Homeಸಿನಿಮಾಕ್ರೀಡೆಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ...

ಈಗ ಎಲ್ಲೆಲ್ಲೂ ಕಬಡ್ಡಿ.. ಕಬಡ್ಡಿ…

- Advertisement -
- Advertisement -

ಪ್ರೊ.ಕಬಡ್ಡಿ: ಐದು ವರ್ಷಗಳ ಹಿಂದೆ ಆರಂಭವಾದ ಈ ಲೀಗ್ ಕಬಡ್ಡಿಯ ಕಂಪನ್ನು ವಿಶ್ವದಾದ್ಯಂತ ಪಸರಿಸಿದೆ. ಅಳಿವಿನ ಅಂಚಿನತ್ತ ಸಾಗಿದ್ದ ಗ್ರಾಮೀಣ ಕ್ರೀಡೆಗೆ ಹೊಸ ಮೆರಗು ನೀಡಿದೆ.

ಹಳ್ಳಿಜನರ ಜೀವನಾಡಿಯಾಗಿದ್ದ ಈ ಆಟ ಈಗ ಮಹಾನಗರಗಳಿಗೂ ವ್ಯಾಪಿಸಿದೆ. ಸಂಜೆಯಾಯಿತೆಂದರೆ ಪಟ್ಟಣದ ರಸ್ತೆಗಳಲ್ಲಿ ಮಕ್ಕಳು ಕ್ರಿಕೆಟ್ ಬದಲು ಕಬಡ್ಡಿ ಆಡುವುದು ಸಾಮಾನ್ಯವಾಗಿದೆ.

ಕೆಳ ಮತ್ತು ಮಧ್ಯಮ ವರ್ಗದವರ ಮೆಚ್ಚಿನ ಆಟ ಕಬಡ್ಡಿ. ಇದು ಬಾಂಗ್ಲಾದೇಶದ ರಾಷ್ಟ್ರೀಯ ಕ್ರೀಡೆಯೂ ಹೌದು. ಅಲ್ಲಿ ಈ ಆಟವನ್ನು ಹಾ-ಡು-ಡು ಎಂದು ಕರೆಯುತ್ತಾರೆ. ನಮ್ಮ ಪೂರ್ವಿಕರ ಕಾಲದಲ್ಲಿ ಮಣ್ಣಿನ ಅಂಕಣದಲ್ಲಿ ಈ ಆಟ ಆಡಲಾಗುತ್ತಿತ್ತು. ಹೀಗಾಗಿ ಮೇಲ್ವರ್ಗದವರಿಗೆ ಈ ಆಟ ಅಷ್ಟಾಗಿ ರುಚಿಸುತ್ತಿರಲಿಲ್ಲ. ಆದರೆ ಈಗ ಎಲ್ಲವೂ ಬದಲಾಗಿದೆ. ಕಬಡ್ಡಿ ಎಂದರೆ ಮೂಗು ಮುರಿಯುತ್ತಿದ್ದ ಮೇಲ್ವರ್ಗದ ಮಂದಿ ಈ ಕ್ರೀಡೆಯನ್ನು ವೃತ್ತಿಪರವಾಗಿ ಸ್ವೀಕರಿಸಿ ಇದರಲ್ಲಿ ಬದುಕು ಕಟ್ಟಿಕೊಳ್ಳಲು ಮುಂದಾಗುತ್ತಿದ್ದಾರೆ. ಇಂತಹದೊಂದು ಮಹತ್ತರ ಬದಲಾವಣೆಗೆ ಕಾರಣವಾಗಿರುವುದು ಪ್ರೊ.ಕಬಡ್ಡಿ.

ಭಾರತದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕ್ರಿಕೆಟ್ ಟೂರ್ನಿ ಸೃಷ್ಟಿಸಿದ ಸಂಚಲನ ಅಷ್ಟಿಷ್ಟಲ್ಲ. ಈ ಲೀಗ್ ಆರಂಭವಾದ ಬಳಿಕ ಭಾರತ ಕ್ರಿಕೆಟ್ ನಿಯಂತ್ರಣ ಮಂಡಳಿಯ (ಬಿಸಿಸಿಐ) ಬೊಕ್ಕಸಕ್ಕೆ ಹಣವು ಹೊಳೆಯಾಗಿ ಹರಿದು ಬಂದಿತ್ತು. ಬಿಸಿಸಿಐ, ವಿಶ್ವ ಕ್ರಿಕೆಟ್‍ನ ದೊಡ್ಡಣ್ಣನಾಗಿ ಮೆರೆಯುವಲ್ಲಿ ‘ಮಿಲಿಯನ್ ಡಾಲರ್ ಬೇಬಿ’ ಐಪಿಎಲ್‍ನ ಕೊಡುಗೆ ಮಹತ್ವದ್ದಾಗಿತ್ತು. ಈ ಲೀಗ್‍ನ ಯಶಸ್ಸಿನಿಂದ ಪ್ರೇರಣೆ ಪಡೆದು ಶುರುವಾಗಿದ್ದೇ ಪ್ರೊ.ಕಬಡ್ಡಿ ಲೀಗ್ (ಪಿಕೆಎಲ್).

