Homeಅಂತರಾಷ್ಟ್ರೀಯಅಂಕೆ-ಸಂಖ್ಯೆಗಳನ್ನು ಮಾತ್ರವೇ ಪ್ರೀತಿಸಿದ ಗಣಿತದ ಜಂಗಮ ಪಾಲ್ ಎರ್ಡಾಸ್

ಅಂಕೆ-ಸಂಖ್ಯೆಗಳನ್ನು ಮಾತ್ರವೇ ಪ್ರೀತಿಸಿದ ಗಣಿತದ ಜಂಗಮ ಪಾಲ್ ಎರ್ಡಾಸ್

- Advertisement -
- Advertisement -

ವಿಜ್ಞಾನ ಅನುರಣನ: ಡಾ.ಟಿ.ಎಸ್ ಚನ್ನೇಶ್

ನಾವಂದುಕೊಂಡ ಹಾಗೆ ಸರಳವಾಗಿ ಕೇವಲ 3 ರ ಪಕ್ಕ 3ನ್ನಿಟ್ಟು, ಅವುಗಳನ್ನು ಕೂಡಿದರೆ 6 ಆಗುತ್ತೆ, ಕಳೆದರೆ “0”, ಗುಣಿಸಿದರೆ “9” ಭಾಗಿಸಿದರೆ “1” ಅನ್ನುವ ಲೆಕ್ಕದಲ್ಲಿ ಗಣಿತವೆಲ್ಲಾ ಇಲ್ಲ! ನಿಸರ್ಗವು ಎಲ್ಲವನ್ನೂ ಸಮದೂಗಿಸಿಕೊಂಡು ತಾನೆ ನಡೆಸಿಕೊಂಡು ಹೋಗುತ್ತಿರುವ ಸೌಂದರ್ಯವನ್ನು ವಿವರಿಸುವ ಸೂತ್ರಗಳಲ್ಲಿ ಗಣಿತವಿದೆ.

ಡಾ.ಟಿ.ಎಸ್ ಚನ್ನೇಶ್

ವಿಜ್ಞಾನ ಸಂಸ್ಕೃತಿಯ ಹುಡುಕಾಟ ಮತ್ತು ಸಮಾಜೀಕರಣವನ್ನು ಗಣಿತದ ಹಿನ್ನೆಲೆಯಿಂದ ನೋಡಲು ವಿಶೇಷವಾದ ಉದಾಹರಣೆಯಿದೆ. ಗಣಿತವು ತಿಳಿವಳಿಕೆಯ ಮೂಲಭೂತ ತಳಹದಿ ಜೊತೆಗೆ, ಸೌಂದರ್ಯದ ವಿವರಗಳನ್ನೂ ಕಟ್ಟಿಕೊಡುವ ಭಾಷೆ. ಸಾಮಾನ್ಯವಾದ ವಿವರಗಳಲ್ಲಿ ಅಂಕೆ-ಸಂಖ್ಯೆಯ ಒಣಸಂಕೇತಗಳ ನಿರೂಪ ಎನ್ನಿಸಬಹುದು. ಅಯ್ಯೋ ಗಣಿತ ಕಷ್ಟ! ಅರ್ಥವಾಗೊಲ್ಲ ಎನ್ನುವವರೂ ಸಾಕಷ್ಟು ಇರಬಹುದು. ನಿಜಕ್ಕೂ ಗಣಿತವು ಸರಳವಾದ ಸೃಜನಶೀಲ ಮಾರ್ಗಗಳ ಹುಡುಕಾಟದ ದಾರಿ. ಸೃಜನಶೀಲ ಮಾರ್ಗಗಳ ಹುಡುಕಾಟದ ಊಹೆಯ ರಹದಾರಿಯೇ ಗಣಿತ. ಇಡೀ ವಿಶ್ವದ ಎಲ್ಲಾ ಚಟುವಟಿಕಗಳೂ ಲೆಕ್ಕಬದ್ಧ ಕ್ರಿಯೆಗಳೇ! ನಿರ್ದಿಷ್ಟ ಮಾರ್ಗಗಳ ಅನುಸರಣೆಗಳೇ! ಹಾಗಾಗಿಯೇ ಅವುಗಳನ್ನು ಅನುಸರಿಸಿ ಬ್ರಹ್ಮಾಂಡದ ಆಗುಹೋಗುಗಳನ್ನು ತಿಳಿವಳಿಕೆಯಲ್ಲಿ ತರುವ ಯಶಸ್ವಿ ಪ್ರಯತ್ನಗಳನ್ನು ಕಾಣುತ್ತಿದ್ದೇವೆ. ಅವು ಬಾಹ್ಯಾಕಾಶದ ಪ್ರಯೋಗಗಳಿರಬಹುದು. ಕೃಷಿಯ ತಳಿಗಳ ಆನುವಂಶಿಕ ವಿವರಗಳಿರಬಹುದು, ಮಾನವಕುಲದ ರೋಗ-ರುಜಿನಗಳ ಚಿಕಿತ್ಸೆಯ ಅಧ್ಯಯನಗಳಿರಬಹುದು. ಎಲ್ಲವೂ ಗಣಿತೀಯ ಮಾರ್ಗಗಳ ಉತ್ತರಗಳಲ್ಲಿ ತಾಳೆಯಾದ ಸಂಗತಿಗಳು.

