Homeಮುಖಪುಟಕಾಲದೇಶಕ್ಕೆ ತಕ್ಕಂತೆ ಬಣ್ಣ ಬದಲಿಸಿಕೊಳ್ಳುತ್ತಿದೆ ರಾಷ್ಟ್ರವಾದ

ಕಾಲದೇಶಕ್ಕೆ ತಕ್ಕಂತೆ ಬಣ್ಣ ಬದಲಿಸಿಕೊಳ್ಳುತ್ತಿದೆ ರಾಷ್ಟ್ರವಾದ

- Advertisement -
- Advertisement -

ಪ್ರಕೃತಿಯಲ್ಲಿ ಸರಿಸೃಪಗಳ ಗುಂಪೊಂದು ಇದೆ. ಆ ಗುಂಪಿನಲ್ಲಿ ಹಲ್ಲಿ, ಹಾವು, ಓತಿ, ಉಡ ಊಸರವಳ್ಳಿಯಂಥ  ಪ್ರಾಣಿಗಳು ಬರುತ್ತವೆ. ಅವುಗಳಲ್ಲಿ ಕೆಲವು ಪ್ರಾಣಿಗಳು ಪರಿಸರ, ಪ್ರದೇಶಕ್ಕೆ ತಕ್ಕ ಹಾಗೆ ಬಣ್ಣ ಬದಲಿಸುವ ಗುಣ ಹೊಂದಿವೆ. ಅದರಲ್ಲಿ ಪ್ರಮುಖವಾದುದು ಊಸರವಳ್ಳಿ. ಅದು ಕ್ಷಣಕ್ಷಣಕ್ಕೂ ಬಣ್ಣ ಬದಲಿಸುತ್ತಲೇ ಇರತ್ತದೆ. ಅದು ತನ್ನ ‘ತಾವನ್ನು’ ಬದಲಿಸದಂತೆಲ್ಲಾ ಬಣ್ಣವೂ ಬದಲಾಗುತ್ತಾ ಹೋಗುತ್ತದೆ. ಅದು ಪ್ರಕೃತಿಯಲ್ಲಿ ನಡೆಯುವ ವಿಸ್ಮಯ. ಆದರೆ ಪ್ರಕತಿಯ ಭಾಗವೇ ಆಗಿರುವ ಮನುಷ್ಯ ಪ್ರಾಣಿಗಳ ಗುಂಪೊಂದು ಇದೆ. ಅದೂ ಕೂಡ ಸನ್ನಿವೇಶ ಕಾಲಮಾನ ಬದಲಾದಂತೆ ತನ್ನ ಸಿದ್ದಾಂತವನ್ನು ಹೊಸ ಆಕಾರ ಮತ್ತು ರೂಪಕ್ಕೆ ಬದಲಿಸಿಕೊಳ್ಳುತ್ತದೆ. ಆಧುನಿಕ ಸಂದರ್ಭದಲ್ಲಿ ಸಾಫ್ಟವೇರ್ ನಲ್ಲಿ ಬದಲಾಗಬಹುದು. ಆದರೆ ಅದರ ಮೂಲರೂಪ ಬದಲಾಗುವುದಿಲ್ಲ. ಇದು ಬೈನರಿ ಮ್ಯಾಥಮೆಟಿಕ್ಸ್ ಇದ್ದಂತೆ.

ಊಸರವಳ್ಳಿಯ ಗುಣ ಬಣ್ಣ ಬದಲಿಸಿಕೊಳ್ಳುವುದು. ಅದರ ನಿಜವಾದ ಬಣ್ಣ ಯಾವುದು ಎಂದು ಕೇಳಿದರೆ ಹೇಳಲು ಸಾಧ್ಯವಿಲ್ಲ. ನಾನು ನೋಡಿದ ಊಸರವಳ್ಳಿಯ ಬಣ್ಣ ಬೇರೊಬ್ಬನಿಗೆ ಅದೇ ರೀತಿ ಕಾಣಬಹುದು ಅಥವಾ ಕಾಣದೇ ಇರಬಹುದು. ಇನ್ನೊಬ್ಬ ನೋಡುವ ಹೊತ್ತಿಗೆ ಊಸರವಳ್ಳಿ ಬಣ್ಣವನ್ನು ಬದಲಿಸಿಕೊಂಡು ಮೊದಲಿನವನಿಗೆ ದಿಕ್ಕು ತಪ್ಪುವಂತೆ ಮಾಡಬಹುದು. ಆ ಇಬ್ಬರೂ ಕೂಡ ಚರ್ಚೆಗೆ ಇಳಿದರೆ ‘ನಾನು’ ಬಣ್ಣವೇ ಸರಿ ಎಂದು ವಾದಿಸಬಹುದು ಇಬ್ಬರೂ ಮಂಡಿಸುವ ವಾದವೂ ಸರಿಯಾಗಿಯೇ ಇರುತ್ತದೆ. ಇಬ್ಬರ ಅನುಭವವೂ ಸಮರ್ಥನೆಗೆ ಕಾರಣಗಳನ್ನು ಒದಿಗಿಸುತ್ತದೆ. ಊಸರವಳ್ಳಿ ಮೊದಲ ಬಣ್ಣದಲ್ಲೇ ಇತ್ತು ಎನ್ನುವುದು, ನಂತರ ಬಣ್ಣ ಬದಲಿಸಿತು ಎನ್ನುವುದು ಎರಡೂ ಸತ್ಯದ ಸಂಗತಿಗಳೇ!! ಊಸರವಳ್ಳಿ ಇಬ್ಬರು ವ್ಯಕ್ತಿಗಳನ್ನು ಗೊಂದಲದಲ್ಲಿ ಮುಳುಗಿಸುತ್ತದೆ. ಗೊಂದಲ ಮೂಡಿಸದಿದ್ದರೆ ಅದು ಊಸರವಳ್ಳಿ ಆಗಲಾರದು.

