Homeಮುಖಪುಟಕನಿಷ್ಠ ಬೆಂಬಲ ಬೆಲೆಯ ಗರಿಷ್ಠ ದೋಷಗಳು : ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆಯೇ ಪರಿಹಾರ

ಕನಿಷ್ಠ ಬೆಂಬಲ ಬೆಲೆಯ ಗರಿಷ್ಠ ದೋಷಗಳು : ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆಯೇ ಪರಿಹಾರ

- Advertisement -
- Advertisement -

ಉತ್ತರ ಕರ್ನಾಟಕದ 12 ಮತ್ತು ಮಧ್ಯ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಆರಂಭಿಸಿದೆ. ಈಗಾಗಲೇ ಮಾರುಕಟ್ಟೆಯಲ್ಲಿ 4 ಸಾವಿರ ದರವಿತ್ತು, ಬೆಂಬಲ ಬೆಲೆಯಲ್ಲಿ 4,875 ರೂ ದರ ನಿಗದಿ ಮಾಡಿದ್ದಾರೆ. ಎಕರೆಗೆ 3 ಕ್ವಿಂಟಾಲ್ ಮತ್ತು ಗರಿಷ್ಠ 10 ಕ್ವಿಂಟಾಲ್ ಕಡಲೆಯನ್ನಷ್ಟೇ ಒಂದು ರೈತ ಕುಟುಂಬ ಮಾರಲು ಅವಕಾಶವಿದೆ. ಪಹಣಿ, ಬ್ಯಾಂಕ್ ಖಾತೆ ಇತ್ಯಾದಿ ರಗಳೆ ಇದ್ದೇ ಇವೆ.

ಕನಿಷ್ಠ ಬೆಂಬಲ ಬೆಲೆ ಕೊಡುವುದೇ ರೈತರ ಬೆಳೆಗಳಿಗೆ ನ್ಯಾಯಯುತ ದರ ಒದಗಿಸುವ ಮಾರ್ಗ ಎಂಬಂತೆ ಎಲ್ಲ ಸರ್ಕಾರಗಳೂ ಬಿಂಬಿಸುತ್ತ ಬಂದಿವೆ. ಸದ್ಯ 23 ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡುತ್ತಿದೆ.
ಯಾವುದೇ ಒಂದು ಬೆಳೆಗೆ ಇಂತಿಷ್ಟು ಎಂದು ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಉದ್ದೇಶ, ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಬೇಕಾದ ಅನಿವಾರ್ಯ ಸ್ಥಿತಿಯಿಂದ ರೈತರನ್ನು ಪಾರು ಮಾಡುವುದು.

ಎಪಿಎಂಸಿ ವರ್ತಕರ ವಂಚನೆಗಳಿಗೆ ಕಡಿವಾಣ ಹಾಕುವ ಉದ್ದೇಶವನ್ನೇನೋ ಕನಿಷ್ಠ ಬೆಂಬಲ ಬೆಲೆ ಸೂತ್ರ ಹೊಂದಿದೆ. ಆದರೆ, ಮಾರುಕಟ್ಟೆ ಬೆಲೆಗಿಂತ ಕೊಂಚ ಅಂದರೆ ಗಣನೀಯವಲ್ಲದಷ್ಟು ಹೆಚ್ಚಳದಿಂದ ರೈತರಿಗೆ ಅಂತಹ ಹೇಳಿಕೊಳ್ಳುವ ಲಾಭ ಸಿಗುತ್ತಿಲ್ಲ, ಆದರೆ ರೈತರಿಗೆ ನ್ಯಾಯ ಕೊಟ್ಟೆವು ಎಂದು ಬೀಗುವುದು ತಪ್ಪುವುದೇ ಇಲ್ಲ.

ಸದ್ಯಕ್ಕೆ ಉದಾಹರಣೆಯಾಗಿ, ಬೆಳಗಾವಿ ಬಿಟ್ಟು, ಉತ್ತರ ಕರ್ನಾಟಕದ ಎಲ್ಲ ಜಿಲ್ಲೆ ಮತ್ತು ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೆಳೆಯುವ ಹಿಂಗಾರಿ ಹಂಗಾಮಿನ ಕಡಲೆಯನ್ನೇ ತೆಗೆದುಕೊಳ್ಳಿ. ಕಳೆದ ವಾರ ಕ್ವಿಂಟಾಲ್‌ಗೆ 3,500-4,000 ರೂ. ದರವಿತ್ತು. ಇನ್ನೊಂದೆರಡು ದಿನದಲ್ಲಿ ಅದು 4,200 ರೂ ತಲುಪುವ ಸಾಧ್ಯತೆ ಇತ್ತು. ಎರಡು ದಿನದ ಹಿಂದೆ ಕಡಲೆಗೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶ ಹೊರ ಬಿದ್ದಿದೆ. ಇದರ ಪ್ರಕಾರ, ತೇವಾಂಶ ಇಲ್ಲದ, ಗುಣಮಟ್ಟದ ಕಡಲೆಗೆ 4,875 ರೂ ದರ ನಿಗದಿ ಮಾಡಲಾಗಿದೆ. ಒಂದು ಕುಟಂಬಕ್ಕೆ ಅಥವಾ ಒಂದು ಪಹಣಿಗೆ ಗರಿಷ್ಠ 10 ಕ್ವಿಂಟಾಲ್ ಮಾತ್ರ ಖರೀದಿಸಲಾಗುತ್ತಿದೆ. ಪ್ರತಿ ಎಕರೆಗೆ 3 ಕ್ವಿಂಟಾಲ್ ಖರೀದಿಯಷ್ಟೇ.

