Homeಮುಖಪುಟಕಾಲದೇಶಕ್ಕೆ ತಕ್ಕಂತೆ ಬಣ್ಣ ಬದಲಿಸಿಕೊಳ್ಳುತ್ತಿದೆ ರಾಷ್ಟ್ರವಾದ

ಕಾಲದೇಶಕ್ಕೆ ತಕ್ಕಂತೆ ಬಣ್ಣ ಬದಲಿಸಿಕೊಳ್ಳುತ್ತಿದೆ ರಾಷ್ಟ್ರವಾದ

- Advertisement -
- Advertisement -

ಪ್ರಕೃತಿಯಲ್ಲಿ ಸರಿಸೃಪಗಳ ಗುಂಪೊಂದು ಇದೆ. ಆ ಗುಂಪಿನಲ್ಲಿ ಹಲ್ಲಿ, ಹಾವು, ಓತಿ, ಉಡ ಊಸರವಳ್ಳಿಯಂಥ  ಪ್ರಾಣಿಗಳು ಬರುತ್ತವೆ. ಅವುಗಳಲ್ಲಿ ಕೆಲವು ಪ್ರಾಣಿಗಳು ಪರಿಸರ, ಪ್ರದೇಶಕ್ಕೆ ತಕ್ಕ ಹಾಗೆ ಬಣ್ಣ ಬದಲಿಸುವ ಗುಣ ಹೊಂದಿವೆ. ಅದರಲ್ಲಿ ಪ್ರಮುಖವಾದುದು ಊಸರವಳ್ಳಿ. ಅದು ಕ್ಷಣಕ್ಷಣಕ್ಕೂ ಬಣ್ಣ ಬದಲಿಸುತ್ತಲೇ ಇರತ್ತದೆ. ಅದು ತನ್ನ ‘ತಾವನ್ನು’ ಬದಲಿಸದಂತೆಲ್ಲಾ ಬಣ್ಣವೂ ಬದಲಾಗುತ್ತಾ ಹೋಗುತ್ತದೆ. ಅದು ಪ್ರಕೃತಿಯಲ್ಲಿ ನಡೆಯುವ ವಿಸ್ಮಯ. ಆದರೆ ಪ್ರಕತಿಯ ಭಾಗವೇ ಆಗಿರುವ ಮನುಷ್ಯ ಪ್ರಾಣಿಗಳ ಗುಂಪೊಂದು ಇದೆ. ಅದೂ ಕೂಡ ಸನ್ನಿವೇಶ ಕಾಲಮಾನ ಬದಲಾದಂತೆ ತನ್ನ ಸಿದ್ದಾಂತವನ್ನು ಹೊಸ ಆಕಾರ ಮತ್ತು ರೂಪಕ್ಕೆ ಬದಲಿಸಿಕೊಳ್ಳುತ್ತದೆ. ಆಧುನಿಕ ಸಂದರ್ಭದಲ್ಲಿ ಸಾಫ್ಟವೇರ್ ನಲ್ಲಿ ಬದಲಾಗಬಹುದು. ಆದರೆ ಅದರ ಮೂಲರೂಪ ಬದಲಾಗುವುದಿಲ್ಲ. ಇದು ಬೈನರಿ ಮ್ಯಾಥಮೆಟಿಕ್ಸ್ ಇದ್ದಂತೆ.