ಬಹುಪಾಲು ಸಾರ್ವಜನಿಕ ಚರ್ಚೆಗಳಲ್ಲಿ ಗಣಿತವನ್ನು ತೀರಾ ವೈಯಕ್ತಿಕ ಆಸಕ್ತಿಯ ಹಾಗೂ ಸಾಂಪ್ರದಾಯಿಕ ವಿಶೇಷಗಳನ್ನಾಗಿಸಿ ನೋಡಲಾಗುತ್ತದೆ. ಹಾಗಾಗಿ ಅದೊಂದು ಬಹುಪಾಲು ಸಮುದಾಯದ ತಿಳಿವಳಿಕೆಯಾಗಿಸುವಲ್ಲಿ ಮಾನವ ಕುಲವು ಸೋತಿದೆ. ಪ್ರಮೇಯವೊಂದು ನಿರ್ದಿಷ್ಟ ಉತ್ತರವನ್ನು ಅಥವಾ ಫಲಿತವನ್ನು ಹೊಂದಿದ್ದು ಅದರ ಹುಡುಕಾಟದ ಮಾರ್ಗಗಳನ್ನು ಭಿನ್ನಭಿನ್ನವಾಗಿ ಅನುಸರಿಸಲು ಸಾಧ್ಯವಿದೆ. ಆದರೆ ಸಾಂಪ್ರದಾಯಿಕ ಕಲಿಕೆಯಲ್ಲಿ ಕೇವಲ ಮಾರ್ಗದ ನಿರ್ದಿಷ್ಟತೆಯನ್ನು ಮುಂದುಮಾಡಿ, ಹುಡುಕಾಟದ ಬೆರಗು ಮತ್ತು ಸಂತೋಷದಿಂದ ವಂಚಿತರನ್ನಾಗಿ ಮಾಡುವುದರಿಂದ ಗಣಿತ ಕಷ್ಟವಾಗಿದೆ. ಲಯಬದ್ಧ ಸಂಗೀತವೂ ಗಣಿತ ವಿವರಗಳನ್ನು ಒಳಗೊಂಡಿದೆ ಎಂಬುದರ ಅರಿವು ನಮ್ಮೊಳಗಿನ ಆನಂದದ ಪ್ರೀತಿಯನ್ನು ಹೆಚ್ಚಿಸಬಲ್ಲುದು. ಗಣಿತವನ್ನು ಆತ್ಯಂತಿಕ ಸಾಮಾಜಿಕ ಚಟುವಟಿಕೆ ಎಂದೇ ಪ್ರಖ್ಯಾತ ಗಣಿತಜ್ಞ ಪಾಲ್ ಎರ್ಡಾಸ್ ಅವರು ಕರೆಯುತ್ತಿದ್ದರು. ವಿಜ್ಞಾನದ ಸಮಾಜೀಕರಣವನ್ನು ಗಣಿತದ ಹಿನ್ನೆಲೆಯಲ್ಲಿ ಎರ್ಡಾಸ್ ಅವರ ಜೀವನಕ್ಕಿಂತಾ ಪ್ರಬಲವಾದ ಉದಾಹರಣೆಯು ಇರಲಿಕ್ಕಿಲ್ಲ.

ನಾವು ನಮ್ಮ ಸಂಗಾತಿಯೊಂದಿಗೂ ಸಹಾ “ಅಯ್ಯೋ ಜೀವನ ಪೂರ್ತಿ ಇವನ/ಇವಳ ಜೊತೆ ಏಗೋದ್ರಲ್ಲೆ ಕಳೆದುಹೋಯ್ತು” ಎನ್ನುವ ತಮಾಷೆಯೊಳಗೂ ಸಾಮರಸ್ಯದ ಕೊರತೆಗಳನ್ನು ಅಭಿವ್ಯಕ್ತಿಸುವ ಸಂದರ್ಭಗಳನ್ನು ನೋಡುತ್ತೇವೆ. ಅಂತಹದರಲ್ಲಿ ಅನೇಕ ರಾಷ್ಟ್ರಗಳ ಸುತ್ತಾಡುತ್ತಾ ವಿದ್ಯಾರ್ಥಿಗಳ ಜೊತೆಗೆ ಸಾಮರಸ್ಯದ ಶಿಖರವನ್ನು ಸಾಧಿಸಿ, ಅಂಕಿ-ಸಂಖ್ಯೆಗಳ ಹುಡುಕಾಟದ ಅನುಶೋಧಗಳನ್ನು ಮಾಡಿದ ಅಪ್ರತಿಮ ಗಣಿತಜ್ಞ. ಅಪ್ಪಟ ಗಣಿತದ ವೈವಿಧ್ಯಮಯ ಸಮಸ್ಯೆಗಳನ್ನು ಬಿಡಿಸಲು ಸುಮಾರು 511 ಜನ ಗಣಿತಜ್ಞರೊಂದಿಗೆ ಸಂಶೋಧಿಸಿ, ಲೇಖನಗಳನ್ನು ಪ್ರಕಟಿಸಿದರು. ಅವರು ಒಟ್ಟು ಸಂಶೋಧನಾ ಲೇಖನಗಳ ಸಂಖ್ಯೆ ಸರಿಸುಮಾರು 1525! ಈ ದಾಖಲೆಯನ್ನು ಇನ್ನೂ ಯಾರಾದರೂ ಮುರಿಬೇಕಿದೆ. ಏಕಕಾಲಕ್ಕೆ 50 ಜನರೊಂದಿಗೆ ಸಂಪರ್ಕದಲ್ಲಿ ಇದ್ದು ಅಧ್ಯಯನಗಳಲ್ಲಿ ತೊಡಗಿದ್ದ ವಿಚಿತ್ರ ಗಣಿತಜ್ಞ.

