HomeUncategorizedಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಇಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

- Advertisement -
- Advertisement -

ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ.

ಮಹಾರಾಷ್ಟ್ರ ಚುನಾವಣಾ ಅಖಾಡ ಸಿದ್ದವಾಗಿದ್ದು ಕಣವನ್ನು ಎನ್‍ಡಿಎಗಾಗಿಯೇ ಹದಗೊಳಿಸಿದಂತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣದ ಕುಸ್ತಿಪಟು ಕಚ್ಚಿಕಟ್ಟಿಕೊಂಡು ತೊಡೆ ತಟ್ಟುತ್ತಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಭಾರೀ ಕರತಾಡನ ಕೇಳಿಬರುತ್ತಿದೆ. ಆದರೆ ಎದುರಾಳಿ ಪಡೆಯಿಂದ ಯಾರು ಅಂಕಣಕ್ಕೆ ಇಳಿಯುವುದೆಂದು ಇನ್ನೂ ನಿರ್ಧಾರವಾಗಿಲ್ಲ. ಇನ್ನು ಸಿದ್ಧತೆ ಎಲ್ಲಿಂದ ಬಂತು? ಆಶ್ಚರ್ಯವಾದರೂ ಮಹಾರಾಷ್ಟ್ರ ಚುನಾವಣೆಯಲ್ಲಿ ಕಂಡು ಬರುತ್ತಿರುವ ವಾಸ್ತವ ಇದೇ ಆಗಿದೆ.

ಚುನಾವಣೆ ಹತ್ತಿರವಿದ್ದಾಗಲೂ ಕಾಂಗ್ರೆಸ್ ಮತ್ತು NCP ಯಾಕೆ ಸಿದ್ದತೆ ಮಾಡಿಕೊಂಡಿಲ್ಲ ಅಂತ ನೋಡಲು ಹೋದರೆ ಕಂಡು ಬರುವ ದೃಶ್ಯ ಯಾರನ್ನಾರೂ ಬೆಚ್ಚಿ ಬೀಳಿಸುತ್ತದೆ. ಅನೇಕ ಪೈಲ್ವಾನರನ್ನು ಹೊಂದಿರುವ ಕಾಂಗ್ರೆಸ್ ಮತ್ತುNCPಯಲ್ಲಿ ಯಾವ ಪೈಲ್ವಾನನ್ನು ಅಖಾಡಕ್ಕೆ ಇಳಿಸುವುದು ಅಂತ ಗೊಂದಲ ಒಂದೆಡೆಯಾದರೆ, ಇನ್ನೊಂದೆಡೆ ಯಾವ ಪೈಲ್ವಾನ ಯಾರ ಪರ ಆಡುತ್ತಾನೆ ಅಂತ ತಿಳಿಯದೇ ಇರುವುದು ಇನ್ನೊಂದು ಕಾರಣ.

