Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...