Homeಎಕಾನಮಿಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ - ಡಿ ಉಮಾಪತಿ

ಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ – ಡಿ ಉಮಾಪತಿ

- Advertisement -
- Advertisement -

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು.

ತಾನು ಅಧಿಕಾರಕ್ಕೆ ಬಂದರೆ ದೇಶದ ಐದು ಕೋಟಿ ಅತಿ ಬಡ ಕುಟುಂಬಗಳಿಗೆ ವರ್ಷಕ್ಕೆ ತಲಾ 72 ಸಾವಿರ ರುಪಾಯಿಗಳಷ್ಟು ಕನಿಷ್ಠ ಆದಾಯವನ್ನು ವಿತರಿಸುವುದಾಗಿ ಕಾಂಗ್ರೆಸ್ ಪಕ್ಷ ಇತ್ತೀಚಿನ ಲೋಕಸಭಾ ಚುನಾವಣೆಗಳಲ್ಲಿ ಘೋಷಿಸಿತ್ತು.

`ನ್ಯಾಯ್’ ಎಂದು ಕರೆಯಲಾಗಿದ್ದ ಈ ಕನಿಷ್ಠ ಆದಾಯ ಯೋಜನೆಯ ಒಟ್ಟು ವೆಚ್ಚವನ್ನು 3.6 ಲಕ್ಷ ಕೋಟಿ ರುಪಾಯಿ ಎಂದು ಅಂದಾಜು ಮಾಡಲಾಗಿತ್ತು. ಅತಿ ಬಡ ಕುಟುಂಬಗಳ 25 ಕೋಟಿ ಮಂದಿಯನ್ನು ಈ ಯೋಜನೆಯ ಫಲಾನುಭವಿಗಳು ಎಂದು ಆ ಪಕ್ಷ ಹೇಳಿತ್ತು. ಚುನಾವಣೆಗಳ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳು ಅಲ್ಲಿಯ ತನಕ ಇಂತಹ ಮಹತ್ವಾಕಾಂಕ್ಷೆಯ ಅತಿ ದೊಡ್ಡ ಯೋಜನೆಯ ಭರವಸೆ ನೀಡಿರಲಿಲ್ಲ.

ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ‘ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್’, ದೇಶದ ಜನಮಾನಸವನ್ನು ಆವರಿಸಿದ ಹೊತ್ತಿನಲ್ಲಿ ಕಾಂಗ್ರೆಸ್ ಈ ಆಶ್ವಾಸನೆಯನ್ನು ಅನಾವರಣಗೊಳಿಸಿತ್ತು. ಬಡತನದ ಮೇಲೆ ತಮ್ಮ ಪಕ್ಷ ಸಾರಿದ ಅತಿ ದೊಡ್ಡ ‘ಸರ್ಜಿಕಲ್ ಸ್ಟ್ರೈಕ್’ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದರು.

ಪುಲ್ವಾಮಾ- ಬಾಲಾಕೋಟ್ ದಾಳಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಚುನಾವಣೆ ಪ್ರಚಾರಕ್ಕೆ ಮಂಕು ಕವಿಸಿತ್ತು.

ಪಾಕಿಸ್ತಾನವೆಂಬ ವೈರಿಯ ಮನೆಗೆ ನುಗ್ಗಿ ಬಾಂಬ್ ಕೆಡವಿ ಪಾಠ ಕಲಿಸಿದೆವು ಎಂಬುದಾಗಿ ಆಕ್ರಮಣಕಾರಿ ಹಿಂದೂ ರಾಷ್ಟ್ರವಾದ ಮತ್ತು ಹುಸಿ ‘ದೇಶಭಕ್ತಿ’ಯ ಸುತ್ತ ‘ಮೋಶಾ’ ಸರ್ಕಾರ ಬಲಿಷ್ಠ ಕಥನ ಕಟ್ಟಿತ್ತು. ಆದರೆ ಈ ಬಲಿಷ್ಠ ಭಾವೋದ್ದೀಪಕ ಕಥನವನ್ನು ದೇಶದ ಬಹುಪಾಲು ಜನರ ನಿತ್ಯ ಬದುಕನ್ನು ಕಾಡಿರುವ ನಿಜ ಸಮಸ್ಯೆಗಳ ವಾಸ್ತವದತ್ತ ವಾಪಸು ಕರೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸಿತ್ತು.

