Homeಮುಖಪುಟಕನಿಷ್ಠ ಬೆಂಬಲ ಬೆಲೆಯ ಗರಿಷ್ಠ ದೋಷಗಳು : ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆಯೇ ಪರಿಹಾರ

ಕನಿಷ್ಠ ಬೆಂಬಲ ಬೆಲೆಯ ಗರಿಷ್ಠ ದೋಷಗಳು : ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆಯೇ ಪರಿಹಾರ

- Advertisement -
- Advertisement -

ಉತ್ತರ ಕರ್ನಾಟಕದ 12 ಮತ್ತು ಮಧ್ಯ ಕರ್ನಾಟಕದ ಎರಡು ಜಿಲ್ಲೆಗಳಲ್ಲಿ ಸರ್ಕಾರ ಕನಿಷ್ಠ ಬೆಂಬಲ ಬೆಲೆಯಲ್ಲಿ ಕಡಲೆ ಖರೀದಿ ಆರಂಭಿಸಿದೆ. ಈಗಾಗಲೇ ಮಾರುಕಟ್ಟೆಯಲ್ಲಿ 4 ಸಾವಿರ ದರವಿತ್ತು, ಬೆಂಬಲ ಬೆಲೆಯಲ್ಲಿ 4,875 ರೂ ದರ ನಿಗದಿ ಮಾಡಿದ್ದಾರೆ. ಎಕರೆಗೆ 3 ಕ್ವಿಂಟಾಲ್ ಮತ್ತು ಗರಿಷ್ಠ 10 ಕ್ವಿಂಟಾಲ್ ಕಡಲೆಯನ್ನಷ್ಟೇ ಒಂದು ರೈತ ಕುಟುಂಬ ಮಾರಲು ಅವಕಾಶವಿದೆ. ಪಹಣಿ, ಬ್ಯಾಂಕ್ ಖಾತೆ ಇತ್ಯಾದಿ ರಗಳೆ ಇದ್ದೇ ಇವೆ.

ಕನಿಷ್ಠ ಬೆಂಬಲ ಬೆಲೆ ಕೊಡುವುದೇ ರೈತರ ಬೆಳೆಗಳಿಗೆ ನ್ಯಾಯಯುತ ದರ ಒದಗಿಸುವ ಮಾರ್ಗ ಎಂಬಂತೆ ಎಲ್ಲ ಸರ್ಕಾರಗಳೂ ಬಿಂಬಿಸುತ್ತ ಬಂದಿವೆ. ಸದ್ಯ 23 ಬೆಳೆಗಳಿಗೆ ಕೇಂದ್ರ ಸರ್ಕಾರ ಬೆಂಬಲ ಬೆಲೆ ನಿಗದಿ ಮಾಡುತ್ತಿದೆ.
ಯಾವುದೇ ಒಂದು ಬೆಳೆಗೆ ಇಂತಿಷ್ಟು ಎಂದು ಕನಿಷ್ಠ ಬೆಂಬಲ ಬೆಲೆ ಘೋಷಿಸುವ ಉದ್ದೇಶ, ಮಾರುಕಟ್ಟೆಯಲ್ಲಿ ಕಡಿಮೆ ದರಕ್ಕೆ ಮಾರಬೇಕಾದ ಅನಿವಾರ್ಯ ಸ್ಥಿತಿಯಿಂದ ರೈತರನ್ನು ಪಾರು ಮಾಡುವುದು.

ಎಪಿಎಂಸಿ ವರ್ತಕರ ವಂಚನೆಗಳಿಗೆ ಕಡಿವಾಣ ಹಾಕುವ ಉದ್ದೇಶವನ್ನೇನೋ ಕನಿಷ್ಠ ಬೆಂಬಲ ಬೆಲೆ ಸೂತ್ರ ಹೊಂದಿದೆ. ಆದರೆ, ಮಾರುಕಟ್ಟೆ ಬೆಲೆಗಿಂತ ಕೊಂಚ ಅಂದರೆ ಗಣನೀಯವಲ್ಲದಷ್ಟು ಹೆಚ್ಚಳದಿಂದ ರೈತರಿಗೆ ಅಂತಹ ಹೇಳಿಕೊಳ್ಳುವ ಲಾಭ ಸಿಗುತ್ತಿಲ್ಲ, ಆದರೆ ರೈತರಿಗೆ ನ್ಯಾಯ ಕೊಟ್ಟೆವು ಎಂದು ಬೀಗುವುದು ತಪ್ಪುವುದೇ ಇಲ್ಲ.

