Homeಅಂತರಾಷ್ಟ್ರೀಯಅಂಕೆ-ಸಂಖ್ಯೆಗಳನ್ನು ಮಾತ್ರವೇ ಪ್ರೀತಿಸಿದ ಗಣಿತದ ಜಂಗಮ ಪಾಲ್ ಎರ್ಡಾಸ್

ಅಂಕೆ-ಸಂಖ್ಯೆಗಳನ್ನು ಮಾತ್ರವೇ ಪ್ರೀತಿಸಿದ ಗಣಿತದ ಜಂಗಮ ಪಾಲ್ ಎರ್ಡಾಸ್

- Advertisement -
- Advertisement -

ವಿಜ್ಞಾನ ಅನುರಣನ: ಡಾ.ಟಿ.ಎಸ್ ಚನ್ನೇಶ್

ನಾವಂದುಕೊಂಡ ಹಾಗೆ ಸರಳವಾಗಿ ಕೇವಲ 3 ರ ಪಕ್ಕ 3ನ್ನಿಟ್ಟು, ಅವುಗಳನ್ನು ಕೂಡಿದರೆ 6 ಆಗುತ್ತೆ, ಕಳೆದರೆ “0”, ಗುಣಿಸಿದರೆ “9” ಭಾಗಿಸಿದರೆ “1” ಅನ್ನುವ ಲೆಕ್ಕದಲ್ಲಿ ಗಣಿತವೆಲ್ಲಾ ಇಲ್ಲ! ನಿಸರ್ಗವು ಎಲ್ಲವನ್ನೂ ಸಮದೂಗಿಸಿಕೊಂಡು ತಾನೆ ನಡೆಸಿಕೊಂಡು ಹೋಗುತ್ತಿರುವ ಸೌಂದರ್ಯವನ್ನು ವಿವರಿಸುವ ಸೂತ್ರಗಳಲ್ಲಿ ಗಣಿತವಿದೆ.

ಡಾ.ಟಿ.ಎಸ್ ಚನ್ನೇಶ್

ವಿಜ್ಞಾನ ಸಂಸ್ಕೃತಿಯ ಹುಡುಕಾಟ ಮತ್ತು ಸಮಾಜೀಕರಣವನ್ನು ಗಣಿತದ ಹಿನ್ನೆಲೆಯಿಂದ ನೋಡಲು ವಿಶೇಷವಾದ ಉದಾಹರಣೆಯಿದೆ. ಗಣಿತವು ತಿಳಿವಳಿಕೆಯ ಮೂಲಭೂತ ತಳಹದಿ ಜೊತೆಗೆ, ಸೌಂದರ್ಯದ ವಿವರಗಳನ್ನೂ ಕಟ್ಟಿಕೊಡುವ ಭಾಷೆ. ಸಾಮಾನ್ಯವಾದ ವಿವರಗಳಲ್ಲಿ ಅಂಕೆ-ಸಂಖ್ಯೆಯ ಒಣಸಂಕೇತಗಳ ನಿರೂಪ ಎನ್ನಿಸಬಹುದು. ಅಯ್ಯೋ ಗಣಿತ ಕಷ್ಟ! ಅರ್ಥವಾಗೊಲ್ಲ ಎನ್ನುವವರೂ ಸಾಕಷ್ಟು ಇರಬಹುದು. ನಿಜಕ್ಕೂ ಗಣಿತವು ಸರಳವಾದ ಸೃಜನಶೀಲ ಮಾರ್ಗಗಳ ಹುಡುಕಾಟದ ದಾರಿ. ಸೃಜನಶೀಲ ಮಾರ್ಗಗಳ ಹುಡುಕಾಟದ ಊಹೆಯ ರಹದಾರಿಯೇ ಗಣಿತ. ಇಡೀ ವಿಶ್ವದ ಎಲ್ಲಾ ಚಟುವಟಿಕಗಳೂ ಲೆಕ್ಕಬದ್ಧ ಕ್ರಿಯೆಗಳೇ! ನಿರ್ದಿಷ್ಟ ಮಾರ್ಗಗಳ ಅನುಸರಣೆಗಳೇ! ಹಾಗಾಗಿಯೇ ಅವುಗಳನ್ನು ಅನುಸರಿಸಿ ಬ್ರಹ್ಮಾಂಡದ ಆಗುಹೋಗುಗಳನ್ನು ತಿಳಿವಳಿಕೆಯಲ್ಲಿ ತರುವ ಯಶಸ್ವಿ ಪ್ರಯತ್ನಗಳನ್ನು ಕಾಣುತ್ತಿದ್ದೇವೆ. ಅವು ಬಾಹ್ಯಾಕಾಶದ ಪ್ರಯೋಗಗಳಿರಬಹುದು. ಕೃಷಿಯ ತಳಿಗಳ ಆನುವಂಶಿಕ ವಿವರಗಳಿರಬಹುದು, ಮಾನವಕುಲದ ರೋಗ-ರುಜಿನಗಳ ಚಿಕಿತ್ಸೆಯ ಅಧ್ಯಯನಗಳಿರಬಹುದು. ಎಲ್ಲವೂ ಗಣಿತೀಯ ಮಾರ್ಗಗಳ ಉತ್ತರಗಳಲ್ಲಿ ತಾಳೆಯಾದ ಸಂಗತಿಗಳು.