ಏನಪ್ಪ ಇದು ಯಾರ ಪರ ಅನ್ನುವುದು ಅಂತ ಕೇಳಿದರೆ ಅಲ್ಲೆ ಇರುವುದು ಟ್ವಿಸ್ಟ್. ಕಾಂಗ್ರೆಸ್ ಮತ್ತು ಓಅP ಪ್ರಮುಖ ನಾಯಕರನ್ನು EDತನ್ನ ತೆಕ್ಕೆಗೆ ತೆಗೆದುಕೊಂಡು ಆಗಿದೆ. ಮರಾಠ ಓಟ್ ಬ್ಯಾಂಕ್ ಹೊಂದಿರುವ ನಾಯಕರು, ಸಹಕಾರ ಚಳುವಳಿಯಲ್ಲಿ ಮುಂಚುಣಿಯಲ್ಲಿರುವ ನಾಯಕರು, ಶಿವಾಜಿಯ ವಂಶಸ್ಥರು, ಕಾಂಗ್ರೆಸ್ RSS ಪಕ್ಷದ ಹಿಂದುಳಿದ ವರ್ಗದ ನಾಯಕರು ಕಮಲದ ಬಲೆಯಲ್ಲಿ ಬಿದ್ದಾಗಿದೆ. ಇನ್ನು ಉಳಿದ ಪ್ರಮುಖ ನಾಯಕರ ಮೇಲೆ ಇಆ ತೂಗುಕತ್ತಿ ಬೀಸುತ್ತಿದೆ. ಹಾಗಾಗಿ ಯಾರ್ಯಾರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ, ಇನ್ಯಾರು ಸ್ಪಾಟ್ ಫಿಕ್ಸಿಂಗ್ ಬಲೆಯಲ್ಲಿ ಇದ್ದಾರೆ ಎಂಬ ಲೆಕ್ಕ ಹಾಕುವುದರಲ್ಲಿ ವಿರೋಧ ಪಕ್ಷಗಳು ಸುಸ್ತಾಗಿವೆ. ಪಕ್ಷ ಬಿಟ್ಟು ಹೋದ ಶತ್ರುವನ್ನು ಎದುರಿಸುವುದು ಸುಲಭ, ಆದರೆ ಮನೆಯಲ್ಲಿ ಬಿಲ ಕೊರೆಯುವ ಶತ್ರುವನ್ನು ಎದುರಿಸುವುದು ಹೇಗೆ.. ಹೀಗಾಗಿ ಯಾರನ್ನು ಕಚ್ಚೆಕಟ್ಟಿ ಕಣಕ್ಕಿಳಿಸಿದರೆ ತಮ್ಮ ಪರ ಹಲ್ಲುಕಚ್ಚಿ ಹೋರಾಡಬಲ್ಲರು ಅಂತ ನಿರ್ಧರಿಸುವುದು ಕಾಂಗ್ರೆಸ್ ಹೈಕಮಾಂಡ್‍ನ ಸೋನಿಯಾ ಗಾಂಧಿ ಮತ್ತು ಓಅPಯ ಅಗ್ರನಾಯಕ ಶರದ್ ಪವಾರ್‍ಗೆ ಅಯೋಮಯದ ಸಂಗತಿಯಾಗಿದೆ.

ಅಳಿದುಳಿದ ಆಟಗಾರರನ್ನು ಹುರಿದುಂಬಿಸಿ ಚುನಾವಣಾ ಕಣಕ್ಕೆ ಧುಮುಕಬೇಕಾದ ಕಾಂಗ್ರೆಸ್ ಹೈಕಮಾಂಡ್ ಮಂಕಾಗಿದೆ, ಸೋನಿಯಾಗಾಂಧಿ ಆರೋಗ್ಯ ಸಾಥ್ ಕೊಡುತ್ತಿಲ್ಲ. ಇನ್ನು ರಾಹುಲ್‍ಗಾಂಧಿ 2019ರ ಲೋಕಸಭಾ ಚುನಾವಣೆಯ ಸೋಲಿನ ಹ್ಯಾಂಗ್‍ಹೋವರ್‍ನಿಂದ ಹೊರಬಂದಿಲ್ಲ. ಇದು ಕಾಂಗ್ರೆಸ್ ಕಥೆಯಾದರೆ, ಓಅP ಕಥೆ ಇನ್ನೂ ಕೆಟ್ಟದಾಗಿದೆ. ಇಲ್ಲಿನ ಚುನಾವಣಾ ರಾಜಕೀಯದಲ್ಲಿ ಗೆಲ್ಲಬಲ್ಲಂತಹ ನಾಯಕರು ಮುಖ್ಯಮಂತ್ರಿ ಫಡ್ನವಿಸ್ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅಗ್ರ ಮರಾಠ ನಾಯಕ ಶರದ್‍ಪವಾರ್ ಮತ್ತು ಅವರ ಸಹೋದರನ ಮಗನ ಮೇಲೆ ಅಮಿತ್ ಶಾ ಇಆ ಕತ್ತಿಯನ್ನು ಕಟ್ಟಿದ್ದಾರೆ. ಇನ್ನೊಬ್ಬ ಪ್ರಮುಖ ನಾಯಕ ಪ್ರಫುಲ್ ಪಟೇಲ್‍ಗೂ ಹಗರಣ ಗಂಟು ಕಟ್ಟಲಾಗಿದೆ. ಹೀಗಾಗಿ ಮಾನಸಿಕವಾಗಿ ಸೋತು ಹೋಗಿರುವ ಪಡೆ ಕಣದಲ್ಲಿ ತೊಡೆ ತಟ್ಟುತ್ತಿದ್ದರು ಯಾರಿಗೂ ಕೇಳುತ್ತಿಲ್ಲ.

ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ 2ನೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈಗ 2ನೇ ಇನಿಂಗ್ಸ್‍ಗೆ ಸಿದ್ದವಾಗಿದ್ದಾರೆ. ಎದುರಾಳಿ ಇಲ್ಲದೆ ಅಖಾಡದಲ್ಲಿ ತೊಡೆತಟ್ಟಿ ಹೂಂಕರಿಸುತ್ತಿದ್ದಾರೆ. ಹೈಕಮಾಂಡ್, ಪ್ರಧಾನ ಮಂತ್ರಿ ನರೇಂದ್ರಮೋದಿ ಮತ್ತು ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ಖSS ಸಂಪೂರ್ಣ ಬೆಂಬಲ ಪಡೆದಿರುವ ದೇವೇಂದ್ರ ಫಡ್ನವೀಸ್‍ಗೆ ಮಹಾರಾಷ್ಟ್ರದಲ್ಲಿ ಪರ್ಯಾಯವಿಲ್ಲದಂತಾಗಿದೆ.

ಕಳೆದ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಶಿವಸೇನಾ ಮತ್ತು ಬಿಜೆಪಿಯ ಚುನಾವಣಾ ಪೂರ್ವ ಮೈತ್ರಿ ಮೂಡಿಸುವಲ್ಲಿ ಫಡ್ನವೀಸ್ ಸಫಲವಾದರಷ್ಟೇ ಅಲ್ಲ, ಸಾಂಪ್ರದಾಯಿಕವಾಗಿ ದೊಡ್ಡಣ್ಣನಾಗಿದ್ದ ಶಿವಸೇನೆಯನ್ನು ತಮ್ಮನ ಸ್ಥಾನಕ್ಕೆ ತಂದು ನಿಲ್ಲಿಸುವಲ್ಲಿ ಈ ಬ್ರಾಹ್ಮಣ ನಾಯಕನ ತಂತ್ರಗಾರಿಕೆ ಎದ್ದು ಕಾಣುತ್ತದೆ. ಹೀಗಾಗಿ ಈ ಬಾರಿBJP164 ಮತ್ತು ಶಿವಸೇನೆ 124 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ದುರ್ಬಲಗೊಂಡ ಪ್ರತಿಪಕ್ಷಗಳು ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿವೆ. ಹೈಕಮಾಂಡ್‍ನ ಸಂಪೂರ್ಣ ಬೆಂಬಲದಿಂದಾಗಿ ಫಡ್ನವೀಸ್‍ರ ಸ್ವಪಕ್ಷದ ಎದುರಾಳಿಗಳು ಬಾ¯ ಮುದುರಿಕೊಂಡಿದ್ದಾರೆ. ಮರಾಠ ಮೀಸಲಾತಿಯ ಹೋರಾಟವನ್ನು ನಿಭಾಯಿಸಿದ ಮೇಲೆ ದೇವೇಂದ್ರ ಫಡ್ನವೀಸ್‍ರನ್ನು 2ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ಧವಾಗುವಂತೆ ಮಾಡಿವೆ.
ಪ್ರಬಲ ಮರಾಠ ನಾಯಕ ಶರದ್ ಪವಾರ್ ಫಡ್ನವೀಸ್ ಅವರದು ಪೇಶ್ವಾ ಅಡಳಿತ ಎಂದಿದ್ದರು. ದೊಡ್ಡಣ್ಣನಿಂದ 2ನೇ ಸ್ಥಾನಕ್ಕೆ ತಲ್ಲಲ್ಪಟ್ಟ ಶಿವಸೇನೆಯ ಉದ್ಬವ್ ಠಾಕ್ರೆ ಎಲ್ಲಿ ಭಿನ್ನಾಭಿಪ್ರಾಯಗಳ ಮಧ್ಯೆಯೂ ಃಎP ಜೊತೆಗೆ ಕೈಜೋಡಿಸಿದ್ದಾರೆ. ಇದಕ್ಕೆ ಹಿಂದುತ್ವದ ನಂಟು ಕಾರಣವೆನ್ನುವ ಉದ್ಬವ್ ಶಿವಸೈನಿಕರಿಗೆ ಮುಖ್ಯಮಂತ್ರಿ ಮಾಡಬೇಕೆನ್ನುವ ಕನಸನ್ನು ಕೈಬಿಟ್ಟಿಲ್ಲ.

