Homeಮುಖಪುಟಕನಿಷ್ಠ ಬೆಂಬಲ ಬೆಲೆಯ ಗರಿಷ್ಠ ದೋಷಗಳು : ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆಯೇ ಪರಿಹಾರ

ಕನಿಷ್ಠ ಬೆಂಬಲ ಬೆಲೆಯ ಗರಿಷ್ಠ ದೋಷಗಳು : ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆಯೇ ಪರಿಹಾರ

- Advertisement -
- Advertisement -

ಉತ್ತರ ಕರ್ನಾಟಕದ 12 ಮತ್ತು ಮಧ್ಯ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಆರಂಭಿಸಿದೆ. ಈಗಾಗಲೇ ಮಾರುಕಟ್ಟೆಯಲ್ಲಿ 4 ಸಾವಿರ ದರವಿತ್ತು, ಬೆಂಬಲ ಬೆಲೆಯಲ್ಲಿ 4,875 ರೂ ದರ ನಿಗದಿ ಮಾಡಿದ್ದಾರೆ. ಎಕರೆಗೆ 3 ಕ್ವಿಂಟಾಲ್ ಮತ್ತು ಗರಿಷ್ಠ 10 ಕ್ವಿಂಟಾಲ್ ಕಡಲೆಯನ್ನಷ್ಟೇ ಒಂದು ರೈತ ಕುಟುಂಬ ಮಾರಲು ಅವಕಾಶವಿದೆ. ಪಹಣಿ, ಬ್ಯಾಂಕ್ ಖಾತೆ ಇತ್ಯಾದಿ ರಗಳೆ ಇದ್ದೇ ಇವೆ.

ಕನಿಷ್ಠ ಬೆಂಬಲ ಬೆಲೆ ಕೊಡುವುದೇ ರೈತರ ಬೆಳೆಗಳಿಗೆ ನ್ಯಾಯಯುತ ದರ ಒದಗಿಸುವ ಮಾರ್ಗ ಎಂಬಂತೆ ಎಲ್ಲ ಸರ್ಕಾರಗಳೂ ಬಿಂಬಿಸುತ್ತ ಬಂದಿವೆ. ಸದ್ಯ 23 ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡುತ್ತಿದೆ.
ಯಾವುದೇ ಒಂದು ಬೆಳೆಗೆ ಇಂತಿಷ್ಟು ಎಂದು ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಉದ್ದೇಶ, ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಬೇಕಾದ ಅನಿವಾರ್ಯ ಸ್ಥಿತಿಯಿಂದ ರೈತರನ್ನು ಪಾರು ಮಾಡುವುದು.

ಎಪಿಎಂಸಿ ವರ್ತಕರ ವಂಚನೆಗಳಿಗೆ ಕಡಿವಾಣ ಹಾಕುವ ಉದ್ದೇಶವನ್ನೇನೋ ಕನಿಷ್ಠ ಬೆಂಬಲ ಬೆಲೆ ಸೂತ್ರ ಹೊಂದಿದೆ. ಆದರೆ, ಮಾರುಕಟ್ಟೆ ಬೆಲೆಗಿಂತ ಕೊಂಚ ಅಂದರೆ ಗಣನೀಯವಲ್ಲದಷ್ಟು ಹೆಚ್ಚಳದಿಂದ ರೈತರಿಗೆ ಅಂತಹ ಹೇಳಿಕೊಳ್ಳುವ ಲಾಭ ಸಿಗುತ್ತಿಲ್ಲ, ಆದರೆ ರೈತರಿಗೆ ನ್ಯಾಯ ಕೊಟ್ಟೆವು ಎಂದು ಬೀಗುವುದು ತಪ್ಪುವುದೇ ಇಲ್ಲ.

ಸದ್ಯಕ್ಕೆ ಉದಾಹರಣೆಯಾಗಿ, ಬೆಳಗಾವಿ ಬಿಟ್ಟು, ಉತ್ತರ ಕರ್ನಾಟಕದ ಎಲ್ಲ ಜಿಲ್ಲೆ ಮತ್ತು ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೆಳೆಯುವ ಹಿಂಗಾರಿ ಹಂಗಾಮಿನ ಕಡಲೆಯನ್ನೇ ತೆಗೆದುಕೊಳ್ಳಿ. ಕಳೆದ ವಾರ ಕ್ವಿಂಟಾಲ್‌ಗೆ 3,500-4,000 ರೂ. ದರವಿತ್ತು. ಇನ್ನೊಂದೆರಡು ದಿನದಲ್ಲಿ ಅದು 4,200 ರೂ ತಲುಪುವ ಸಾಧ್ಯತೆ ಇತ್ತು. ಎರಡು ದಿನದ ಹಿಂದೆ ಕಡಲೆಗೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶ ಹೊರ ಬಿದ್ದಿದೆ. ಇದರ ಪ್ರಕಾರ, ತೇವಾಂಶ ಇಲ್ಲದ, ಗುಣಮಟ್ಟದ ಕಡಲೆಗೆ 4,875 ರೂ ದರ ನಿಗದಿ ಮಾಡಲಾಗಿದೆ. ಒಂದು ಕುಟಂಬಕ್ಕೆ ಅಥವಾ ಒಂದು ಪಹಣಿಗೆ ಗರಿಷ್ಠ 10 ಕ್ವಿಂಟಾಲ್ ಮಾತ್ರ ಖರೀದಿಸಲಾಗುತ್ತಿದೆ. ಪ್ರತಿ ಎಕರೆಗೆ 3 ಕ್ವಿಂಟಾಲ್ ಖರೀದಿಯಷ್ಟೇ.