ಸ್ಟಾರ್ ಇಂಡಿಯಾ ಹಾಗೂ ಮಷಾಲ್ ಸ್ಪೋರ್ಟ್ಸ್ ಸಂಸ್ಥೆಗಳ ಕನಸಿನ ಕೂಸಾಗಿರುವ ಪಿಕೆಎಲ್ ಆರಂಭವಾಗಿದ್ದು 2014ರಲ್ಲಿ. ಅದಾಗಲೇ ಭಾರತದಲ್ಲಿ ಲೀಗ್‍ಗಳ ಪರ್ವ ಶುರುವಾಗಿತ್ತು. ಹಲವು ಲೀಗ್‍ಗಳು ನೆಲ ಕಚ್ಚಿದ್ದವು. ಹೀಗಾಗಿ ಪಿಕೆಎಲ್ ಯಶಸ್ವಿಯಾಗುವ ನಂಬಿಕೆ ಯಾರಿಗೂ ಇರಲಿಲ್ಲ. ಆದರೆ ಈ ಲೀಗ್ ಚೊಚ್ಚಲ ಆವೃತ್ತಿಯಲ್ಲೇ ಮೋಡಿ ಮಾಡಿ ಹೊಸ ಮನ್ವಂತರಕ್ಕೆ ನಾಂದಿ ಹಾಡಿತ್ತು. ದಾಖಲೆಯ 43.5 ಕೋಟಿ ಮಂದಿ ಟಿ.ವಿ.ಯಲ್ಲಿ ಪಂದ್ಯಗಳನ್ನು ವೀಕ್ಷಿಸಿದ್ದರು. ಪಂದ್ಯಗಳು ನಡೆಯುವ ದಿನ ಕ್ರೀಡಾಂಗಣಗಳೂ ಪ್ರೇಕ್ಷಕರಿಂದ ತುಂಬಿಹೋಗಿದ್ದವು. ಎರಡನೇ ಆವೃತ್ತಿ ಕೂಡ ಯಶಸ್ವಿಯಾಯಿತು.

ಪ್ರೇಕ್ಷಕರ ನಾಡಿಮಿಡಿತ ಅರಿತ ಮಷಾಲ್ ಸ್ಪೋರ್ಟ್ಸ್ 2016ರಲ್ಲಿ ದೊಡ್ಡ ಸಾಹಸಕ್ಕೆ ಕೈಹಾಕಿತು. ಒಂದೇ ವರ್ಷದಲ್ಲಿ ಎರಡು ಬಾರಿ ಲೀಗ್ ನಡೆಸುವ ನಿರ್ಧಾರ ಕೈಗೊಂಡಿತು. ಜನವರಿ-ಫೆಬ್ರವರಿ ಹಾಗೂ ಜೂನ್-ಜುಲೈನಲ್ಲಿ ಲೀಗ್ ಆಯೋಜನೆಯಾಗಿತ್ತು. ಇವುಗಳಿಗೂ ಅಪಾರ ಜನಮನ್ನಣೆ ಲಭಿಸಿತು.

ಬಣ್ಣಬಣ್ಣದ ಬೆಳಕಿನಲ್ಲಿ, ಅತ್ಯಾಧುನಿಕ ಟರ್ಫ್ ಅಂಗಳದಲ್ಲಿ ನಡೆದ ಪಂದ್ಯಗಳು ಅಭಿಮಾನಿಗಳನ್ನು ಆಕರ್ಷಿಸಿದವು. ರೋಚಕ ತಿರುವುಗಳೊಂದಿಗೆ ಸಾಗುತ್ತಿದ್ದ 40 ನಿಮಿಷಗಳ ಆಟ ಅಭಿಮಾನಿಗಳನ್ನು ಹುಚ್ಚೆದ್ದು ಕುಣಿಯುವಂತೆ ಮಾಡಿತ್ತು. ಅನೂಪ್ ಕುಮಾರ್, ರಾಕೇಶ್‍ಕುಮಾರ್, ಮಂಜೀತ್ ಚಿಲ್ಲರ್, ಅಜಯ್‍ಠಾಕೂರ್, ರಿಷಾಂಕ್ ದೇವಾಡಿಗ, ಪ್ರದೀಪ್ ನರ್ವಾಲ್, ದೀಪಕ್ ನಿವಾಸ್ ಹೂಡಾ ಅವರ ಮಿಂಚಿನ ರೈಡ್‍ಗಳು, ಆಕರ್ಷಕ ಕಿಕ್ ಮತ್ತು `ಡುಬ್ಕಿ’ಗಳಿಗೆ ಪ್ರೇಕ್ಷಕರು `ಫಿದಾ’ ಆದರು. ಪ್ರಮುಖ ಡಿಫೆಂಡರ್‍ಗಳ ‘ಸೂಪರ್ ಟ್ಯಾಕಲ್’ಗಳು ಅಭಿಮಾನಿಗಳನ್ನು ಪುಳಕಿತರನ್ನಾಗಿಸಿದ್ದವು.

