Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...