ಊಸರವಳ್ಳಿಯ ಗುಣ ಬಣ್ಣ ಬದಲಿಸಿಕೊಳ್ಳುವುದು. ಅದರ ನಿಜವಾದ ಬಣ್ಣ ಯಾವುದು ಎಂದು ಕೇಳಿದರೆ ಹೇಳಲು ಸಾಧ್ಯವಿಲ್ಲ. ನಾನು ನೋಡಿದ ಊಸರವಳ್ಳಿಯ ಬಣ್ಣ ಬೇರೊಬ್ಬನಿಗೆ ಅದೇ ರೀತಿ ಕಾಣಬಹುದು ಅಥವಾ ಕಾಣದೇ ಇರಬಹುದು. ಇನ್ನೊಬ್ಬ ನೋಡುವ ಹೊತ್ತಿಗೆ ಊಸರವಳ್ಳಿ ಬಣ್ಣವನ್ನು ಬದಲಿಸಿಕೊಂಡು ಮೊದಲಿನವನಿಗೆ ದಿಕ್ಕು ತಪ್ಪುವಂತೆ ಮಾಡಬಹುದು. ಆ ಇಬ್ಬರೂ ಕೂಡ ಚರ್ಚೆಗೆ ಇಳಿದರೆ ‘ನಾನು’ ಬಣ್ಣವೇ ಸರಿ ಎಂದು ವಾದಿಸಬಹುದು ಇಬ್ಬರೂ ಮಂಡಿಸುವ ವಾದವೂ ಸರಿಯಾಗಿಯೇ ಇರುತ್ತದೆ. ಇಬ್ಬರ ಅನುಭವವೂ ಸಮರ್ಥನೆಗೆ ಕಾರಣಗಳನ್ನು ಒದಿಗಿಸುತ್ತದೆ. ಊಸರವಳ್ಳಿ ಮೊದಲ ಬಣ್ಣದಲ್ಲೇ ಇತ್ತು ಎನ್ನುವುದು, ನಂತರ ಬಣ್ಣ ಬದಲಿಸಿತು ಎನ್ನುವುದು ಎರಡೂ ಸತ್ಯದ ಸಂಗತಿಗಳೇ!! ಊಸರವಳ್ಳಿ ಇಬ್ಬರು ವ್ಯಕ್ತಿಗಳನ್ನು ಗೊಂದಲದಲ್ಲಿ ಮುಳುಗಿಸುತ್ತದೆ. ಗೊಂದಲ ಮೂಡಿಸದಿದ್ದರೆ ಅದು ಊಸರವಳ್ಳಿ ಆಗಲಾರದು.

ಊಸರವಳ್ಳಿ ಮತ್ತು ರಾಷ್ಟ್ರೀಯವಾದ ಒಂದೇ ಗುಣವುಳ್ಳವು. ‘ರಾಷ್ಟ್ರೀಯತೆ’ ಕಾಲಕಾಲಕ್ಕೆ ಬಣ್ಣ ಬದಲಿಸುತ್ತ ಬಂದಿರುವುದನ್ನು ಇತಿಹಾಸ ಪುಟಗಳು ದೃಢೀಕರಿಸುತ್ತವೆ. ಹಿಟ್ಲರ್ ಮತ್ತು ಮುಸಲೋನಿ ಪ್ರತಿಪಾದಿಸಿದ ರಾಷ್ಟ್ರೀಯತೆ ಪರಿಕಲ್ಪನೆ ಭಾರತದ ಸಂಪ್ರದಾಯವಾದಿ ಮನಸ್ಥಿತಿಯಲ್ಲೂ ಬೆಳೆದುಬಂತು ಅಥವಾ ಭಾರತದ ಸಂಪ್ರದಾಯವಾದಿ ಮನಸ್ಸು ಅದರಂತೆಯೇ ಇತ್ತು. ಅದೇ ಕಾರಣಕ್ಕೆ ಭಾರತದ ಸಂಪ್ರದಾಯವಾದಿ ಗುಂಪು ನಾಸಿಜಂ ಮತ್ತು ಫ್ಯಾಸಿಸಂ ಅನ್ನು ಅಪ್ಪಿಕೊಂಡಿತು. ಜರ್ಮನಿಯ ನಾಜಿಗಳ ‘ರಾಷ್ಟ್ರೀಯತೆ’ ಭಾರತದ ಸಂಪ್ರದಾಯವಾದಿ ಗುಂಪಿಗೆ ಮತ್ತಷ್ಟು ಬಲ ತಂದಿತು. ಹಾಗಾಗಿಯೇ ಇಲ್ಲಿನ ಹಿಂದೂ ಮಹಾಸಭಾ ಮತ್ತು ಆರ್.ಎಸ್.ಎಸ್. ಹಿಟ್ಲರ್ ಮತ್ತು ಮುಸಲೋನಿಯ ಚಿಹ್ನೆಗಳನ್ನು, ಸಿದ್ದಾಂತವನ್ನು ಅಪ್ಪಿಕೊಂಡು ಜನರ ಮೇಲೆ ಸವಾರಿ ಮಾಡುತ್ತಲೇ ಬಂತು.