ಜೀವಿತದ ಕಡೆಯವರೆಗೂ ಅಮೆರಿಕಾ, ಯೂರೋಪು, ಆಸ್ಟ್ರೇಲಿಯಾ, ಏಷಿಯಾ ಖಂಡಗಳ ವಿವಿಧ ವಿಶ್ವವಿದ್ಯಾಲಯಗಳ ಆತಿಥ್ಯವನ್ನು ಒಪ್ಪಿಕೊಳ್ಳುತ್ತಾ, ಉಪನ್ಯಾಸಗಳನ್ನು ಕೊಡುತ್ತಲೇ ಸಂಶೋಧನೆಯಲ್ಲೂ ತೊಡಗಿದ್ದರು. ಸದಾ ಗಣಿತವನ್ನು ಅವುಗಳ ಪ್ರಮೇಯಗಳ ವಿವರಗಳನ್ನು ಪಡೆಯುವ ಹವ್ಯಾಸದಿಂದ ತೊಡಗಿರುತ್ತಿದ್ದ ಪಾಲ್ ತಮ್ಮ ಕೊನೆಯ ಕ್ಷಣವನ್ನೂ ಹಾಗೆ ಇರಲೆಂದು ಬಯಸಿದ್ದರು. ಆ ಘಳಿಗೆ ಹೇಗಿರಬೇಕೆಂದು ಹೇಳುತ್ತಿದ್ದ ಅವರ ಮಾತುಗಳು ಹೀಗಿವೆ.

“ನಾನೊಂದು ಗಣಿತದ ಉಪನ್ಯಾಸವನ್ನು ಕೊಡುತ್ತಿರುವಾಗ, ತೆರೆದ ಬ್ಲಾಕ್ ಬೋರ್ಡ್‍ನ ಮೇಲೆ ಪ್ರಮೇಯವನ್ನು ಬಿಡಿಸಿ ಮುಗಿಸಬೇಕು. ಆಗ ಪ್ರೇಕ್ಷಕ-ವಿದ್ಯಾರ್ಥಿಗಳು, ಕೂಗಿ ಅದೇನೋ ಸರಿ ಆದರೆ ಸಾಮಾನ್ಯವಾದ ಸನ್ನಿವೇಶದ ಪರಿಸ್ಥಿತಿಯ ಫಲಿತವೇನು? ಎನ್ನಬೇಕು. ಆಗ ನಾನು ಅವರ ಕಡೆಗೆ ತಿರುಗಿ, ನಸುನಕ್ಕು ಅದನ್ನೆಲ್ಲಾ ಮುಂದಿನ ಪೀಳಿಗೆಗೆ ಬಿಟ್ಟಿದ್ದೇನೆ ಎಂದು ಹೇಳುತ್ತಲೇ ಕುಸಿದು ಬೀಳಬೇಕು.”