ಕಾಂಗ್ರೆಸ್ ಪಕ್ಷದ ಈ ಯೋಜನೆ ಅಭಿವೃದ್ಧಿಯನ್ನೇನೋ ಚಿಗುರಿಸಬಲ್ಲದು. ಆದರೆ ಸದ್ಯದ ಆರ್ಥಿಕ ದುಸ್ಥಿತಿಯು ಈ ಯೋಜನೆಯ ಜಾರಿಗೆ ಪೂರಕ ಅಲ್ಲ ಎಂಬುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‍ನ ನಿವೃತ್ತ ಗೌರ್ನರ್ ರಘುರಾಮ್ ರಾಜನ್ ವಿಮರ್ಶಿಸಿದ್ದರು. ಅಭಿವೃದ್ಧಿ- ಉದ್ಯೋಗಾವಕಾಶಗಳ ಸೃಷ್ಟಿಯೊಂದೇ ಬಡತನ ನಿವಾರಣೆಯ ನೇರ ದಾರಿ. ನೇರನಗದು ನೀಡಿಕೆ ದಿವ್ಯ ಔಷಧ ಅಲ್ಲ ಎಂಬ ಪ್ರತಿಕ್ರಿಯೆಗಳು ಕಾಂಗ್ರೆಸ್ ಯೋಜನೆ ಕುರಿತು ಕೇಳಿ ಬಂದಿದ್ದವು. ಚುನಾವಣೆಗಳಲ್ಲಿ ಮೋದಿ ಇನ್ನಷ್ಟು ಘನವಾಗಿ ಗೆದ್ದರು. ಕಾಂಗ್ರೆಸ್ ಮತ್ತಷ್ಟು ಶೋಚನೀಯವಾಗಿ ಸೋತಿತು.

ಆದರೆ ಈ ಯೋಜನೆಯ ಹಿಂದಿದ್ದ ಆಲೋಚನೆ ಅಭಿಜಿತ್ ಬ್ಯಾನರ್ಜಿ ಅವರದಾಗಿತ್ತು. ಬ್ಯಾನರ್ಜಿ ಮತ್ತು ಎಸ್ತರ್ ಡಫ್ಲೋ ಹಾಗೂ ಮೈಕೇಲ್ ಕ್ರೆಮರ್‍ರಿಗೆ 2019ರ ಅರ್ಥಶಾಸ್ತ್ರ ನೊಬೆಲ್ ಪಾರಿತೋಷಕ ಸಂದಿದೆ. ಈ ಪಾರಿತೋಷಕದ ನಗದು ಬಹುಮಾನದ ಮೊತ್ತ ಆರೂವರೆ ಕೋಟಿ ರುಪಾಯಿ. 46 ವರ್ಷ ವಯಸ್ಸಿನ ಡಫ್ಲೋ ಅವರು ಬ್ಯಾನರ್ಜಿ ಅವರ ಪತ್ನಿ ಕೂಡ. ಈವರೆಗೆ ಅರ್ಥಶಾಸ್ತ್ರ ನೊಬೆಲ್ ಪಡೆದವರ ಪೈಕಿ ಅತಿ ಕಿರಿಯ ವಯಸ್ಸಿನ ಮಹಿಳೆ. ಬಡತನ ನಿವಾರಣೆಯ ದಿಕ್ಕಿನಲ್ಲಿ ಈ ಮೂರು ಮಂದಿ ಭಾರತವೂ ಸೇರಿದಂತೆ 81 ದೇಶಗಳಲ್ಲಿ ನಡೆಸಿದ ವಿಸ್ತೃತ ಕ್ಷೇತ್ರ ಪ್ರಯೋಗಗಳ ಸಂಶೋಧನೆಗೆ ದೊರೆತಿರುವ ಮಾನ್ಯತೆಯಿದು.