ಸದ್ಯಕ್ಕೆ ಉದಾಹರಣೆಯಾಗಿ, ಬೆಳಗಾವಿ ಬಿಟ್ಟು, ಉತ್ತರ ಕರ್ನಾಟಕದ ಎಲ್ಲ ಜಿಲ್ಲೆ ಮತ್ತು ಮಧ್ಯ ಕರ್ನಾಟಕದ ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಬೆಳೆಯುವ ಹಿಂಗಾರಿ ಹಂಗಾಮಿನ ಕಡಲೆಯನ್ನೇ ತೆಗೆದುಕೊಳ್ಳಿ. ಕಳೆದ ವಾರ ಕ್ವಿಂಟಾಲ್‌ಗೆ 3,500-4,000 ರೂ. ದರವಿತ್ತು. ಇನ್ನೊಂದೆರಡು ದಿನದಲ್ಲಿ ಅದು 4,200 ರೂ ತಲುಪುವ ಸಾಧ್ಯತೆ ಇತ್ತು. ಎರಡು ದಿನದ ಹಿಂದೆ ಕಡಲೆಗೆ ಬೆಂಬಲ ಬೆಲೆಯಲ್ಲಿ ಖರೀದಿಸಲು ಆದೇಶ ಹೊರ ಬಿದ್ದಿದೆ. ಇದರ ಪ್ರಕಾರ, ತೇವಾಂಶ ಇಲ್ಲದ, ಗುಣಮಟ್ಟದ ಕಡಲೆಗೆ 4,875 ರೂ ದರ ನಿಗದಿ ಮಾಡಲಾಗಿದೆ. ಒಂದು ಕುಟಂಬಕ್ಕೆ ಅಥವಾ ಒಂದು ಪಹಣಿಗೆ ಗರಿಷ್ಠ 10 ಕ್ವಿಂಟಾಲ್ ಮಾತ್ರ ಖರೀದಿಸಲಾಗುತ್ತಿದೆ. ಪ್ರತಿ ಎಕರೆಗೆ 3 ಕ್ವಿಂಟಾಲ್ ಖರೀದಿಯಷ್ಟೇ.

ರಾಜ್ಯದ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆ ಮತ್ತು ಮಧ್ಯ ಕರ್ನಾಟಕದ ಎರಡು ಜಿಲ್ಲೆ ಸೇರಿ ಗರಿಷ್ಠ 1,43,390 ಮೆಟ್ರಿಕ್ ಟನ್ ಕಡಲೆಯನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಹೀಗಾಗಿ, ಎಕರೆಗೆ 3 ಕ್ವಿಂಟಾಲ್ ನಿಗದಿ ಮಾಡಿದ್ದಾರೆ. ಸರ್ಕಾರದ ಪರಿಭಾಷೆಯಲ್ಲೇ ಹೇಳುವುದಾದರೆ, ಐದು ಎಕರೆ ಮತ್ತು ಅದಕ್ಕಿಂತ ಕಡಿಮೆ ಭೂಮಿ ಹೊಂದಿರುವವರನ್ನು ಸಣ್ಣ ಹಿಡುವಳಿದಾರ ಎನ್ನುತ್ತಾರೆ.

