Homeಎಕಾನಮಿಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ - ಡಿ ಉಮಾಪತಿ

ಬಡತನ ನಿವಾರಣೆ: ವಾಸ್ತವಿಕ ಒಳನೋಟಗಳಿಗೆ ಸಂದ ನೊಬೆಲ್ – ಡಿ ಉಮಾಪತಿ

- Advertisement -
- Advertisement -

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು.

ತಾನು ಅಧಿಕಾರಕ್ಕೆ ಬಂದರೆ ದೇಶದ ಐದು ಕೋಟಿ ಅತಿ ಬಡ ಕುಟುಂಬಗಳಿಗೆ ವರ್ಷಕ್ಕೆ ತಲಾ 72 ಸಾವಿರ ರುಪಾಯಿಗಳಷ್ಟು ಕನಿಷ್ಠ ಆದಾಯವನ್ನು ವಿತರಿಸುವುದಾಗಿ ಕಾಂಗ್ರೆಸ್ ಪಕ್ಷ ಇತ್ತೀಚಿನ ಲೋಕಸಭಾ ಚುನಾವಣೆಗಳಲ್ಲಿ ಘೋಷಿಸಿತ್ತು.

`ನ್ಯಾಯ್’ ಎಂದು ಕರೆಯಲಾಗಿದ್ದ ಈ ಕನಿಷ್ಠ ಆದಾಯ ಯೋಜನೆಯ ಒಟ್ಟು ವೆಚ್ಚವನ್ನು 3.6 ಲಕ್ಷ ಕೋಟಿ ರುಪಾಯಿ ಎಂದು ಅಂದಾಜು ಮಾಡಲಾಗಿತ್ತು. ಅತಿ ಬಡ ಕುಟುಂಬಗಳ 25 ಕೋಟಿ ಮಂದಿಯನ್ನು ಈ ಯೋಜನೆಯ ಫಲಾನುಭವಿಗಳು ಎಂದು ಆ ಪಕ್ಷ ಹೇಳಿತ್ತು. ಚುನಾವಣೆಗಳ ಹೊಸ್ತಿಲಿನಲ್ಲಿ ರಾಜಕೀಯ ಪಕ್ಷಗಳು ಅಲ್ಲಿಯ ತನಕ ಇಂತಹ ಮಹತ್ವಾಕಾಂಕ್ಷೆಯ ಅತಿ ದೊಡ್ಡ ಯೋಜನೆಯ ಭರವಸೆ ನೀಡಿರಲಿಲ್ಲ.

ನರೇಂದ್ರ ಮೋದಿ ಸರ್ಕಾರ ಪಾಕಿಸ್ತಾನದ ಮೇಲೆ ನಡೆಸಿದ ‘ಬಾಲಾಕೋಟ್ ಸರ್ಜಿಕಲ್ ಸ್ಟ್ರೈಕ್’, ದೇಶದ ಜನಮಾನಸವನ್ನು ಆವರಿಸಿದ ಹೊತ್ತಿನಲ್ಲಿ ಕಾಂಗ್ರೆಸ್ ಈ ಆಶ್ವಾಸನೆಯನ್ನು ಅನಾವರಣಗೊಳಿಸಿತ್ತು. ಬಡತನದ ಮೇಲೆ ತಮ್ಮ ಪಕ್ಷ ಸಾರಿದ ಅತಿ ದೊಡ್ಡ ‘ಸರ್ಜಿಕಲ್ ಸ್ಟ್ರೈಕ್’ ಎಂದು ರಾಹುಲ್ ಗಾಂಧಿ ಬಣ್ಣಿಸಿದ್ದರು.

ಪುಲ್ವಾಮಾ- ಬಾಲಾಕೋಟ್ ದಾಳಿ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳ ಚುನಾವಣೆ ಪ್ರಚಾರಕ್ಕೆ ಮಂಕು ಕವಿಸಿತ್ತು.