ಅದೇನು ಬದುಕಿನ ಅಚ್ಚರಿಯೋ, ಹೆಚ್ಚೂ -ಕಡಿಮೆ ಆದದ್ದೂ ಹಾಗೆಯೇ! ಪಾಲ್ 1996ರ ಸೆಪ್ಟೆಂಬರ್ 26ರಂದು ಪೋಲೆಂಡಿನ ವಾರ್ಸಾದಲ್ಲಿ ಗಣಿತದ ಉಪನ್ಯಾಸಕ್ಕೆಂದು ಹೋಗಿದ್ದರು. ಅಲ್ಲಿ ಜ್ಯಾಮಿತಿಗೆ ಸಂಬಂಧಿಸಿದ ಪ್ರಮೇಯವೊಂದನ್ನು ಬಿಡಿಸುವ ಉಪನ್ಯಾಸವನ್ನು ಮುಗಿಸಿ ವಿಶ್ರಮಿಸುವಾಗ ಹೃದಯಾಘಾತಕ್ಕೆ ಒಳಗಾಗಿ ಜೀವನವನ್ನು ಮುಗಿಸಿಯೇಬಿಟ್ಟರು. ತಾವು ಅಂದುಕೊಂಡಂತೆಯೇ ಹೆಚ್ಚೂ-ಕಡಿಮೆ ಜೀವನವನ್ನು ಕಳೆದ ಮಹಾನ್ ಮೇಧಾವಿ. My mind is open ಎನ್ನುತ್ತಲೇ ಉಪನ್ಯಾಸ ಅಥವಾ ಹರಟೆಯನ್ನು ಆರಂಭಿಸುತ್ತಿದ್ದರು. ಎಚ್ಚರವಿದ್ದಾಗೆಲ್ಲಾ ಗಣಿತವನ್ನು ಗುಣಿಸುತ್ತಲೇ ಇರುತ್ತಿದ್ದ, ಅವರ ಉಸಿರು ಸದಾ ಗಣಿತವೇ ಆಗಿದ್ದು ವಿಶೇಷ. ಸುಮಾರು 83 ವರ್ಷಗಳ ಜೀವನದಲ್ಲಿ ಸುಮಾರು 60 ವರ್ಷಗಳ ಕಾಲ ಅಲೆದಾಟದಲ್ಲೇ ಕಳೆದರು. ಮನೆ, ಸಂಸಾರ, ತನ್ನದೆನ್ನುವುದು ಯಾವುದೂ ಇರದ ಪರಿವ್ರಾಜಕ. ಜೀವನವೆಲ್ಲಾ ಕೇವಲ ಅತಿಥಿ ಉಪನ್ಯಾಸ, ಬಹುಮಾನಗಳ ಹಣದಿಂದಲೇ ಕಳೆದವರು. ಸಾಲದಕ್ಕೆ ತಮ್ಮ ಬಹುಮಾನಗಳ ಬಹುಪಾಲು ಮೊತ್ತವನ್ನು ವಿದ್ಯಾರ್ಥಿಗಳ ಕಷ್ಟ-ಸುಖಗಳಿಗೆ ಹಂಚಿದರು. ಹಣ ಕೊಡುವಾಗ ಒಂದು ವೇಳೆ ಹಿಂದಿರುಗಿಸಲು ಆಗದಿದ್ದರೆ, ಮುಂದೆ ಸಾಧ್ಯವಾದಾಗ ತಮ್ಮಂತಹ ಇತರೆ ತೊಂದರೆಯ ವ್ಯಕ್ತಿಗಳಿಗೆ ಕೊಡುವಂತೆ ಸಲಹೆ ಮಾಡುತ್ತಿದ್ದ ಮಾನವ ಪ್ರೇಮಿ. ಬಹುಮಾನಗಳಲ್ಲಿ ಕೇವಲ ಮುಂದಿನ ಪ್ರಯಾಣದ ಖರ್ಚನ್ನಷ್ಟೇ ಇಟ್ಟುಕೊಂಡು ಉಳಿದ ಹಣವನ್ನು ಅಲ್ಲಿಯೇ ಕೊಟ್ಟುಹೋಗುತ್ತಿದ್ದ ಸಂತ. ಸ್ವಂತ ಮನೆ, ಕೆಲಸ ಇಲ್ಲದೆ ಕೇವಲ ಸಂಶೋಧನಾ ಸಂಬಂಧಿಕರನ್ನು ಬೆಳೆಸಿಕೊಂಡವರು. ಜೀವನವಿಡೀ ವಿಶ್ವವಿದ್ಯಾಲಯಗಳ ಅತಿಥಿ ಉಪನ್ಯಾಸಕ ಆಗಿದ್ದುದರಿಂದ ಅವರ ಬೇಡಿಕೆ ಸದಾ ಒಂದೇ! ತಮ್ಮ ಮುಂದಿನ ಪ್ರಯಾಣದ ಖಾತ್ರಿ, ಉಳಿದುಕೊಂಡಾಗ ಬಟ್ಟೆ ಒಗೆಯುವ ಮತ್ತು ಇಸ್ತ್ರಿ ಮಾಡಿಸುವ ಅನುಕೂಲ. ಹಾಗಾಗಿ ಕೇವಲ ಸೂಟ್‍ಕೇಸ್‍ನೊಂದಿಗೆ 65 ವರ್ಷಗಳ ಜೀವನವನ್ನು ಕಳೆದರು.