ಯೋಜನೆ ಮತ್ತು ಅದರ ಅನುಷ್ಠಾನಗಳ ನಡುವೆ ಬಹಳಷ್ಟು ಕಳೆದು ಹೋಗುವ ಇಲ್ಲವೇ ಸೋರಿ ಹೋಗುವ ಸಂಕೀರ್ಣ ಅನುಭವ ಭಾರತದ ಸನ್ನಿವೇಶದ್ದು. ಹೀಗಾಗಿ ನೀತಿ ನಿರ್ಧಾರಗಳ ವಿನ್ಯಾಸ ಬಹು ಮಹತ್ವದ್ದು. ಯಶಸ್ಸು ಮತ್ತು ವೈಫಲ್ಯಗಳ ನಡುವಿನ ಅಂತರವನ್ನು ನಿರ್ಧರಿಸುವಂತಹುದು. ಜಗತ್ತಿನಲ್ಲಿ ಹೆಚ್ಚುತ್ತಲೇ ನಡೆದಿರುವ ಆದಾಯ ತಾರತಮ್ಯಗಳ ಹಿಂದಿನ ಕಾರಣಗಳ ಮೇಲೆ ಬೆಳಕು ಚೆಲ್ಲಿರುವ ಸಂಶೋಧನೆಯಿದು. ಶಿಕ್ಷಣ, ಆರೋಗ್ಯ ಹಾಗೂ ಇತರೆ ಯೋಜನೆಗಳಿಗೆ ಬಡವರ ಪ್ರತಿಕ್ರಿಯೆಗಳ ವಾಸ್ತವಿಕ ಒಳನೋಟಗಳನ್ನು ಕಟ್ಟಿ ಕೊಟ್ಟಿದೆ. ಜಗತ್ತಿನಾದ್ಯಂತ 70 ಕೋಟಿ ಜನ ಕಿತ್ತು ತಿನ್ನುವ ಬಡತನದಲ್ಲಿ ಉಸಿರಾಡಿದ್ದಾರೆ. ಇವರ ಉದ್ಧಾರದ ಹೆಸರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳನ್ನು ಸುರಿಯುವ ಸರ್ಕಾರಗಳು, ಹೀಗೆ ಸುರಿದ ಹಣ ಗುರಿ ಮುಟ್ಟಿಸಿತೇ ಎಂದು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಈ ವಿದ್ವಾಂಸರ ಸಂಶೋಧನೆಯು ಜಾಗತಿಕ ಬಡತನವನ್ನು ತೊಲಗಿಸುವ ನಮ್ಮ ಸಾಮಥ್ರ್ಯವನ್ನು ಗಣನೀಯವಾಗಿ ಸುಧಾರಿಸಿದೆ ಮತ್ತು ಅಭಿವೃದ್ಧಿ ಅರ್ಥಶಾಸ್ತ್ರವನ್ನು ರೂಪಾಂತರಗೊಳಿಸಿದೆ ಎಂದು ನೊಬೆಲ್ ಪಾರಿತೋಷಕದ ಗುಣಕಥನವು ಬ್ಯಾನರ್ಜಿ-ಎಸ್ತರ್-ಕ್ರೇಮರ್ ಅವರ ಸಾಧನೆಯನ್ನು ಕೊಂಡಾಡಿದೆ. ನವ ಉದಾರವಾದಿ ಅರ್ಥನೀತಿಯು ಜಗತ್ತಿನಾದ್ಯಂತ ಬಡ ಜನಸಮುದಾಯಗಳ ಮೇಲೆ ಇತ್ತೀಚಿನ ದಶಕಗಳಲ್ಲಿ ನಡೆಸಿರುವ ಪ್ರಹಾರ ಅಮಾನವೀಯ. ಬ್ಯಾನರ್ಜಿ ಸಂಗಾತಿಗಳ ಸಂಶೋಧನೆಯು ಈ ಕ್ರೌರ್ಯದ ಕುರಿತು ಪರೋಕ್ಷವಾಗಿಯಾದರೂ ಜಗದ ಕಣ್ಣು ತೆರೆಸಿದೆ.

