Homeಮುಖಪುಟಕಾಲದೇಶಕ್ಕೆ ತಕ್ಕಂತೆ ಬಣ್ಣ ಬದಲಿಸಿಕೊಳ್ಳುತ್ತಿದೆ ರಾಷ್ಟ್ರವಾದ

ಕಾಲದೇಶಕ್ಕೆ ತಕ್ಕಂತೆ ಬಣ್ಣ ಬದಲಿಸಿಕೊಳ್ಳುತ್ತಿದೆ ರಾಷ್ಟ್ರವಾದ

- Advertisement -
- Advertisement -

ಪ್ರಕೃತಿಯಲ್ಲಿ ಸರಿಸೃಪಗಳ ಗುಂಪೊಂದು ಇದೆ. ಆ ಗುಂಪಿನಲ್ಲಿ ಹಲ್ಲಿ, ಹಾವು, ಓತಿ, ಉಡ ಊಸರವಳ್ಳಿಯಂಥ  ಪ್ರಾಣಿಗಳು ಬರುತ್ತವೆ. ಅವುಗಳಲ್ಲಿ ಕೆಲವು ಪ್ರಾಣಿಗಳು ಪರಿಸರ, ಪ್ರದೇಶಕ್ಕೆ ತಕ್ಕ ಹಾಗೆ ಬಣ್ಣ ಬದಲಿಸುವ ಗುಣ ಹೊಂದಿವೆ. ಅದರಲ್ಲಿ ಪ್ರಮುಖವಾದುದು ಊಸರವಳ್ಳಿ. ಅದು ಕ್ಷಣಕ್ಷಣಕ್ಕೂ ಬಣ್ಣ ಬದಲಿಸುತ್ತಲೇ ಇರತ್ತದೆ. ಅದು ತನ್ನ ‘ತಾವನ್ನು’ ಬದಲಿಸದಂತೆಲ್ಲಾ ಬಣ್ಣವೂ ಬದಲಾಗುತ್ತಾ ಹೋಗುತ್ತದೆ. ಅದು ಪ್ರಕೃತಿಯಲ್ಲಿ ನಡೆಯುವ ವಿಸ್ಮಯ. ಆದರೆ ಪ್ರಕತಿಯ ಭಾಗವೇ ಆಗಿರುವ ಮನುಷ್ಯ ಪ್ರಾಣಿಗಳ ಗುಂಪೊಂದು ಇದೆ. ಅದೂ ಕೂಡ ಸನ್ನಿವೇಶ ಕಾಲಮಾನ ಬದಲಾದಂತೆ ತನ್ನ ಸಿದ್ದಾಂತವನ್ನು ಹೊಸ ಆಕಾರ ಮತ್ತು ರೂಪಕ್ಕೆ ಬದಲಿಸಿಕೊಳ್ಳುತ್ತದೆ. ಆಧುನಿಕ ಸಂದರ್ಭದಲ್ಲಿ ಸಾಫ್ಟವೇರ್ ನಲ್ಲಿ ಬದಲಾಗಬಹುದು. ಆದರೆ ಅದರ ಮೂಲರೂಪ ಬದಲಾಗುವುದಿಲ್ಲ. ಇದು ಬೈನರಿ ಮ್ಯಾಥಮೆಟಿಕ್ಸ್ ಇದ್ದಂತೆ.

ಊಸರವಳ್ಳಿಯ ಗುಣ ಬಣ್ಣ ಬದಲಿಸಿಕೊಳ್ಳುವುದು. ಅದರ ನಿಜವಾದ ಬಣ್ಣ ಯಾವುದು ಎಂದು ಕೇಳಿದರೆ ಹೇಳಲು ಸಾಧ್ಯವಿಲ್ಲ. ನಾನು ನೋಡಿದ ಊಸರವಳ್ಳಿಯ ಬಣ್ಣ ಬೇರೊಬ್ಬನಿಗೆ ಅದೇ ರೀತಿ ಕಾಣಬಹುದು ಅಥವಾ ಕಾಣದೇ ಇರಬಹುದು. ಇನ್ನೊಬ್ಬ ನೋಡುವ ಹೊತ್ತಿಗೆ ಊಸರವಳ್ಳಿ ಬಣ್ಣವನ್ನು ಬದಲಿಸಿಕೊಂಡು ಮೊದಲಿನವನಿಗೆ ದಿಕ್ಕು ತಪ್ಪುವಂತೆ ಮಾಡಬಹುದು. ಆ ಇಬ್ಬರೂ ಕೂಡ ಚರ್ಚೆಗೆ ಇಳಿದರೆ ‘ನಾನು’ ಬಣ್ಣವೇ ಸರಿ ಎಂದು ವಾದಿಸಬಹುದು ಇಬ್ಬರೂ ಮಂಡಿಸುವ ವಾದವೂ ಸರಿಯಾಗಿಯೇ ಇರುತ್ತದೆ. ಇಬ್ಬರ ಅನುಭವವೂ ಸಮರ್ಥನೆಗೆ ಕಾರಣಗಳನ್ನು ಒದಿಗಿಸುತ್ತದೆ. ಊಸರವಳ್ಳಿ ಮೊದಲ ಬಣ್ಣದಲ್ಲೇ ಇತ್ತು ಎನ್ನುವುದು, ನಂತರ ಬಣ್ಣ ಬದಲಿಸಿತು ಎನ್ನುವುದು ಎರಡೂ ಸತ್ಯದ ಸಂಗತಿಗಳೇ!! ಊಸರವಳ್ಳಿ ಇಬ್ಬರು ವ್ಯಕ್ತಿಗಳನ್ನು ಗೊಂದಲದಲ್ಲಿ ಮುಳುಗಿಸುತ್ತದೆ. ಗೊಂದಲ ಮೂಡಿಸದಿದ್ದರೆ ಅದು ಊಸರವಳ್ಳಿ ಆಗಲಾರದು.

