Homeಸಿನಿಮಾಕ್ರೀಡೆಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ...

ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

- Advertisement -
- Advertisement -

ಪ್ರೊ.ಕಬಡ್ಡಿ: ಐದು ವರ್ಷಗಳ ಹಿಂದೆ ಆರಂಭವಾದ ಈ ಲೀಗ್ ಕಬಡ್ಡಿಯ ಕಂಪನ್ನು ವಿಶ್ವದಾದ್ಯಂತ ಪಸರಿಸಿದೆ. ಅಳಿವಿನ ಅಂಚಿನತ್ತ ಸಾಗಿದ್ದ ಗ್ರಾಮೀಣ ಕ್ರೀಡೆಗೆ ಹೊಸ ಮೆರಗು ನೀಡಿದೆ.

ಹಳ್ಳಿಜನರ ಜೀವನಾಡಿಯಾಗಿದ್ದ ಈ ಆಟ ಈಗ ಮಹಾನಗರಗಳಿಗೂ ವ್ಯಾಪಿಸಿದೆ. ಸಂಜೆಯಾಯಿತೆಂದರೆ ಪಟ್ಟಣದ ರಸ್ತೆಗಳಲ್ಲಿ ಮಕ್ಕಳು ಕ್ರಿಕೆಟ್ ಬದಲು ಕಬಡ್ಡಿ ಆಡುವುದು ಸಾಮಾನ್ಯವಾಗಿದೆ.

ಕೆಳ ಮತ್ತು ಮಧ್ಯಮ ವರ್ಗದವರ ಮೆಚ್ಚಿನ ಆಟ ಕಬಡ್ಡಿ. ಇದು ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆಯೂ ಹೌದು. ಅಲ್ಲಿ ಈ ಆಟವನ್ನು ಹಾ-ಡು-ಡು ಎಂದು ಕರೆಯುತ್ತಾರೆ. ನಮ್ಮ ಪೂರ್ವಿಕರ ಕಾಲದಲ್ಲಿ ಮಣ್ಣಿನ ಅಂಕಣದಲ್ಲಿ ಈ ಆಟ ಆಡಲಾಗುತ್ತಿತ್ತು. ಹೀಗಾಗಿ ಮೇಲ್ವರ್ಗದವರಿಗೆ ಈ ಆಟ ಅಷ್ಟಾಗಿ ರುಚಿಸುತ್ತಿರಲಿಲ್ಲ. ಆದರೆ ಈಗ ಎಲ್ಲವೂ ಬದಲಾಗಿದೆ. ಕಬಡ್ಡಿ ಎಂದರೆ ಮೂಗು ಮುರಿಯುತ್ತಿದ್ದ ಮೇಲ್ವರ್ಗದ ಮಂದಿ ಈ ಕ್ರೀಡೆಯನ್ನು ವೃತ್ತಿಪರವಾಗಿ ಸ್ವೀಕರಿಸಿ ಇದರಲ್ಲಿ ಬದುಕು ಕಟ್ಟಿಕೊಳ್ಳಲು ಮುಂದಾಗುತ್ತಿದ್ದಾರೆ. ಇಂತಹದೊಂದು ಮಹತ್ತರ ಬದಲಾವಣೆಗೆ ಕಾರಣವಾಗಿರುವುದು ಪ್ರೊ.ಕಬಡ್ಡಿ.

ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಸೃಷ್ಟಿಸಿದ ಸಂಚಲನ ಅಷ್ಟಿಷ್ಟಲ್ಲ. ಈ ಲೀಗ್ ಆರಂಭವಾದ ಬಳಿಕ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಬೊಕ್ಕಸಕ್ಕೆ ಹಣವು ಹೊಳೆಯಾಗಿ ಹರಿದು ಬಂದಿತ್ತು. ಬಿಸಿಸಿಐ, ವಿಶ್ವ ಕ್ರಿಕೆಟ್‍ನ ದೊಡ್ಡಣ್ಣನಾಗಿ ಮೆರೆಯುವಲ್ಲಿ ‘ಮಿಲಿಯನ್ ಡಾಲರ್ ಬೇಬಿ’ ಐಪಿಎಲ್‍ನ ಕೊಡುಗೆ ಮಹತ್ವದ್ದಾಗಿತ್ತು. ಈ ಲೀಗ್‍ನ ಯಶಸ್ಸಿನಿಂದ ಪ್ರೇರಣೆ ಪಡೆದು ಶುರುವಾಗಿದ್ದೇ ಪ್ರೊ.ಕಬಡ್ಡಿ ಲೀಗ್ (ಪಿಕೆಎಲ್).