ಊಸರವಳ್ಳಿ ಮತ್ತು ರಾಷ್ಟ್ರೀಯವಾದ ಒಂದೇ ಗುಣವುಳ್ಳವು. ‘ರಾಷ್ಟ್ರೀಯತೆ’ ಕಾಲಕಾಲಕ್ಕೆ ಬಣ್ಣ ಬದಲಿಸುತ್ತ ಬಂದಿರುವುದನ್ನು ಇತಿಹಾಸ ಪುಟಗಳು ದೃಢೀಕರಿಸುತ್ತವೆ. ಹಿಟ್ಲರ್ ಮತ್ತು ಮುಸಲೋನಿ ಪ್ರತಿಪಾದಿಸಿದ ರಾಷ್ಟ್ರೀಯತೆ ಪರಿಕಲ್ಪನೆ ಭಾರತದ ಸಂಪ್ರದಾಯವಾದಿ ಮನಸ್ಥಿತಿಯಲ್ಲೂ ಬೆಳೆದುಬಂತು ಅಥವಾ ಭಾರತದ ಸಂಪ್ರದಾಯವಾದಿ ಮನಸ್ಸು ಅದರಂತೆಯೇ ಇತ್ತು. ಅದೇ ಕಾರಣಕ್ಕೆ ಭಾರತದ ಸಂಪ್ರದಾಯವಾದಿ ಗುಂಪು ನಾಸಿಜಂ ಮತ್ತು ಫ್ಯಾಸಿಸಂ ಅನ್ನು ಅಪ್ಪಿಕೊಂಡಿತು. ಜರ್ಮನಿಯ ನಾಜಿಗಳ ‘ರಾಷ್ಟ್ರೀಯತೆ’ ಭಾರತದ ಸಂಪ್ರದಾಯವಾದಿ ಗುಂಪಿಗೆ ಮತ್ತಷ್ಟು ಬಲ ತಂದಿತು. ಹಾಗಾಗಿಯೇ ಇಲ್ಲಿನ ಹಿಂದೂ ಮಹಾಸಭಾ ಮತ್ತು ಆರ್.ಎಸ್.ಎಸ್. ಹಿಟ್ಲರ್ ಮತ್ತು ಮುಸಲೋನಿಯ ಚಿಹ್ನೆಗಳನ್ನು, ಸಿದ್ದಾಂತವನ್ನು ಅಪ್ಪಿಕೊಂಡು ಜನರ ಮೇಲೆ ಸವಾರಿ ಮಾಡುತ್ತಲೇ ಬಂತು.

