HomeUncategorizedಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಮಹಾರಾಷ್ಟ್ರ ಚುನಾವಣೆ ಬಿಜೆಪಿಗೆ ವಾಕ್ ಓವರ್ ಆಗಲಿದೆ.. : ಸುನಿಲ್ ಶಿರಸಂಗಿ

ಇಲ್ಲಿ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

- Advertisement -
- Advertisement -

ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ.

ಮಹಾರಾಷ್ಟ್ರ ಚುನಾವಣಾ ಅಖಾಡ ಸಿದ್ದವಾಗಿದ್ದು ಕಣವನ್ನು ಎನ್‍ಡಿಎಗಾಗಿಯೇ ಹದಗೊಳಿಸಿದಂತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬಣದ ಕುಸ್ತಿಪಟು ಕಚ್ಚಿಕಟ್ಟಿಕೊಂಡು ತೊಡೆ ತಟ್ಟುತ್ತಿದ್ದಾರೆ. ಪ್ರೇಕ್ಷಕರ ಗ್ಯಾಲರಿಯಿಂದ ಭಾರೀ ಕರತಾಡನ ಕೇಳಿಬರುತ್ತಿದೆ. ಆದರೆ ಎದುರಾಳಿ ಪಡೆಯಿಂದ ಯಾರು ಅಂಕಣಕ್ಕೆ ಇಳಿಯುವುದೆಂದು ಇನ್ನೂ ನಿರ್ಧಾರವಾಗಿಲ್ಲ. ಇನ್ನು ಸಿದ್ಧತೆ ಎಲ್ಲಿಂದ ಬಂತು? ಆಶ್ಚರ್ಯವಾದರೂ ಮಹಾರಾಷ್ಟ್ರ ಚುನಾವಣೆಯಲ್ಲಿ ಕಂಡು ಬರುತ್ತಿರುವ ವಾಸ್ತವ ಇದೇ ಆಗಿದೆ.

ಚುನಾವಣೆ ಹತ್ತಿರವಿದ್ದಾಗಲೂ ಕಾಂಗ್ರೆಸ್ ಮತ್ತು NCP ಯಾಕೆ ಸಿದ್ದತೆ ಮಾಡಿಕೊಂಡಿಲ್ಲ ಅಂತ ನೋಡಲು ಹೋದರೆ ಕಂಡು ಬರುವ ದೃಶ್ಯ ಯಾರನ್ನಾರೂ ಬೆಚ್ಚಿ ಬೀಳಿಸುತ್ತದೆ. ಅನೇಕ ಪೈಲ್ವಾನರನ್ನು ಹೊಂದಿರುವ ಕಾಂಗ್ರೆಸ್ ಮತ್ತುNCPಯಲ್ಲಿ ಯಾವ ಪೈಲ್ವಾನನ್ನು ಅಖಾಡಕ್ಕೆ ಇಳಿಸುವುದು ಅಂತ ಗೊಂದಲ ಒಂದೆಡೆಯಾದರೆ, ಇನ್ನೊಂದೆಡೆ ಯಾವ ಪೈಲ್ವಾನ ಯಾರ ಪರ ಆಡುತ್ತಾನೆ ಅಂತ ತಿಳಿಯದೇ ಇರುವುದು ಇನ್ನೊಂದು ಕಾರಣ.