ಸ್ಟಾರ್ ಇಂಡಿಯಾ ಹಾಗೂ ಮಷಾಲ್ ಸ್ಪೋರ್ಟ್ಸ್ ಸಂಸ್ಥೆಗಳ ಕನಸಿನ ಕೂಸಾಗಿರುವ ಪಿಕೆಎಲ್ ಆರಂಭವಾಗಿದ್ದು 2014ರಲ್ಲಿ. ಅದಾಗಲೇ ಭಾರತದಲ್ಲಿ ಲೀಗ್‍ಗಳ ಪರ್ವ ಶುರುವಾಗಿತ್ತು. ಹಲವು ಲೀಗ್‍ಗಳು ನೆಲ ಕಚ್ಚಿದ್ದವು. ಹೀಗಾಗಿ ಪಿಕೆಎಲ್ ಯಶಸ್ವಿಯಾಗುವ ನಂಬಿಕೆ ಯಾರಿಗೂ ಇರಲಿಲ್ಲ. ಆದರೆ ಈ ಲೀಗ್ ಚೊಚ್ಚಲ ಆವೃತ್ತಿಯಲ್ಲೇ ಮೋಡಿ ಮಾಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿತ್ತು. ದಾಖಲೆಯ 43.5 ಕೋಟಿ ಮಂದಿ ಟಿ.ವಿ.ಯಲ್ಲಿ ಪಂದ್ಯಗಳನ್ನು ವೀಕ್ಷಿಸಿದ್ದರು. ಪಂದ್ಯಗಳು ನಡೆಯುವ ದಿನ ಕ್ರೀಡಾಂಗಣಗಳೂ ಪ್ರೇಕ್ಷಕರಿಂದ ತುಂಬಿಹೋಗಿದ್ದವು. ಎರಡನೇ ಆವೃತ್ತಿ ಕೂಡ ಯಶಸ್ವಿಯಾಯಿತು.

ಪ್ರೇಕ್ಷಕರ ನಾಡಿಮಿಡಿತ ಅರಿತ ಮಷಾಲ್ ಸ್ಪೋರ್ಟ್ಸ್ 2016ರಲ್ಲಿ ದೊಡ್ಡ ಸಾಹಸಕ್ಕೆ ಕೈಹಾಕಿತು. ಒಂದೇ ವರ್ಷದಲ್ಲಿ ಎರಡು ಬಾರಿ ಲೀಗ್ ನಡೆಸುವ ನಿರ್ಧಾರ ಕೈಗೊಂಡಿತು. ಜನವರಿ-ಫೆಬ್ರವರಿ ಹಾಗೂ ಜೂನ್-ಜುಲೈನಲ್ಲಿ ಲೀಗ್ ಆಯೋಜನೆಯಾಗಿತ್ತು. ಇವುಗಳಿಗೂ ಅಪಾರ ಜನಮನ್ನಣೆ ಲಭಿಸಿತು.

ಬಣ್ಣಬಣ್ಣದ ಬೆಳಕಿನಲ್ಲಿ, ಅತ್ಯಾಧುನಿಕ ಟರ್ಫ್ ಅಂಗಳದಲ್ಲಿ ನಡೆದ ಪಂದ್ಯಗಳು ಅಭಿಮಾನಿಗಳನ್ನು ಆಕರ್ಷಿಸಿದವು. ರೋಚಕ ತಿರುವುಗಳೊಂದಿಗೆ ಸಾಗುತ್ತಿದ್ದ 40 ನಿಮಿಷಗಳ ಆಟ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಅನೂಪ್ ಕುಮಾರ್, ರಾಕೇಶ್‍ಕುಮಾರ್, ಮಂಜೀತ್ ಚಿಲ್ಲರ್, ಅಜಯ್‍ಠಾಕೂರ್, ರಿಷಾಂಕ್ ದೇವಾಡಿಗ, ಪ್ರದೀಪ್ ನರ್ವಾಲ್, ದೀಪಕ್ ನಿವಾಸ್ ಹೂಡಾ ಅವರ ಮಿಂಚಿನ ರೈಡ್‍ಗಳು, ಆಕರ್ಷಕ ಕಿಕ್ ಮತ್ತು `ಡುಬ್ಕಿ’ಗಳಿಗೆ ಪ್ರೇಕ್ಷಕರು `ಫಿದಾ’ ಆದರು. ಪ್ರಮುಖ ಡಿಫೆಂಡರ್‍ಗಳ ‘ಸೂಪರ್ ಟ್ಯಾಕಲ್’ಗಳು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದ್ದವು.