ರಾಷ್ಟ್ರೀಯತೆ ಪರಿಕಲ್ಪನೆಗೆ ಬಹುತ್ವದಿಂದ ವ್ಯಾಪಕ ವಿರೋಧ ವ್ಯಕ್ತವಾದಂತೆ, ಅದು ನಾಸಿಸಂ ಮತ್ತು ಫ್ಯಾಸಿಸಂ ಪ್ರತಿರೂಪದಲ್ಲಿ ಬರುತ್ತಿದೆ. ಇದನ್ನೇ ಆರ್.ಎಸ್.ಎಸ್. ಮತ್ತು ಹಿಂದೂ ಮಹಾಸಭಾ ತನ್ನ ಬೈನರಿ ಮ್ಯಾಥ ಮೆಟಿಕ್ಸ್ ಮಾಡಿಕೊಂಡಿದೆ ಎಂಬುದನ್ನು ಜನರಿಗೆ ಸಾರಿಸಾರಿ ಹೇಳಿದಾಗಲೇ ಕ್ರಮೇಣ ಸಂಘದಲ್ಲಿ ಕೆಲ ದೈಹಿಕ ಬದಲಾವಣೆಗಳು ಕಳೆದ 94 ವರ್ಷಗಳಲ್ಲಿ ಕಂಡುಬಂದಿವೆ. ಜನರಲ್ಲಿ ಒಂದು ವಿಷಯದ ಬಗ್ಗೆ ಗೊಂದಲ ಮೂಡಿಸುವುದು ತನ್ನ ಹಿಡೆನ್ ಅಜೆಂಡಾವನ್ನು ತುರುಕುವುದು ನಡೆಯುತ್ತಲೇ ಇದೆ. ಗೊಂದಲದ ಪರಿಸ್ಥಿತಿ ಸೃಷ್ಟಿಸುವ ಕಾರ್ಯ ಮುಂದುವರಿಯುತ್ತಲೇ ಇದೆ. ಅಂದರೆ ಊಸರವಳ್ಳಿ ಬಣ್ಣದ ಕುರಿತು ಇಬ್ಬರು ವ್ಯಕ್ತಿಗಳು ವಾದಿಸುವ ರೀತಿಯಂತೆಯೆ ಇದು. ಅದು ಹಾಗಿತ್ತು ಎಂದು ಮೊದಲು ಹೇಳಿ ನಂತರ ಅದು ಹಾಗಿರಲಿಲ್ಲ ಎನ್ನುವುದು. ಇದು ಜನರಿಗೂ ಕೂಡ ಹೌದಲ್ಲವೇ? ಎನ್ನುವಂತೆ ನಂಬಿಸುವುದು ಕೂಡ ಇದರ ಹಿಂದಿನ ತಂತ್ರ

ಈಗ ‘ರಾಷ್ಟ್ರೀಯತೆ’ ಬಗ್ಗೆ ಆರ್.ಎಸ್.ಎಸ್ ಮತ್ತು ಹಿಂದೂ ಮಹಾಸಭಾದೊಳಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ ಅಥವಾ ನಡೆದಂತೆ ಬಿಂಬಿಸಲಾಗುತ್ತಿದೆ. ಆರ್.ಎಸ್.ಎಸ್. ಪ್ರತಿಪಾದಿಸುವ ರಾಷ್ಟ್ರೀಯತೆ’ ಮತ್ತು ಫ್ಯಾಸಿಸಂ ಮತ್ತು ನಾಸಿಸಂಗೂ ಸಂಬಂಧವಿದೆ ಎಂಬ ಸತ್ಯ ಜನರಿಗೆ ಅರಿವಾಗುತ್ತಿರುವಾಗಲೇ ನಮ್ಮದು ರಾಷ್ಟ್ರೀಯತೆ ಅಲ್ಲ. ನಮ್ಮದು ನ್ಯಾಷನಾಲಿಟಿ ಅರ್ತಾತ್ ರಾಷ್ಟ್ರೀಯತಾವಾದ ಎನ್ನುತ್ತ ತನ್ನ ಸಾಫ್ಟ್‌ವೇರ್ ಬದಲಿಸಿಕೊಳ್ಳುತ್ತಿದೆ. ಹೊಸ ಸನ್ನಿವೇಶ ಹೊಸ ಪೀಳಿಗೆಗೆ ರಾಷ್ಟ್ರೀಯತಾವಾದ ಹೊಸದಾಗಿ ಕಾಣುತ್ತಿದೆ ಅಥವಾ ಹಾಗೆ ಕಾಣುವಂತೆ ನೋಡಿಕೊಳ್ಳುವ ಪ್ರಯತ್ನಗಳು ಇಂದು ನಡೆಯುತ್ತಿವೆ. ಆದರೆ ಅದು ತನ್ನ ಮೂಲರೂಪವನ್ನು ಬಿಟ್ಟುಕೊಡುವುದಿಲ್ಲ. ಮೂಲರೂಪ ಯಾವುದೆಂದರೆ ಅದು ಮಾನಸಿಕ ಕ್ರೌರ್ಯದ ದುರ್ಗುಣ. ಆಧುನಿಕತೆ ಸಂದರ್ಭದಲ್ಲಿ ಕಂಪ್ಯೂಟರ್ ಗಳಲ್ಲಿನ ಸಾಫ್ಟ್ ವೇರ್ ಬದಲಾದಂತೆ ಆರ್.ಎಸ್.ಎಸ್ ತನ್ನ ಸಾಫ್ಟವೇರ್ ಅನ್ನು ಅಪ್ ಗ್ರೇಡ್ ಮಾಡಿಕೊಳ್ಳತೊಡಗಿದೆ.

