Homeಸಿನಿಮಾಕ್ರೀಡೆತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

ತ್ಯಾಗ.. ತ್ಯಾಗ.. ತನ್ನೆಲ್ಲ ಖುಷಿಗಳನ್ನು ತ್ಯಾಗ ಮಾಡಿ ದೇಶದ ಸಂಭ್ರಮಕ್ಕೆ ಕಾರಣವಾಗಿಬಿಟ್ಟರು ಮೀರಾಬಾಯಿ

- Advertisement -
- Advertisement -

ಹಲ್ಲುಕಚ್ಚಿ ಐದು ವರುಷಗಳನ್ನು ಬಹುದೊಡ್ಡ ಕನಸಿನ ಹಿಂದೆಯೇ ಸಾಗಿಸಿದ್ದರು. ಮನೆಯ ಕಡೆಗೂ ಗಮನ ಕೊಡಲಿಲ್ಲ. ಅಷ್ಟೇ ಅಲ್ಲ, 2017ರಲ್ಲಿ ನಡೆದ ಸಹೋದರಿಯ ಮದುವೆಗೂ ಹೋಗದೇ ಕನಸಿನ ಬೆನ್ನು ಹತ್ತಿ ಶ್ರಮದ ತರಬೇತಿಯಲ್ಲಿ ತೊಡಗಿದ್ದವರು ಗಟ್ಟಿಗಿತ್ತಿ ನಮ್ಮ ಹೆಮ್ಮೆಯ ಮೀರಾಬಾಯಿ ಚಾನು. ಈಗ ಟೋಕಿಯೋ ಒಲಂಪಿಕ್ಸ್‌ನಲ್ಲಿ ವೆಯ್ಟ್ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕ ಗೆದ್ದು ಭಾರತದ ಹೆಮ್ಮೆಯಾಗಿ ದೇಶದ ಹೆಸರನ್ನು ಕಂಗೊಳಿಸಿದ್ದಾರೆ. ಇದರ ಹಿಂದೆ ಇರೋದು ನಿದ್ದೆಯಿಲ್ಲದ ದಿನಗಳು, ಶ್ರಮ, ಬೆವರು, ತ್ಯಾಗ ಮತ್ತು ಅವಮಾನವನ್ನು ಸಮ್ಮಾನವನ್ನಾಗಿಸುವ ಛಲ.

ಅಮ್ಮನ ಪ್ರಾರ್ಥನೆ ಮತ್ತು ಹಾರೈಕೆ ಮಗಳ ಜೊತೆಗಿತ್ತು. ಹಾಗಂತ ಮನೆಗೆ ಹೋಗಿ ಆಶೀರ್ವಾದ ಪಡೆದದ್ದಲ್ಲ. ಮಗಳ ಹಠ, ಛಲ ಮುಂದೊಂದು ದಿನ ದೇಶದ ಬಲವಾಗುತ್ತೆ ಅಂತ ಅಮ್ಮನಿಗೂ ಗೊತ್ತಿತ್ತು. ಮೀರಾಬಾಯಿ ಚಾನು ಮನೆಗೆ ಹೋಗದೆ ಎರಡು ವರ್ಷವಾಗಿತ್ತು.

ಎರಡು ದಶಕಗಳ ನಂತರ ಭಾರ ಎತ್ತಿದ ಚಾನು!

2000ನೇ ಇಸವಿಯಲ್ಲಿ ಸಿಡ್ನಿ ಒಲಿಂಪಿಕ್ಸ್‌ನಲ್ಲಿ ಭಾರತದ ಕರ್ಣಂ ಮಲ್ಲೇಶ್ವರಿ ಕಂಚಿನ ಪದಕಕ್ಕೆ ಮುತ್ತಿಕ್ಕಿದ್ದರು. ಇದಾದನಂತರ ಭಾರತೀಯ ವೆಯ್ಟ್ ಲಿಫ್ಟರ್ಸ್‌ ಮೇಲೆ ನಿರೀಕ್ಷೆ ಹೆಚ್ಚಾಯ್ತು. ಆದರೆ ಆ ನಂತರ ದೇಶಕ್ಕೆ 21 ವರ್ಷಗಳ ನಂತರ ಮೀರಾಬಾಯಿ ಪದಕದ ಆಸೆ ಸಾಕಾರಗೊಳಿಸಿದ್ದಾರೆ.

