Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...