ಊಸರವಳ್ಳಿ ಮತ್ತು ರಾಷ್ಟ್ರೀಯವಾದ ಒಂದೇ ಗುಣವುಳ್ಳವು. ‘ರಾಷ್ಟ್ರೀಯತೆ’ ಕಾಲಕಾಲಕ್ಕೆ ಬಣ್ಣ ಬದಲಿಸುತ್ತ ಬಂದಿರುವುದನ್ನು ಇತಿಹಾಸ ಪುಟಗಳು ದೃಢೀಕರಿಸುತ್ತವೆ. ಹಿಟ್ಲರ್ ಮತ್ತು ಮುಸಲೋನಿ ಪ್ರತಿಪಾದಿಸಿದ ರಾಷ್ಟ್ರೀಯತೆ ಪರಿಕಲ್ಪನೆ ಭಾರತದ ಸಂಪ್ರದಾಯವಾದಿ ಮನಸ್ಥಿತಿಯಲ್ಲೂ ಬೆಳೆದುಬಂತು ಅಥವಾ ಭಾರತದ ಸಂಪ್ರದಾಯವಾದಿ ಮನಸ್ಸು ಅದರಂತೆಯೇ ಇತ್ತು. ಅದೇ ಕಾರಣಕ್ಕೆ ಭಾರತದ ಸಂಪ್ರದಾಯವಾದಿ ಗುಂಪು ನಾಸಿಜಂ ಮತ್ತು ಫ್ಯಾಸಿಸಂ ಅನ್ನು ಅಪ್ಪಿಕೊಂಡಿತು. ಜರ್ಮನಿಯ ನಾಜಿಗಳ ‘ರಾಷ್ಟ್ರೀಯತೆ’ ಭಾರತದ ಸಂಪ್ರದಾಯವಾದಿ ಗುಂಪಿಗೆ ಮತ್ತಷ್ಟು ಬಲ ತಂದಿತು. ಹಾಗಾಗಿಯೇ ಇಲ್ಲಿನ ಹಿಂದೂ ಮಹಾಸಭಾ ಮತ್ತು ಆರ್.ಎಸ್.ಎಸ್. ಹಿಟ್ಲರ್ ಮತ್ತು ಮುಸಲೋನಿಯ ಚಿಹ್ನೆಗಳನ್ನು, ಸಿದ್ದಾಂತವನ್ನು ಅಪ್ಪಿಕೊಂಡು ಜನರ ಮೇಲೆ ಸವಾರಿ ಮಾಡುತ್ತಲೇ ಬಂತು.