ಬಹುಪಾಲು ಸಾರ್ವಜನಿಕ ಚರ್ಚೆಗಳಲ್ಲಿ ಗಣಿತವನ್ನು ತೀರಾ ವೈಯಕ್ತಿಕ ಆಸಕ್ತಿಯ ಹಾಗೂ ಸಾಂಪ್ರದಾಯಿಕ ವಿಶೇಷಗಳನ್ನಾಗಿಸಿ ನೋಡಲಾಗುತ್ತದೆ. ಹಾಗಾಗಿ ಅದೊಂದು ಬಹುಪಾಲು ಸಮುದಾಯದ ತಿಳಿವಳಿಕೆಯಾಗಿಸುವಲ್ಲಿ ಮಾನವ ಕುಲವು ಸೋತಿದೆ. ಪ್ರಮೇಯವೊಂದು ನಿರ್ದಿಷ್ಟ ಉತ್ತರವನ್ನು ಅಥವಾ ಫಲಿತವನ್ನು ಹೊಂದಿದ್ದು ಅದರ ಹುಡುಕಾಟದ ಮಾರ್ಗಗಳನ್ನು ಭಿನ್ನಭಿನ್ನವಾಗಿ ಅನುಸರಿಸಲು ಸಾಧ್ಯವಿದೆ. ಆದರೆ ಸಾಂಪ್ರದಾಯಿಕ ಕಲಿಕೆಯಲ್ಲಿ ಕೇವಲ ಮಾರ್ಗದ ನಿರ್ದಿಷ್ಟತೆಯನ್ನು ಮುಂದುಮಾಡಿ, ಹುಡುಕಾಟದ ಬೆರಗು ಮತ್ತು ಸಂತೋಷದಿಂದ ವಂಚಿತರನ್ನಾಗಿ ಮಾಡುವುದರಿಂದ ಗಣಿತ ಕಷ್ಟವಾಗಿದೆ. ಲಯಬದ್ಧ ಸಂಗೀತವೂ ಗಣಿತ ವಿವರಗಳನ್ನು ಒಳಗೊಂಡಿದೆ ಎಂಬುದರ ಅರಿವು ನಮ್ಮೊಳಗಿನ ಆನಂದದ ಪ್ರೀತಿಯನ್ನು ಹೆಚ್ಚಿಸಬಲ್ಲುದು. ಗಣಿತವನ್ನು ಆತ್ಯಂತಿಕ ಸಾಮಾಜಿಕ ಚಟುವಟಿಕೆ ಎಂದೇ ಪ್ರಖ್ಯಾತ ಗಣಿತಜ್ಞ ಪಾಲ್ ಎರ್ಡಾಸ್ ಅವರು ಕರೆಯುತ್ತಿದ್ದರು. ವಿಜ್ಞಾನದ ಸಮಾಜೀಕರಣವನ್ನು ಗಣಿತದ ಹಿನ್ನೆಲೆಯಲ್ಲಿ ಎರ್ಡಾಸ್ ಅವರ ಜೀವನಕ್ಕಿಂತಾ ಪ್ರಬಲವಾದ ಉದಾಹರಣೆಯು ಇರಲಿಕ್ಕಿಲ್ಲ.

