Homeಎಕಾನಮಿಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ - ಡಿ ಉಮಾಪತಿ

ಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ – ಡಿ ಉಮಾಪತಿ

- Advertisement -
- Advertisement -

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು.

ತಾನು ಅಧಿಕಾರಕ್ಕೆ ಬಂದರೆ ದೇಶದ ಐದು ಕೋಟಿ ಅತಿ ಬಡ ಕುಟುಂಬಗಳಿಗೆ ವರ್ಷಕ್ಕೆ ತಲಾ 72 ಸಾವಿರ ರುಪಾಯಿಗಳಷ್ಟು ಕನಿಷ್ಠ ಆದಾಯವನ್ನು ವಿತರಿಸುವುದಾಗಿ ಕಾಂಗ್ರೆಸ್ ಪಕ್ಷ ಇತ್ತೀಚಿನ ಲೋಕಸಭಾ ಚುನಾವಣೆಗಳಲ್ಲಿ ಘೋಷಿಸಿತ್ತು.

`ನ್ಯಾಯ್’ ಎಂದು ಕರೆಯಲಾಗಿದ್ದ ಈ ಕನಿಷ್ಠ ಆದಾಯ ಯೋಜನೆಯ ಒಟ್ಟು ವೆಚ್ಚವನ್ನು 3.6 ಲಕ್ಷ ಕೋಟಿ ರುಪಾಯಿ ಎಂದು ಅಂದಾಜು ಮಾಡಲಾಗಿತ್ತು. ಅತಿ ಬಡ ಕುಟುಂಬಗಳ 25 ಕೋಟಿ ಮಂದಿಯನ್ನು ಈ ಯೋಜನೆಯ ಫಲಾನುಭವಿಗಳು ಎಂದು ಆ ಪಕ್ಷ ಹೇಳಿತ್ತು. ಚುನಾವಣೆಗಳ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳು ಅಲ್ಲಿಯ ತನಕ ಇಂತಹ ಮಹತ್ವಾಕಾಂಕ್ಷೆಯ ಅತಿ ದೊಡ್ಡ ಯೋಜನೆಯ ಭರವಸೆ ನೀಡಿರಲಿಲ್ಲ.

ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ‘ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್’, ದೇಶದ ಜನಮಾನಸವನ್ನು ಆವರಿಸಿದ ಹೊತ್ತಿನಲ್ಲಿ ಕಾಂಗ್ರೆಸ್ ಈ ಆಶ್ವಾಸನೆಯನ್ನು ಅನಾವರಣಗೊಳಿಸಿತ್ತು. ಬಡತನದ ಮೇಲೆ ತಮ್ಮ ಪಕ್ಷ ಸಾರಿದ ಅತಿ ದೊಡ್ಡ ‘ಸರ್ಜಿಕಲ್ ಸ್ಟ್ರೈಕ್’ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದರು.

ಪುಲ್ವಾಮಾ- ಬಾಲಾಕೋಟ್ ದಾಳಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಚುನಾವಣೆ ಪ್ರಚಾರಕ್ಕೆ ಮಂಕು ಕವಿಸಿತ್ತು.

ಪಾಕಿಸ್ತಾನವೆಂಬ ವೈರಿಯ ಮನೆಗೆ ನುಗ್ಗಿ ಬಾಂಬ್ ಕೆಡವಿ ಪಾಠ ಕಲಿಸಿದೆವು ಎಂಬುದಾಗಿ ಆಕ್ರಮಣಕಾರಿ ಹಿಂದೂ ರಾಷ್ಟ್ರವಾದ ಮತ್ತು ಹುಸಿ ‘ದೇಶಭಕ್ತಿ’ಯ ಸುತ್ತ ‘ಮೋಶಾ’ ಸರ್ಕಾರ ಬಲಿಷ್ಠ ಕಥನ ಕಟ್ಟಿತ್ತು. ಆದರೆ ಈ ಬಲಿಷ್ಠ ಭಾವೋದ್ದೀಪಕ ಕಥನವನ್ನು ದೇಶದ ಬಹುಪಾಲು ಜನರ ನಿತ್ಯ ಬದುಕನ್ನು ಕಾಡಿರುವ ನಿಜ ಸಮಸ್ಯೆಗಳ ವಾಸ್ತವದತ್ತ ವಾಪಸು ಕರೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸಿತ್ತು.