ಪಾಲ್ ಎರ್ಡಾಸ್ ಅವರ ಹೆಸರಿನ ಒಟ್ಟು 40ಕ್ಕೂ ಹೆಚ್ಚಿನ ಗಣಿತದ ಗುರುತುಗಳ ಪಟ್ಟಿ ಇದೆ. ಎರ್ಡಾಸ್ ಸಮೀಕರಣ, ಎರ್ಡಾಸ್ ಗ್ರಾಫ್, ಎರ್ಡಾಸ್ ಕಂಜಕ್ಚರ್, ಎರ್ಡಾಸ್ ಸೂಚ್ಯಾಂಕ, ಎರ್ಡಾಸ್ ಥಿಯರಿ ಇತ್ಯಾದಿ, ಇತ್ಯಾದಿ. ಎರ್ಡಾಸ್ ಅವರ ಗಣಿತದ ಕೊಡುಗೆಯನ್ನು ಸಾಮಾನ್ಯರ ಊಹೆಗೆ ಹೇಳಬಹುದಾದರೆ “ಕಂಜಕ್ಚರ್’ ಗಳನ್ನು ಉದಾಹರಿಸಬಹುದೇನೋ! “ಕಂಜಕ್ಚರ್”ಗಳು ಎಂದರೆ ಪರಿಪೂರ್ಣ ವಿವರಗಳಿಲ್ಲದ ಸಮಸ್ಯೆಯೊಂದನ್ನು ಅದರ ಊಹೆಗಳಿಂದಲೇ ಪರಿಹಾರವಾಗಿಸುವ ವಿಧಾನ. ಒಂದು ಬಗೆಯಲ್ಲಿ ಊಹೆಯಿಂದ ಫಲಿತಗಳನ್ನು ಕೊಡುವ ಪದ್ಧತಿ ಎನ್ನೋಣ. ಇನ್ನೂ ಸರಳವಾಗಿ ನೋಡುವುದಾದರೆ, “ಒಂದು ಹೊಲದಲ್ಲಿ ಅದೆಷ್ಟೋ ತೆನೆಗಳಿರುತ್ತವೆ, ಎಲ್ಲಿಂದಲೊ ಅದೆಷ್ಟೋ ಗಿಳಿಗಳು ಹಾರುತ್ತಾ ಬರುತ್ತವೆ. – ಎಲ್ಲವೂ ಒಂದೊಂದು ತೆನೆಯ ಮೇಲೆ ಕುಳಿತುಕೊಳ್ಳುತ್ತವೆ. ಒಂದು ಗಿಳಿಗೆ ತೆನೆಯಿಲ್ಲದೆ ಉಳಿಯುತ್ತದೆ. ಆಗ ಗಿಳಿಗಳು ಮಾತಾಡಿಕೊಂಡು, ಎರಡೆರಡು ಗಿಳಿಗಳು ಒಂದೊಂದು ತೆನೆಗೆ ಕುಳಿತುಕೊಳ್ಳುತ್ತವೆ, ಆಗ ಒಂದು ತೆನೆಗೆ ಗಿಳಿಯೇ ಇರುವುದಿಲ್ಲ. ಹಾಗಾದರೆ ಅಲ್ಲಿದ್ದ ತೆನೆಗಳೆಷ್ಟು, ಬಂದು ಕುಳಿತ ಗಿಳಿಗಳೆಷ್ಟು” ಇಲ್ಲಿ ಇಲ್ಲವೂ ಊಹೆಯೇ! ಸಂಬಂಧಗಳನ್ನು ಊಹಿಸಿಕೊಂಡೆ ಫಲಿತಾಂಶವನ್ನು ಹುಡುಕಬೇಕು. ಇಂತಹ ಬಹುಸಂಖ್ಯೆಯ ಕಂಜಕ್ಚರ್‍ಗಳ ನಡುವೆ ವ್ಯವಹರಿಸಿದ ಎರ್ಡಾಸ್ ಕಂಜಕ್ಚರ್‍ಗಳು ಎಂಬ ದೊಡ್ಡ ಪಟ್ಟಿಯೆ ಇದೆ.

ಚಿಕ್ಕ-ಚಿಕ್ಕ ಮಕ್ಕಳ ಜೊತೆಗೂ ಗಣಿತದಲ್ಲಿ ತೊಡಗಿರುತ್ತಿದ್ದ ಎರ್ಡಾಸ್, ಅಂತಹ ಸಂದರ್ಭಗಳಿಂದ ಮಹಾನ್ ಗಣಿತಜ್ಞರನ್ನು ರೂಪಿಸಿದ ಉದಾಹರಣೆಗಳಿವೆ. ಒಮ್ಮೆ ಆಸ್ಟ್ರೇಲಿಯಾದ ಅಡಿಲೆಡ್‍ನಲ್ಲಿ 10 ವರ್ಷದ ಪುಟ್ಟ ಬಾಲಕನೊಂದಿಗಿದ್ದ ಅಂತಹ ಗಣಿತದ ಆಟದಲ್ಲಿ ತೊಡಗಿದ್ದರು. ಆ ಬಾಲಕ “ತೆರೆನ್ಸ್ ತಾವೋ” ಮುಂದೆ 2006ರಲ್ಲಿ ಗಣಿತದ ಫೀಲ್ಡ್ ಮೆಡಲ್ ಪುರಸ್ಕೃತನಾದ. ಇದೀಗ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯ, ಲಾಸ್ ಏಂಜಲೀಸ್‍ನಲ್ಲಿ ಗಣಿತದ ಪ್ರೊಫೆಸರ್. ಕೇವಲ 24 ವರ್ಷದವನಿದ್ದಾಗಲೇ ಫುಲ್‍ಟೈಮ್ ಪ್ರೊಫೆಸರ್ ಆದ ಅತ್ಯಂತ ಕಿರಿಯ ಪ್ರೊಫೆಸರ್ ಕೂಡ.