ನಾವು ನಮ್ಮ ಸಂಗಾತಿಯೊಂದಿಗೂ ಸಹಾ “ಅಯ್ಯೋ ಜೀವನ ಪೂರ್ತಿ ಇವನ/ಇವಳ ಜೊತೆ ಏಗೋದ್ರಲ್ಲೆ ಕಳೆದುಹೋಯ್ತು” ಎನ್ನುವ ತಮಾಷೆಯೊಳಗೂ ಸಾಮರಸ್ಯದ ಕೊರತೆಗಳನ್ನು ಅಭಿವ್ಯಕ್ತಿಸುವ ಸಂದರ್ಭಗಳನ್ನು ನೋಡುತ್ತೇವೆ. ಅಂತಹದರಲ್ಲಿ ಅನೇಕ ರಾಷ್ಟ್ರಗಳ ಸುತ್ತಾಡುತ್ತಾ ವಿದ್ಯಾರ್ಥಿಗಳ ಜೊತೆಗೆ ಸಾಮರಸ್ಯದ ಶಿಖರವನ್ನು ಸಾಧಿಸಿ, ಅಂಕಿ-ಸಂಖ್ಯೆಗಳ ಹುಡುಕಾಟದ ಅನುಶೋಧಗಳನ್ನು ಮಾಡಿದ ಅಪ್ರತಿಮ ಗಣಿತಜ್ಞ. ಅಪ್ಪಟ ಗಣಿತದ ವೈವಿಧ್ಯಮಯ ಸಮಸ್ಯೆಗಳನ್ನು ಬಿಡಿಸಲು ಸುಮಾರು 511 ಜನ ಗಣಿತಜ್ಞರೊಂದಿಗೆ ಸಂಶೋಧಿಸಿ, ಲೇಖನಗಳನ್ನು ಪ್ರಕಟಿಸಿದರು. ಅವರು ಒಟ್ಟು ಸಂಶೋಧನಾ ಲೇಖನಗಳ ಸಂಖ್ಯೆ ಸರಿಸುಮಾರು 1525! ಈ ದಾಖಲೆಯನ್ನು ಇನ್ನೂ ಯಾರಾದರೂ ಮುರಿಬೇಕಿದೆ. ಏಕಕಾಲಕ್ಕೆ 50 ಜನರೊಂದಿಗೆ ಸಂಪರ್ಕದಲ್ಲಿ ಇದ್ದು ಅಧ್ಯಯನಗಳಲ್ಲಿ ತೊಡಗಿದ್ದ ವಿಚಿತ್ರ ಗಣಿತಜ್ಞ.

ಜೀವಿತದ ಕಡೆಯವರೆಗೂ ಅಮೆರಿಕಾ, ಯೂರೋಪು, ಆಸ್ಟ್ರೇಲಿಯಾ, ಏಷಿಯಾ ಖಂಡಗಳ ವಿವಿಧ ವಿಶ್ವವಿದ್ಯಾಲಯಗಳ ಆತಿಥ್ಯವನ್ನು ಒಪ್ಪಿಕೊಳ್ಳುತ್ತಾ, ಉಪನ್ಯಾಸಗಳನ್ನು ಕೊಡುತ್ತಲೇ ಸಂಶೋಧನೆಯಲ್ಲೂ ತೊಡಗಿದ್ದರು. ಸದಾ ಗಣಿತವನ್ನು ಅವುಗಳ ಪ್ರಮೇಯಗಳ ವಿವರಗಳನ್ನು ಪಡೆಯುವ ಹವ್ಯಾಸದಿಂದ ತೊಡಗಿರುತ್ತಿದ್ದ ಪಾಲ್ ತಮ್ಮ ಕೊನೆಯ ಕ್ಷಣವನ್ನೂ ಹಾಗೆ ಇರಲೆಂದು ಬಯಸಿದ್ದರು. ಆ ಘಳಿಗೆ ಹೇಗಿರಬೇಕೆಂದು ಹೇಳುತ್ತಿದ್ದ ಅವರ ಮಾತುಗಳು ಹೀಗಿವೆ.