ಕಾಂಗ್ರೆಸ್ ಪಕ್ಷದ ಈ ಯೋಜನೆ ಅಭಿವೃದ್ಧಿಯನ್ನೇನೋ ಚಿಗುರಿಸಬಲ್ಲದು. ಆದರೆ ಸದ್ಯದ ಆರ್ಥಿಕ ದುಸ್ಥಿತಿಯು ಈ ಯೋಜನೆಯ ಜಾರಿಗೆ ಪೂರಕ ಅಲ್ಲ ಎಂಬುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‍ನ ನಿವೃತ್ತ ಗೌರ್ನರ್ ರಘುರಾಮ್ ರಾಜನ್ ವಿಮರ್ಶಿಸಿದ್ದರು. ಅಭಿವೃದ್ಧಿ- ಉದ್ಯೋಗಾವಕಾಶಗಳ ಸೃಷ್ಟಿಯೊಂದೇ ಬಡತನ ನಿವಾರಣೆಯ ನೇರ ದಾರಿ. ನೇರನಗದು ನೀಡಿಕೆ ದಿವ್ಯ ಔಷಧ ಅಲ್ಲ ಎಂಬ ಪ್ರತಿಕ್ರಿಯೆಗಳು ಕಾಂಗ್ರೆಸ್ ಯೋಜನೆ ಕುರಿತು ಕೇಳಿ ಬಂದಿದ್ದವು. ಚುನಾವಣೆಗಳಲ್ಲಿ ಮೋದಿ ಇನ್ನಷ್ಟು ಘನವಾಗಿ ಗೆದ್ದರು. ಕಾಂಗ್ರೆಸ್ ಮತ್ತಷ್ಟು ಶೋಚನೀಯವಾಗಿ ಸೋತಿತು.

ಆದರೆ ಈ ಯೋಜನೆಯ ಹಿಂದಿದ್ದ ಆಲೋಚನೆ ಅಭಿಜಿತ್ ಬ್ಯಾನರ್ಜಿ ಅವರದಾಗಿತ್ತು. ಬ್ಯಾನರ್ಜಿ ಮತ್ತು ಎಸ್ತರ್ ಡಫ್ಲೋ ಹಾಗೂ ಮೈಕೇಲ್ ಕ್ರೆಮರ್‍ರಿಗೆ 2019ರ ಅರ್ಥಶಾಸ್ತ್ರ ನೊಬೆಲ್ ಪಾರಿತೋಷಕ ಸಂದಿದೆ. ಈ ಪಾರಿತೋಷಕದ ನಗದು ಬಹುಮಾನದ ಮೊತ್ತ ಆರೂವರೆ ಕೋಟಿ ರುಪಾಯಿ. 46 ವರ್ಷ ವಯಸ್ಸಿನ ಡಫ್ಲೋ ಅವರು ಬ್ಯಾನರ್ಜಿ ಅವರ ಪತ್ನಿ ಕೂಡ. ಈವರೆಗೆ ಅರ್ಥಶಾಸ್ತ್ರ ನೊಬೆಲ್ ಪಡೆದವರ ಪೈಕಿ ಅತಿ ಕಿರಿಯ ವಯಸ್ಸಿನ ಮಹಿಳೆ. ಬಡತನ ನಿವಾರಣೆಯ ದಿಕ್ಕಿನಲ್ಲಿ ಈ ಮೂರು ಮಂದಿ ಭಾರತವೂ ಸೇರಿದಂತೆ 81 ದೇಶಗಳಲ್ಲಿ ನಡೆಸಿದ ವಿಸ್ತೃತ ಕ್ಷೇತ್ರ ಪ್ರಯೋಗಗಳ ಸಂಶೋಧನೆಗೆ ದೊರೆತಿರುವ ಮಾನ್ಯತೆಯಿದು.