ಏನಪ್ಪ ಇದು ಯಾರ ಪರ ಅನ್ನುವುದು ಅಂತ ಕೇಳಿದರೆ ಅಲ್ಲೆ ಇರುವುದು ಟ್ವಿಸ್ಟ್. ಕಾಂಗ್ರೆಸ್ ಮತ್ತು ಓಅP ಪ್ರಮುಖ ನಾಯಕರನ್ನು EDತನ್ನ ತೆಕ್ಕೆಗೆ ತೆಗೆದುಕೊಂಡು ಆಗಿದೆ. ಮರಾಠ ಓಟ್ ಬ್ಯಾಂಕ್ ಹೊಂದಿರುವ ನಾಯಕರು, ಸಹಕಾರ ಚಳುವಳಿಯಲ್ಲಿ ಮುಂಚುಣಿಯಲ್ಲಿರುವ ನಾಯಕರು, ಶಿವಾಜಿಯ ವಂಶಸ್ಥರು, ಕಾಂಗ್ರೆಸ್ RSS ಪಕ್ಷದ ಹಿಂದುಳಿದ ವರ್ಗದ ನಾಯಕರು ಕಮಲದ ಬಲೆಯಲ್ಲಿ ಬಿದ್ದಾಗಿದೆ. ಇನ್ನು ಉಳಿದ ಪ್ರಮುಖ ನಾಯಕರ ಮೇಲೆ ಇಆ ತೂಗುಕತ್ತಿ ಬೀಸುತ್ತಿದೆ. ಹಾಗಾಗಿ ಯಾರ್ಯಾರು ಮ್ಯಾಚ್ ಫಿಕ್ಸಿಂಗ್ ಮಾಡಿಕೊಂಡಿದ್ದಾರೆ, ಇನ್ಯಾರು ಸ್ಪಾಟ್ ಫಿಕ್ಸಿಂಗ್ ಬಲೆಯಲ್ಲಿ ಇದ್ದಾರೆ ಎಂಬ ಲೆಕ್ಕ ಹಾಕುವುದರಲ್ಲಿ ವಿರೋಧ ಪಕ್ಷಗಳು ಸುಸ್ತಾಗಿವೆ. ಪಕ್ಷ ಬಿಟ್ಟು ಹೋದ ಶತ್ರುವನ್ನು ಎದುರಿಸುವುದು ಸುಲಭ, ಆದರೆ ಮನೆಯಲ್ಲಿ ಬಿಲ ಕೊರೆಯುವ ಶತ್ರುವನ್ನು ಎದುರಿಸುವುದು ಹೇಗೆ.. ಹೀಗಾಗಿ ಯಾರನ್ನು ಕಚ್ಚೆಕಟ್ಟಿ ಕಣಕ್ಕಿಳಿಸಿದರೆ ತಮ್ಮ ಪರ ಹಲ್ಲುಕಚ್ಚಿ ಹೋರಾಡಬಲ್ಲರು ಅಂತ ನಿರ್ಧರಿಸುವುದು ಕಾಂಗ್ರೆಸ್ ಹೈಕಮಾಂಡ್‍ನ ಸೋನಿಯಾ ಗಾಂಧಿ ಮತ್ತು ಓಅPಯ ಅಗ್ರನಾಯಕ ಶರದ್ ಪವಾರ್‍ಗೆ ಅಯೋಮಯದ ಸಂಗತಿಯಾಗಿದೆ.

ಅಳಿದುಳಿದ ಆಟಗಾರರನ್ನು ಹುರಿದುಂಬಿಸಿ ಚುನಾವಣಾ ಕಣಕ್ಕೆ ಧುಮುಕಬೇಕಾದ ಕಾಂಗ್ರೆಸ್ ಹೈಕಮಾಂಡ್ ಮಂಕಾಗಿದೆ, ಸೋನಿಯಾಗಾಂಧಿ ಆರೋಗ್ಯ ಸಾಥ್ ಕೊಡುತ್ತಿಲ್ಲ. ಇನ್ನು ರಾಹುಲ್‍ಗಾಂಧಿ 2019ರ ಲೋಕಸಭಾ ಚುನಾವಣೆಯ ಸೋಲಿನ ಹ್ಯಾಂಗ್‍ಹೋವರ್‍ನಿಂದ ಹೊರಬಂದಿಲ್ಲ. ಇದು ಕಾಂಗ್ರೆಸ್ ಕಥೆಯಾದರೆ, ಓಅP ಕಥೆ ಇನ್ನೂ ಕೆಟ್ಟದಾಗಿದೆ. ಇಲ್ಲಿನ ಚುನಾವಣಾ ರಾಜಕೀಯದಲ್ಲಿ ಗೆಲ್ಲಬಲ್ಲಂತಹ ನಾಯಕರು ಮುಖ್ಯಮಂತ್ರಿ ಫಡ್ನವಿಸ್ ಬಣದಲ್ಲಿ ಗುರುತಿಸಿಕೊಂಡಿದ್ದಾರೆ. ಅಗ್ರ ಮರಾಠ ನಾಯಕ ಶರದ್‍ಪವಾರ್ ಮತ್ತು ಅವರ ಸಹೋದರನ ಮಗನ ಮೇಲೆ ಅಮಿತ್ ಶಾ ಇಆ ಕತ್ತಿಯನ್ನು ಕಟ್ಟಿದ್ದಾರೆ. ಇನ್ನೊಬ್ಬ ಪ್ರಮುಖ ನಾಯಕ ಪ್ರಫುಲ್ ಪಟೇಲ್‍ಗೂ ಹಗರಣ ಗಂಟು ಕಟ್ಟಲಾಗಿದೆ. ಹೀಗಾಗಿ ಮಾನಸಿಕವಾಗಿ ಸೋತು ಹೋಗಿರುವ ಪಡೆ ಕಣದಲ್ಲಿ ತೊಡೆ ತಟ್ಟುತ್ತಿದ್ದರು ಯಾರಿಗೂ ಕೇಳುತ್ತಿಲ್ಲ.