 

ಐದು ಎಕರೆ ಹೊಂದಿರುವ ಸಣ್ಣ ಹಿಡುವಳಿದಾರ ಸರಾಸರಿ 30-35 ಕ್ವಿಂಟಾಲ್ ಕಡಲೆ ಉತ್ಪಾದಿಸುತ್ತಾನೆ. ಅದರಲ್ಲಿ ಸರ್ಕಾರ ಖರೀದಿಸುವುದು 10 ಕ್ವಿಂಟಾಲ್ ಮಾತ್ರ. ಹೀಗಾಗಿ ಬೆಂಬಲ ಬೆಲೆ ಖರೀದಿ ರೈತನ ವಿಷಯದಲ್ಲಿ ಹಿನ್ನಡೆಯಾಗುತ್ತದೆ.

ಅದಕ್ಕಿಂತ ಮುಖ್ಯವಾದ ಅಂಶ, ಕ್ವಿಂಟಾಲ್‌ಗೆ 4,875 ರೂ ನಿಗದಿ ಮಾಡಲಾಗಿದೆ. ಜಿಲ್ಲೆಯಲ್ಲಿ ಎಕರೆಗೆ 5-10 ಕ್ವಿಂಟಾಲ್‌ವರೆಗೂ ಕಡಲೆ ಬೆಳೆಯುತ್ತಾರೆ. ಸರಾಸರಿ ಏಳು ಕ್ವಿಂಟಾಲ್ ಎಂದು ಹಿಡಿದರೂ, ರೈತನಿಗೆ 34,125 ರೂ ಸಿಗುತ್ತದೆ. (ಒಂದೇ ಎಕರೆ ಇದ್ದರೆ, 3 ಕ್ವಿಂಟಾಲ್ ಮಾತ್ರ ಖರೀದಿ) ಬೀಜ, ಗೊಬ್ಬರ, ಕ್ರಮಿನಾಶಕ, ಗಳೆ, ಕಸ ತೆಗೆಯುವುದು, ರಾಶಿ ಮಾಡುವುದು, ಸಾಗಿಸುವುದು-ಈ ಎಲ್ಲದರ ಖರ್ಚು ಎಕರೆಗೆ 23 ಸಾವಿರದವರೆಗೂ ಬರುತ್ತದೆ. 3-4 ತಿಂಗಳು ಹೆಣಗಾಡಿದ ಮೇಲೆ ಉಳಿಯುವುದೆಷ್ಟು? 10-11 ಸಾವಿರ. ಅಂದರೆ 4 ತಿಂಗಳ ಕಾಲ ಒಂದು ಕುಟುಂಬ ಹಾಕಿದ ಶ್ರಮಕ್ಕೆ ಸಿಗುವುದಿಷ್ಟೇ.

ತಜ್ಞರು ಹೇಳುವ ಪ್ರಕಾರ, ಬೆಂಬಲ ಬೆಲೆಯ ಪ್ರಯೋಜನ ಶೇ. 5ರಷ್ಟು ರೈತರನ್ನು ತಲುಪುತ್ತಿಲ್ಲ. ಇದಕ್ಕೆ ಸರ್ಕಾರದ ವಿಳಂಬ ನಿರ್ಧಾರ, ತಾಂತ್ರಿಕ ನೆಪಗಳು ಕಾರಣ. ಅದಕ್ಕಿಂತ ಮುಖ್ಯವಾಗಿ, ಕನಿಷ್ಠ ಬೆಂಬಲ ಬೆಲೆ ಲೆಕ್ಕಾಚಾರ ಹಾಕುವ ಮಾನದಂಡದಲ್ಲೇ ದೋಷಗಳಿವೆ. ಈ ಎಲ್ಲದಕ್ಕೂ ಪರಿಹಾರ ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವುದೇ ಆಗಿದೆ.