ಕಳೆದ ಒಲಿಂಪಿಕ್ಸ್‌ನಲ್ಲಿ ತೊಟ್ಟ ಪಣಕ್ಕೆ ಇಂದು ಸಿಕ್ಕಿದೆ ಸಮ್ಮಾನ!

2016ರಲ್ಲಿ ನಡೆದ ರಿಯೋ ಒಲಿಂಪಿಕ್ಸ್‌ನಲ್ಲಿ ಮೀರಾಬಾಯಿ ಸ್ಪರ್ಧೆಯಲ್ಲಿ ಗಾಯಗೊಂಡು ಭಾರ ಎತ್ತಲಾಗದೇ ಸೋಲನ್ನು ಅನುಭವಿಸಿದ್ದರು. ಅದೇ ನೋವು ಅವರನ್ನು ಬಿಟ್ಟೂ ಬಿಡದೆ ಕಾಡುತ್ತಿತ್ತು. ಅಲ್ಲಿಂದ ಮುಂದೆ ಪದಕವೆಂಬ ಮಾಯಾಜಿಂಕೆಯ ಬೆನ್ನತ್ತಿ ಬೆವರು ಹರಿಸುತ್ತಾ ಸಾಗಿದರು. ಬರೋಬ್ಬರಿ ಐದು ವರ್ಷಗಳ ನಂತರ ಇಂದು ಟೋಕಿಯೋದಲ್ಲಿ ಮೀರಾಬಾಯಿ ಚಾನು ಭಾರತದ ಬೆಳ್ಳಿ ಗೆದ್ದ ಬಂಗಾರವಾಗಿದ್ದಾರೆ.

ಆರ್ಚರಿ ಸೇರಬೇಕೆಂದು ಹೋದಾಕೆ ವೆಯ್ಟ್ ಲಿಫ್ಟರ್ ಆದಳು! ಹಳ್ಳಿಯಿಂದ 20ಕಿಲೋಮೀಟರ್ ಅಭ್ಯಾಸಕ್ಕಾಗಿ ಪಯಣ!