ರಾಷ್ಟ್ರೀಯತೆ ಪರಿಕಲ್ಪನೆಗೆ ಬಹುತ್ವದಿಂದ ವ್ಯಾಪಕ ವಿರೋಧ ವ್ಯಕ್ತವಾದಂತೆ, ಅದು ನಾಸಿಸಂ ಮತ್ತು ಫ್ಯಾಸಿಸಂ ಪ್ರತಿರೂಪದಲ್ಲಿ ಬರುತ್ತಿದೆ. ಇದನ್ನೇ ಆರ್.ಎಸ್.ಎಸ್. ಮತ್ತು ಹಿಂದೂ ಮಹಾಸಭಾ ತನ್ನ ಬೈನರಿ ಮ್ಯಾಥ ಮೆಟಿಕ್ಸ್ ಮಾಡಿಕೊಂಡಿದೆ ಎಂಬುದನ್ನು ಜನರಿಗೆ ಸಾರಿಸಾರಿ ಹೇಳಿದಾಗಲೇ ಕ್ರಮೇಣ ಸಂಘದಲ್ಲಿ ಕೆಲ ದೈಹಿಕ ಬದಲಾವಣೆಗಳು ಕಳೆದ 94 ವರ್ಷಗಳಲ್ಲಿ ಕಂಡುಬಂದಿವೆ. ಜನರಲ್ಲಿ ಒಂದು ವಿಷಯದ ಬಗ್ಗೆ ಗೊಂದಲ ಮೂಡಿಸುವುದು ತನ್ನ ಹಿಡೆನ್ ಅಜೆಂಡಾವನ್ನು ತುರುಕುವುದು ನಡೆಯುತ್ತಲೇ ಇದೆ. ಗೊಂದಲದ ಪರಿಸ್ಥಿತಿ ಸೃಷ್ಟಿಸುವ ಕಾರ್ಯ ಮುಂದುವರಿಯುತ್ತಲೇ ಇದೆ. ಅಂದರೆ ಊಸರವಳ್ಳಿ ಬಣ್ಣದ ಕುರಿತು ಇಬ್ಬರು ವ್ಯಕ್ತಿಗಳು ವಾದಿಸುವ ರೀತಿಯಂತೆಯೆ ಇದು. ಅದು ಹಾಗಿತ್ತು ಎಂದು ಮೊದಲು ಹೇಳಿ ನಂತರ ಅದು ಹಾಗಿರಲಿಲ್ಲ ಎನ್ನುವುದು. ಇದು ಜನರಿಗೂ ಕೂಡ ಹೌದಲ್ಲವೇ? ಎನ್ನುವಂತೆ ನಂಬಿಸುವುದು ಕೂಡ ಇದರ ಹಿಂದಿನ ತಂತ್ರ

ಈಗ ‘ರಾಷ್ಟ್ರೀಯತೆ’ ಬಗ್ಗೆ ಆರ್.ಎಸ್.ಎಸ್ ಮತ್ತು ಹಿಂದೂ ಮಹಾಸಭಾದೊಳಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ ಅಥವಾ ನಡೆದಂತೆ ಬಿಂಬಿಸಲಾಗುತ್ತಿದೆ. ಆರ್.ಎಸ್.ಎಸ್. ಪ್ರತಿಪಾದಿಸುವ ರಾಷ್ಟ್ರೀಯತೆ’ ಮತ್ತು ಫ್ಯಾಸಿಸಂ ಮತ್ತು ನಾಸಿಸಂಗೂ ಸಂಬಂಧವಿದೆ ಎಂಬ ಸತ್ಯ ಜನರಿಗೆ ಅರಿವಾಗುತ್ತಿರುವಾಗಲೇ ನಮ್ಮದು ರಾಷ್ಟ್ರೀಯತೆ ಅಲ್ಲ. ನಮ್ಮದು ನ್ಯಾಷನಾಲಿಟಿ ಅರ್ತಾತ್ ರಾಷ್ಟ್ರೀಯತಾವಾದ ಎನ್ನುತ್ತ ತನ್ನ ಸಾಫ್ಟ್‌ವೇರ್ ಬದಲಿಸಿಕೊಳ್ಳುತ್ತಿದೆ. ಹೊಸ ಸನ್ನಿವೇಶ ಹೊಸ ಪೀಳಿಗೆಗೆ ರಾಷ್ಟ್ರೀಯತಾವಾದ ಹೊಸದಾಗಿ ಕಾಣುತ್ತಿದೆ ಅಥವಾ ಹಾಗೆ ಕಾಣುವಂತೆ ನೋಡಿಕೊಳ್ಳುವ ಪ್ರಯತ್ನಗಳು ಇಂದು ನಡೆಯುತ್ತಿವೆ. ಆದರೆ ಅದು ತನ್ನ ಮೂಲರೂಪವನ್ನು ಬಿಟ್ಟುಕೊಡುವುದಿಲ್ಲ. ಮೂಲರೂಪ ಯಾವುದೆಂದರೆ ಅದು ಮಾನಸಿಕ ಕ್ರೌರ್ಯದ ದುರ್ಗುಣ. ಆಧುನಿಕತೆ ಸಂದರ್ಭದಲ್ಲಿ ಕಂಪ್ಯೂಟರ್ ಗಳಲ್ಲಿನ ಸಾಫ್ಟ್ ವೇರ್ ಬದಲಾದಂತೆ ಆರ್.ಎಸ್.ಎಸ್ ತನ್ನ ಸಾಫ್ಟವೇರ್ ಅನ್ನು ಅಪ್ ಗ್ರೇಡ್ ಮಾಡಿಕೊಳ್ಳತೊಡಗಿದೆ.