ಗೋಪಾಲಕೃಷ್ಣ ಅಡಿಗರಂಥ ಕವಿ ‘ನೆಹರು ನಿವೃತ್ತರಾಗುವುದಿಲ್ಲ” ‘ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು’ ಎಂದು ಕವನ ಬರೆದರು. ಇದು ಈಗ ‘ನವಭಾರತ’ ಪರಿಕಲ್ಪನೆಯ ಹುಟ್ಟಿಗೆ ಕಾರಣ ವಾಗಿದೆ. ‘ಆಖಂಡ ಭಾರತ’ ಪರಿಕಲ್ಪನೆ ಮೂಲರೂಪದಲ್ಲೇ ಇದ್ದು ಅದನ್ನು ರಹಸ್ಯವಾಗಿಯೇ ಇಡಲಾಗಿದೆ. ಕತ್ತಲೆಯ ಮನೆಯೊಳಗೆ ಭೂಪಟವನ್ನು ಹರಡಿ ಪಾಕಿಸ್ತಾನ, ಆಫ್ಥಾನಿಸ್ತಾನ, ಬಾಂಗ್ಲಾ ಎಲ್ಲವೂ ಅಖಂಡ ಭಾರತದಡಿ ಬರಬೇಕು ಎನ್ನುವ ಸಾಂಸ್ಕೃತಿಕ ರಾಜಕಾರಣ ಮತ್ತು ಅದರ ಬಗೆಗಿನ ಪ್ರೀತಿ ಆರ್.ಎಸ್.ಎಸ್ ಸಂಘಟನೆಗೆ ಮತ್ತಷ್ಟು ಹೆಚ್ಚಾಗತೊಡಗಿದೆ. ಇಲ್ಲಿನ ಜನರನ್ನು ಅಲೆಯುವಂತೆ ಮಾಡಿದರೆ, ನಾವು ಹೇಳಿದಂತೆ ಕೇಳುತ್ತಾರೆ ಎಂಬ ಪ್ರಭುತ್ವದ ಹುನ್ನಾರವೂ ಇದರ ಹಿಂದೆ ಕೆಲಸ ಮಾಡುತ್ತಿದೆ.

ಹತ್ತೊಂಬತ್ತನೇ ಶತಮಾನದ ಕೊನೆಯ ಭಾಗ ಮತ್ತು ಇಪ್ಪತ್ತೇ ಶತಮಾನದ ಆರಂಭದಲ್ಲಿದ್ದ ರಾಷ್ಟ್ರೀಯತೆ ಪರಿಕಲ್ಪನೆಯು ಈಗ ಸ್ಥಿತ್ಯಂತರಗೊಳ್ಳತೊಡಗಿದೆ. ‘ನ್ಯಾಷನಲಿಸಂ’ ತನ್ನನ್ನು ದುರ್ಬಲಗೊಳಿಸುತ್ತಿದೆ ಎಂಬುದು ಗೊತ್ತಾದ ಕೂಡಲೇ ಆರ್.ಎಸ್.ಎಸ್. ತನ್ನದು ರಾಷ್ಟ್ರೀಯತೆ ಅಲ್ಲ, ‘ರಾಷ್ಟ್ರೀಯತಾವಾದ’ ಎಂಬ ಹೊಸ ನುಡಿಗಟ್ಟನ್ನು ಹುಟ್ಟುಹಾಕಿದೆ. ಕಾಲ ಬದಲಾಗಿದೆ. ತಾವಿರುವ ಪರಿಸರ, ಜನರು ಬದಲಾಗಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬದಲಾವಣೆಯಾಗಿದೆ. ಹಾಗಾಗಿ ‘ನವಭಾರತ’ದ ಸನ್ನಿವೇಶದಲ್ಲಿ ತಾನೂ ಬದಲುಗೊಳ್ಳುತ್ತಿದೆ. ಜನರನ್ನು ಗೊಂದಲದಲ್ಲಿ ತಳ್ಳುತ್ತಲೇ ಇದೆ. ಹೊಸ ಚಳವಳಿಗಳು ಹುಟ್ಟಿದಾಗಲೆಲ್ಲಾ ಅದರಲ್ಲಿ ತಾನೂ ಸೇರಿಕೊಳ್ಳುತ್ತದೆ. ಇಡೀ ಚಳವಳಿಯ ಆಶಯವನ್ನೇ ನುಚ್ಚುನೂರು ಮಾಡುತ್ತದೆ. ಅದೇ ಭಾರತದ ಸಂಪ್ರದಾಯವಾದಿ ಗುಂಪಿನ ಸಿದ್ದಾಂತ.

(ಲೇಖಕರು ಪತ್ರಕರ್ತರು. ಅಭಿಪ್ರಾಯಗಳು ಅವರ ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...