ಇನ್ನೊಂದೆಡೆ ಮಹಾರಾಷ್ಟ್ರದಲ್ಲಿ ಪೂರ್ಣ 5 ವರ್ಷ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ 2ನೇ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಈಗ 2ನೇ ಇನಿಂಗ್ಸ್‍ಗೆ ಸಿದ್ದವಾಗಿದ್ದಾರೆ. ಎದುರಾಳಿ ಇಲ್ಲದೆ ಅಖಾಡದಲ್ಲಿ ತೊಡೆತಟ್ಟಿ ಹೂಂಕರಿಸುತ್ತಿದ್ದಾರೆ. ಹೈಕಮಾಂಡ್, ಪ್ರಧಾನ ಮಂತ್ರಿ ನರೇಂದ್ರಮೋದಿ ಮತ್ತು ಅಧ್ಯಕ್ಷ ಅಮಿತ್ ಶಾ ಅವರ ಜೊತೆಗೆ ಖSS ಸಂಪೂರ್ಣ ಬೆಂಬಲ ಪಡೆದಿರುವ ದೇವೇಂದ್ರ ಫಡ್ನವೀಸ್‍ಗೆ ಮಹಾರಾಷ್ಟ್ರದಲ್ಲಿ ಪರ್ಯಾಯವಿಲ್ಲದಂತಾಗಿದೆ.

ಕಳೆದ ಬಾರಿ ಪ್ರತ್ಯೇಕವಾಗಿ ಸ್ಪರ್ಧಿಸಿದ್ದ ಶಿವಸೇನಾ ಮತ್ತು ಬಿಜೆಪಿಯ ಚುನಾವಣಾ ಪೂರ್ವ ಮೈತ್ರಿ ಮೂಡಿಸುವಲ್ಲಿ ಫಡ್ನವೀಸ್ ಸಫಲವಾದರಷ್ಟೇ ಅಲ್ಲ, ಸಾಂಪ್ರದಾಯಿಕವಾಗಿ ದೊಡ್ಡಣ್ಣನಾಗಿದ್ದ ಶಿವಸೇನೆಯನ್ನು ತಮ್ಮನ ಸ್ಥಾನಕ್ಕೆ ತಂದು ನಿಲ್ಲಿಸುವಲ್ಲಿ ಈ ಬ್ರಾಹ್ಮಣ ನಾಯಕನ ತಂತ್ರಗಾರಿಕೆ ಎದ್ದು ಕಾಣುತ್ತದೆ. ಹೀಗಾಗಿ ಈ ಬಾರಿBJP164 ಮತ್ತು ಶಿವಸೇನೆ 124 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿವೆ.