ರಾಜ್ಯದ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆ ಮತ್ತು ಮಧ್ಯ ಕರ್ನಾಟಕದ ಎರಡು ಜಿಲ್ಲೆ ಸೇರಿ ಗರಿಷ್ಠ 1,43,390 ಮೆಟ್ರಿಕ್ ಟನ್ ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಹೀಗಾಗಿ, ಎಕರೆಗೆ 3 ಕ್ವಿಂಟಾಲ್ ನಿಗದಿ ಮಾಡಿದ್ದಾರೆ. ಸರ್ಕಾರದ ಪರಿಭಾಷೆಯಲ್ಲೇ ಹೇಳುವುದಾದರೆ, ಐದು ಎಕರೆ ಮತ್ತು ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವವರನ್ನು ಸಣ್ಣ ಹಿಡುವಳಿದಾರ ಎನ್ನುತ್ತಾರೆ.

 

ಐದು ಎಕರೆ ಹೊಂದಿರುವ ಸಣ್ಣ ಹಿಡುವಳಿದಾರ ಸರಾಸರಿ 30-35 ಕ್ವಿಂಟಾಲ್ ಕಡಲೆ ಉತ್ಪಾದಿಸುತ್ತಾನೆ. ಅದರಲ್ಲಿ ಸರ್ಕಾರ ಖರೀದಿಸುವುದು 10 ಕ್ವಿಂಟಾಲ್ ಮಾತ್ರ. ಹೀಗಾಗಿ ಬೆಂಬಲ ಬೆಲೆ ಖರೀದಿ ರೈತನ ವಿಷಯದಲ್ಲಿ ಹಿನ್ನಡೆಯಾಗುತ್ತದೆ.

ಅದಕ್ಕಿಂತ ಮುಖ್ಯವಾದ ಅಂಶ, ಕ್ವಿಂಟಾಲ್‌ಗೆ 4,875 ರೂ ನಿಗದಿ ಮಾಡಲಾಗಿದೆ. ಜಿಲ್ಲೆಯಲ್ಲಿ ಎಕರೆಗೆ 5-10 ಕ್ವಿಂಟಾಲ್‌ವರೆಗೂ ಕಡಲೆ ಬೆಳೆಯುತ್ತಾರೆ. ಸರಾಸರಿ ಏಳು ಕ್ವಿಂಟಾಲ್ ಎಂದು ಹಿಡಿದರೂ, ರೈತನಿಗೆ 34,125 ರೂ ಸಿಗುತ್ತದೆ. (ಒಂದೇ ಎಕರೆ ಇದ್ದರೆ, 3 ಕ್ವಿಂಟಾಲ್ ಮಾತ್ರ ಖರೀದಿ) ಬೀಜ, ಗೊಬ್ಬರ, ಕ್ರಮಿನಾಶಕ, ಗಳೆ, ಕಸ ತೆಗೆಯುವುದು, ರಾಶಿ ಮಾಡುವುದು, ಸಾಗಿಸುವುದು-ಈ ಎಲ್ಲದರ ಖರ್ಚು ಎಕರೆಗೆ 23 ಸಾವಿರದವರೆಗೂ ಬರುತ್ತದೆ. 3-4 ತಿಂಗಳು ಹೆಣಗಾಡಿದ ಮೇಲೆ ಉಳಿಯುವುದೆಷ್ಟು? 10-11 ಸಾವಿರ. ಅಂದರೆ 4 ತಿಂಗಳ ಕಾಲ ಒಂದು ಕುಟುಂಬ ಹಾಕಿದ ಶ್ರಮಕ್ಕೆ ಸಿಗುವುದಿಷ್ಟೇ.