“ನಾನೊಂದು ಗಣಿತದ ಉಪನ್ಯಾಸವನ್ನು ಕೊಡುತ್ತಿರುವಾಗ, ತೆರೆದ ಬ್ಲಾಕ್ ಬೋರ್ಡ್‍ನ ಮೇಲೆ ಪ್ರಮೇಯವನ್ನು ಬಿಡಿಸಿ ಮುಗಿಸಬೇಕು. ಆಗ ಪ್ರೇಕ್ಷಕ-ವಿದ್ಯಾರ್ಥಿಗಳು, ಕೂಗಿ ಅದೇನೋ ಸರಿ ಆದರೆ ಸಾಮಾನ್ಯವಾದ ಸನ್ನಿವೇಶದ ಪರಿಸ್ಥಿತಿಯ ಫಲಿತವೇನು? ಎನ್ನಬೇಕು. ಆಗ ನಾನು ಅವರ ಕಡೆಗೆ ತಿರುಗಿ, ನಸುನಕ್ಕು ಅದನ್ನೆಲ್ಲಾ ಮುಂದಿನ ಪೀಳಿಗೆಗೆ ಬಿಟ್ಟಿದ್ದೇನೆ ಎಂದು ಹೇಳುತ್ತಲೇ ಕುಸಿದು ಬೀಳಬೇಕು.”