ಮಹಾರಾಷ್ಟ್ರದ ಆಡಳಿತ ಮಂತ್ರಾಲಯದ 6ನೇ ಮಹಡಿಯ CM ಕಛೇರಿಯಲ್ಲಿ ಶಿವಸೈನಿಕನನ್ನ ಕಾಣಲು ಬಯಸುವ ಅವರಿಗೆ ಮಗ ಆದಿತ್ಯ ಠಾಕ್ರೆ ಸಾಥ್ ಕೊಡುತ್ತಿದ್ದಾರೆ. ಠಾಕ್ರೆ ಕುಟುಂಬದಿಂದ ಚುನಾವಣೆ ಕಣಕ್ಕೆ ಧುಮುಕಿದ ಮೊದಲ ಕುಡಿ ಎಷ್ಟು ಪ್ರಭಾವ ಬೀರುತ್ತಾರೆ ಕಾದು ನೋಡಬೇಕು.
ಹುಲಿಯಂತೆ ಘರ್ಜಿಸುತ್ತಿದ್ದ MNSನ ರಾಜಠಾಕ್ರೆಯನ್ನು ಕೇಂದ್ರ ತನಿಖಾ ತಂಡಗಳ (ED) ಬಲದಿಂದ ಅಮಿತ್‍ಶಾ ಇಲಿಯನ್ನಾಗಿಸಿದ್ದಾರೆ. ಹೀಗಾಗಿ MNCಯ ಪ್ರಭಾವ ಈ ಚುನಾವಣೆಯಲ್ಲಿ ಅಷ್ಟಾಗಿ ಕಂಡುಬರುವುದಿಲ್ಲ. ಇನ್ನು ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ ಬಹುಜನ ಅಘಾದಿ (VBA) ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಕಾಣಬಹುದು. ಉಳಿದೆಡೆ ಬೇರೆಯವರ ಸೋಲು-ಗೆಲುವಿಗೆ ಮಾತ್ರ ಅದು ದೊಡ್ಡ ಮಟ್ಟದಲ್ಲಿ ಕಾರಣವಾಗಬಹುದು.

ಒಟ್ಟಾರೆಯಾಗಿ ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ. ಮತದಾರ ಪ್ರಭು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನ ಮಂತ್ರಿಯ ಸುತ್ತಾಟ, ಮೈನಾರಿಟಿಗಳನ್ನು ಹೆದರಿಸಲು ಬಳಸುವ NRCಕಾಶ್ಮಿರದ ಸ್ವಾಯತ್ತತೆಯ ಆರ್ಟಿಕಲ್ 370 ಸೇರಿದಂತೆ ಹುಸಿ ರಾಷ್ಟ್ರಿಯ ಅಲೆಯಲ್ಲಿ ತೇಲಿಹೋಗುತ್ತಿದ್ದಾನೆ. ಹೀಗಾಗಿ ನಿತ್ಯ ಸಂಕಟಗಳು ಗೌಣವಾಗಿವೆ.