ಮಣಿಪುರದ ಮಾಂಗ್ಕೊಕ್ ಕಾಕ್ಚಿಂಗ್ ಎಂಬ ಹಳ್ಳಿಯವರಾದ ಮೀರಾಗೆ ಒಂದು ಗುರಿಯಿತ್ತು. ಅದರಲ್ಲೂ ತಾನೊಬ್ಬಳು ಗುರಿಗಾರ್ತಿಯಾಗಬೇಕೆಂಬ ಮಹದಾಸೆ ಆಕೆಗಿತ್ತು. ಮನೆಯಲ್ಲಿ ಆರ್ಥಿಕ ಸಂಕಷ್ಟ ಇತ್ತಾದ್ರೂ, ಅಪ್ಪ ಅಮ್ಮನ ಪ್ರೋತ್ಸಾಹ ಮಗಳಿಗಿತ್ತು. ಇದೇ ಹುಮ್ಮಸ್ಸಿನಲ್ಲಿ ಹನ್ನರಡನೇ ವಯಸ್ಸಿನಲ್ಲಿ ಮೀರಾಬಾಯಿ ಆರ್ಚರಿಗೆ ಸೇರಬೇಕೆಂದು ಇಂಪಾಲದ ಕುಮನ್ ಲಂಪಕ್ ಸ್ಟೇಡಿಯಂಗೆ ತೆರಳಿದ್ದರು. ಆರ್ಚರಿಗೆ ತನ್ನ ಹೆಸರು ನೋಂದಾಯಿಸಬೇಕೆಂದು ತೆರಳಿದ್ದ ಮೀರಾಗೆ ಅಂದು ಆರ್ಚರಿ ಅಸೋಸಿಯೇಷನ್ ಕಚೇರಿ ತೆರೆಯದೇ ಇರುವುದು ನಿರಾಸೆ ಮೂಡಿಸಿತ್ತು. ಆರ್ಚರಿಗೆ ಹೆಸರು ನೋಂದಾಯಿಸಿಕೊಳ್ಳುವ ಬಗೆ ಹೇಗೆಂದು ವಿಚಾರಿಸಲು ಮೀರಾಬಾಯಿ ಪಕ್ಕದಲ್ಲೇ ಇದ್ದ ವೆಯ್ಟ್ ಲಿಫ್ಟಿಂಗ್ ಕಚೇರಿಯ ಕೋಣೆಗೆ ತೆರಳಿದ್ರು.
ಆದರೆ, ಈ ನಡೆಯೇ ಮೀರಾ ಅವರ ಬದುಕನ್ನು ಬದಲಿಸಿತು. ವೆಯ್ಟ್ ಲಿಫ್ಟಿಂಗ್‌ನತ್ತ ಮೀರಾ ಬಾಯಿ ಚಿತ್ತ ಹರಿಯಿತು. ತನ್ನೂರಿನ ಬೆಟ್ಟಗುಡ್ಡ, ಇಳಿಜಾರಿನಲ್ಲಿ ಕಟ್ಟಿಗೆಹೊತ್ತು ಸಾಗುತ್ತಿದ್ದ ಈ ಹಳ್ಳಿ ಹುಡುಗಿಗೆ ಭಾರ ಎತ್ತುವುದು ಸುಲಭವಾಯ್ತು. ನಂತರ ಆರ್ಚರಿಯತ್ತ ಇದ್ದ ಒಲವು ಅಚ್ಚರಿಯೆಂಬಂತೆ ಜರ್ಕ್, ಸ್ನಾಚ್‌ನತ್ತ ಶಿಫ್ಟ್ ಆಯ್ತು. ಇಲ್ಲಿಂದ ಮುಂದೆ ಮೀರಾಬಾಯಿ ಬದುಕು ಬದಲಾಯಿತು.

ಖುಷಿ, ನೋವು, ಕಣ್ಣೀರು, ಅವಮಾನಗಳ ಜೊತೆಜೊತೆಗೆ ಒಬ್ಬ ಗಟ್ಟಿಗಿತ್ತಿ ಕ್ರೀಡಾಪಟುವಾಗಿ ಸಾಗಿದ್ರು. ಕೊರೊನಾದ ನಡುವೆಯೂ ಭಾರತದ ಪದಕದ ನಿರೀಕ್ಷೆಯನ್ನು ಮೀರಾ ಸಾಕಾರಗೊಳಿಸಿದ್ದಾರೆ. ಇವರ ಮುನ್ನುಡಿಯಿಂದ ಮತ್ತಷ್ಟು ಪದಕಗಳು ಭಾರತೀಯರ ಕೊರಳು ಅಲಂಕರಿಸಲಿ. ಭಾರತದ ಬೆಳ್ಳಿ ಬಂಗಾರಕ್ಕೆ ನನ್ನದೊಂದು ಸಲಾಂ!

  • ಸುನಿಲ್ ಸಿರಸಂಗಿ

ಇದನ್ನೂ ಓದಿ: ತಪ್ಪಿದ ಆರ್ಚರ್ ತರಬೇತಿ: ವೇಟ್‌ ಲಿಫ್ಟಿಂಗ್‌ನಲ್ಲಿ ಬೆಳ್ಳಿ ಪದಕಕ್ಕೆ ಮುತ್ತಿಟ್ಟ ಮೀರಾಬಾಯಿ ಚಾನು ಯಾರು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...