ರಾಜ್ಯದ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆ ಮತ್ತು ಮಧ್ಯ ಕರ್ನಾಟಕದ ಎರಡು ಜಿಲ್ಲೆ ಸೇರಿ ಗರಿಷ್ಠ 1,43,390 ಮೆಟ್ರಿಕ್ ಟನ್ ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಹೀಗಾಗಿ, ಎಕರೆಗೆ 3 ಕ್ವಿಂಟಾಲ್ ನಿಗದಿ ಮಾಡಿದ್ದಾರೆ. ಸರ್ಕಾರದ ಪರಿಭಾಷೆಯಲ್ಲೇ ಹೇಳುವುದಾದರೆ, ಐದು ಎಕರೆ ಮತ್ತು ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವವರನ್ನು ಸಣ್ಣ ಹಿಡುವಳಿದಾರ ಎನ್ನುತ್ತಾರೆ.

 

ಐದು ಎಕರೆ ಹೊಂದಿರುವ ಸಣ್ಣ ಹಿಡುವಳಿದಾರ ಸರಾಸರಿ 30-35 ಕ್ವಿಂಟಾಲ್ ಕಡಲೆ ಉತ್ಪಾದಿಸುತ್ತಾನೆ. ಅದರಲ್ಲಿ ಸರ್ಕಾರ ಖರೀದಿಸುವುದು 10 ಕ್ವಿಂಟಾಲ್ ಮಾತ್ರ. ಹೀಗಾಗಿ ಬೆಂಬಲ ಬೆಲೆ ಖರೀದಿ ರೈತನ ವಿಷಯದಲ್ಲಿ ಹಿನ್ನಡೆಯಾಗುತ್ತದೆ.

ಅದಕ್ಕಿಂತ ಮುಖ್ಯವಾದ ಅಂಶ, ಕ್ವಿಂಟಾಲ್‌ಗೆ 4,875 ರೂ ನಿಗದಿ ಮಾಡಲಾಗಿದೆ. ಜಿಲ್ಲೆಯಲ್ಲಿ ಎಕರೆಗೆ 5-10 ಕ್ವಿಂಟಾಲ್‌ವರೆಗೂ ಕಡಲೆ ಬೆಳೆಯುತ್ತಾರೆ. ಸರಾಸರಿ ಏಳು ಕ್ವಿಂಟಾಲ್ ಎಂದು ಹಿಡಿದರೂ, ರೈತನಿಗೆ 34,125 ರೂ ಸಿಗುತ್ತದೆ. (ಒಂದೇ ಎಕರೆ ಇದ್ದರೆ, 3 ಕ್ವಿಂಟಾಲ್ ಮಾತ್ರ ಖರೀದಿ) ಬೀಜ, ಗೊಬ್ಬರ, ಕ್ರಮಿನಾಶಕ, ಗಳೆ, ಕಸ ತೆಗೆಯುವುದು, ರಾಶಿ ಮಾಡುವುದು, ಸಾಗಿಸುವುದು-ಈ ಎಲ್ಲದರ ಖರ್ಚು ಎಕರೆಗೆ 23 ಸಾವಿರದವರೆಗೂ ಬರುತ್ತದೆ. 3-4 ತಿಂಗಳು ಹೆಣಗಾಡಿದ ಮೇಲೆ ಉಳಿಯುವುದೆಷ್ಟು? 10-11 ಸಾವಿರ. ಅಂದರೆ 4 ತಿಂಗಳ ಕಾಲ ಒಂದು ಕುಟುಂಬ ಹಾಕಿದ ಶ್ರಮಕ್ಕೆ ಸಿಗುವುದಿಷ್ಟೇ.