ನಮಗೆಲ್ಲಾ ಗಣಿತದ ಆಳಕ್ಕಿಳಿದವರು ಎಂದರೆ ಅಂತರ್ಮುಖಿಗಳು ಅಥವಾ ಒಂದು ವೇಳೆ ಎಲ್ಲರೊಡನೆ ಬೆರೆತರೂ ಅಂತಹವರು ಜಗಳಗಂಟರು! ಹೌದು ತಾನೇ! ಆದರೆ ಪಾಲ್ ಎರ್ಡಾಸ್ ಅವರ ಪ್ರಕಾರ ಗಣಿತ ಎಂಬುದು ಅತ್ಯಂತ ಆತ್ಮೀಯವಾದ ಸಾಮಾಜಿಕ ಚಟುವಟಿಕೆ. ನಾವಂದುಕೊಂಡ ಹಾಗೆ ಸರಳವಾಗಿ ಕೇವಲ 3 ರ ಪಕ್ಕ 3ನ್ನಿಟ್ಟು, ಅವುಗಳನ್ನು ಕೂಡಿದರೆ 6 ಆಗುತ್ತೆ, ಕಳೆದರೆ “0”, ಗುಣಿಸಿದರೆ “9” ಭಾಗಿಸಿದರೆ “1” ಅನ್ನುವ ಲೆಕ್ಕದಲ್ಲಿ ಗಣಿತವೆಲ್ಲಾ ಇಲ್ಲ! ನಿಸರ್ಗವು ಎಲ್ಲವನ್ನೂ ಸಮದೂಗಿಸಿಕೊಂಡು ತಾನೆ ನಡೆಸಿಕೊಂಡು ಹೋಗುತ್ತಿರುವ ಸೌಂದರ್ಯವನ್ನು ವಿವರಿಸುವ ಸೂತ್ರಗಳಲ್ಲಿ ಗಣಿತವಿದೆ. ಅಲ್ಲದೆ ಆ ಸೌಂದರ್ಯವನ್ನು ತಿಳಿವಿಗೆ ತರಲು ಹುಡುಕಾಡುವ ಭೌತ, ರಸಾಯನಿಕ ಹಾಗೂ ಜೀವವಿಜ್ಞಾನದ ಮಾರ್ಗಗಳ ಭಾಷೆಯೇ ಗಣಿತವಾಗಿದೆ. ಅಗಣಿತ ಅನಂತದ ಆಚೆಗೆಲ್ಲೋ ನಿಂತು ಆನಂದದ ಹುಡುಕಾಟದಲ್ಲಿರುವ ನಮ್ಮನ್ನು ಅಂಕೆ-ಸಂಖ್ಯೆಗಳ ಸಂತರ ಜೊತೆ ಸಮೀಕರಿಸಿ ನೋಡಿಕೊಳ್ಳಲು ಶೂನ್ಯರಾಗುವ ಭಯದಿಂದ ಹೊರಬಂದು ಹುಡುಕಾಟದ ಪ್ರಯತ್ನಗಳನ್ನು
ಮಾಡಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹರಿಯಾಣದ ಮೋಸ್ಟ್ ವಾಂಟೆಡ್ ‘ಗ್ಯಾಂಗ್‌ಸ್ಟರ್’ ಸಾಹಿಲ್ ಚೌಹಾಣ್ ಥೈಲ್ಯಾಂಡ್ ನಿಂದ ಗಡೀಪಾರು; ದೆಹಲಿಯಲ್ಲಿ ವಶಕ್ಕೆ ಪಡೆಯಲಿರುವ ಎಸ್‌ಟಿಎಫ್

ಭಾರತೀಯ ಭದ್ರತಾ ಸಂಸ್ಥೆಗಳಿಗೆ ಒಂದು ಪ್ರಮುಖ ಪ್ರಗತಿಯಲ್ಲಿ, ಮೋಸ್ಟ್ ವಾಂಟೆಡ್ ಗ್ಯಾಂಗ್‌ಸ್ಟರ್ ಸಾಹಿಲ್ ಚೌಹಾಣ್‌ನನ್ನು ಥೈಲ್ಯಾಂಡ್‌ನಿಂದ ಗಡೀಪಾರು ಮಾಡಿದ ನಂತರ ಭಾರತಕ್ಕೆ ಕರೆತರಲಾಗುತ್ತಿದೆ. ಅಧಿಕಾರಿಗಳ ಪ್ರಕಾರ, ಚೌಹಾಣ್ ದೆಹಲಿಯ ಇಂದಿರಾ ಗಾಂಧಿ ಅಂತರಾಷ್ಟ್ರೀಯ...