ಇಷ್ಟೆಲ್ಲಾ ಇದ್ದಾಗ್ಯೂ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

ಈ ರೀತಿಯಾಗಿ ಮಹಾರಾಷ್ಟ್ರದ ಚುನಾವಣೆಯು ಒಂದು ರೀತಿಯ ವಾಕ್ ಓವರ್ ಇದ್ದಂತೆ ಎಂದೇ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಹರಿಯಾಣದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಇದನ್ನು ಮೀರಿದ ಫಲಿತಾಂಶ ಎರಡು ರಾಜ್ಯಗಳಲ್ಲಿ ಎಲ್ಲಿ ಬಂದರೂ ಅದು ಪವಾಡವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ನಿಂದ ಏಪ್ರಿಲ್ 12ರಂದು ‘ರನ್ ಫಾರ್ ಅಂಬೇಡ್ಕರ್, ರನ್ ಫಾರ್ ಕಾನ್ಸ್ಟಿಟ್ಯೂಷನ್’ ಮ್ಯಾರಥಾನ್ ಆಯೋಜನೆ

ನವದೆಹಲಿ: ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯ ಅಂಗವಾಗಿ ಕಾಂಗ್ರೆಸ್ ಭಾನುವಾರ 'ಅಂಬೇಡ್ಕರ್‌ಗಾಗಿ ಓಟ, ಸಂವಿಧಾನಕ್ಕಾಗಿ ಓಟ' ಮ್ಯಾರಥಾನ್ ಆಯೋಜಿಸಿದೆ. ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಇಲ್ಲಿನ ಮಂಡಿ ಹೌಸ್‌ನಿಂದ ಮ್ಯಾರಥಾನ್‌ಗೆ...

ಮುಖ್ಯವಾಹಿನಿಗೆ ಬಂದ 42 ಕೇಡರ್‌ಗಳು; ರಾಜ್ಯದಲ್ಲಿ’ಮಾವೋವಾದಿ ಕಾರ್ಯಾಚರಣೆ’ ಅಂತ್ಯವಾಗಿದೆ ಎಂದ ತೆಲಂಗಾಣ ಪೊಲೀಸರು

ರಾಜ್ಯದಲ್ಲಿ ಸಿಪಿಐ (ಮಾವೋವಾದಿ) ಸಂಘಟನೆಯ ಕಾರ್ಯಚರಣೆ ಅಂತಿಮವಾಗಿದೆ ಎಂದು ತೆಲಂಗಾಣ ಪೊಲೀಸರು ಘೋಷಣೆ ಮಾಡಿದ್ದಾರೆ. ಬೆಟಾಲಿಯನ್ ಕಮಾಂಡರ್ ಮತ್ತು ಎರಡು ಪ್ರಮುಖ ಗುಂಪುಗಳ ಹಿರಿಯ ನಾಯಕತ್ವ ಸೇರಿದಂತೆ ನಿಷೇಧಿತ ಸಂಘಟನೆಯ 42 ಕೇಡರ್‌ಗಳು...

‘ಹಿಂದಿ ನಿರ್ಮೂಲನೆ ಮಾಡುತ್ತೇವೆ’ ಎಂದು ಸಚಿವರು ಹೇಳಿಲ್ಲ; ಹಿಂದಿ ಪರ ಅರ್ಜಿ ವಜಾ; ₹1 ಲಕ್ಷ ದಂಡ ವಿಧಿಸಿದ ಹೈಕೋರ್ಟ್‌

ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ಹಿಂದಿ ಸೇರಿದಂತೆ ತೃತೀಯ ಭಾಷಾ ವಿಷಯಗಳ ಮೌಲ್ಯಮಾಪನ ಸಂಬಂಧ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ನೀಡಿದ ಹೇಳಿಕೆಯ ವಿರುದ್ಧ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ಕರ್ನಾಟಕ...