ಪಾಕಿಸ್ತಾನವೆಂಬ ವೈರಿಯ ಮನೆಗೆ ನುಗ್ಗಿ ಬಾಂಬ್ ಕೆಡವಿ ಪಾಠ ಕಲಿಸಿದೆವು ಎಂಬುದಾಗಿ ಆಕ್ರಮಣಕಾರಿ ಹಿಂದೂ ರಾಷ್ಟ್ರವಾದ ಮತ್ತು ಹುಸಿ ‘ದೇಶಭಕ್ತಿ’ಯ ಸುತ್ತ ‘ಮೋಶಾ’ ಸರ್ಕಾರ ಬಲಿಷ್ಠ ಕಥನ ಕಟ್ಟಿತ್ತು. ಆದರೆ ಈ ಬಲಿಷ್ಠ ಭಾವೋದ್ದೀಪಕ ಕಥನವನ್ನು ದೇಶದ ಬಹುಪಾಲು ಜನರ ನಿತ್ಯ ಬದುಕನ್ನು ಕಾಡಿರುವ ನಿಜ ಸಮಸ್ಯೆಗಳ ವಾಸ್ತವದತ್ತ ವಾಪಸು ಕರೆ ತರುವ ಪ್ರಯತ್ನವನ್ನು ಕಾಂಗ್ರೆಸ್ ನಡೆಸಿತ್ತು.

ಕಾಂಗ್ರೆಸ್ ಪಕ್ಷದ ಈ ಯೋಜನೆ ಅಭಿವೃದ್ಧಿಯನ್ನೇನೋ ಚಿಗುರಿಸಬಲ್ಲದು. ಆದರೆ ಸದ್ಯದ ಆರ್ಥಿಕ ದುಸ್ಥಿತಿಯು ಈ ಯೋಜನೆಯ ಜಾರಿಗೆ ಪೂರಕ ಅಲ್ಲ ಎಂಬುದಾಗಿ ಭಾರತೀಯ ರಿಸರ್ವ್ ಬ್ಯಾಂಕ್‍ನ ನಿವೃತ್ತ ಗೌರ್ನರ್ ರಘುರಾಮ್ ರಾಜನ್ ವಿಮರ್ಶಿಸಿದ್ದರು. ಅಭಿವೃದ್ಧಿ- ಉದ್ಯೋಗಾವಕಾಶಗಳ ಸೃಷ್ಟಿಯೊಂದೇ ಬಡತನ ನಿವಾರಣೆಯ ನೇರ ದಾರಿ. ನೇರನಗದು ನೀಡಿಕೆ ದಿವ್ಯ ಔಷಧ ಅಲ್ಲ ಎಂಬ ಪ್ರತಿಕ್ರಿಯೆಗಳು ಕಾಂಗ್ರೆಸ್ ಯೋಜನೆ ಕುರಿತು ಕೇಳಿ ಬಂದಿದ್ದವು. ಚುನಾವಣೆಗಳಲ್ಲಿ ಮೋದಿ ಇನ್ನಷ್ಟು ಘನವಾಗಿ ಗೆದ್ದರು. ಕಾಂಗ್ರೆಸ್ ಮತ್ತಷ್ಟು ಶೋಚನೀಯವಾಗಿ ಸೋತಿತು.