ಛತ್ತೀಸ್‌ಗಢ: 5 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ: ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ತುಂಬಿ ಬಾವಿ ಬಳಿ ಎಸೆದಿದ್ದ ಆರೋಪಿ ಬಂಧನ

ಛತ್ತೀಸ್‌ಗಢದ ದುರ್ಗ ಜಿಲ್ಲೆಯಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ವ್ಯಕ್ತಿಯೊಬ್ಬ ಅತ್ಯಾಚಾರ ಮಾಡಿ, ನಂತರ ಮಗು ಜೀವಂತ ಇರುವಾಗಲೇ ಗೋಣಿಚೀಲದಲ್ಲಿ ಹಾಕಿ ಬಾವಿಯ ಬಳಿ ಎಸೆದಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಶನಿವಾರ ತಿಳಿಸಿದ್ದಾರೆ. ಉತೈ...

ಉತ್ತರಪ್ರದೇಶ: ಪ್ರೇಮ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಪ್ರತೀಕಾರ: ಮನೆಗೆ ನುಗ್ಗಿ 23ವರ್ಷದ ಯುವತಿ ಮತ್ತು ತಾಯಿಯ ಮೇಲೆ ಆಸಿಡ್ ದಾಳಿ; ಯುವತಿ ಸಾವು

ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯಲ್ಲಿ 23 ವರ್ಷದ ಯುವತಿಯೊಬ್ಬಳು ಪ್ರಾಣ ಕಳೆದುಕೊಂಡು ಆಕೆಯ ತಾಯಿ ಗಂಭೀರವಾಗಿ ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ವ್ಯಕ್ತಿಗಳನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುರುವಾರ ರಾತ್ರಿ...

ಬೆಂಗಳೂರಿನ ಪ್ರವಾಹ ಕಾಮಗಾರಿ ಮೇ 30ರೊಳಗೆ ಪೂರ್ಣಗೊಳಿಸಿ, ಇಲ್ಲದಿದ್ದರೆ ಅಮಾನತು ಎದುರಿಸಿ; ಅಧಿಕಾರಿಗಳಿಗೆ ಎಸಿಎಸ್ ತುಷಾರ್ ಗಿರಿನಾಥ್ ಎಚ್ಚರಿಕೆ

ಬೆಂಗಳೂರು: ಮೇ 30 ರೊಳಗೆ ಬಾಕಿ ಇರುವ ಎಲ್ಲಾ ಕೆಲಸಗಳನ್ನು ಪೂರ್ಣಗೊಳಿಸಿ, ಇಲ್ಲದಿದ್ದರೆ ಅಧಿಕಾರಿಗಳನ್ನು ಅಮಾನತುಗೊಳಿಸುವಂತೆ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಯಲಹಂಕದ ಕೇಂದ್ರೀಯ ವಿಹಾರ, ಟಾಟಾ...

ಮರ್ಯಾದೆಗೇಡು ಹತ್ಯೆ ತಡೆಯುವ ʼಇವ ನಮ್ಮವ ಇವ ನಮ್ಮವʼ ವಿಧೇಯಕಕ್ಕೆ ರಾಜ್ಯಪಾಲರಿಂದ ಸಹಿ

ರಾಜ್ಯ ವಿಧಾನಮಂಡಲ ಅಂಗೀಕರಿಸಿದ ವಿಧೇಯಕಗಳ ಪೈಕಿ, ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ವಿದ್ಯುನ್ಮಾನ ಮತಯಂತ್ರ ಬದಲಿಗೆ ಮತಪತ್ರ ಬಳಕೆ ಕಡ್ಡಾಯಗೊಳಿಸುವ ‘2026ರ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ’ ಹೊರತುಪಡಿಸಿ ಉಳಿದವುಗಳಿಗೆ...

ಶಾತವಾಹನ ವಿವಿ ವಿವಾದ: ಬಲಪಂಥೀಯರಿಂದ ದಲಿತ ಪ್ರಾಧ್ಯಾಪಕಿ ಮತ್ತು ವಿದ್ಯಾರ್ಥಿಗೆ ‘ನಗರ ನಕ್ಸಲರು’ ಎಂಬ ಹಣೆಪಟ್ಟಿಯಲ್ಲಿ ನಿರಂತರ ಕಿರುಕುಳ

ತೆಲಂಗಾಣದ ಶಾತವಾಹನ ವಿಶ್ವವಿದ್ಯಾಲಯದಲ್ಲಿ ದಲಿತ ಮಹಿಳಾ ಪ್ರಾಧ್ಯಾಪಕಿ ಮತ್ತು ದಲಿತ ವಿದ್ಯಾರ್ಥಿನಿಯನ್ನು "ನಗರ ನಕ್ಸಲರು" ಎಂದು ಹಣೆಪಟ್ಟಿ ಕಟ್ಟಿ ನಿರಂತರ ಕಿರುಕುಳ ನೀಡಿದ ನಂತರ ವಿವಾದ ಭುಗಿಲೆದ್ದಿದ್ದು, ಇದಕ್ಕೆ ಶಿಕ್ಷಣ ತಜ್ಞರು ಮತ್ತು...