ರಾಷ್ಟ್ರೀಯತೆ ಪರಿಕಲ್ಪನೆಗೆ ಬಹುತ್ವದಿಂದ ವ್ಯಾಪಕ ವಿರೋಧ ವ್ಯಕ್ತವಾದಂತೆ, ಅದು ನಾಸಿಸಂ ಮತ್ತು ಫ್ಯಾಸಿಸಂ ಪ್ರತಿರೂಪದಲ್ಲಿ ಬರುತ್ತಿದೆ. ಇದನ್ನೇ ಆರ್.ಎಸ್.ಎಸ್. ಮತ್ತು ಹಿಂದೂ ಮಹಾಸಭಾ ತನ್ನ ಬೈನರಿ ಮ್ಯಾಥ ಮೆಟಿಕ್ಸ್ ಮಾಡಿಕೊಂಡಿದೆ ಎಂಬುದನ್ನು ಜನರಿಗೆ ಸಾರಿಸಾರಿ ಹೇಳಿದಾಗಲೇ ಕ್ರಮೇಣ ಸಂಘದಲ್ಲಿ ಕೆಲ ದೈಹಿಕ ಬದಲಾವಣೆಗಳು ಕಳೆದ 94 ವರ್ಷಗಳಲ್ಲಿ ಕಂಡುಬಂದಿವೆ. ಜನರಲ್ಲಿ ಒಂದು ವಿಷಯದ ಬಗ್ಗೆ ಗೊಂದಲ ಮೂಡಿಸುವುದು ತನ್ನ ಹಿಡೆನ್ ಅಜೆಂಡಾವನ್ನು ತುರುಕುವುದು ನಡೆಯುತ್ತಲೇ ಇದೆ. ಗೊಂದಲದ ಪರಿಸ್ಥಿತಿ ಸೃಷ್ಟಿಸುವ ಕಾರ್ಯ ಮುಂದುವರಿಯುತ್ತಲೇ ಇದೆ. ಅಂದರೆ ಊಸರವಳ್ಳಿ ಬಣ್ಣದ ಕುರಿತು ಇಬ್ಬರು ವ್ಯಕ್ತಿಗಳು ವಾದಿಸುವ ರೀತಿಯಂತೆಯೆ ಇದು. ಅದು ಹಾಗಿತ್ತು ಎಂದು ಮೊದಲು ಹೇಳಿ ನಂತರ ಅದು ಹಾಗಿರಲಿಲ್ಲ ಎನ್ನುವುದು. ಇದು ಜನರಿಗೂ ಕೂಡ ಹೌದಲ್ಲವೇ? ಎನ್ನುವಂತೆ ನಂಬಿಸುವುದು ಕೂಡ ಇದರ ಹಿಂದಿನ ತಂತ್ರ