ಅದೇನು ಬದುಕಿನ ಅಚ್ಚರಿಯೋ, ಹೆಚ್ಚೂ -ಕಡಿಮೆ ಆದದ್ದೂ ಹಾಗೆಯೇ! ಪಾಲ್ 1996ರ ಸೆಪ್ಟೆಂಬರ್ 26ರಂದು ಪೋಲೆಂಡಿನ ವಾರ್ಸಾದಲ್ಲಿ ಗಣಿತದ ಉಪನ್ಯಾಸಕ್ಕೆಂದು ಹೋಗಿದ್ದರು. ಅಲ್ಲಿ ಜ್ಯಾಮಿತಿಗೆ ಸಂಬಂಧಿಸಿದ ಪ್ರಮೇಯವೊಂದನ್ನು ಬಿಡಿಸುವ ಉಪನ್ಯಾಸವನ್ನು ಮುಗಿಸಿ ವಿಶ್ರಮಿಸುವಾಗ ಹೃದಯಾಘಾತಕ್ಕೆ ಒಳಗಾಗಿ ಜೀವನವನ್ನು ಮುಗಿಸಿಯೇಬಿಟ್ಟರು. ತಾವು ಅಂದುಕೊಂಡಂತೆಯೇ ಹೆಚ್ಚೂ-ಕಡಿಮೆ ಜೀವನವನ್ನು ಕಳೆದ ಮಹಾನ್ ಮೇಧಾವಿ. My mind is open ಎನ್ನುತ್ತಲೇ ಉಪನ್ಯಾಸ ಅಥವಾ ಹರಟೆಯನ್ನು ಆರಂಭಿಸುತ್ತಿದ್ದರು. ಎಚ್ಚರವಿದ್ದಾಗೆಲ್ಲಾ ಗಣಿತವನ್ನು ಗುಣಿಸುತ್ತಲೇ ಇರುತ್ತಿದ್ದ, ಅವರ ಉಸಿರು ಸದಾ ಗಣಿತವೇ ಆಗಿದ್ದು ವಿಶೇಷ. ಸುಮಾರು 83 ವರ್ಷಗಳ ಜೀವನದಲ್ಲಿ ಸುಮಾರು 60 ವರ್ಷಗಳ ಕಾಲ ಅಲೆದಾಟದಲ್ಲೇ ಕಳೆದರು. ಮನೆ, ಸಂಸಾರ, ತನ್ನದೆನ್ನುವುದು ಯಾವುದೂ ಇರದ ಪರಿವ್ರಾಜಕ. ಜೀವನವೆಲ್ಲಾ ಕೇವಲ ಅತಿಥಿ ಉಪನ್ಯಾಸ, ಬಹುಮಾನಗಳ ಹಣದಿಂದಲೇ ಕಳೆದವರು. ಸಾಲದಕ್ಕೆ ತಮ್ಮ ಬಹುಮಾನಗಳ ಬಹುಪಾಲು ಮೊತ್ತವನ್ನು ವಿದ್ಯಾರ್ಥಿಗಳ ಕಷ್ಟ-ಸುಖಗಳಿಗೆ ಹಂಚಿದರು. ಹಣ ಕೊಡುವಾಗ ಒಂದು ವೇಳೆ ಹಿಂದಿರುಗಿಸಲು ಆಗದಿದ್ದರೆ, ಮುಂದೆ ಸಾಧ್ಯವಾದಾಗ ತಮ್ಮಂತಹ ಇತರೆ ತೊಂದರೆಯ ವ್ಯಕ್ತಿಗಳಿಗೆ ಕೊಡುವಂತೆ ಸಲಹೆ ಮಾಡುತ್ತಿದ್ದ ಮಾನವ ಪ್ರೇಮಿ. ಬಹುಮಾನಗಳಲ್ಲಿ ಕೇವಲ ಮುಂದಿನ ಪ್ರಯಾಣದ ಖರ್ಚನ್ನಷ್ಟೇ ಇಟ್ಟುಕೊಂಡು ಉಳಿದ ಹಣವನ್ನು ಅಲ್ಲಿಯೇ ಕೊಟ್ಟುಹೋಗುತ್ತಿದ್ದ ಸಂತ. ಸ್ವಂತ ಮನೆ, ಕೆಲಸ ಇಲ್ಲದೆ ಕೇವಲ ಸಂಶೋಧನಾ ಸಂಬಂಧಿಕರನ್ನು ಬೆಳೆಸಿಕೊಂಡವರು. ಜೀವನವಿಡೀ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕ ಆಗಿದ್ದುದರಿಂದ ಅವರ ಬೇಡಿಕೆ ಸದಾ ಒಂದೇ! ತಮ್ಮ ಮುಂದಿನ ಪ್ರಯಾಣದ ಖಾತ್ರಿ, ಉಳಿದುಕೊಂಡಾಗ ಬಟ್ಟೆ ಒಗೆಯುವ ಮತ್ತು ಇಸ್ತ್ರಿ ಮಾಡಿಸುವ ಅನುಕೂಲ. ಹಾಗಾಗಿ ಕೇವಲ ಸೂಟ್‍ಕೇಸ್‍ನೊಂದಿಗೆ 65 ವರ್ಷಗಳ ಜೀವನವನ್ನು ಕಳೆದರು.