ದೆಹಲಿ| ಮುಸ್ಲಿಮರ ಮೇಲಿನ ದ್ವೇಷಕ್ಕೆ ಜೀವಂತ ಹಂದಿಗಳನ್ನು ಪೂಜಿಸುತ್ತಿರುವ ಹಿಂದೂಗಳು

ಹಳೆಯ ದೆಹಲಿಯ ಹಿಂದೂ-ಮುಸ್ಲಿಂ ಜನರು ವಾಸಿಸುವ ತ್ರನಗರದ ನೆರೆಹೊರೆಯಲ್ಲಿ ಹಿಂದೂ ಕುಟುಂಬಗಳು ಜೀವಂತ ಹಂದಿಗಳನ್ನು ಪೂಜಿಸುತ್ತಿದ್ದಾರೆ. ಮುಸ್ಲಿಮರ ಮೇಲಿನ ದ್ವೇಷಕ್ಕೆ ಮನೆಯ ಮುಂಭಾಗ ಅಲಂಕೃತ ಹಂದಿ (ವರಹಾಸ್ವಾಮಿ) ಚಿತ್ರಗಳನ್ನು ಅಳವಡಿಸಿದ್ದಾರೆ ಎಂದು 'ದಿ...

ಪ. ಬಂಗಾಳ: ಮಹಿಳೆಯರಿಗೆ ₹3,000 ರಿಂದ 6 ತಿಂಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ ಸೇರಿದಂತೆ ಹಲವು ಭರವಸೆ ನೀಡಿದ ಬಿಜೆಪಿ 

ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಪ್ರಚಾರ ಆರಂಭವಾಗಿದ್ದು, ಮೊದಲ ಹಂತದ ಮತದಾನಕ್ಕೆ ಕೆಲವೇ ದಿನಗಳು ಬಾಕಿ ಇರುವಾಗ, ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಪಶ್ಚಿಮ ಬಂಗಾಳದ ಬಿಜೆಪಿ...

ಹಾಸನ| ರೈತ ಮುಖಂಡ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ; ದುಷ್ಕರ್ಮಿಗಳ ಬಂಧನಕ್ಕೆ ಕೆಪಿಆರ್‌ಎಸ್‌ ಆಗ್ರಹ

ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲ್ಲೂಕಿನ ಕರ್ನಾಟಕ ಪ್ರಾಂತ ರೈತ ಸಂಘದ (ಕೆಪಿಆರ್‌ಎಸ್‌) ಕಾರ್ಯದರ್ಶಿ ಹಾಗೂ ಕಲ್ಕೆರೆ ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷ, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸುದೇವ ಕಲ್ಕೆರೆ ಮೇಲೆ ಹಲ್ಲೆ-ದೌರ್ಜನ್ಯ ನಡೆಸಿರುವ ಗೂಂಡಾಗಳನ್ನು...

ಉತ್ತರ ಪ್ರದೇಶ| ಡಿಜಿಟಲ್ ಬಂಧನದಿಂದ ಪೋಷಕರನ್ನು ರಕ್ಷಿಸಿದ 8ನೇ ತರಗತಿ ವಿದ್ಯಾರ್ಥಿ

ಸುಮಾರು 10 ಗಂಟೆಗಳ ಕಾಲ ವೀಡಿಯೊ ಕರೆ ಮೂಲಕ ಡಿಜಿಟಲ್ ಬಂಧನಕ್ಕೆ ಒಳಗಾಗಿದ್ದ ತನ್ನ ಹೆತ್ತವರು ಹಣ ಕಳೆದುಕೊಳ್ಳದಂತೆ 8ನೇ ತರಗತಿಯ ಬಾಲಕನೊಬ್ಬ ರಕ್ಷಿಸಿರುವ ಘಟನೆ ಬೆಳಕಿಗೆ ಬಂದಿದೆ. ಉತ್ತರ ಪ್ರದೇಶದ ಬರೇಲಿಯಲ್ಲಿ...

ಅಸ್ಸಾಂ: ಪವನ್ ಖೇರಾ ವಿರುದ್ಧದ ಪ್ರಕರಣದಲ್ಲಿ ಒಂದು ವಾರದ ನಿರೀಕ್ಷಣ ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಸಲ್ಲಿಸಿದ ಎಫ್‌ಐಆರ್‌ಗೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ಶುಕ್ರವಾರ ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಒಂದು ವಾರದ...

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...