Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...