ಪಾಲ್ ಎರ್ಡಾಸ್ ಅವರ ಹೆಸರಿನ ಒಟ್ಟು 40ಕ್ಕೂ ಹೆಚ್ಚಿನ ಗಣಿತದ ಗುರುತುಗಳ ಪಟ್ಟಿ ಇದೆ. ಎರ್ಡಾಸ್ ಸಮೀಕರಣ, ಎರ್ಡಾಸ್ ಗ್ರಾಫ್, ಎರ್ಡಾಸ್ ಕಂಜಕ್ಚರ್, ಎರ್ಡಾಸ್ ಸೂಚ್ಯಾಂಕ, ಎರ್ಡಾಸ್ ಥಿಯರಿ ಇತ್ಯಾದಿ, ಇತ್ಯಾದಿ. ಎರ್ಡಾಸ್ ಅವರ ಗಣಿತದ ಕೊಡುಗೆಯನ್ನು ಸಾಮಾನ್ಯರ ಊಹೆಗೆ ಹೇಳಬಹುದಾದರೆ “ಕಂಜಕ್ಚರ್’ ಗಳನ್ನು ಉದಾಹರಿಸಬಹುದೇನೋ! “ಕಂಜಕ್ಚರ್”ಗಳು ಎಂದರೆ ಪರಿಪೂರ್ಣ ವಿವರಗಳಿಲ್ಲದ ಸಮಸ್ಯೆಯೊಂದನ್ನು ಅದರ ಊಹೆಗಳಿಂದಲೇ ಪರಿಹಾರವಾಗಿಸುವ ವಿಧಾನ. ಒಂದು ಬಗೆಯಲ್ಲಿ ಊಹೆಯಿಂದ ಫಲಿತಗಳನ್ನು ಕೊಡುವ ಪದ್ಧತಿ ಎನ್ನೋಣ. ಇನ್ನೂ ಸರಳವಾಗಿ ನೋಡುವುದಾದರೆ, “ಒಂದು ಹೊಲದಲ್ಲಿ ಅದೆಷ್ಟೋ ತೆನೆಗಳಿರುತ್ತವೆ, ಎಲ್ಲಿಂದಲೊ ಅದೆಷ್ಟೋ ಗಿಳಿಗಳು ಹಾರುತ್ತಾ ಬರುತ್ತವೆ. – ಎಲ್ಲವೂ ಒಂದೊಂದು ತೆನೆಯ ಮೇಲೆ ಕುಳಿತುಕೊಳ್ಳುತ್ತವೆ. ಒಂದು ಗಿಳಿಗೆ ತೆನೆಯಿಲ್ಲದೆ ಉಳಿಯುತ್ತದೆ. ಆಗ ಗಿಳಿಗಳು ಮಾತಾಡಿಕೊಂಡು, ಎರಡೆರಡು ಗಿಳಿಗಳು ಒಂದೊಂದು ತೆನೆಗೆ ಕುಳಿತುಕೊಳ್ಳುತ್ತವೆ, ಆಗ ಒಂದು ತೆನೆಗೆ ಗಿಳಿಯೇ ಇರುವುದಿಲ್ಲ. ಹಾಗಾದರೆ ಅಲ್ಲಿದ್ದ ತೆನೆಗಳೆಷ್ಟು, ಬಂದು ಕುಳಿತ ಗಿಳಿಗಳೆಷ್ಟು” ಇಲ್ಲಿ ಇಲ್ಲವೂ ಊಹೆಯೇ! ಸಂಬಂಧಗಳನ್ನು ಊಹಿಸಿಕೊಂಡೆ ಫಲಿತಾಂಶವನ್ನು ಹುಡುಕಬೇಕು. ಇಂತಹ ಬಹುಸಂಖ್ಯೆಯ ಕಂಜಕ್ಚರ್‍ಗಳ ನಡುವೆ ವ್ಯವಹರಿಸಿದ ಎರ್ಡಾಸ್ ಕಂಜಕ್ಚರ್‍ಗಳು ಎಂಬ ದೊಡ್ಡ ಪಟ್ಟಿಯೆ ಇದೆ.