ಯೋಜನೆ ಮತ್ತು ಅದರ ಅನುಷ್ಠಾನಗಳ ನಡುವೆ ಬಹಳಷ್ಟು ಕಳೆದು ಹೋಗುವ ಇಲ್ಲವೇ ಸೋರಿ ಹೋಗುವ ಸಂಕೀರ್ಣ ಅನುಭವ ಭಾರತದ ಸನ್ನಿವೇಶದ್ದು. ಹೀಗಾಗಿ ನೀತಿ ನಿರ್ಧಾರಗಳ ವಿನ್ಯಾಸ ಬಹು ಮಹತ್ವದ್ದು. ಯಶಸ್ಸು ಮತ್ತು ವೈಫಲ್ಯಗಳ ನಡುವಿನ ಅಂತರವನ್ನು ನಿರ್ಧರಿಸುವಂತಹುದು. ಜಗತ್ತಿನಲ್ಲಿ ಹೆಚ್ಚುತ್ತಲೇ ನಡೆದಿರುವ ಆದಾಯ ತಾರತಮ್ಯಗಳ ಹಿಂದಿನ ಕಾರಣಗಳ ಮೇಲೆ ಬೆಳಕು ಚೆಲ್ಲಿರುವ ಸಂಶೋಧನೆಯಿದು. ಶಿಕ್ಷಣ, ಆರೋಗ್ಯ ಹಾಗೂ ಇತರೆ ಯೋಜನೆಗಳಿಗೆ ಬಡವರ ಪ್ರತಿಕ್ರಿಯೆಗಳ ವಾಸ್ತವಿಕ ಒಳನೋಟಗಳನ್ನು ಕಟ್ಟಿ ಕೊಟ್ಟಿದೆ. ಜಗತ್ತಿನಾದ್ಯಂತ 70 ಕೋಟಿ ಜನ ಕಿತ್ತು ತಿನ್ನುವ ಬಡತನದಲ್ಲಿ ಉಸಿರಾಡಿದ್ದಾರೆ. ಇವರ ಉದ್ಧಾರದ ಹೆಸರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳನ್ನು ಸುರಿಯುವ ಸರ್ಕಾರಗಳು, ಹೀಗೆ ಸುರಿದ ಹಣ ಗುರಿ ಮುಟ್ಟಿಸಿತೇ ಎಂದು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಈ ವಿದ್ವಾಂಸರ ಸಂಶೋಧನೆಯು ಜಾಗತಿಕ ಬಡತನವನ್ನು ತೊಲಗಿಸುವ ನಮ್ಮ ಸಾಮಥ್ರ್ಯವನ್ನು ಗಣನೀಯವಾಗಿ ಸುಧಾರಿಸಿದೆ ಮತ್ತು ಅಭಿವೃದ್ಧಿ ಅರ್ಥಶಾಸ್ತ್ರವನ್ನು ರೂಪಾಂತರಗೊಳಿಸಿದೆ ಎಂದು ನೊಬೆಲ್ ಪಾರಿತೋಷಕದ ಗುಣಕಥನವು ಬ್ಯಾನರ್ಜಿ-ಎಸ್ತರ್-ಕ್ರೇಮರ್ ಅವರ ಸಾಧನೆಯನ್ನು ಕೊಂಡಾಡಿದೆ. ನವ ಉದಾರವಾದಿ ಅರ್ಥನೀತಿಯು ಜಗತ್ತಿನಾದ್ಯಂತ ಬಡ ಜನಸಮುದಾಯಗಳ ಮೇಲೆ ಇತ್ತೀಚಿನ ದಶಕಗಳಲ್ಲಿ ನಡೆಸಿರುವ ಪ್ರಹಾರ ಅಮಾನವೀಯ. ಬ್ಯಾನರ್ಜಿ ಸಂಗಾತಿಗಳ ಸಂಶೋಧನೆಯು ಈ ಕ್ರೌರ್ಯದ ಕುರಿತು ಪರೋಕ್ಷವಾಗಿಯಾದರೂ ಜಗದ ಕಣ್ಣು ತೆರೆಸಿದೆ.

