Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....