ಇದರ ಫಲವಾಗಿ ಭಾರತದಲ್ಲಿ ಐಪಿಎಲ್ ನಂತರ ಅತೀ ಹೆಚ್ಚು ಮಂದಿ ಟಿ.ವಿ.ಯಲ್ಲಿ ವೀಕ್ಷಿಸಿದ ಲೀಗ್ ಎಂಬ ಹಿರಿಮೆಗೆ ಪಿಕೆಎಲ್ ಭಾಜನವಾಯಿತು. 2016ರಿಂದ 2017ರ ಅವಧಿಯಲ್ಲಿ ಟಿ.ವಿ.ಯಲ್ಲಿ ಪ್ರೊ.ಕಬಡ್ಡಿ ವೀಕ್ಷಿಸಿದವರ ಸಂಖ್ಯೆ ಬರೋಬ್ಬರಿ 10 ಕೋಟಿ ಹೆಚ್ಚಳವಾಯಿತು. ಹೀಗಾಗಿ ಕಾಂಚಾಣವೂ ಕುಣಿಯಲಾರಂಭಿಸಿತು. ನಾಲ್ಕನೇ ಆವೃತ್ತಿಯಲ್ಲಿ ಜಾಹೀರಾತು ಮೂಲಗಳಿಂದ ಆಯೋಜಕರ ಖಜಾನೆಗೆ 70 ಕೋಟಿ ರೂಪಾಯಿ ಸಂದಾಯವಾಗಿತ್ತು. ಐದನೇ ಆವೃತ್ತಿ ವೇಳೆಗೆ ಈ ಮೊತ್ತ 150 ಕೋಟಿ ತಲುಪಿತು.

ಈ ನಡುವೆ ವಿವೊ ಮೊಬೈಲ್ ಸಂಸ್ಥೆ 300 ಕೋಟಿ ಮೊತ್ತಕ್ಕೆ ಪಿಕೆಎಲ್‍ನ ಪ್ರಾಯೋಜಕತ್ವದ ಹಕ್ಕು (ಐದು ವರ್ಷಗಳ ಅವಧಿಗೆ) ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಸಹಾಯಕ ಪ್ರಾಯೋಜಕತ್ವ ಹೊಂದಿದ್ದ ನಾಲ್ಕು ಕಂಪನಿಗಳಿಂದ ವಾರ್ಷಿಕ ತಲಾ 10 ಕೋಟಿ ಹಣವೂ ಪಿಕೆಎಲ್ ಬೊಕ್ಕಸಕ್ಕೆ ಸೇರಿತು. ಐಪಿಎಲ್ ನಂತರ ಅತಿಹೆಚ್ಚು ಪ್ರಾಯೋಜಕತ್ವ ಪಡೆದ ಲೀಗ್ ಎಂಬ ಶ್ರೇಯವೂ ಪ್ರೊ.ಕಬಡ್ಡಿಗೆ ಸಂದಿತು.

ಲೀಗ್‍ನ ಮೆರಗು ಹೆಚ್ಚಿಸುವ ಮತ್ತು ಇದರ ಬೇರುಗಳನ್ನು ಇನ್ನಷ್ಟು ಆಳಕ್ಕೆ ಇಳಿಸುವ ಉದ್ದೇಶದಿಂದ ಆಯೋಜಕರು 2017ರಲ್ಲಿ ಒಟ್ಟು ತಂಡಗಳ ಸಂಖ್ಯೆಯನ್ನು 12ಕ್ಕೆ ಹೆಚ್ಚಿಸಿದರು. ಜೊತೆಗೆ ಹೊಸದಾಗಿ ಆಟಗಾರರ ಹರಾಜನ್ನೂ ನಡೆಸಿದರು. ದೇಶ ವಿದೇಶದ 400 ಮಂದಿಗೆ ಹರಾಜು ಪಟ್ಟಿಯಲ್ಲಿ ಸ್ಥಾನ ಲಭಿಸಿತ್ತು. ಇವರನ್ನು ಖರೀದಿಸಲು 12 ಫ್ರಾಂಚೈಸ್‍ಗಳು ಒಟ್ಟು 46.99 ಕೋಟಿ ಹಣ ವಿನಿಯೋಗಿಸಿದವು. ಇದು ಲೀಗ್‍ನ ‘ಶ್ರೀಮಂತಿಕೆ’ಯನ್ನು ಸಾರಿ ಹೇಳಿತ್ತು.

