್ ರಂಗರಾವ್ ಹರ್ನೆ ಮತ್ತು ಸ್ನೇಹಾ ಕಾಳೆ ಹಾಗೂ ಚೆನ್ನೈನಿಂದ ಎಮ್.ರಾಧಾ.

ಬಿಜೆಪಿಯ ಗೆಲವು ಟ್ರಾನ್ಸ್‌ಜೆಂಡರ್ ಸಮುದಾಯಕ್ಕೆ ಇನ್ನಷ್ಟು ದುಗುಡವನ್ನು ತಂದಿದೆ. ಈ ಕಾರಣದಿಂದಲೇ ಅವರ ನೀತಿಗಳ ವಿರುದ್ಧ ಸಮುದಾಯದ ರಾಜಕೀಯ ಪಾಲ್ಗೊಳ್ಳುವಿಕೆ ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಬಹುದು. ಬಿಜೆಪಿಯ ಪ್ರಣಾಳಿಕೆಯು ತುಂಬಾ ನಯವಾಗಿ ‘ಸೂಕ್ತ ಸಾಮಾಜಿಕ, ಆರ್ಥಿಕ ಮತ್ತು ನೀತಿಗಳ ಕ್ರಮಗಳ’ ಮೂಲಕ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳನ್ನು ಮುಖ್ಯವಾಹಿನಿ ತರಲಾಗುವುದು’, ‘ಸ್ವ-ಉದ್ಯೋಗ’ ಮತ್ತು ‘ಕೌಶಲ್ಯ ಅಭಿವೃದ್ಧಿ’ಯನ್ನು ಸುನಿಶ್ಚಿತಗೊಳಿಸಲಾಗುವುದು ಎಂದೂ ಹೇಳಿತು. ಆದರೆ, ಭಿಕ್ಷಾಟನೆ ಮತ್ತು ಲೈಂಗಿಕ ವೃತ್ತಿಯ ರೂಪದಲ್ಲಿ ಸಮುದಾಯವು ಸ್ವ-ಉದ್ಯೋಗದಲ್ಲಿಯೇ ತೊಡಗಿದೆ, ಇವರೆಡೂ ಸಂಕಷ್ಟದಿಂದ ಹುಟ್ಟಿಕೊಂಡ ಸ್ವಯಂ-ಸಂಘಟಿತ ಜೀವನೋಪಾಯಗಳಾಗಿವೆ.

ಮುಂದಿನ ದಿನಗಳು ಅಷ್ಟು ಚೆನ್ನಾಗಿರುವುದಿಲ್ಲವೆಂಬುದು ಖಚಿತ. ಆರ್ಥಿಕ ಬಿಕ್ಕಟ್ಟಿನೆದುರು, ಫ್ಯಾಸಿಸ್ಟ್ ತತ್ವಾಧಾರಿತ ಹಿಂದೂ ಬಹುಸಂಖ್ಯಾತವಾದಿ ಸಂಘಟನೆಯಿಂದ ಆಳಲ್ಪಡುತ್ತಿರುವ ಈ ದೇಶವು ಒಂದು ದೀರ್ಘ ಸಾಮಾಜಿಕ ರಾಜಕೀಯ ಪ್ರಕ್ರಿಯೆಯ ಮೂಲಕ ಹಾದುಹೋಗಲೇಬೇಕಿದೆ ಎಂಬುದು ಸ್ಪಷ್ಟ.

ಅಂಕಿಅಂಶಗಳ ಪ್ರಕಾರ ಎಲ್‍ಜಿಬಿಟಿಕ್ಯುಐಏ (LGBTQIA) ಎಂದು ಗುರುತಿಸಿಕೊಂಡವರ ಸಂಖ್ಯೆ ಭಾರತದ ಜನಸಂಖ್ಯೆಯ ಶೇ.4-11ರಷ್ಟಿದೆ. ಅಂದರೆ, ಈ ಸಮುದಾಯ ವೋಟ್ ಬ್ಯಾಂಕ್ ಎಂದು ಪರಿಗಣಿಸುವಷ್ಟು ದೊಡ್ಡದಾಗಿದೆ. ಆದರೆ ನನ್ನ ಚಿಂತೆ LGBTQIA ಸಮುದಾಯದ ಸದಸ್ಯರ ಮತ್ತು ಅವರ ಹೆಚ್ಚುತ್ತಿರುವ ಸಾರ್ವಜನಿಕ ಅಸ್ತಿತ್ವ ಅಲ್ಲ; ತುಳಿತಕೊಳಪಟ್ಟ ಇತರ ಸಮುದಾಯಗಳೊಂದಿಗೆ ಈ ಸಮುದಾಯವು ಹೇಗೆ ಸಹ-ಸಂಬಂಧವನ್ನು ಸಾಧಿಸಬಹುದು ಎನ್ನುವುದು ನನ್ನ ಚಿಂತೆ. ಸ್ವ-ವಿಮೋಚನೆಯ ಒಂದು ಸಂಕುಚಿತ ರೂಪಕ್ಕಾಗಿ ಹೋರಾಡುವುದು ನಮ್ಮ ಗುರಿಯಾಗಬಾರದು. ಅದರ ಬದಲಿಗೆ ಇಂದು ಇರುವ ಕ್ರೂರ, ಅಸಮಾನ ಸಮಾಜದಿಂದ ಎಲ್ಲರನ್ನೂ ವಿಮೋಚನೆಗೊಳಿಸುವುದು ನಮ್ಮ ಗುರಿಯಾಗಿರಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...