HomeUncategorizedಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಇಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

- Advertisement -
- Advertisement -

ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ.

ಮಹಾರಾಷ್ಟ್ರ ಚುನಾವಣಾ ಅಖಾಡ ಸಿದ್ದವಾಗಿದ್ದು ಕಣವನ್ನು ಎನ್‍ಡಿಎಗಾಗಿಯೇ ಹದಗೊಳಿಸಿದಂತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣದ ಕುಸ್ತಿಪಟು ಕಚ್ಚಿಕಟ್ಟಿಕೊಂಡು ತೊಡೆ ತಟ್ಟುತ್ತಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಭಾರೀ ಕರತಾಡನ ಕೇಳಿಬರುತ್ತಿದೆ. ಆದರೆ ಎದುರಾಳಿ ಪಡೆಯಿಂದ ಯಾರು ಅಂಕಣಕ್ಕೆ ಇಳಿಯುವುದೆಂದು ಇನ್ನೂ ನಿರ್ಧಾರವಾಗಿಲ್ಲ. ಇನ್ನು ಸಿದ್ಧತೆ ಎಲ್ಲಿಂದ ಬಂತು? ಆಶ್ಚರ್ಯವಾದರೂ ಮಹಾರಾಷ್ಟ್ರ ಚುನಾವಣೆಯಲ್ಲಿ ಕಂಡು ಬರುತ್ತಿರುವ ವಾಸ್ತವ ಇದೇ ಆಗಿದೆ.

ಚುನಾವಣೆ ಹತ್ತಿರವಿದ್ದಾಗಲೂ ಕಾಂಗ್ರೆಸ್ ಮತ್ತು NCP ಯಾಕೆ ಸಿದ್ದತೆ ಮಾಡಿಕೊಂಡಿಲ್ಲ ಅಂತ ನೋಡಲು ಹೋದರೆ ಕಂಡು ಬರುವ ದೃಶ್ಯ ಯಾರನ್ನಾರೂ ಬೆಚ್ಚಿ ಬೀಳಿಸುತ್ತದೆ. ಅನೇಕ ಪೈಲ್ವಾನರನ್ನು ಹೊಂದಿರುವ ಕಾಂಗ್ರೆಸ್ ಮತ್ತುNCPಯಲ್ಲಿ ಯಾವ ಪೈಲ್ವಾನನ್ನು ಅಖಾಡಕ್ಕೆ ಇಳಿಸುವುದು ಅಂತ ಗೊಂದಲ ಒಂದೆಡೆಯಾದರೆ, ಇನ್ನೊಂದೆಡೆ ಯಾವ ಪೈಲ್ವಾನ ಯಾರ ಪರ ಆಡುತ್ತಾನೆ ಅಂತ ತಿಳಿಯದೇ ಇರುವುದು ಇನ್ನೊಂದು ಕಾರಣ.

