HomeUncategorizedಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಇಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

- Advertisement -
- Advertisement -

ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ.

ಮಹಾರಾಷ್ಟ್ರ ಚುನಾವಣಾ ಅಖಾಡ ಸಿದ್ದವಾಗಿದ್ದು ಕಣವನ್ನು ಎನ್‍ಡಿಎಗಾಗಿಯೇ ಹದಗೊಳಿಸಿದಂತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣದ ಕುಸ್ತಿಪಟು ಕಚ್ಚಿಕಟ್ಟಿಕೊಂಡು ತೊಡೆ ತಟ್ಟುತ್ತಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಭಾರೀ ಕರತಾಡನ ಕೇಳಿಬರುತ್ತಿದೆ. ಆದರೆ ಎದುರಾಳಿ ಪಡೆಯಿಂದ ಯಾರು ಅಂಕಣಕ್ಕೆ ಇಳಿಯುವುದೆಂದು ಇನ್ನೂ ನಿರ್ಧಾರವಾಗಿಲ್ಲ. ಇನ್ನು ಸಿದ್ಧತೆ ಎಲ್ಲಿಂದ ಬಂತು? ಆಶ್ಚರ್ಯವಾದರೂ ಮಹಾರಾಷ್ಟ್ರ ಚುನಾವಣೆಯಲ್ಲಿ ಕಂಡು ಬರುತ್ತಿರುವ ವಾಸ್ತವ ಇದೇ ಆಗಿದೆ.

ಚುನಾವಣೆ ಹತ್ತಿರವಿದ್ದಾಗಲೂ ಕಾಂಗ್ರೆಸ್ ಮತ್ತು NCP ಯಾಕೆ ಸಿದ್ದತೆ ಮಾಡಿಕೊಂಡಿಲ್ಲ ಅಂತ ನೋಡಲು ಹೋದರೆ ಕಂಡು ಬರುವ ದೃಶ್ಯ ಯಾರನ್ನಾರೂ ಬೆಚ್ಚಿ ಬೀಳಿಸುತ್ತದೆ. ಅನೇಕ ಪೈಲ್ವಾನರನ್ನು ಹೊಂದಿರುವ ಕಾಂಗ್ರೆಸ್ ಮತ್ತುNCPಯಲ್ಲಿ ಯಾವ ಪೈಲ್ವಾನನ್ನು ಅಖಾಡಕ್ಕೆ ಇಳಿಸುವುದು ಅಂತ ಗೊಂದಲ ಒಂದೆಡೆಯಾದರೆ, ಇನ್ನೊಂದೆಡೆ ಯಾವ ಪೈಲ್ವಾನ ಯಾರ ಪರ ಆಡುತ್ತಾನೆ ಅಂತ ತಿಳಿಯದೇ ಇರುವುದು ಇನ್ನೊಂದು ಕಾರಣ.