ಆದರೆ ಈ ಯೋಜನೆಯ ಹಿಂದಿದ್ದ ಆಲೋಚನೆ ಅಭಿಜಿತ್ ಬ್ಯಾನರ್ಜಿ ಅವರದಾಗಿತ್ತು. ಬ್ಯಾನರ್ಜಿ ಮತ್ತು ಎಸ್ತರ್ ಡಫ್ಲೋ ಹಾಗೂ ಮೈಕೇಲ್ ಕ್ರೆಮರ್‍ರಿಗೆ 2019ರ ಅರ್ಥಶಾಸ್ತ್ರ ನೊಬೆಲ್ ಪಾರಿತೋಷಕ ಸಂದಿದೆ. ಈ ಪಾರಿತೋಷಕದ ನಗದು ಬಹುಮಾನದ ಮೊತ್ತ ಆರೂವರೆ ಕೋಟಿ ರುಪಾಯಿ. 46 ವರ್ಷ ವಯಸ್ಸಿನ ಡಫ್ಲೋ ಅವರು ಬ್ಯಾನರ್ಜಿ ಅವರ ಪತ್ನಿ ಕೂಡ. ಈವರೆಗೆ ಅರ್ಥಶಾಸ್ತ್ರ ನೊಬೆಲ್ ಪಡೆದವರ ಪೈಕಿ ಅತಿ ಕಿರಿಯ ವಯಸ್ಸಿನ ಮಹಿಳೆ. ಬಡತನ ನಿವಾರಣೆಯ ದಿಕ್ಕಿನಲ್ಲಿ ಈ ಮೂರು ಮಂದಿ ಭಾರತವೂ ಸೇರಿದಂತೆ 81 ದೇಶಗಳಲ್ಲಿ ನಡೆಸಿದ ವಿಸ್ತೃತ ಕ್ಷೇತ್ರ ಪ್ರಯೋಗಗಳ ಸಂಶೋಧನೆಗೆ ದೊರೆತಿರುವ ಮಾನ್ಯತೆಯಿದು.

ಯೋಜನೆ ಮತ್ತು ಅದರ ಅನುಷ್ಠಾನಗಳ ನಡುವೆ ಬಹಳಷ್ಟು ಕಳೆದು ಹೋಗುವ ಇಲ್ಲವೇ ಸೋರಿ ಹೋಗುವ ಸಂಕೀರ್ಣ ಅನುಭವ ಭಾರತದ ಸನ್ನಿವೇಶದ್ದು. ಹೀಗಾಗಿ ನೀತಿ ನಿರ್ಧಾರಗಳ ವಿನ್ಯಾಸ ಬಹು ಮಹತ್ವದ್ದು. ಯಶಸ್ಸು ಮತ್ತು ವೈಫಲ್ಯಗಳ ನಡುವಿನ ಅಂತರವನ್ನು ನಿರ್ಧರಿಸುವಂತಹುದು. ಜಗತ್ತಿನಲ್ಲಿ ಹೆಚ್ಚುತ್ತಲೇ ನಡೆದಿರುವ ಆದಾಯ ತಾರತಮ್ಯಗಳ ಹಿಂದಿನ ಕಾರಣಗಳ ಮೇಲೆ ಬೆಳಕು ಚೆಲ್ಲಿರುವ ಸಂಶೋಧನೆಯಿದು. ಶಿಕ್ಷಣ, ಆರೋಗ್ಯ ಹಾಗೂ ಇತರೆ ಯೋಜನೆಗಳಿಗೆ ಬಡವರ ಪ್ರತಿಕ್ರಿಯೆಗಳ ವಾಸ್ತವಿಕ ಒಳನೋಟಗಳನ್ನು ಕಟ್ಟಿ ಕೊಟ್ಟಿದೆ. ಜಗತ್ತಿನಾದ್ಯಂತ 70 ಕೋಟಿ ಜನ ಕಿತ್ತು ತಿನ್ನುವ ಬಡತನದಲ್ಲಿ ಉಸಿರಾಡಿದ್ದಾರೆ. ಇವರ ಉದ್ಧಾರದ ಹೆಸರಿನಲ್ಲಿ ಸಾವಿರಾರು ಕೋಟಿ ರುಪಾಯಿಗಳನ್ನು ಸುರಿಯುವ ಸರ್ಕಾರಗಳು, ಹೀಗೆ ಸುರಿದ ಹಣ ಗುರಿ ಮುಟ್ಟಿಸಿತೇ ಎಂದು ತಲೆ ಕೆಡಿಸಿಕೊಳ್ಳುತ್ತಿಲ್ಲ.