ಕೋಟಿ ಕುಳಗಳಾದ ಆಟಗಾರರು
ಲೀಗ್ ಶುರುವಾದ ಬಳಿಕ ಆಟಗಾರರ ಬದುಕು ಬದಲಾಯಿತು. ಕೋಚ್‍ಗಳು, ರೆಫರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೂ `ಬೆಲೆ’ ಸಿಕ್ಕಿತು. ಆಟಗಾರರು ಕುಬೇರರಾಗಿದ್ದಾರೆ. ಕ್ರಿಕೆಟಿಗರಂತೆ ಅವರಿಗೂ ತಾರಾ ವರ್ಚಸ್ಸು ಸಿಕ್ಕಿದೆ. ಹೋದಲ್ಲೆಲ್ಲಾ ಅವರನ್ನು ಜನ ಗುರ್ತಿಸುತ್ತಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು, ಆಟೋಗ್ರಾಫ್ ಪಡೆಯಲು ಮುಗಿಬೀಳುತ್ತಾರೆ.

ಹರಾಜಿನಲ್ಲಿ ಅವರಿಗೆ ಕೋಟಿ ಕೋಟಿ ಕಾಂಚಾಣ ಲಭಿಸುತ್ತಿದೆ. ಆರನೇ ಆವೃತ್ತಿಯ ಹರಾಜಿನಲ್ಲಿ ಹರಿಯಾಣದ ಮೋನು ಗೋಯತ್ ಅವರನ್ನು ಹರಿಯಾಣ ಸ್ಟೀಲರ್ಸ್ ಫ್ರಾಂಚೈಸ್ 1 ಕೋಟಿ 51 ಲಕ್ಷ ನೀಡಿ ಖರೀದಿಸಿದ್ದು ಇದಕ್ಕೊಂದು ನಿದರ್ಶನ. ರಾಹುಲ್ ಚೌಧರಿ (1.29 ಕೋಟಿ), ದೀಪಕ್ ನಿವಾಸ್ ಹೂಡಾ (1.15 ಕೋಟಿ), ರಿಷಾಂಕ್ ದೇವಾಡಿಗ (1.11 ಕೋಟಿ) ಅವರೂ ಉತ್ತಮ `ಮೌಲ್ಯ’ ಪಡೆದಿದ್ದರು. ಏಳನೇ ಆವೃತ್ತಿಯಲ್ಲಿ 1.45 ಕೋಟಿಗೆ ತೆಲುಗು ಟೈಟನ್ಸ್ ಪಾಲಾಗಿದ್ದ ಮಹಾರಾಷ್ಟ್ರದ ರೈಡರ್ ಸಿದ್ದಾರ್ಥ್ ದೇಸಾಯಿ ಕೂಡ ‘ಕುಬೇರರ ಕ್ಲಬ್’ ಸೇರಿದ್ದು ವಿಶೇಷ.

ಸಿದ್ದಾರ್ಥ್ ದೇಸಾಯಿ

ತಾರಾ ವರ್ಚಸ್ಸು
ಪ್ರೊ.ಕಬಡ್ಡಿ ಜನಸಾಮಾನ್ಯರನ್ನಷ್ಟೇ ಅಲ್ಲ, ಜನಪ್ರಿಯ ತಾರೆಯರನ್ನೂ ಆಕರ್ಷಿಸಿದೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್, ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದ ಒಡೆಯರಾಗಿದ್ದಾರೆ. ಭಾರತದ ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್, ತಮಿಳ್ ತಲೈವಾಸ್ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ.