ಏನಪ್ಪ ಇದು ಯಾರ ಪರ ಅನ್ನುವುದು ಅಂತ ಕೇಳಿದರೆ ಅಲ್ಲೆ ಇರುವುದು ಟ್ವಿಸ್ಟ್. ಕಾಂಗ್ರೆಸ್ ಮತ್ತು ಓಅP ಪ್ರಮುಖ ನಾಯಕರನ್ನು EDತನ್ನ ತೆಕ್ಕೆಗೆ ತೆಗೆದುಕೊಂಡು ಆಗಿದೆ. ಮರಾಠ ಓಟ್ ಬ್ಯಾಂಕ್ ಹೊಂದಿರುವ ನಾಯಕರು, ಸಹಕಾರ ಚಳುವಳಿಯಲ್ಲಿ ಮುಂಚುಣಿಯಲ್ಲಿರುವ ನಾಯಕರು, ಶಿವಾಜಿಯ ವಂಶಸ್ಥರು, ಕಾಂಗ್ರೆಸ್ RSS ಪಕ್ಷದ ಹಿಂದುಳಿದ ವರ್ಗದ ನಾಯಕರು ಕಮಲದ ಬಲೆಯಲ್ಲಿ ಬಿದ್ದಾಗಿದೆ. ಇನ್ನು ಉಳಿದ ಪ್ರಮುಖ ನಾಯಕರ ಮೇಲೆ ಇಆ ತೂಗುಕತ್ತಿ ಬೀಸುತ್ತಿದೆ. ಹಾಗಾಗಿ ಯಾರ್ಯಾರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ, ಇನ್ಯಾರು ಸ್ಪಾಟ್ ಫಿಕ್ಸಿಂಗ್ ಬಲೆಯಲ್ಲಿ ಇದ್ದಾರೆ ಎಂಬ ಲೆಕ್ಕ ಹಾಕುವುದರಲ್ಲಿ ವಿರೋಧ ಪಕ್ಷಗಳು ಸುಸ್ತಾಗಿವೆ. ಪಕ್ಷ ಬಿಟ್ಟು ಹೋದ ಶತ್ರುವನ್ನು ಎದುರಿಸುವುದು ಸುಲಭ, ಆದರೆ ಮನೆಯಲ್ಲಿ ಬಿಲ ಕೊರೆಯುವ ಶತ್ರುವನ್ನು ಎದುರಿಸುವುದು ಹೇಗೆ.. ಹೀಗಾಗಿ ಯಾರನ್ನು ಕಚ್ಚೆಕಟ್ಟಿ ಕಣಕ್ಕಿಳಿಸಿದರೆ ತಮ್ಮ ಪರ ಹಲ್ಲುಕಚ್ಚಿ ಹೋರಾಡಬಲ್ಲರು ಅಂತ ನಿರ್ಧರಿಸುವುದು ಕಾಂಗ್ರೆಸ್ ಹೈಕಮಾಂಡ್‍ನ ಸೋನಿಯಾ ಗಾಂಧಿ ಮತ್ತು ಓಅPಯ ಅಗ್ರನಾಯಕ ಶರದ್ ಪವಾರ್‍ಗೆ ಅಯೋಮಯದ ಸಂಗತಿಯಾಗಿದೆ.

ಅಳಿದುಳಿದ ಆಟಗಾರರನ್ನು ಹುರಿದುಂಬಿಸಿ ಚುನಾವಣಾ ಕಣಕ್ಕೆ ಧುಮುಕಬೇಕಾದ ಕಾಂಗ್ರೆಸ್ ಹೈಕಮಾಂಡ್ ಮಂಕಾಗಿದೆ, ಸೋನಿಯಾಗಾಂಧಿ ಆರೋಗ್ಯ ಸಾಥ್ ಕೊಡುತ್ತಿಲ್ಲ. ಇನ್ನು ರಾಹುಲ್‍ಗಾಂಧಿ 2019ರ ಲೋಕಸಭಾ ಚುನಾವಣೆಯ ಸೋಲಿನ ಹ್ಯಾಂಗ್‍ಹೋವರ್‍ನಿಂದ ಹೊರಬಂದಿಲ್ಲ. ಇದು ಕಾಂಗ್ರೆಸ್ ಕಥೆಯಾದರೆ, ಓಅP ಕಥೆ ಇನ್ನೂ ಕೆಟ್ಟದಾಗಿದೆ. ಇಲ್ಲಿನ ಚುನಾವಣಾ ರಾಜಕೀಯದಲ್ಲಿ ಗೆಲ್ಲಬಲ್ಲಂತಹ ನಾಯಕರು ಮುಖ್ಯಮಂತ್ರಿ ಫಡ್ನವಿಸ್ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅಗ್ರ ಮರಾಠ ನಾಯಕ ಶರದ್‍ಪವಾರ್ ಮತ್ತು ಅವರ ಸಹೋದರನ ಮಗನ ಮೇಲೆ ಅಮಿತ್ ಶಾ ಇಆ ಕತ್ತಿಯನ್ನು ಕಟ್ಟಿದ್ದಾರೆ. ಇನ್ನೊಬ್ಬ ಪ್ರಮುಖ ನಾಯಕ ಪ್ರಫುಲ್ ಪಟೇಲ್‍ಗೂ ಹಗರಣ ಗಂಟು ಕಟ್ಟಲಾಗಿದೆ. ಹೀಗಾಗಿ ಮಾನಸಿಕವಾಗಿ ಸೋತು ಹೋಗಿರುವ ಪಡೆ ಕಣದಲ್ಲಿ ತೊಡೆ ತಟ್ಟುತ್ತಿದ್ದರು ಯಾರಿಗೂ ಕೇಳುತ್ತಿಲ್ಲ.

ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ 2ನೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈಗ 2ನೇ ಇನಿಂಗ್ಸ್‍ಗೆ ಸಿದ್ದವಾಗಿದ್ದಾರೆ. ಎದುರಾಳಿ ಇಲ್ಲದೆ ಅಖಾಡದಲ್ಲಿ ತೊಡೆತಟ್ಟಿ ಹೂಂಕರಿಸುತ್ತಿದ್ದಾರೆ. ಹೈಕಮಾಂಡ್, ಪ್ರಧಾನ ಮಂತ್ರಿ ನರೇಂದ್ರಮೋದಿ ಮತ್ತು ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ಖSS ಸಂಪೂರ್ಣ ಬೆಂಬಲ ಪಡೆದಿರುವ ದೇವೇಂದ್ರ ಫಡ್ನವೀಸ್‍ಗೆ ಮಹಾರಾಷ್ಟ್ರದಲ್ಲಿ ಪರ್ಯಾಯವಿಲ್ಲದಂತಾಗಿದೆ.

ಕಳೆದ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಶಿವಸೇನಾ ಮತ್ತು ಬಿಜೆಪಿಯ ಚುನಾವಣಾ ಪೂರ್ವ ಮೈತ್ರಿ ಮೂಡಿಸುವಲ್ಲಿ ಫಡ್ನವೀಸ್ ಸಫಲವಾದರಷ್ಟೇ ಅಲ್ಲ, ಸಾಂಪ್ರದಾಯಿಕವಾಗಿ ದೊಡ್ಡಣ್ಣನಾಗಿದ್ದ ಶಿವಸೇನೆಯನ್ನು ತಮ್ಮನ ಸ್ಥಾನಕ್ಕೆ ತಂದು ನಿಲ್ಲಿಸುವಲ್ಲಿ ಈ ಬ್ರಾಹ್ಮಣ ನಾಯಕನ ತಂತ್ರಗಾರಿಕೆ ಎದ್ದು ಕಾಣುತ್ತದೆ. ಹೀಗಾಗಿ ಈ ಬಾರಿBJP164 ಮತ್ತು ಶಿವಸೇನೆ 124 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ದುರ್ಬಲಗೊಂಡ ಪ್ರತಿಪಕ್ಷಗಳು ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿವೆ. ಹೈಕಮಾಂಡ್‍ನ ಸಂಪೂರ್ಣ ಬೆಂಬಲದಿಂದಾಗಿ ಫಡ್ನವೀಸ್‍ರ ಸ್ವಪಕ್ಷದ ಎದುರಾಳಿಗಳು ಬಾ¯ ಮುದುರಿಕೊಂಡಿದ್ದಾರೆ. ಮರಾಠ ಮೀಸಲಾತಿಯ ಹೋರಾಟವನ್ನು ನಿಭಾಯಿಸಿದ ಮೇಲೆ ದೇವೇಂದ್ರ ಫಡ್ನವೀಸ್‍ರನ್ನು 2ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ಧವಾಗುವಂತೆ ಮಾಡಿವೆ.
ಪ್ರಬಲ ಮರಾಠ ನಾಯಕ ಶರದ್ ಪವಾರ್ ಫಡ್ನವೀಸ್ ಅವರದು ಪೇಶ್ವಾ ಅಡಳಿತ ಎಂದಿದ್ದರು. ದೊಡ್ಡಣ್ಣನಿಂದ 2ನೇ ಸ್ಥಾನಕ್ಕೆ ತಲ್ಲಲ್ಪಟ್ಟ ಶಿವಸೇನೆಯ ಉದ್ಬವ್ ಠಾಕ್ರೆ ಎಲ್ಲಿ ಭಿನ್ನಾಭಿಪ್ರಾಯಗಳ ಮಧ್ಯೆಯೂ ಃಎP ಜೊತೆಗೆ ಕೈಜೋಡಿಸಿದ್ದಾರೆ. ಇದಕ್ಕೆ ಹಿಂದುತ್ವದ ನಂಟು ಕಾರಣವೆನ್ನುವ ಉದ್ಬವ್ ಶಿವಸೈನಿಕರಿಗೆ ಮುಖ್ಯಮಂತ್ರಿ ಮಾಡಬೇಕೆನ್ನುವ ಕನಸನ್ನು ಕೈಬಿಟ್ಟಿಲ್ಲ.