ದುರ್ಬಲಗೊಂಡ ಪ್ರತಿಪಕ್ಷಗಳು ಆಡಳಿತ ವಿರೋಧಿ ಅಲೆಯನ್ನು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲವಾಗಿವೆ. ಹೈಕಮಾಂಡ್‍ನ ಸಂಪೂರ್ಣ ಬೆಂಬಲದಿಂದಾಗಿ ಫಡ್ನವೀಸ್‍ರ ಸ್ವಪಕ್ಷದ ಎದುರಾಳಿಗಳು ಬಾ¯ ಮುದುರಿಕೊಂಡಿದ್ದಾರೆ. ಮರಾಠ ಮೀಸಲಾತಿಯ ಹೋರಾಟವನ್ನು ನಿಭಾಯಿಸಿದ ಮೇಲೆ ದೇವೇಂದ್ರ ಫಡ್ನವೀಸ್‍ರನ್ನು 2ನೇ ಅವಧಿಗೆ ಮುಖ್ಯಮಂತ್ರಿಯಾಗಲು ಸಿದ್ಧವಾಗುವಂತೆ ಮಾಡಿವೆ.
ಪ್ರಬಲ ಮರಾಠ ನಾಯಕ ಶರದ್ ಪವಾರ್ ಫಡ್ನವೀಸ್ ಅವರದು ಪೇಶ್ವಾ ಅಡಳಿತ ಎಂದಿದ್ದರು. ದೊಡ್ಡಣ್ಣನಿಂದ 2ನೇ ಸ್ಥಾನಕ್ಕೆ ತಲ್ಲಲ್ಪಟ್ಟ ಶಿವಸೇನೆಯ ಉದ್ಬವ್ ಠಾಕ್ರೆ ಎಲ್ಲಿ ಭಿನ್ನಾಭಿಪ್ರಾಯಗಳ ಮಧ್ಯೆಯೂ ಃಎP ಜೊತೆಗೆ ಕೈಜೋಡಿಸಿದ್ದಾರೆ. ಇದಕ್ಕೆ ಹಿಂದುತ್ವದ ನಂಟು ಕಾರಣವೆನ್ನುವ ಉದ್ಬವ್ ಶಿವಸೈನಿಕರಿಗೆ ಮುಖ್ಯಮಂತ್ರಿ ಮಾಡಬೇಕೆನ್ನುವ ಕನಸನ್ನು ಕೈಬಿಟ್ಟಿಲ್ಲ.

ಮಹಾರಾಷ್ಟ್ರದ ಆಡಳಿತ ಮಂತ್ರಾಲಯದ 6ನೇ ಮಹಡಿಯ CM ಕಛೇರಿಯಲ್ಲಿ ಶಿವಸೈನಿಕನನ್ನ ಕಾಣಲು ಬಯಸುವ ಅವರಿಗೆ ಮಗ ಆದಿತ್ಯ ಠಾಕ್ರೆ ಸಾಥ್ ಕೊಡುತ್ತಿದ್ದಾರೆ. ಠಾಕ್ರೆ ಕುಟುಂಬದಿಂದ ಚುನಾವಣೆ ಕಣಕ್ಕೆ ಧುಮುಕಿದ ಮೊದಲ ಕುಡಿ ಎಷ್ಟು ಪ್ರಭಾವ ಬೀರುತ್ತಾರೆ ಕಾದು ನೋಡಬೇಕು.
ಹುಲಿಯಂತೆ ಘರ್ಜಿಸುತ್ತಿದ್ದ MNSನ ರಾಜಠಾಕ್ರೆಯನ್ನು ಕೇಂದ್ರ ತನಿಖಾ ತಂಡಗಳ (ED) ಬಲದಿಂದ ಅಮಿತ್‍ಶಾ ಇಲಿಯನ್ನಾಗಿಸಿದ್ದಾರೆ. ಹೀಗಾಗಿ MNCಯ ಪ್ರಭಾವ ಈ ಚುನಾವಣೆಯಲ್ಲಿ ಅಷ್ಟಾಗಿ ಕಂಡುಬರುವುದಿಲ್ಲ. ಇನ್ನು ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ ಬಹುಜನ ಅಘಾದಿ (VBA) ಕೆಲವು ಕ್ಷೇತ್ರಗಳಲ್ಲಿ ಮಾತ್ರ ಗೆಲುವನ್ನು ಕಾಣಬಹುದು. ಉಳಿದೆಡೆ ಬೇರೆಯವರ ಸೋಲು-ಗೆಲುವಿಗೆ ಮಾತ್ರ ಅದು ದೊಡ್ಡ ಮಟ್ಟದಲ್ಲಿ ಕಾರಣವಾಗಬಹುದು.