ಸ್ಯಾಂಡಲ್‍ವುಡ್ ನಟರಾದ ಪುನೀತ್ ರಾಜ್‍ಕುಮಾರ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಗಳೂರು ಬುಲ್ಸ್ ತಂಡದ ರಾಯಭಾರಿಗಳಾಗಿದ್ದಾರೆ. ಇತರ ತಂಡಗಳೂ ಜನಪ್ರಿಯ ನಟ-ನಟಿಯರನ್ನು ಪ್ರಚಾರ ರಾಯಭಾರಿಗಳನ್ನಾಗಿ ನೇಮಿಸಿಕೊಂಡಿವೆ. ಹೀಗಾಗಿ ಲೀಗ್ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಎಂಟು ಭಾಷೆಗಳಲ್ಲಿ ನೇರ ಪ್ರಸಾರ
ಲೀಗ್‍ನ ಮಾಧ್ಯಮ ಹಕ್ಕು ಹೊಂದಿರುವ ಸ್ಟಾರ್ ಇಂಡಿಯಾ, ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ, ಕನ್ನಡ ತಮಿಳು ಹಾಗೂ ತೆಲುಗು ಸೇರಿದಂತೆ ಒಟ್ಟು ಆರು ಪ್ರಾದೇಶಿಕ ಭಾಷೆಗಳಲ್ಲಿ ಪಂದ್ಯಗಳ ನೇರ ಪ್ರಸಾರ ಮಾಡುತ್ತಿದೆ. ಆಯಾ ಭಾಷೆಯಲ್ಲೇ ವೀಕ್ಷಕ ವಿವರಣೆ ನೀಡುವ ಪದ್ಧತಿಗೂ ನಾಂದಿ ಹಾಡಿದೆ. ಜೊತೆಗೆ ಆನ್‍ಲೈನ್‍ನಲ್ಲೂ ಪಂದ್ಯಗಳ ನೇರ ಪ್ರಸಾರ ಮಾಡಿ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಿದೆ.

ಕನ್ನಡಿಗರ ಕಮಾಲ್
ಲೀಗ್‍ನಲ್ಲಿ ಕರ್ನಾಟಕದ ಆಟಗಾರರೂ ಕಮಾಲ್ ಮಾಡುತ್ತಿದ್ದಾರೆ. ರಿಷಾಂಕ್ ದೇವಾಡಿಗ, ಕೆ.ಪ್ರಪಂಜನ್, ಸುಕೇಶ್ ಹೆಗ್ಡೆ, ಪ್ರಶಾಂತ್ ಕುಮಾರ್ ರೈ ಅವರು `ಸ್ಟಾರ್’ ರೈಡರ್‍ಗಳೆಂದು ಖ್ಯಾತಿ ಹೊಂದಿದ್ದಾರೆ. ಜೀವಕುಮಾರ್, ಶಬೀರ್ ಬಾಪು, ಜೆ.ದರ್ಶನ್, ಜವಾಹರ ವಿವೇಕ್ ಮತ್ತು ಹರೀಶ್ ನಾಯಕ್ ಅವರೂ ಛಾಪು ಒತ್ತಿದ್ದಾರೆ. ಈ ಸಲದ ಲೀಗ್‍ನಲ್ಲಿ ರಾಜ್ಯದ 11 ಮಂದಿ ವಿವಿಧ ತಂಡಗಳಲ್ಲಿ ಆಡುತ್ತಿದ್ದಾರೆ.

ರಿಷಾಂಕ್ ದೇವಾಡಿಗ

ಕನ್ನಡಿಗ ಬಿ.ಸಿ.ರಮೇಶ್, ಬೆಂಗಾಲ್ ವಾರಿಯರ್ಸ್ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಹೋದವರ್ಷ ಬೆಂಗಳೂರು ಬುಲ್ಸ್ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವಲ್ಲಿ ರಮೇಶ್ ಪಾತ್ರ ನಿರ್ಣಾಯಕ ಎನಿಸಿತ್ತು. ಜಗದೀಶ್ ಕುಂಬ್ಳೆ ತಂಡವೊಂದರ ಸಹಾಯಕ ಕೋಚ್ ಆಗಿದ್ದಾರೆ. ರಾಜ್ಯದ ಹಲವರು ಲೀಗ್‍ನಲ್ಲಿ ರೆಫರಿಗಳಾಗಿಯೂ ಕಾರ್ಯನಿರ್ಹಿಸುತ್ತಿದ್ದಾರೆ. ಈ ಖುಷಿಯ ನಡುವೆ ಬೆಂಗಳೂರಿನ ತಂಡದಲ್ಲಿ ಕನ್ನಡಿಗರಿಲ್ಲವಲ್ಲ ಎಂಬ ಕೊರಗು ಅಭಿಮಾನಿಗಳನ್ನು ಕಾಡುತ್ತಿದೆ. ಹೀಗಿದ್ದರೂ ಉದ್ಯಾನನಗರಿಯ ಜನ, ಬುಲ್ಸ್ ಬೆನ್ನಿಗೆ ನಿಲ್ಲುವುದನ್ನು ಮರೆತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...