ಏನಪ್ಪ ಇದು ಯಾರ ಪರ ಅನ್ನುವುದು ಅಂತ ಕೇಳಿದರೆ ಅಲ್ಲೆ ಇರುವುದು ಟ್ವಿಸ್ಟ್. ಕಾಂಗ್ರೆಸ್ ಮತ್ತು ಓಅP ಪ್ರಮುಖ ನಾಯಕರನ್ನು EDತನ್ನ ತೆಕ್ಕೆಗೆ ತೆಗೆದುಕೊಂಡು ಆಗಿದೆ. ಮರಾಠ ಓಟ್ ಬ್ಯಾಂಕ್ ಹೊಂದಿರುವ ನಾಯಕರು, ಸಹಕಾರ ಚಳುವಳಿಯಲ್ಲಿ ಮುಂಚುಣಿಯಲ್ಲಿರುವ ನಾಯಕರು, ಶಿವಾಜಿಯ ವಂಶಸ್ಥರು, ಕಾಂಗ್ರೆಸ್ RSS ಪಕ್ಷದ ಹಿಂದುಳಿದ ವರ್ಗದ ನಾಯಕರು ಕಮಲದ ಬಲೆಯಲ್ಲಿ ಬಿದ್ದಾಗಿದೆ. ಇನ್ನು ಉಳಿದ ಪ್ರಮುಖ ನಾಯಕರ ಮೇಲೆ ಇಆ ತೂಗುಕತ್ತಿ ಬೀಸುತ್ತಿದೆ. ಹಾಗಾಗಿ ಯಾರ್ಯಾರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ, ಇನ್ಯಾರು ಸ್ಪಾಟ್ ಫಿಕ್ಸಿಂಗ್ ಬಲೆಯಲ್ಲಿ ಇದ್ದಾರೆ ಎಂಬ ಲೆಕ್ಕ ಹಾಕುವುದರಲ್ಲಿ ವಿರೋಧ ಪಕ್ಷಗಳು ಸುಸ್ತಾಗಿವೆ. ಪಕ್ಷ ಬಿಟ್ಟು ಹೋದ ಶತ್ರುವನ್ನು ಎದುರಿಸುವುದು ಸುಲಭ, ಆದರೆ ಮನೆಯಲ್ಲಿ ಬಿಲ ಕೊರೆಯುವ ಶತ್ರುವನ್ನು ಎದುರಿಸುವುದು ಹೇಗೆ.. ಹೀಗಾಗಿ ಯಾರನ್ನು ಕಚ್ಚೆಕಟ್ಟಿ ಕಣಕ್ಕಿಳಿಸಿದರೆ ತಮ್ಮ ಪರ ಹಲ್ಲುಕಚ್ಚಿ ಹೋರಾಡಬಲ್ಲರು ಅಂತ ನಿರ್ಧರಿಸುವುದು ಕಾಂಗ್ರೆಸ್ ಹೈಕಮಾಂಡ್‍ನ ಸೋನಿಯಾ ಗಾಂಧಿ ಮತ್ತು ಓಅPಯ ಅಗ್ರನಾಯಕ ಶರದ್ ಪವಾರ್‍ಗೆ ಅಯೋಮಯದ ಸಂಗತಿಯಾಗಿದೆ.

ಅಳಿದುಳಿದ ಆಟಗಾರರನ್ನು ಹುರಿದುಂಬಿಸಿ ಚುನಾವಣಾ ಕಣಕ್ಕೆ ಧುಮುಕಬೇಕಾದ ಕಾಂಗ್ರೆಸ್ ಹೈಕಮಾಂಡ್ ಮಂಕಾಗಿದೆ, ಸೋನಿಯಾಗಾಂಧಿ ಆರೋಗ್ಯ ಸಾಥ್ ಕೊಡುತ್ತಿಲ್ಲ. ಇನ್ನು ರಾಹುಲ್‍ಗಾಂಧಿ 2019ರ ಲೋಕಸಭಾ ಚುನಾವಣೆಯ ಸೋಲಿನ ಹ್ಯಾಂಗ್‍ಹೋವರ್‍ನಿಂದ ಹೊರಬಂದಿಲ್ಲ. ಇದು ಕಾಂಗ್ರೆಸ್ ಕಥೆಯಾದರೆ, ಓಅP ಕಥೆ ಇನ್ನೂ ಕೆಟ್ಟದಾಗಿದೆ. ಇಲ್ಲಿನ ಚುನಾವಣಾ ರಾಜಕೀಯದಲ್ಲಿ ಗೆಲ್ಲಬಲ್ಲಂತಹ ನಾಯಕರು ಮುಖ್ಯಮಂತ್ರಿ ಫಡ್ನವಿಸ್ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅಗ್ರ ಮರಾಠ ನಾಯಕ ಶರದ್‍ಪವಾರ್ ಮತ್ತು ಅವರ ಸಹೋದರನ ಮಗನ ಮೇಲೆ ಅಮಿತ್ ಶಾ ಇಆ ಕತ್ತಿಯನ್ನು ಕಟ್ಟಿದ್ದಾರೆ. ಇನ್ನೊಬ್ಬ ಪ್ರಮುಖ ನಾಯಕ ಪ್ರಫುಲ್ ಪಟೇಲ್‍ಗೂ ಹಗರಣ ಗಂಟು ಕಟ್ಟಲಾಗಿದೆ. ಹೀಗಾಗಿ ಮಾನಸಿಕವಾಗಿ ಸೋತು ಹೋಗಿರುವ ಪಡೆ ಕಣದಲ್ಲಿ ತೊಡೆ ತಟ್ಟುತ್ತಿದ್ದರು ಯಾರಿಗೂ ಕೇಳುತ್ತಿಲ್ಲ.

ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ 2ನೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈಗ 2ನೇ ಇನಿಂಗ್ಸ್‍ಗೆ ಸಿದ್ದವಾಗಿದ್ದಾರೆ. ಎದುರಾಳಿ ಇಲ್ಲದೆ ಅಖಾಡದಲ್ಲಿ ತೊಡೆತಟ್ಟಿ ಹೂಂಕರಿಸುತ್ತಿದ್ದಾರೆ. ಹೈಕಮಾಂಡ್, ಪ್ರಧಾನ ಮಂತ್ರಿ ನರೇಂದ್ರಮೋದಿ ಮತ್ತು ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ಖSS ಸಂಪೂರ್ಣ ಬೆಂಬಲ ಪಡೆದಿರುವ ದೇವೇಂದ್ರ ಫಡ್ನವೀಸ್‍ಗೆ ಮಹಾರಾಷ್ಟ್ರದಲ್ಲಿ ಪರ್ಯಾಯವಿಲ್ಲದಂತಾಗಿದೆ.

ಕಳೆದ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಶಿವಸೇನಾ ಮತ್ತು ಬಿಜೆಪಿಯ ಚುನಾವಣಾ ಪೂರ್ವ ಮೈತ್ರಿ ಮೂಡಿಸುವಲ್ಲಿ ಫಡ್ನವೀಸ್ ಸಫಲವಾದರಷ್ಟೇ ಅಲ್ಲ, ಸಾಂಪ್ರದಾಯಿಕವಾಗಿ ದೊಡ್ಡಣ್ಣನಾಗಿದ್ದ ಶಿವಸೇನೆಯನ್ನು ತಮ್ಮನ ಸ್ಥಾನಕ್ಕೆ ತಂದು ನಿಲ್ಲಿಸುವಲ್ಲಿ ಈ ಬ್ರಾಹ್ಮಣ ನಾಯಕನ ತಂತ್ರಗಾರಿಕೆ ಎದ್ದು ಕಾಣುತ್ತದೆ. ಹೀಗಾಗಿ ಈ ಬಾರಿBJP164 ಮತ್ತು ಶಿವಸೇನೆ 124 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ದುರ್ಬಲಗೊಂಡ ಪ್ರತಿಪಕ್ಷಗಳು ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿವೆ. ಹೈಕಮಾಂಡ್‍ನ ಸಂಪೂರ್ಣ ಬೆಂಬಲದಿಂದಾಗಿ ಫಡ್ನವೀಸ್‍ರ ಸ್ವಪಕ್ಷದ ಎದುರಾಳಿಗಳು ಬಾ¯ ಮುದುರಿಕೊಂಡಿದ್ದಾರೆ. ಮರಾಠ ಮೀಸಲಾತಿಯ ಹೋರಾಟವನ್ನು ನಿಭಾಯಿಸಿದ ಮೇಲೆ ದೇವೇಂದ್ರ ಫಡ್ನವೀಸ್‍ರನ್ನು 2ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ಧವಾಗುವಂತೆ ಮಾಡಿವೆ.
ಪ್ರಬಲ ಮರಾಠ ನಾಯಕ ಶರದ್ ಪವಾರ್ ಫಡ್ನವೀಸ್ ಅವರದು ಪೇಶ್ವಾ ಅಡಳಿತ ಎಂದಿದ್ದರು. ದೊಡ್ಡಣ್ಣನಿಂದ 2ನೇ ಸ್ಥಾನಕ್ಕೆ ತಲ್ಲಲ್ಪಟ್ಟ ಶಿವಸೇನೆಯ ಉದ್ಬವ್ ಠಾಕ್ರೆ ಎಲ್ಲಿ ಭಿನ್ನಾಭಿಪ್ರಾಯಗಳ ಮಧ್ಯೆಯೂ ಃಎP ಜೊತೆಗೆ ಕೈಜೋಡಿಸಿದ್ದಾರೆ. ಇದಕ್ಕೆ ಹಿಂದುತ್ವದ ನಂಟು ಕಾರಣವೆನ್ನುವ ಉದ್ಬವ್ ಶಿವಸೈನಿಕರಿಗೆ ಮುಖ್ಯಮಂತ್ರಿ ಮಾಡಬೇಕೆನ್ನುವ ಕನಸನ್ನು ಕೈಬಿಟ್ಟಿಲ್ಲ.