ಈಗ ‘ರಾಷ್ಟ್ರೀಯತೆ’ ಬಗ್ಗೆ ಆರ್.ಎಸ್.ಎಸ್ ಮತ್ತು ಹಿಂದೂ ಮಹಾಸಭಾದೊಳಗೆ ವ್ಯಾಪಕ ಚರ್ಚೆಗಳು ನಡೆಯುತ್ತಿವೆ ಅಥವಾ ನಡೆದಂತೆ ಬಿಂಬಿಸಲಾಗುತ್ತಿದೆ. ಆರ್.ಎಸ್.ಎಸ್. ಪ್ರತಿಪಾದಿಸುವ ರಾಷ್ಟ್ರೀಯತೆ’ ಮತ್ತು ಫ್ಯಾಸಿಸಂ ಮತ್ತು ನಾಸಿಸಂಗೂ ಸಂಬಂಧವಿದೆ ಎಂಬ ಸತ್ಯ ಜನರಿಗೆ ಅರಿವಾಗುತ್ತಿರುವಾಗಲೇ ನಮ್ಮದು ರಾಷ್ಟ್ರೀಯತೆ ಅಲ್ಲ. ನಮ್ಮದು ನ್ಯಾಷನಾಲಿಟಿ ಅರ್ತಾತ್ ರಾಷ್ಟ್ರೀಯತಾವಾದ ಎನ್ನುತ್ತ ತನ್ನ ಸಾಫ್ಟ್‌ವೇರ್ ಬದಲಿಸಿಕೊಳ್ಳುತ್ತಿದೆ. ಹೊಸ ಸನ್ನಿವೇಶ ಹೊಸ ಪೀಳಿಗೆಗೆ ರಾಷ್ಟ್ರೀಯತಾವಾದ ಹೊಸದಾಗಿ ಕಾಣುತ್ತಿದೆ ಅಥವಾ ಹಾಗೆ ಕಾಣುವಂತೆ ನೋಡಿಕೊಳ್ಳುವ ಪ್ರಯತ್ನಗಳು ಇಂದು ನಡೆಯುತ್ತಿವೆ. ಆದರೆ ಅದು ತನ್ನ ಮೂಲರೂಪವನ್ನು ಬಿಟ್ಟುಕೊಡುವುದಿಲ್ಲ. ಮೂಲರೂಪ ಯಾವುದೆಂದರೆ ಅದು ಮಾನಸಿಕ ಕ್ರೌರ್ಯದ ದುರ್ಗುಣ. ಆಧುನಿಕತೆ ಸಂದರ್ಭದಲ್ಲಿ ಕಂಪ್ಯೂಟರ್ ಗಳಲ್ಲಿನ ಸಾಫ್ಟ್ ವೇರ್ ಬದಲಾದಂತೆ ಆರ್.ಎಸ್.ಎಸ್ ತನ್ನ ಸಾಫ್ಟವೇರ್ ಅನ್ನು ಅಪ್ ಗ್ರೇಡ್ ಮಾಡಿಕೊಳ್ಳತೊಡಗಿದೆ.

ಗೋಪಾಲಕೃಷ್ಣ ಅಡಿಗರಂಥ ಕವಿ ‘ನೆಹರು ನಿವೃತ್ತರಾಗುವುದಿಲ್ಲ” ‘ಕಟ್ಟುವೆವು ನಾವು ಹೊಸ ನಾಡೊಂದನು, ರಸದ ಬೀಡೊಂದನು’ ಎಂದು ಕವನ ಬರೆದರು. ಇದು ಈಗ ‘ನವಭಾರತ’ ಪರಿಕಲ್ಪನೆಯ ಹುಟ್ಟಿಗೆ ಕಾರಣ ವಾಗಿದೆ. ‘ಆಖಂಡ ಭಾರತ’ ಪರಿಕಲ್ಪನೆ ಮೂಲರೂಪದಲ್ಲೇ ಇದ್ದು ಅದನ್ನು ರಹಸ್ಯವಾಗಿಯೇ ಇಡಲಾಗಿದೆ. ಕತ್ತಲೆಯ ಮನೆಯೊಳಗೆ ಭೂಪಟವನ್ನು ಹರಡಿ ಪಾಕಿಸ್ತಾನ, ಆಫ್ಥಾನಿಸ್ತಾನ, ಬಾಂಗ್ಲಾ ಎಲ್ಲವೂ ಅಖಂಡ ಭಾರತದಡಿ ಬರಬೇಕು ಎನ್ನುವ ಸಾಂಸ್ಕೃತಿಕ ರಾಜಕಾರಣ ಮತ್ತು ಅದರ ಬಗೆಗಿನ ಪ್ರೀತಿ ಆರ್.ಎಸ್.ಎಸ್ ಸಂಘಟನೆಗೆ ಮತ್ತಷ್ಟು ಹೆಚ್ಚಾಗತೊಡಗಿದೆ. ಇಲ್ಲಿನ ಜನರನ್ನು ಅಲೆಯುವಂತೆ ಮಾಡಿದರೆ, ನಾವು ಹೇಳಿದಂತೆ ಕೇಳುತ್ತಾರೆ ಎಂಬ ಪ್ರಭುತ್ವದ ಹುನ್ನಾರವೂ ಇದರ ಹಿಂದೆ ಕೆಲಸ ಮಾಡುತ್ತಿದೆ.