ಚಿಕ್ಕ-ಚಿಕ್ಕ ಮಕ್ಕಳ ಜೊತೆಗೂ ಗಣಿತದಲ್ಲಿ ತೊಡಗಿರುತ್ತಿದ್ದ ಎರ್ಡಾಸ್, ಅಂತಹ ಸಂದರ್ಭಗಳಿಂದ ಮಹಾನ್ ಗಣಿತಜ್ಞರನ್ನು ರೂಪಿಸಿದ ಉದಾಹರಣೆಗಳಿವೆ. ಒಮ್ಮೆ ಆಸ್ಟ್ರೇಲಿಯಾದ ಅಡಿಲೆಡ್‍ನಲ್ಲಿ 10 ವರ್ಷದ ಪುಟ್ಟ ಬಾಲಕನೊಂದಿಗಿದ್ದ ಅಂತಹ ಗಣಿತದ ಆಟದಲ್ಲಿ ತೊಡಗಿದ್ದರು. ಆ ಬಾಲಕ “ತೆರೆನ್ಸ್ ತಾವೋ” ಮುಂದೆ 2006ರಲ್ಲಿ ಗಣಿತದ ಫೀಲ್ಡ್ ಮೆಡಲ್ ಪುರಸ್ಕೃತನಾದ. ಇದೀಗ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಲಾಸ್ ಏಂಜಲೀಸ್‍ನಲ್ಲಿ ಗಣಿತದ ಪ್ರೊಫೆಸರ್. ಕೇವಲ 24 ವರ್ಷದವನಿದ್ದಾಗಲೇ ಫುಲ್‍ಟೈಮ್ ಪ್ರೊಫೆಸರ್ ಆದ ಅತ್ಯಂತ ಕಿರಿಯ ಪ್ರೊಫೆಸರ್ ಕೂಡ.

ನಮಗೆಲ್ಲಾ ಗಣಿತದ ಆಳಕ್ಕಿಳಿದವರು ಎಂದರೆ ಅಂತರ್ಮುಖಿಗಳು ಅಥವಾ ಒಂದು ವೇಳೆ ಎಲ್ಲರೊಡನೆ ಬೆರೆತರೂ ಅಂತಹವರು ಜಗಳಗಂಟರು! ಹೌದು ತಾನೇ! ಆದರೆ ಪಾಲ್ ಎರ್ಡಾಸ್ ಅವರ ಪ್ರಕಾರ ಗಣಿತ ಎಂಬುದು ಅತ್ಯಂತ ಆತ್ಮೀಯವಾದ ಸಾಮಾಜಿಕ ಚಟುವಟಿಕೆ. ನಾವಂದುಕೊಂಡ ಹಾಗೆ ಸರಳವಾಗಿ ಕೇವಲ 3 ರ ಪಕ್ಕ 3ನ್ನಿಟ್ಟು, ಅವುಗಳನ್ನು ಕೂಡಿದರೆ 6 ಆಗುತ್ತೆ, ಕಳೆದರೆ “0”, ಗುಣಿಸಿದರೆ “9” ಭಾಗಿಸಿದರೆ “1” ಅನ್ನುವ ಲೆಕ್ಕದಲ್ಲಿ ಗಣಿತವೆಲ್ಲಾ ಇಲ್ಲ! ನಿಸರ್ಗವು ಎಲ್ಲವನ್ನೂ ಸಮದೂಗಿಸಿಕೊಂಡು ತಾನೆ ನಡೆಸಿಕೊಂಡು ಹೋಗುತ್ತಿರುವ ಸೌಂದರ್ಯವನ್ನು ವಿವರಿಸುವ ಸೂತ್ರಗಳಲ್ಲಿ ಗಣಿತವಿದೆ. ಅಲ್ಲದೆ ಆ ಸೌಂದರ್ಯವನ್ನು ತಿಳಿವಿಗೆ ತರಲು ಹುಡುಕಾಡುವ ಭೌತ, ರಸಾಯನಿಕ ಹಾಗೂ ಜೀವವಿಜ್ಞಾನದ ಮಾರ್ಗಗಳ ಭಾಷೆಯೇ ಗಣಿತವಾಗಿದೆ. ಅಗಣಿತ ಅನಂತದ ಆಚೆಗೆಲ್ಲೋ ನಿಂತು ಆನಂದದ ಹುಡುಕಾಟದಲ್ಲಿರುವ ನಮ್ಮನ್ನು ಅಂಕೆ-ಸಂಖ್ಯೆಗಳ ಸಂತರ ಜೊತೆ ಸಮೀಕರಿಸಿ ನೋಡಿಕೊಳ್ಳಲು ಶೂನ್ಯರಾಗುವ ಭಯದಿಂದ ಹೊರಬಂದು ಹುಡುಕಾಟದ ಪ್ರಯತ್ನಗಳನ್ನು
ಮಾಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...