ಈ ವಿದ್ವಾಂಸರ ಸಂಶೋಧನೆಯು ಜಾಗತಿಕ ಬಡತನವನ್ನು ತೊಲಗಿಸುವ ನಮ್ಮ ಸಾಮಥ್ರ್ಯವನ್ನು ಗಣನೀಯವಾಗಿ ಸುಧಾರಿಸಿದೆ ಮತ್ತು ಅಭಿವೃದ್ಧಿ ಅರ್ಥಶಾಸ್ತ್ರವನ್ನು ರೂಪಾಂತರಗೊಳಿಸಿದೆ ಎಂದು ನೊಬೆಲ್ ಪಾರಿತೋಷಕದ ಗುಣಕಥನವು ಬ್ಯಾನರ್ಜಿ-ಎಸ್ತರ್-ಕ್ರೇಮರ್ ಅವರ ಸಾಧನೆಯನ್ನು ಕೊಂಡಾಡಿದೆ. ನವ ಉದಾರವಾದಿ ಅರ್ಥನೀತಿಯು ಜಗತ್ತಿನಾದ್ಯಂತ ಬಡ ಜನಸಮುದಾಯಗಳ ಮೇಲೆ ಇತ್ತೀಚಿನ ದಶಕಗಳಲ್ಲಿ ನಡೆಸಿರುವ ಪ್ರಹಾರ ಅಮಾನವೀಯ. ಬ್ಯಾನರ್ಜಿ ಸಂಗಾತಿಗಳ ಸಂಶೋಧನೆಯು ಈ ಕ್ರೌರ್ಯದ ಕುರಿತು ಪರೋಕ್ಷವಾಗಿಯಾದರೂ ಜಗದ ಕಣ್ಣು ತೆರೆಸಿದೆ.

ತಮ್ಮನ್ನು ಸೆಳೆದದ್ದು ಜೆ.ಎನ್.ಯು.ವಿನ ಬೌದ್ಧಿಕ ವಾತಾವರಣ ಎಂದು ಬ್ಯಾನರ್ಜಿ ಹೇಳಿಕೊಂಡಿದ್ದಾರೆ. ಎಂಭತ್ತರ ಆರಂಭದ ದಶಕಗಳಲ್ಲಿ ಜೆ.ಎನ್.ಯು.ವಿನಲ್ಲಿ ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡಿದ್ದ ಅಭಿಜಿತ್, ವಿದ್ಯಾರ್ಥಿ ಆಂದೋಲನದಲ್ಲಿ ಭಾಗವಹಿಸಿದ್ದರು. ದಸ್ತಗಿರಿಯಾಗಿ ಹತ್ತು ದಿನ ತಿಹಾರದ ಜೈಲಿನಲ್ಲಿ ಬಡವರ ಊಟದ ರುಚಿ ನೋಡಿದ್ದುಂಟು. ಮರಾಠೀ ತಾಯಿ ಮತ್ತು ಬಂಗಾಳಿ ತಂದೆಯ ಈ ಮಗ ಅರ್ಥಶಾಸ್ತ್ರಜ್ಞ ಆಗಿದ್ದು ಆಕಸ್ಮಿಕ. ಆತ ಅತ್ಯುತ್ತಮ ಬಾಣಸಿಗ. ಬಂಗಾಳೀ ಮತ್ತು ಮರಾಠೀ ಅಡುಗೆಯಲ್ಲಿ ನಿಪುಣ. ಮುಂದಿನ ವಾರ ತನ್ನ ಎರಡನೆಯ ಪುಸ್ತಕದ ಬಿಡುಗಡೆಗೆಂದು ಭಾರತಕ್ಕೆ ಬರಲಿದ್ದಾನೆ ಎಂದು ಸಂತಸ ಹಂಚಿಕೊಂಡಿದ್ದಾರೆ ತಾಯಿ ನಿರ್ಮಲಾ ಬ್ಯಾನರ್ಜಿ.