ಹತ್ತೊಂಬತ್ತನೇ ಶತಮಾನದ ಕೊನೆಯ ಭಾಗ ಮತ್ತು ಇಪ್ಪತ್ತೇ ಶತಮಾನದ ಆರಂಭದಲ್ಲಿದ್ದ ರಾಷ್ಟ್ರೀಯತೆ ಪರಿಕಲ್ಪನೆಯು ಈಗ ಸ್ಥಿತ್ಯಂತರಗೊಳ್ಳತೊಡಗಿದೆ. ‘ನ್ಯಾಷನಲಿಸಂ’ ತನ್ನನ್ನು ದುರ್ಬಲಗೊಳಿಸುತ್ತಿದೆ ಎಂಬುದು ಗೊತ್ತಾದ ಕೂಡಲೇ ಆರ್.ಎಸ್.ಎಸ್. ತನ್ನದು ರಾಷ್ಟ್ರೀಯತೆ ಅಲ್ಲ, ‘ರಾಷ್ಟ್ರೀಯತಾವಾದ’ ಎಂಬ ಹೊಸ ನುಡಿಗಟ್ಟನ್ನು ಹುಟ್ಟುಹಾಕಿದೆ. ಕಾಲ ಬದಲಾಗಿದೆ. ತಾವಿರುವ ಪರಿಸರ, ಜನರು ಬದಲಾಗಿದ್ದಾರೆ. ಆಧುನಿಕ ತಂತ್ರಜ್ಞಾನದಲ್ಲಿ ಬದಲಾವಣೆಯಾಗಿದೆ. ಹಾಗಾಗಿ ‘ನವಭಾರತ’ದ ಸನ್ನಿವೇಶದಲ್ಲಿ ತಾನೂ ಬದಲುಗೊಳ್ಳುತ್ತಿದೆ. ಜನರನ್ನು ಗೊಂದಲದಲ್ಲಿ ತಳ್ಳುತ್ತಲೇ ಇದೆ. ಹೊಸ ಚಳವಳಿಗಳು ಹುಟ್ಟಿದಾಗಲೆಲ್ಲಾ ಅದರಲ್ಲಿ ತಾನೂ ಸೇರಿಕೊಳ್ಳುತ್ತದೆ. ಇಡೀ ಚಳವಳಿಯ ಆಶಯವನ್ನೇ ನುಚ್ಚುನೂರು ಮಾಡುತ್ತದೆ. ಅದೇ ಭಾರತದ ಸಂಪ್ರದಾಯವಾದಿ ಗುಂಪಿನ ಸಿದ್ದಾಂತ.

(ಲೇಖಕರು ಪತ್ರಕರ್ತರು. ಅಭಿಪ್ರಾಯಗಳು ಅವರ ವೈಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...