Homeಎಕಾನಮಿಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ - ಡಿ ಉಮಾಪತಿ

ಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ – ಡಿ ಉಮಾಪತಿ

- Advertisement -
- Advertisement -

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು.

ತಾನು ಅಧಿಕಾರಕ್ಕೆ ಬಂದರೆ ದೇಶದ ಐದು ಕೋಟಿ ಅತಿ ಬಡ ಕುಟುಂಬಗಳಿಗೆ ವರ್ಷಕ್ಕೆ ತಲಾ 72 ಸಾವಿರ ರುಪಾಯಿಗಳಷ್ಟು ಕನಿಷ್ಠ ಆದಾಯವನ್ನು ವಿತರಿಸುವುದಾಗಿ ಕಾಂಗ್ರೆಸ್ ಪಕ್ಷ ಇತ್ತೀಚಿನ ಲೋಕಸಭಾ ಚುನಾವಣೆಗಳಲ್ಲಿ ಘೋಷಿಸಿತ್ತು.

`ನ್ಯಾಯ್’ ಎಂದು ಕರೆಯಲಾಗಿದ್ದ ಈ ಕನಿಷ್ಠ ಆದಾಯ ಯೋಜನೆಯ ಒಟ್ಟು ವೆಚ್ಚವನ್ನು 3.6 ಲಕ್ಷ ಕೋಟಿ ರುಪಾಯಿ ಎಂದು ಅಂದಾಜು ಮಾಡಲಾಗಿತ್ತು. ಅತಿ ಬಡ ಕುಟುಂಬಗಳ 25 ಕೋಟಿ ಮಂದಿಯನ್ನು ಈ ಯೋಜನೆಯ ಫಲಾನುಭವಿಗಳು ಎಂದು ಆ ಪಕ್ಷ ಹೇಳಿತ್ತು. ಚುನಾವಣೆಗಳ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳು ಅಲ್ಲಿಯ ತನಕ ಇಂತಹ ಮಹತ್ವಾಕಾಂಕ್ಷೆಯ ಅತಿ ದೊಡ್ಡ ಯೋಜನೆಯ ಭರವಸೆ ನೀಡಿರಲಿಲ್ಲ.

ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ‘ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್’, ದೇಶದ ಜನಮಾನಸವನ್ನು ಆವರಿಸಿದ ಹೊತ್ತಿನಲ್ಲಿ ಕಾಂಗ್ರೆಸ್ ಈ ಆಶ್ವಾಸನೆಯನ್ನು ಅನಾವರಣಗೊಳಿಸಿತ್ತು. ಬಡತನದ ಮೇಲೆ ತಮ್ಮ ಪಕ್ಷ ಸಾರಿದ ಅತಿ ದೊಡ್ಡ ‘ಸರ್ಜಿಕಲ್ ಸ್ಟ್ರೈಕ್’ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದರು.

ಪುಲ್ವಾಮಾ- ಬಾಲಾಕೋಟ್ ದಾಳಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಚುನಾವಣೆ ಪ್ರಚಾರಕ್ಕೆ ಮಂಕು ಕವಿಸಿತ್ತು.

ಪಾಕಿಸ್ತಾನವೆಂಬ ವೈರಿಯ ಮನೆಗೆ ನುಗ್ಗಿ ಬಾಂಬ್ ಕೆಡವಿ ಪಾಠ ಕಲಿಸಿದೆವು ಎಂಬುದಾಗಿ ಆಕ್ರಮಣಕಾರಿ ಹಿಂದೂ ರಾಷ್ಟ್ರವಾದ ಮತ್ತು ಹುಸಿ ‘ದೇಶಭಕ್ತಿ’ಯ ಸುತ್ತ ‘ಮೋಶಾ’ ಸರ್ಕಾರ ಬಲಿಷ್ಠ ಕಥನ ಕಟ್ಟಿತ್ತು. ಆದರೆ ಈ ಬಲಿಷ್ಠ ಭಾವೋದ್ದೀಪಕ ಕಥನವನ್ನು ದೇಶದ ಬಹುಪಾಲು ಜನರ ನಿತ್ಯ ಬದುಕನ್ನು ಕಾಡಿರುವ ನಿಜ ಸಮಸ್ಯೆಗಳ ವಾಸ್ತವದತ್ತ ವಾಪಸು ಕರೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸಿತ್ತು.