ಕೇಂದ್ರದ ಹೊಸ ಕಾಯ್ದೆಯಿಂದ ಸಂಕಷ್ಟ : ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳಿಗೆ ಹಾರ್ಮೋನ್ ಚಿಕಿತ್ಸೆ ಮುಂದುವರಿಸಲು ಕೇರಳ ಹೈಕೋರ್ಟ್ ಅನುಮತಿ

ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026 ಅಂಗೀಕಾರಗೊಂಡ ನಂತರ ಆಸ್ಪತ್ರೆಗಳು ತಮ್ಮ ಚಿಕಿತ್ಸೆಯನ್ನು ಸ್ಥಗಿತಗೊಳಿಸಿವೆ ಎಂದು ಆರೋಪಿಸಿದ್ದ ಇಬ್ಬರು ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ ಹಾರ್ಮೋನ್ ಬದಲಿ ಚಿಕಿತ್ಸೆಯನ್ನು ಮುಂದುವರಿಸಲು ಕೇರಳ ಹೈಕೋರ್ಟ್...

ಮಾದಕವಸ್ತು ತನಿಖೆಗೆ ಸಹಾಯಕವಾಗಿ AI ಆಧಾರಿತ ಅಪ್ಲಿಕೇಶನ್ ಆರಂಭಿಸಿದ ಗುಜರಾತ್ ಪೊಲೀಸರು

ಅಹಮದಾಬಾದ್: ಮಾದಕವಸ್ತು ಪ್ರಕರಣಗಳ ತನಿಖೆಯನ್ನು ಸುಲಭವಾಗಿಸಲು ಮತ್ತು ವಿಚಾರಣೆಯ ಸಮಯದಲ್ಲಿ ಅವುಗಳನ್ನು ಬಲಪಡಿಸಲು, ಇದರಿಂದಾಗಿ ಶಿಕ್ಷೆಯ ಪ್ರಮಾಣ ಸುಧಾರಿಸಲು ಗುಜರಾತ್ ಪೊಲೀಸರು ಶುಕ್ರವಾರ ಕೃತಕ ಬುದ್ಧಿಮತ್ತೆ (AI) ಆಧಾರಿತ ಅಪ್ಲಿಕೇಶನ್ "NARIT AI"...

ಇಸ್ಲಾಮಾಬಾದ್‌ ಶಾಂತಿ ಮಾತುಕತೆ | ಅಮೆರಿಕ–ಇಸ್ರೇಲ್ ಹತ್ಯೆಗೈದ ಮಕ್ಕಳ ರಕ್ತಸಿಕ್ತ ಬ್ಯಾಗ್‌, ಶೂ ಹೊತ್ತು ತಂದ ಇರಾನ್

ಶಾಂತಿ ಮಾತುಕತೆಯಲ್ಲಿ ಭಾಗವಹಿಸಲು ಪಾಕಿಸ್ತಾನದ ಇಸ್ಲಾಮಾಬಾದ್‌ಗೆ ಆಗಮಿಸುವಾಗ, ಅಮೆರಿಕ-ಇಸ್ರೇಲ್‌ನ ಬಾಂಬ್‌ ದಾಳಿ ನಡೆಸಿ ಹತ್ಯೆಗೈದ ಮಕ್ಕಳ ಫೋಟೋ, ರಕ್ತಸಿಕ್ತ ಬ್ಯಾಗ್ ಮತ್ತು ಶೂಗಳನ್ನು ವಿಮಾನದಲ್ಲಿ ಹೊತ್ತು ತರುವ ಮೂಲಕ ಇರಾನ್‌ ಜಗತ್ತಿನ ಗಮನಸೆಳೆದಿದೆ. ಸಾಮಾಜಿಕ ಜಾಲತಾಣ...

ಮಣಿಪುರ: ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳೊಂದಿಗೆ ಇಬ್ಬರನ್ನು ಬಂಧಿಸಿದ ಭದ್ರತಾ ಪಡೆ

ಇಂಫಾಲ: ಮಣಿಪುರದ ಚುರಚಂದಪುರ ಜಿಲ್ಲೆಯಲ್ಲಿ ಇಬ್ಬರು ವ್ಯಕ್ತಿಗಳಿಂದ ಶಸ್ತ್ರಾಸ್ತ್ರಗಳು ಮತ್ತು ಗಸಗಸೆ ಬೀಜಗಳ ಚೀಲಗಳನ್ನು(ಪಾಪಿ ಸೀಡ್ಸ್) ವಶಪಡಿಸಿಕೊಂಡ ನಂತರ ಭದ್ರತಾ ಪಡೆಗಳು ಅವರನ್ನು ಬಂಧಿಸಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಶುಕ್ರವಾರ ಚುರಾಚಂದ್‌ಪುರ ಪೊಲೀಸ್ ಠಾಣೆ...