ಮಹಾರಾಷ್ಟ್ರದ ಆಡಳಿತ ಮಂತ್ರಾಲಯದ 6ನೇ ಮಹಡಿಯ CM ಕಛೇರಿಯಲ್ಲಿ ಶಿವಸೈನಿಕನನ್ನ ಕಾಣಲು ಬಯಸುವ ಅವರಿಗೆ ಮಗ ಆದಿತ್ಯ ಠಾಕ್ರೆ ಸಾಥ್ ಕೊಡುತ್ತಿದ್ದಾರೆ. ಠಾಕ್ರೆ ಕುಟುಂಬದಿಂದ ಚುನಾವಣೆ ಕಣಕ್ಕೆ ಧುಮುಕಿದ ಮೊದಲ ಕುಡಿ ಎಷ್ಟು ಪ್ರಭಾವ ಬೀರುತ್ತಾರೆ ಕಾದು ನೋಡಬೇಕು.
ಹುಲಿಯಂತೆ ಘರ್ಜಿಸುತ್ತಿದ್ದ MNSನ ರಾಜಠಾಕ್ರೆಯನ್ನು ಕೇಂದ್ರ ತನಿಖಾ ತಂಡಗಳ (ED) ಬಲದಿಂದ ಅಮಿತ್‍ಶಾ ಇಲಿಯನ್ನಾಗಿಸಿದ್ದಾರೆ. ಹೀಗಾಗಿ MNCಯ ಪ್ರಭಾವ ಈ ಚುನಾವಣೆಯಲ್ಲಿ ಅಷ್ಟಾಗಿ ಕಂಡುಬರುವುದಿಲ್ಲ. ಇನ್ನು ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ ಬಹುಜನ ಅಘಾದಿ (VBA) ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಕಾಣಬಹುದು. ಉಳಿದೆಡೆ ಬೇರೆಯವರ ಸೋಲು-ಗೆಲುವಿಗೆ ಮಾತ್ರ ಅದು ದೊಡ್ಡ ಮಟ್ಟದಲ್ಲಿ ಕಾರಣವಾಗಬಹುದು.

ಒಟ್ಟಾರೆಯಾಗಿ ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ. ಮತದಾರ ಪ್ರಭು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನ ಮಂತ್ರಿಯ ಸುತ್ತಾಟ, ಮೈನಾರಿಟಿಗಳನ್ನು ಹೆದರಿಸಲು ಬಳಸುವ NRCಕಾಶ್ಮಿರದ ಸ್ವಾಯತ್ತತೆಯ ಆರ್ಟಿಕಲ್ 370 ಸೇರಿದಂತೆ ಹುಸಿ ರಾಷ್ಟ್ರಿಯ ಅಲೆಯಲ್ಲಿ ತೇಲಿಹೋಗುತ್ತಿದ್ದಾನೆ. ಹೀಗಾಗಿ ನಿತ್ಯ ಸಂಕಟಗಳು ಗೌಣವಾಗಿವೆ.

ಇಷ್ಟೆಲ್ಲಾ ಇದ್ದಾಗ್ಯೂ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

ಈ ರೀತಿಯಾಗಿ ಮಹಾರಾಷ್ಟ್ರದ ಚುನಾವಣೆಯು ಒಂದು ರೀತಿಯ ವಾಕ್ ಓವರ್ ಇದ್ದಂತೆ ಎಂದೇ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಹರಿಯಾಣದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಇದನ್ನು ಮೀರಿದ ಫಲಿತಾಂಶ ಎರಡು ರಾಜ್ಯಗಳಲ್ಲಿ ಎಲ್ಲಿ ಬಂದರೂ ಅದು ಪವಾಡವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...