ಕಾಂಗ್ರೆಸ್ ಪಕ್ಷದ ಈ ಯೋಜನೆ ಅಭಿವೃದ್ಧಿಯನ್ನೇನೋ ಚಿಗುರಿಸಬಲ್ಲದು. ಆದರೆ ಸದ್ಯದ ಆರ್ಥಿಕ ದುಸ್ಥಿತಿಯು ಈ ಯೋಜನೆಯ ಜಾರಿಗೆ ಪೂರಕ ಅಲ್ಲ ಎಂಬುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‍ನ ನಿವೃತ್ತ ಗೌರ್ನರ್ ರಘುರಾಮ್ ರಾಜನ್ ವಿಮರ್ಶಿಸಿದ್ದರು. ಅಭಿವೃದ್ಧಿ- ಉದ್ಯೋಗಾವಕಾಶಗಳ ಸೃಷ್ಟಿಯೊಂದೇ ಬಡತನ ನಿವಾರಣೆಯ ನೇರ ದಾರಿ. ನೇರನಗದು ನೀಡಿಕೆ ದಿವ್ಯ ಔಷಧ ಅಲ್ಲ ಎಂಬ ಪ್ರತಿಕ್ರಿಯೆಗಳು ಕಾಂಗ್ರೆಸ್ ಯೋಜನೆ ಕುರಿತು ಕೇಳಿ ಬಂದಿದ್ದವು. ಚುನಾವಣೆಗಳಲ್ಲಿ ಮೋದಿ ಇನ್ನಷ್ಟು ಘನವಾಗಿ ಗೆದ್ದರು. ಕಾಂಗ್ರೆಸ್ ಮತ್ತಷ್ಟು ಶೋಚನೀಯವಾಗಿ ಸೋತಿತು.

ಆದರೆ ಈ ಯೋಜನೆಯ ಹಿಂದಿದ್ದ ಆಲೋಚನೆ ಅಭಿಜಿತ್ ಬ್ಯಾನರ್ಜಿ ಅವರದಾಗಿತ್ತು. ಬ್ಯಾನರ್ಜಿ ಮತ್ತು ಎಸ್ತರ್ ಡಫ್ಲೋ ಹಾಗೂ ಮೈಕೇಲ್ ಕ್ರೆಮರ್‍ರಿಗೆ 2019ರ ಅರ್ಥಶಾಸ್ತ್ರ ನೊಬೆಲ್ ಪಾರಿತೋಷಕ ಸಂದಿದೆ. ಈ ಪಾರಿತೋಷಕದ ನಗದು ಬಹುಮಾನದ ಮೊತ್ತ ಆರೂವರೆ ಕೋಟಿ ರುಪಾಯಿ. 46 ವರ್ಷ ವಯಸ್ಸಿನ ಡಫ್ಲೋ ಅವರು ಬ್ಯಾನರ್ಜಿ ಅವರ ಪತ್ನಿ ಕೂಡ. ಈವರೆಗೆ ಅರ್ಥಶಾಸ್ತ್ರ ನೊಬೆಲ್ ಪಡೆದವರ ಪೈಕಿ ಅತಿ ಕಿರಿಯ ವಯಸ್ಸಿನ ಮಹಿಳೆ. ಬಡತನ ನಿವಾರಣೆಯ ದಿಕ್ಕಿನಲ್ಲಿ ಈ ಮೂರು ಮಂದಿ ಭಾರತವೂ ಸೇರಿದಂತೆ 81 ದೇಶಗಳಲ್ಲಿ ನಡೆಸಿದ ವಿಸ್ತೃತ ಕ್ಷೇತ್ರ ಪ್ರಯೋಗಗಳ ಸಂಶೋಧನೆಗೆ ದೊರೆತಿರುವ ಮಾನ್ಯತೆಯಿದು.

