Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...