ಇಂದಿರಾಗಾಂಧೀ ಸರ್ಕಾರದ ನೀತಿ ನಿರ್ಧಾರಗಳ ವಿರುದ್ಧ ಟೀಕೆಗಳು ಪ್ರತಿಭಟನೆಗಳು ಜೆ.ಎನ್.ಯು.ವಿನಲ್ಲಿ ಅಂದು ಸರ್ವೇಸಾಧಾರಣವಾಗಿದ್ದವು. ಬ್ಯಾನರ್ಜಿ ಇವುಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದರು. ಜವಾಹರಲಾಲ್ ನೆಹರೂ ವಿಶ್ವವಿದ್ಯಾಲಯ 1980ರಿಂದ 2016ರ ತನಕ ಪ್ರತಿಕೂಲಗಳ ನಡುವೆಯೂ ಎಲ್ಲ ಬಗೆಯ ಅಭಿವ್ಯಕ್ತಿಗಳನ್ನೂ ಆಲಿಸಿ ಅವುಗಳಿಗೆ ಅನುವು ಮಾಡಿಕೊಟ್ಟಿತ್ತು. ಜೆ.ಎನ್.ಯು. ಒದಗಿಸಿದ್ದ ಚಿಂತನೆ-ಅಭಿವ್ಯಕ್ತಿ-ಸಂಸ್ಕೃತಿಯ ಸ್ವಾತಂತ್ರ್ಯವು ಅಭಿಜಿತ್ ಬ್ಯಾನರ್ಜಿಯವರಂತಹ ಮೇಧಾವಿಯನ್ನು ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸಿತು. 2016ಕ್ಕೆ ಮುನ್ನ ಇದ್ದ ಶೈಕ್ಷಣಿಕ ಸ್ವಾತಂತ್ರ್ಯ ಇಲ್ಲಿ ಮರೆಯಾಗಿದೆ. ಕೇಂದ್ರ ಸರ್ಕಾರವು ಕೊಡಲಿ ಹಿಡಿದು ಈ ವಿಶ್ವವಿದ್ಯಾಲಯದ ಹೆಸರಿಗೆ ಮಸಿ ಬಳಿದು ಅದರ ಬುಡ ಕಡಿಯತೊಡಗಿರುವ ಇಂದಿನ ದಿನಗಳಲ್ಲಿ ಮತ್ತೊಬ್ಬ ಅಭಿಜಿತ್ ಬ್ಯಾನರ್ಜಿ ಇಲ್ಲಿ ರೂಪುಗೊಳ್ಳುವುದು ಅಸಾಧ್ಯ ಎನ್ನುತ್ತಾರೆ ಪ್ರೊ.ಅನುರಾಧಾ ಚಿನಾಯ್.

ಭಾರೀ ಮೊತ್ತದ ಬಹುಮಾನದ ಹಣವನ್ನು ಏನು ಮಾಡಲಿದ್ದೀರಿ ಎಂಬ ಪ್ರಶ್ನೆಗೆ ಎಸ್ತರ್ ಡಫ್ಲೋ ಉತ್ತರ- 1903ರಲ್ಲಿ ಮೇರಿ ಕ್ಯೂರಿ ಭೌತಶಾಸ್ತ್ರಕ್ಕೆ ನೊಬೆಲ್ ಬಹುಮಾನ ಪಡೆದಾಗ ಅದೇ ಹಣದಿಂದ ತನ್ನ ಭವಿಷ್ಯದ ಸಂಶೋಧನೆಗೆ ಅಗತ್ಯವಿರುವ ಒಂದು ಗ್ರಾಂ ರೇಡಿಯಂ ಖರೀದಿಸಿದ್ದಳು. ನಮ್ಮ ಆ ‘ಒಂದು ಗ್ರಾಂ ರೇಡಿಯಂ’ ಏನು ಎಂದು ನಾವು ಮೂರೂ ಮಂದಿ ಚರ್ಚಿಸಿ ತೀರ್ಮಾನಿಸಲಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...