ಎಂಎಸ್‌ಪಿ ಲೆಕ್ಕಚಾರವೇ ಮೋಸ: ದೇವೇಂದರ್ ಶರ್ಮಾ
ಕನಿಷ್ಠ ಬೆಂಬಲ ಬೆಲೆ ಲೆಕ್ಕಾಚಾರ ಮಾಡುವ ವಿಧಾನದಲ್ಲೇ ದೋಷವಿದೆ. ರೈತರ ಇನ್‌ ಪುಟ್ ವೆಚ್ಚವನ್ನು ಕನಿಷ್ಠ ಮಟ್ಟದಲ್ಲಿ ಪರಿಗಣಿಸುತ್ತಾರೆ. ಇಡೀ ಕುಟುಂಬದ ಶ್ರಮಕ್ಕೆ ತಕ್ಕ ವೇತನವನ್ನು ಪರಿಗಣಿಸುವುದಿಲ್ಲ ಎಂದು ವಿಶ್ಲೇಷಿಸುತ್ತಾರೆ ಖ್ಯಾತ ಕೃಷಿ-ಆರ್ಥಿಕ ತಜ್ಞ ದೇವೇಂದರ್ ಶರ್ಮಾ.

ಸರ್ಕಾರಿ ನೌಕರರ ಸಂಬಳ, ಸವಲತ್ತು ನಿರ್ಧರಿಸುವ 7ನೇ ವೇತನ ಆಯೋಗದಲ್ಲಿ 108 ವಿವಿಧ ಬಗೆಯ ಭತ್ಯೆಗಳ ಉಲ್ಲೇಖವಿದೆ. ರೈತರಿಗೆ ಇವೆಲ್ಲ ಲಾಗೂ ಆಗುವುದಿಲ್ಲವೇಕೆ? ಬೆಳೆಗೆ ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ವಸತಿ ಭತ್ಯೆ, ವೈದ್ಯಕೀಯ ಭತ್ಯೆ, ಶಿಕ್ಷಣ ಭತ್ಯೆ ಮತ್ತು ಪ್ರಯಾಣ ಭತ್ಯೆ (ರೈತಾಪಿ ಕೆಲಸಕ್ಕಾಗಿ ಓಡಾಟ)- ಕನಿಷ್ಠ ಈ ನಾಲ್ಕು ಭತ್ಯೆಗಳನ್ನು ಎಂಎಸ್‌ಪಿ ಲೆಕ್ಕಾಚಾರ ಮಾಡುವಾಗ ಪರಿಗಣಿಸಬೇಕು. ರೈತರ ಶ್ರಮಕ್ಕೆ ಸರಿಯಾದ ವೇತನ ಸಿಗುವಂತೆಯೂ ನೋಡಿಕೊಳ್ಳಬೇಕು.

ರೈತರ ಆಯೋಗವನ್ನು ಸ್ಥಾಪಿಸಿ ರೈತರಿಗೆ ಕನಿಷ್ಠ ಖಾತ್ರಿ ದರ ದೊರೆಯುವ ವ್ಯವಸ್ಥೆ ಮಾಡಬೇಕು. ಕೃಷಿಯಲ್ಲಿ ಸರ್ಕಾರದ ಹೂಡಿಕೆ ಜಿಡಿಪಿಯ ಶೇ. 0.4ರಷ್ಟು ಮಾತ್ರ ಎಂಬ ವಿಷಯವೇ ಕೃಷಿಯನ್ನು ಎಷ್ಟು ತಾತ್ಸಾರ ಮಾಡಲಾಗಿದೆ ಎಂಬುದಕ್ಕೆ ಸಾಕ್ಷಿಯಂತಿದೆ. ಕೃಷಿ ನೀತಿಯಲ್ಲಿ ಸಮಗ್ರ ಬದಲಾವಣೆ ಆದರಷ್ಟೇ ಭಾರತದಲ್ಲಿ ಕೃಷಿಗೆ ಉಳಿಗಾಲ ಎನ್ನುತ್ತಾರೆ ದೇವಿಂದರ್ ಶರ್ಮಾ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

ಮಲಯಾಳಂ ಚಿತ್ರರಂಗದ ಹಿರಿಯ ನಟ, ಚಿತ್ರಕಥೆಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಶ್ರೀನಿವಾಸನ್ ಶನಿವಾರ (ಡಿ.20) ನಿಧನರಾದರು. ಅವರಿಗೆ 69 ವರ್ಷ ವಯಸ್ಸಾಗಿತ್ತು. ದೀರ್ಘ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀನಿವಾಸನ್ ಅವರು, ಚಿಕಿತ್ಸೆ...

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...