ತಜ್ಞರು ಹೇಳುವ ಪ್ರಕಾರ, ಬೆಂಬಲ ಬೆಲೆಯ ಪ್ರಯೋಜನ ಶೇ. 5ರಷ್ಟು ರೈತರನ್ನು ತಲುಪುತ್ತಿಲ್ಲ. ಇದಕ್ಕೆ ಸರ್ಕಾರದ ವಿಳಂಬ ನಿರ್ಧಾರ, ತಾಂತ್ರಿಕ ನೆಪಗಳು ಕಾರಣ. ಅದಕ್ಕಿಂತ ಮುಖ್ಯವಾಗಿ, ಕನಿಷ್ಠ ಬೆಂಬಲ ಬೆಲೆ ಲೆಕ್ಕಾಚಾರ ಹಾಕುವ ಮಾನದಂಡದಲ್ಲೇ ದೋಷಗಳಿವೆ. ಈ ಎಲ್ಲದಕ್ಕೂ ಪರಿಹಾರ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವುದೇ ಆಗಿದೆ.

ಎಂಎಸ್‌ಪಿ ಲೆಕ್ಕಚಾರವೇ ಮೋಸ: ದೇವೇಂದರ್ ಶರ್ಮಾ
ಕನಿಷ್ಠ ಬೆಂಬಲ ಬೆಲೆ ಲೆಕ್ಕಾಚಾರ ಮಾಡುವ ವಿಧಾನದಲ್ಲೇ ದೋಷವಿದೆ. ರೈತರ ಇನ್‌ ಪುಟ್ ವೆಚ್ಚವನ್ನು ಕನಿಷ್ಠ ಮಟ್ಟದಲ್ಲಿ ಪರಿಗಣಿಸುತ್ತಾರೆ. ಇಡೀ ಕುಟುಂಬದ ಶ್ರಮಕ್ಕೆ ತಕ್ಕ ವೇತನವನ್ನು ಪರಿಗಣಿಸುವುದಿಲ್ಲ ಎಂದು ವಿಶ್ಲೇಷಿಸುತ್ತಾರೆ ಖ್ಯಾತ ಕೃಷಿ-ಆರ್ಥಿಕ ತಜ್ಞ ದೇವೇಂದರ್ ಶರ್ಮಾ.

ಸರ್ಕಾರಿ ನೌಕರರ ಸಂಬಳ, ಸವಲತ್ತು ನಿರ್ಧರಿಸುವ 7ನೇ ವೇತನ ಆಯೋಗದಲ್ಲಿ 108 ವಿವಿಧ ಬಗೆಯ ಭತ್ಯೆಗಳ ಉಲ್ಲೇಖವಿದೆ. ರೈತರಿಗೆ ಇವೆಲ್ಲ ಲಾಗೂ ಆಗುವುದಿಲ್ಲವೇಕೆ? ಬೆಳೆಗೆ ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ವಸತಿ ಭತ್ಯೆ, ವೈದ್ಯಕೀಯ ಭತ್ಯೆ, ಶಿಕ್ಷಣ ಭತ್ಯೆ ಮತ್ತು ಪ್ರಯಾಣ ಭತ್ಯೆ (ರೈತಾಪಿ ಕೆಲಸಕ್ಕಾಗಿ ಓಡಾಟ)- ಕನಿಷ್ಠ ಈ ನಾಲ್ಕು ಭತ್ಯೆಗಳನ್ನು ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ಪರಿಗಣಿಸಬೇಕು. ರೈತರ ಶ್ರಮಕ್ಕೆ ಸರಿಯಾದ ವೇತನ ಸಿಗುವಂತೆಯೂ ನೋಡಿಕೊಳ್ಳಬೇಕು.

ರೈತರ ಆಯೋಗವನ್ನು ಸ್ಥಾಪಿಸಿ ರೈತರಿಗೆ ಕನಿಷ್ಠ ಖಾತ್ರಿ ದರ ದೊರೆಯುವ ವ್ಯವಸ್ಥೆ ಮಾಡಬೇಕು. ಕೃಷಿಯಲ್ಲಿ ಸರ್ಕಾರದ ಹೂಡಿಕೆ ಜಿಡಿಪಿಯ ಶೇ. 0.4ರಷ್ಟು ಮಾತ್ರ ಎಂಬ ವಿಷಯವೇ ಕೃಷಿಯನ್ನು ಎಷ್ಟು ತಾತ್ಸಾರ ಮಾಡಲಾಗಿದೆ ಎಂಬುದಕ್ಕೆ ಸಾಕ್ಷಿಯಂತಿದೆ. ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆ ಆದರಷ್ಟೇ ಭಾರತದಲ್ಲಿ ಕೃಷಿಗೆ ಉಳಿಗಾಲ ಎನ್ನುತ್ತಾರೆ ದೇವಿಂದರ್ ಶರ್ಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....