ತಮ್ಮನ್ನು ಸೆಳೆದದ್ದು ಜೆ.ಎನ್.ಯು.ವಿನ ಬೌದ್ಧಿಕ ವಾತಾವರಣ ಎಂದು ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಎಂಭತ್ತರ ಆರಂಭದ ದಶಕಗಳಲ್ಲಿ ಜೆ.ಎನ್.ಯು.ವಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದ ಅಭಿಜಿತ್, ವಿದ್ಯಾರ್ಥಿ ಆಂದೋಲನದಲ್ಲಿ ಭಾಗವಹಿಸಿದ್ದರು. ದಸ್ತಗಿರಿಯಾಗಿ ಹತ್ತು ದಿನ ತಿಹಾರದ ಜೈಲಿನಲ್ಲಿ ಬಡವರ ಊಟದ ರುಚಿ ನೋಡಿದ್ದುಂಟು. ಮರಾಠೀ ತಾಯಿ ಮತ್ತು ಬಂಗಾಳಿ ತಂದೆಯ ಈ ಮಗ ಅರ್ಥಶಾಸ್ತ್ರಜ್ಞ ಆಗಿದ್ದು ಆಕಸ್ಮಿಕ. ಆತ ಅತ್ಯುತ್ತಮ ಬಾಣಸಿಗ. ಬಂಗಾಳೀ ಮತ್ತು ಮರಾಠೀ ಅಡುಗೆಯಲ್ಲಿ ನಿಪುಣ. ಮುಂದಿನ ವಾರ ತನ್ನ ಎರಡನೆಯ ಪುಸ್ತಕದ ಬಿಡುಗಡೆಗೆಂದು ಭಾರತಕ್ಕೆ ಬರಲಿದ್ದಾನೆ ಎಂದು ಸಂತಸ ಹಂಚಿಕೊಂಡಿದ್ದಾರೆ ತಾಯಿ ನಿರ್ಮಲಾ ಬ್ಯಾನರ್ಜಿ.

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು. ಜೆ.ಎನ್.ಯು. ಒದಗಿಸಿದ್ದ ಚಿಂತನೆ-ಅಭಿವ್ಯಕ್ತಿ-ಸಂಸ್ಕೃತಿಯ ಸ್ವಾತಂತ್ರ್ಯವು ಅಭಿಜಿತ್ ಬ್ಯಾನರ್ಜಿಯವರಂತಹ ಮೇಧಾವಿಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. 2016ಕ್ಕೆ ಮುನ್ನ ಇದ್ದ ಶೈಕ್ಷಣಿಕ ಸ್ವಾತಂತ್ರ್ಯ ಇಲ್ಲಿ ಮರೆಯಾಗಿದೆ. ಕೇಂದ್ರ ಸರ್ಕಾರವು ಕೊಡಲಿ ಹಿಡಿದು ಈ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಳಿದು ಅದರ ಬುಡ ಕಡಿಯತೊಡಗಿರುವ ಇಂದಿನ ದಿನಗಳಲ್ಲಿ ಮತ್ತೊಬ್ಬ ಅಭಿಜಿತ್ ಬ್ಯಾನರ್ಜಿ ಇಲ್ಲಿ ರೂಪುಗೊಳ್ಳುವುದು ಅಸಾಧ್ಯ ಎನ್ನುತ್ತಾರೆ ಪ್ರೊ.ಅನುರಾಧಾ ಚಿನಾಯ್.

ಭಾರೀ ಮೊತ್ತದ ಬಹುಮಾನದ ಹಣವನ್ನು ಏನು ಮಾಡಲಿದ್ದೀರಿ ಎಂಬ ಪ್ರಶ್ನೆಗೆ ಎಸ್ತರ್ ಡಫ್ಲೋ ಉತ್ತರ- 1903ರಲ್ಲಿ ಮೇರಿ ಕ್ಯೂರಿ ಭೌತಶಾಸ್ತ್ರಕ್ಕೆ ನೊಬೆಲ್ ಬಹುಮಾನ ಪಡೆದಾಗ ಅದೇ ಹಣದಿಂದ ತನ್ನ ಭವಿಷ್ಯದ ಸಂಶೋಧನೆಗೆ ಅಗತ್ಯವಿರುವ ಒಂದು ಗ್ರಾಂ ರೇಡಿಯಂ ಖರೀದಿಸಿದ್ದಳು. ನಮ್ಮ ಆ ‘ಒಂದು ಗ್ರಾಂ ರೇಡಿಯಂ’ ಏನು ಎಂದು ನಾವು ಮೂರೂ ಮಂದಿ ಚರ್ಚಿಸಿ ತೀರ್ಮಾನಿಸಲಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...