ಒಟ್ಟಾರೆಯಾಗಿ ಆರ್ಥಿಕ ಹಿನ್ನಡೆ, ನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ, ಹೆಚ್ಚುತ್ತಿರುವ ನಿರುದ್ಯೋಗ, ಆಡಳಿತ ವಿರೋಧಿ ಅಲೆ, ಹೆಚ್ಚುತ್ತಿರುವ ಕೋಮು ದಳ್ಳುರಿಗೆ ಈ ಚುನಾವಣೆಯಲ್ಲಿ ಯಾವ ಪಾತ್ರವು ಇಲ್ಲ. ಯಾಕೆಂದರೆ ಮತದಾರ ಪ್ರಭುವಿಗೆ ನಿತ್ಯ ತೊಂದರೆ ಕೊಡುವ ಸಮಸ್ಯೆಗಳು ಮುಖ್ಯವಾಗಿಲ್ಲ. ಮತದಾರ ಪ್ರಭು ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನ ಮಂತ್ರಿಯ ಸುತ್ತಾಟ, ಮೈನಾರಿಟಿಗಳನ್ನು ಹೆದರಿಸಲು ಬಳಸುವ NRCಕಾಶ್ಮಿರದ ಸ್ವಾಯತ್ತತೆಯ ಆರ್ಟಿಕಲ್ 370 ಸೇರಿದಂತೆ ಹುಸಿ ರಾಷ್ಟ್ರಿಯ ಅಲೆಯಲ್ಲಿ ತೇಲಿಹೋಗುತ್ತಿದ್ದಾನೆ. ಹೀಗಾಗಿ ನಿತ್ಯ ಸಂಕಟಗಳು ಗೌಣವಾಗಿವೆ.

ಇಷ್ಟೆಲ್ಲಾ ಇದ್ದಾಗ್ಯೂ ಬಿಜೆಪಿಯು ತನ್ನ ಅಭಿವೃದ್ಧಿಕಾರ್ಯದ ಮೇಲೆ ಮತ್ತು ಅಭ್ಯರ್ಥಿಗಳ ಸಾಮಥ್ರ್ಯದ ಮೇಲೆ ಚುನಾವಣೆ ಎದುರಿಸುತ್ತಿಲ್ಲ. ಬದಲಾಗಿ ಚುನಾವಣಾ ಆಯೋಗ, ಕೇಂದ್ರ ತನಿಖಾ ತಂಡಗಳು, (ED, CBI, Income Tax) ಪೊಲೀಸ್ ಮತ್ತು ನ್ಯಾಯಾಂಗದ ಬಲದೊಂದಿಗೆ ಚುನಾವಣಾ ಕಣಕ್ಕಿಳಿದಿದೆ.

ಈ ರೀತಿಯಾಗಿ ಮಹಾರಾಷ್ಟ್ರದ ಚುನಾವಣೆಯು ಒಂದು ರೀತಿಯ ವಾಕ್ ಓವರ್ ಇದ್ದಂತೆ ಎಂದೇ ಮೇಲ್ನೋಟಕ್ಕೆ ಎದ್ದು ಕಾಣುತ್ತಿದೆ. ಹರಿಯಾಣದ ಪರಿಸ್ಥಿತಿ ಇದಕ್ಕಿಂತ ಭಿನ್ನವಾಗಿಲ್ಲ. ಇದನ್ನು ಮೀರಿದ ಫಲಿತಾಂಶ ಎರಡು ರಾಜ್ಯಗಳಲ್ಲಿ ಎಲ್ಲಿ ಬಂದರೂ ಅದು ಪವಾಡವೇ ಸರಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...