ಗೋಪಾಲಕೃಷ್ಣ ಅಡಿಗರಂಥ ಕವಿ ‘ನೆಹರು ನಿವೃತ್ತರಾಗುವುದಿಲ್ಲ” ‘ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು’ ಎಂದು ಕವನ ಬರೆದರು. ಇದು ಈಗ ‘ನವಭಾರತ’ ಪರಿಕಲ್ಪನೆಯ ಹುಟ್ಟಿಗೆ ಕಾರಣ ವಾಗಿದೆ. ‘ಆಖಂಡ ಭಾರತ’ ಪರಿಕಲ್ಪನೆ ಮೂಲರೂಪದಲ್ಲೇ ಇದ್ದು ಅದನ್ನು ರಹಸ್ಯವಾಗಿಯೇ ಇಡಲಾಗಿದೆ. ಕತ್ತಲೆಯ ಮನೆಯೊಳಗೆ ಭೂಪಟವನ್ನು ಹರಡಿ ಪಾಕಿಸ್ತಾನ, ಆಫ್ಥಾನಿಸ್ತಾನ, ಬಾಂಗ್ಲಾ ಎಲ್ಲವೂ ಅಖಂಡ ಭಾರತದಡಿ ಬರಬೇಕು ಎನ್ನುವ ಸಾಂಸ್ಕೃತಿಕ ರಾಜಕಾರಣ ಮತ್ತು ಅದರ ಬಗೆಗಿನ ಪ್ರೀತಿ ಆರ್.ಎಸ್.ಎಸ್ ಸಂಘಟನೆಗೆ ಮತ್ತಷ್ಟು ಹೆಚ್ಚಾಗತೊಡಗಿದೆ. ಇಲ್ಲಿನ ಜನರನ್ನು ಅಲೆಯುವಂತೆ ಮಾಡಿದರೆ, ನಾವು ಹೇಳಿದಂತೆ ಕೇಳುತ್ತಾರೆ ಎಂಬ ಪ್ರಭುತ್ವದ ಹುನ್ನಾರವೂ ಇದರ ಹಿಂದೆ ಕೆಲಸ ಮಾಡುತ್ತಿದೆ.

ಹತ್ತೊಂಬತ್ತನೇ ಶತಮಾನದ ಕೊನೆಯ ಭಾಗ ಮತ್ತು ಇಪ್ಪತ್ತೇ ಶತಮಾನದ ಆರಂಭದಲ್ಲಿದ್ದ ರಾಷ್ಟ್ರೀಯತೆ ಪರಿಕಲ್ಪನೆಯು ಈಗ ಸ್ಥಿತ್ಯಂತರಗೊಳ್ಳತೊಡಗಿದೆ. ‘ನ್ಯಾಷನಲಿಸಂ’ ತನ್ನನ್ನು ದುರ್ಬಲಗೊಳಿಸುತ್ತಿದೆ ಎಂಬುದು ಗೊತ್ತಾದ ಕೂಡಲೇ ಆರ್.ಎಸ್.ಎಸ್. ತನ್ನದು ರಾಷ್ಟ್ರೀಯತೆ ಅಲ್ಲ, ‘ರಾಷ್ಟ್ರೀಯತಾವಾದ’ ಎಂಬ ಹೊಸ ನುಡಿಗಟ್ಟನ್ನು ಹುಟ್ಟುಹಾಕಿದೆ. ಕಾಲ ಬದಲಾಗಿದೆ. ತಾವಿರುವ ಪರಿಸರ, ಜನರು ಬದಲಾಗಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬದಲಾವಣೆಯಾಗಿದೆ. ಹಾಗಾಗಿ ‘ನವಭಾರತ’ದ ಸನ್ನಿವೇಶದಲ್ಲಿ ತಾನೂ ಬದಲುಗೊಳ್ಳುತ್ತಿದೆ. ಜನರನ್ನು ಗೊಂದಲದಲ್ಲಿ ತಳ್ಳುತ್ತಲೇ ಇದೆ. ಹೊಸ ಚಳವಳಿಗಳು ಹುಟ್ಟಿದಾಗಲೆಲ್ಲಾ ಅದರಲ್ಲಿ ತಾನೂ ಸೇರಿಕೊಳ್ಳುತ್ತದೆ. ಇಡೀ ಚಳವಳಿಯ ಆಶಯವನ್ನೇ ನುಚ್ಚುನೂರು ಮಾಡುತ್ತದೆ. ಅದೇ ಭಾರತದ ಸಂಪ್ರದಾಯವಾದಿ ಗುಂಪಿನ ಸಿದ್ದಾಂತ.

(ಲೇಖಕರು ಪತ್ರಕರ್ತರು. ಅಭಿಪ್ರಾಯಗಳು ಅವರ ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...