ಮಹಾರಾಷ್ಟ್ರದ ಆಡಳಿತ ಮಂತ್ರಾಲಯದ 6ನೇ ಮಹಡಿಯ CM ಕಛೇರಿಯಲ್ಲಿ ಶಿವಸೈನಿಕನನ್ನ ಕಾಣಲು ಬಯಸುವ ಅವರಿಗೆ ಮಗ ಆದಿತ್ಯ ಠಾಕ್ರೆ ಸಾಥ್ ಕೊಡುತ್ತಿದ್ದಾರೆ. ಠಾಕ್ರೆ ಕುಟುಂಬದಿಂದ ಚುನಾವಣೆ ಕಣಕ್ಕೆ ಧುಮುಕಿದ ಮೊದಲ ಕುಡಿ ಎಷ್ಟು ಪ್ರಭಾವ ಬೀರುತ್ತಾರೆ ಕಾದು ನೋಡಬೇಕು.
ಹುಲಿಯಂತೆ ಘರ್ಜಿಸುತ್ತಿದ್ದ MNSನ ರಾಜಠಾಕ್ರೆಯನ್ನು ಕೇಂದ್ರ ತನಿಖಾ ತಂಡಗಳ (ED) ಬಲದಿಂದ ಅಮಿತ್‍ಶಾ ಇಲಿಯನ್ನಾಗಿಸಿದ್ದಾರೆ. ಹೀಗಾಗಿ MNCಯ ಪ್ರಭಾವ ಈ ಚುನಾವಣೆಯಲ್ಲಿ ಅಷ್ಟಾಗಿ ಕಂಡುಬರುವುದಿಲ್ಲ. ಇನ್ನು ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ ಬಹುಜನ ಅಘಾದಿ (VBA) ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಕಾಣಬಹುದು. ಉಳಿದೆಡೆ ಬೇರೆಯವರ ಸೋಲು-ಗೆಲುವಿಗೆ ಮಾತ್ರ ಅದು ದೊಡ್ಡ ಮಟ್ಟದಲ್ಲಿ ಕಾರಣವಾಗಬಹುದು.

ಒಟ್ಟಾರೆಯಾಗಿ ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ. ಮತದಾರ ಪ್ರಭು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನ ಮಂತ್ರಿಯ ಸುತ್ತಾಟ, ಮೈನಾರಿಟಿಗಳನ್ನು ಹೆದರಿಸಲು ಬಳಸುವ NRCಕಾಶ್ಮಿರದ ಸ್ವಾಯತ್ತತೆಯ ಆರ್ಟಿಕಲ್ 370 ಸೇರಿದಂತೆ ಹುಸಿ ರಾಷ್ಟ್ರಿಯ ಅಲೆಯಲ್ಲಿ ತೇಲಿಹೋಗುತ್ತಿದ್ದಾನೆ. ಹೀಗಾಗಿ ನಿತ್ಯ ಸಂಕಟಗಳು ಗೌಣವಾಗಿವೆ.

ಇಷ್ಟೆಲ್ಲಾ ಇದ್ದಾಗ್ಯೂ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

ಈ ರೀತಿಯಾಗಿ ಮಹಾರಾಷ್ಟ್ರದ ಚುನಾವಣೆಯು ಒಂದು ರೀತಿಯ ವಾಕ್ ಓವರ್ ಇದ್ದಂತೆ ಎಂದೇ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಹರಿಯಾಣದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಇದನ್ನು ಮೀರಿದ ಫಲಿತಾಂಶ ಎರಡು ರಾಜ್ಯಗಳಲ್ಲಿ ಎಲ್ಲಿ ಬಂದರೂ ಅದು ಪವಾಡವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...