ತಜ್ಞರು ಹೇಳುವ ಪ್ರಕಾರ, ಬೆಂಬಲ ಬೆಲೆಯ ಪ್ರಯೋಜನ ಶೇ. 5ರಷ್ಟು ರೈತರನ್ನು ತಲುಪುತ್ತಿಲ್ಲ. ಇದಕ್ಕೆ ಸರ್ಕಾರದ ವಿಳಂಬ ನಿರ್ಧಾರ, ತಾಂತ್ರಿಕ ನೆಪಗಳು ಕಾರಣ. ಅದಕ್ಕಿಂತ ಮುಖ್ಯವಾಗಿ, ಕನಿಷ್ಠ ಬೆಂಬಲ ಬೆಲೆ ಲೆಕ್ಕಾಚಾರ ಹಾಕುವ ಮಾನದಂಡದಲ್ಲೇ ದೋಷಗಳಿವೆ. ಈ ಎಲ್ಲದಕ್ಕೂ ಪರಿಹಾರ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವುದೇ ಆಗಿದೆ.

ಎಂಎಸ್‌ಪಿ ಲೆಕ್ಕಚಾರವೇ ಮೋಸ: ದೇವೇಂದರ್ ಶರ್ಮಾ
ಕನಿಷ್ಠ ಬೆಂಬಲ ಬೆಲೆ ಲೆಕ್ಕಾಚಾರ ಮಾಡುವ ವಿಧಾನದಲ್ಲೇ ದೋಷವಿದೆ. ರೈತರ ಇನ್‌ ಪುಟ್ ವೆಚ್ಚವನ್ನು ಕನಿಷ್ಠ ಮಟ್ಟದಲ್ಲಿ ಪರಿಗಣಿಸುತ್ತಾರೆ. ಇಡೀ ಕುಟುಂಬದ ಶ್ರಮಕ್ಕೆ ತಕ್ಕ ವೇತನವನ್ನು ಪರಿಗಣಿಸುವುದಿಲ್ಲ ಎಂದು ವಿಶ್ಲೇಷಿಸುತ್ತಾರೆ ಖ್ಯಾತ ಕೃಷಿ-ಆರ್ಥಿಕ ತಜ್ಞ ದೇವೇಂದರ್ ಶರ್ಮಾ.

ಸರ್ಕಾರಿ ನೌಕರರ ಸಂಬಳ, ಸವಲತ್ತು ನಿರ್ಧರಿಸುವ 7ನೇ ವೇತನ ಆಯೋಗದಲ್ಲಿ 108 ವಿವಿಧ ಬಗೆಯ ಭತ್ಯೆಗಳ ಉಲ್ಲೇಖವಿದೆ. ರೈತರಿಗೆ ಇವೆಲ್ಲ ಲಾಗೂ ಆಗುವುದಿಲ್ಲವೇಕೆ? ಬೆಳೆಗೆ ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ವಸತಿ ಭತ್ಯೆ, ವೈದ್ಯಕೀಯ ಭತ್ಯೆ, ಶಿಕ್ಷಣ ಭತ್ಯೆ ಮತ್ತು ಪ್ರಯಾಣ ಭತ್ಯೆ (ರೈತಾಪಿ ಕೆಲಸಕ್ಕಾಗಿ ಓಡಾಟ)- ಕನಿಷ್ಠ ಈ ನಾಲ್ಕು ಭತ್ಯೆಗಳನ್ನು ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ಪರಿಗಣಿಸಬೇಕು. ರೈತರ ಶ್ರಮಕ್ಕೆ ಸರಿಯಾದ ವೇತನ ಸಿಗುವಂತೆಯೂ ನೋಡಿಕೊಳ್ಳಬೇಕು.

ರೈತರ ಆಯೋಗವನ್ನು ಸ್ಥಾಪಿಸಿ ರೈತರಿಗೆ ಕನಿಷ್ಠ ಖಾತ್ರಿ ದರ ದೊರೆಯುವ ವ್ಯವಸ್ಥೆ ಮಾಡಬೇಕು. ಕೃಷಿಯಲ್ಲಿ ಸರ್ಕಾರದ ಹೂಡಿಕೆ ಜಿಡಿಪಿಯ ಶೇ. 0.4ರಷ್ಟು ಮಾತ್ರ ಎಂಬ ವಿಷಯವೇ ಕೃಷಿಯನ್ನು ಎಷ್ಟು ತಾತ್ಸಾರ ಮಾಡಲಾಗಿದೆ ಎಂಬುದಕ್ಕೆ ಸಾಕ್ಷಿಯಂತಿದೆ. ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆ ಆದರಷ್ಟೇ ಭಾರತದಲ್ಲಿ ಕೃಷಿಗೆ ಉಳಿಗಾಲ ಎನ್ನುತ್ತಾರೆ ದೇವಿಂದರ್ ಶರ್ಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...