Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...