ಯೋಜನೆ ಮತ್ತು ಅದರ ಅನುಷ್ಠಾನಗಳ ನಡುವೆ ಬಹಳಷ್ಟು ಕಳೆದು ಹೋಗುವ ಇಲ್ಲವೇ ಸೋರಿ ಹೋಗುವ ಸಂಕೀರ್ಣ ಅನುಭವ ಭಾರತದ ಸನ್ನಿವೇಶದ್ದು. ಹೀಗಾಗಿ ನೀತಿ ನಿರ್ಧಾರಗಳ ವಿನ್ಯಾಸ ಬಹು ಮಹತ್ವದ್ದು. ಯಶಸ್ಸು ಮತ್ತು ವೈಫಲ್ಯಗಳ ನಡುವಿನ ಅಂತರವನ್ನು ನಿರ್ಧರಿಸುವಂತಹುದು. ಜಗತ್ತಿನಲ್ಲಿ ಹೆಚ್ಚುತ್ತಲೇ ನಡೆದಿರುವ ಆದಾಯ ತಾರತಮ್ಯಗಳ ಹಿಂದಿನ ಕಾರಣಗಳ ಮೇಲೆ ಬೆಳಕು ಚೆಲ್ಲಿರುವ ಸಂಶೋಧನೆಯಿದು. ಶಿಕ್ಷಣ, ಆರೋಗ್ಯ ಹಾಗೂ ಇತರೆ ಯೋಜನೆಗಳಿಗೆ ಬಡವರ ಪ್ರತಿಕ್ರಿಯೆಗಳ ವಾಸ್ತವಿಕ ಒಳನೋಟಗಳನ್ನು ಕಟ್ಟಿ ಕೊಟ್ಟಿದೆ. ಜಗತ್ತಿನಾದ್ಯಂತ 70 ಕೋಟಿ ಜನ ಕಿತ್ತು ತಿನ್ನುವ ಬಡತನದಲ್ಲಿ ಉಸಿರಾಡಿದ್ದಾರೆ. ಇವರ ಉದ್ಧಾರದ ಹೆಸರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳನ್ನು ಸುರಿಯುವ ಸರ್ಕಾರಗಳು, ಹೀಗೆ ಸುರಿದ ಹಣ ಗುರಿ ಮುಟ್ಟಿಸಿತೇ ಎಂದು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಈ ವಿದ್ವಾಂಸರ ಸಂಶೋಧನೆಯು ಜಾಗತಿಕ ಬಡತನವನ್ನು ತೊಲಗಿಸುವ ನಮ್ಮ ಸಾಮಥ್ರ್ಯವನ್ನು ಗಣನೀಯವಾಗಿ ಸುಧಾರಿಸಿದೆ ಮತ್ತು ಅಭಿವೃದ್ಧಿ ಅರ್ಥಶಾಸ್ತ್ರವನ್ನು ರೂಪಾಂತರಗೊಳಿಸಿದೆ ಎಂದು ನೊಬೆಲ್ ಪಾರಿತೋಷಕದ ಗುಣಕಥನವು ಬ್ಯಾನರ್ಜಿ-ಎಸ್ತರ್-ಕ್ರೇಮರ್ ಅವರ ಸಾಧನೆಯನ್ನು ಕೊಂಡಾಡಿದೆ. ನವ ಉದಾರವಾದಿ ಅರ್ಥನೀತಿಯು ಜಗತ್ತಿನಾದ್ಯಂತ ಬಡ ಜನಸಮುದಾಯಗಳ ಮೇಲೆ ಇತ್ತೀಚಿನ ದಶಕಗಳಲ್ಲಿ ನಡೆಸಿರುವ ಪ್ರಹಾರ ಅಮಾನವೀಯ. ಬ್ಯಾನರ್ಜಿ ಸಂಗಾತಿಗಳ ಸಂಶೋಧನೆಯು ಈ ಕ್ರೌರ್ಯದ ಕುರಿತು ಪರೋಕ್ಷವಾಗಿಯಾದರೂ ಜಗದ ಕಣ್ಣು ತೆರೆಸಿದೆ.