ತಮ್ಮನ್ನು ಸೆಳೆದದ್ದು ಜೆ.ಎನ್.ಯು.ವಿನ ಬೌದ್ಧಿಕ ವಾತಾವರಣ ಎಂದು ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಎಂಭತ್ತರ ಆರಂಭದ ದಶಕಗಳಲ್ಲಿ ಜೆ.ಎನ್.ಯು.ವಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದ ಅಭಿಜಿತ್, ವಿದ್ಯಾರ್ಥಿ ಆಂದೋಲನದಲ್ಲಿ ಭಾಗವಹಿಸಿದ್ದರು. ದಸ್ತಗಿರಿಯಾಗಿ ಹತ್ತು ದಿನ ತಿಹಾರದ ಜೈಲಿನಲ್ಲಿ ಬಡವರ ಊಟದ ರುಚಿ ನೋಡಿದ್ದುಂಟು. ಮರಾಠೀ ತಾಯಿ ಮತ್ತು ಬಂಗಾಳಿ ತಂದೆಯ ಈ ಮಗ ಅರ್ಥಶಾಸ್ತ್ರಜ್ಞ ಆಗಿದ್ದು ಆಕಸ್ಮಿಕ. ಆತ ಅತ್ಯುತ್ತಮ ಬಾಣಸಿಗ. ಬಂಗಾಳೀ ಮತ್ತು ಮರಾಠೀ ಅಡುಗೆಯಲ್ಲಿ ನಿಪುಣ. ಮುಂದಿನ ವಾರ ತನ್ನ ಎರಡನೆಯ ಪುಸ್ತಕದ ಬಿಡುಗಡೆಗೆಂದು ಭಾರತಕ್ಕೆ ಬರಲಿದ್ದಾನೆ ಎಂದು ಸಂತಸ ಹಂಚಿಕೊಂಡಿದ್ದಾರೆ ತಾಯಿ ನಿರ್ಮಲಾ ಬ್ಯಾನರ್ಜಿ.

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು. ಜೆ.ಎನ್.ಯು. ಒದಗಿಸಿದ್ದ ಚಿಂತನೆ-ಅಭಿವ್ಯಕ್ತಿ-ಸಂಸ್ಕೃತಿಯ ಸ್ವಾತಂತ್ರ್ಯವು ಅಭಿಜಿತ್ ಬ್ಯಾನರ್ಜಿಯವರಂತಹ ಮೇಧಾವಿಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. 2016ಕ್ಕೆ ಮುನ್ನ ಇದ್ದ ಶೈಕ್ಷಣಿಕ ಸ್ವಾತಂತ್ರ್ಯ ಇಲ್ಲಿ ಮರೆಯಾಗಿದೆ. ಕೇಂದ್ರ ಸರ್ಕಾರವು ಕೊಡಲಿ ಹಿಡಿದು ಈ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಳಿದು ಅದರ ಬುಡ ಕಡಿಯತೊಡಗಿರುವ ಇಂದಿನ ದಿನಗಳಲ್ಲಿ ಮತ್ತೊಬ್ಬ ಅಭಿಜಿತ್ ಬ್ಯಾನರ್ಜಿ ಇಲ್ಲಿ ರೂಪುಗೊಳ್ಳುವುದು ಅಸಾಧ್ಯ ಎನ್ನುತ್ತಾರೆ ಪ್ರೊ.ಅನುರಾಧಾ ಚಿನಾಯ್.

ಭಾರೀ ಮೊತ್ತದ ಬಹುಮಾನದ ಹಣವನ್ನು ಏನು ಮಾಡಲಿದ್ದೀರಿ ಎಂಬ ಪ್ರಶ್ನೆಗೆ ಎಸ್ತರ್ ಡಫ್ಲೋ ಉತ್ತರ- 1903ರಲ್ಲಿ ಮೇರಿ ಕ್ಯೂರಿ ಭೌತಶಾಸ್ತ್ರಕ್ಕೆ ನೊಬೆಲ್ ಬಹುಮಾನ ಪಡೆದಾಗ ಅದೇ ಹಣದಿಂದ ತನ್ನ ಭವಿಷ್ಯದ ಸಂಶೋಧನೆಗೆ ಅಗತ್ಯವಿರುವ ಒಂದು ಗ್ರಾಂ ರೇಡಿಯಂ ಖರೀದಿಸಿದ್ದಳು. ನಮ್ಮ ಆ ‘ಒಂದು ಗ್ರಾಂ ರೇಡಿಯಂ’ ಏನು ಎಂದು ನಾವು ಮೂರೂ ಮಂದಿ ಚರ್ಚಿಸಿ ತೀರ್ಮಾನಿಸಲಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...