ತಮ್ಮನ್ನು ಸೆಳೆದದ್ದು ಜೆ.ಎನ್.ಯು.ವಿನ ಬೌದ್ಧಿಕ ವಾತಾವರಣ ಎಂದು ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಎಂಭತ್ತರ ಆರಂಭದ ದಶಕಗಳಲ್ಲಿ ಜೆ.ಎನ್.ಯು.ವಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದ ಅಭಿಜಿತ್, ವಿದ್ಯಾರ್ಥಿ ಆಂದೋಲನದಲ್ಲಿ ಭಾಗವಹಿಸಿದ್ದರು. ದಸ್ತಗಿರಿಯಾಗಿ ಹತ್ತು ದಿನ ತಿಹಾರದ ಜೈಲಿನಲ್ಲಿ ಬಡವರ ಊಟದ ರುಚಿ ನೋಡಿದ್ದುಂಟು. ಮರಾಠೀ ತಾಯಿ ಮತ್ತು ಬಂಗಾಳಿ ತಂದೆಯ ಈ ಮಗ ಅರ್ಥಶಾಸ್ತ್ರಜ್ಞ ಆಗಿದ್ದು ಆಕಸ್ಮಿಕ. ಆತ ಅತ್ಯುತ್ತಮ ಬಾಣಸಿಗ. ಬಂಗಾಳೀ ಮತ್ತು ಮರಾಠೀ ಅಡುಗೆಯಲ್ಲಿ ನಿಪುಣ. ಮುಂದಿನ ವಾರ ತನ್ನ ಎರಡನೆಯ ಪುಸ್ತಕದ ಬಿಡುಗಡೆಗೆಂದು ಭಾರತಕ್ಕೆ ಬರಲಿದ್ದಾನೆ ಎಂದು ಸಂತಸ ಹಂಚಿಕೊಂಡಿದ್ದಾರೆ ತಾಯಿ ನಿರ್ಮಲಾ ಬ್ಯಾನರ್ಜಿ.

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು. ಜೆ.ಎನ್.ಯು. ಒದಗಿಸಿದ್ದ ಚಿಂತನೆ-ಅಭಿವ್ಯಕ್ತಿ-ಸಂಸ್ಕೃತಿಯ ಸ್ವಾತಂತ್ರ್ಯವು ಅಭಿಜಿತ್ ಬ್ಯಾನರ್ಜಿಯವರಂತಹ ಮೇಧಾವಿಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. 2016ಕ್ಕೆ ಮುನ್ನ ಇದ್ದ ಶೈಕ್ಷಣಿಕ ಸ್ವಾತಂತ್ರ್ಯ ಇಲ್ಲಿ ಮರೆಯಾಗಿದೆ. ಕೇಂದ್ರ ಸರ್ಕಾರವು ಕೊಡಲಿ ಹಿಡಿದು ಈ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಳಿದು ಅದರ ಬುಡ ಕಡಿಯತೊಡಗಿರುವ ಇಂದಿನ ದಿನಗಳಲ್ಲಿ ಮತ್ತೊಬ್ಬ ಅಭಿಜಿತ್ ಬ್ಯಾನರ್ಜಿ ಇಲ್ಲಿ ರೂಪುಗೊಳ್ಳುವುದು ಅಸಾಧ್ಯ ಎನ್ನುತ್ತಾರೆ ಪ್ರೊ.ಅನುರಾಧಾ ಚಿನಾಯ್.

ಭಾರೀ ಮೊತ್ತದ ಬಹುಮಾನದ ಹಣವನ್ನು ಏನು ಮಾಡಲಿದ್ದೀರಿ ಎಂಬ ಪ್ರಶ್ನೆಗೆ ಎಸ್ತರ್ ಡಫ್ಲೋ ಉತ್ತರ- 1903ರಲ್ಲಿ ಮೇರಿ ಕ್ಯೂರಿ ಭೌತಶಾಸ್ತ್ರಕ್ಕೆ ನೊಬೆಲ್ ಬಹುಮಾನ ಪಡೆದಾಗ ಅದೇ ಹಣದಿಂದ ತನ್ನ ಭವಿಷ್ಯದ ಸಂಶೋಧನೆಗೆ ಅಗತ್ಯವಿರುವ ಒಂದು ಗ್ರಾಂ ರೇಡಿಯಂ ಖರೀದಿಸಿದ್ದಳು. ನಮ್ಮ ಆ ‘ಒಂದು ಗ್ರಾಂ ರೇಡಿಯಂ’ ಏನು ಎಂದು ನಾವು ಮೂರೂ ಮಂದಿ ಚರ್ಚಿಸಿ ತೀರ್ಮಾನಿಸಲಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...