ಇದರ ಫಲವಾಗಿ ಭಾರತದಲ್ಲಿ ಐಪಿಎಲ್ ನಂತರ ಅತೀ ಹೆಚ್ಚು ಮಂದಿ ಟಿ.ವಿ.ಯಲ್ಲಿ ವೀಕ್ಷಿಸಿದ ಲೀಗ್ ಎಂಬ ಹಿರಿಮೆಗೆ ಪಿಕೆಎಲ್ ಭಾಜನವಾಯಿತು. 2016ರಿಂದ 2017ರ ಅವಧಿಯಲ್ಲಿ ಟಿ.ವಿ.ಯಲ್ಲಿ ಪ್ರೊ.ಕಬಡ್ಡಿ ವೀಕ್ಷಿಸಿದವರ ಸಂಖ್ಯೆ ಬರೋಬ್ಬರಿ 10 ಕೋಟಿ ಹೆಚ್ಚಳವಾಯಿತು. ಹೀಗಾಗಿ ಕಾಂಚಾಣವೂ ಕುಣಿಯಲಾರಂಭಿಸಿತು. ನಾಲ್ಕನೇ ಆವೃತ್ತಿಯಲ್ಲಿ ಜಾಹೀರಾತು ಮೂಲಗಳಿಂದ ಆಯೋಜಕರ ಖಜಾನೆಗೆ 70 ಕೋಟಿ ರೂಪಾಯಿ ಸಂದಾಯವಾಗಿತ್ತು. ಐದನೇ ಆವೃತ್ತಿ ವೇಳೆಗೆ ಈ ಮೊತ್ತ 150 ಕೋಟಿ ತಲುಪಿತು.

ಈ ನಡುವೆ ವಿವೊ ಮೊಬೈಲ್ ಸಂಸ್ಥೆ 300 ಕೋಟಿ ಮೊತ್ತಕ್ಕೆ ಪಿಕೆಎಲ್‍ನ ಪ್ರಾಯೋಜಕತ್ವದ ಹಕ್ಕು (ಐದು ವರ್ಷಗಳ ಅವಧಿಗೆ) ಖರೀದಿಸಿ ಎಲ್ಲರ ಹುಬ್ಬೇರುವಂತೆ ಮಾಡಿತ್ತು. ಸಹಾಯಕ ಪ್ರಾಯೋಜಕತ್ವ ಹೊಂದಿದ್ದ ನಾಲ್ಕು ಕಂಪನಿಗಳಿಂದ ವಾರ್ಷಿಕ ತಲಾ 10 ಕೋಟಿ ಹಣವೂ ಪಿಕೆಎಲ್ ಬೊಕ್ಕಸಕ್ಕೆ ಸೇರಿತು. ಐಪಿಎಲ್ ನಂತರ ಅತಿಹೆಚ್ಚು ಪ್ರಾಯೋಜಕತ್ವ ಪಡೆದ ಲೀಗ್ ಎಂಬ ಶ್ರೇಯವೂ ಪ್ರೊ.ಕಬಡ್ಡಿಗೆ ಸಂದಿತು.

ಲೀಗ್‍ನ ಮೆರಗು ಹೆಚ್ಚಿಸುವ ಮತ್ತು ಇದರ ಬೇರುಗಳನ್ನು ಇನ್ನಷ್ಟು ಆಳಕ್ಕೆ ಇಳಿಸುವ ಉದ್ದೇಶದಿಂದ ಆಯೋಜಕರು 2017ರಲ್ಲಿ ಒಟ್ಟು ತಂಡಗಳ ಸಂಖ್ಯೆಯನ್ನು 12ಕ್ಕೆ ಹೆಚ್ಚಿಸಿದರು. ಜೊತೆಗೆ ಹೊಸದಾಗಿ ಆಟಗಾರರ ಹರಾಜನ್ನೂ ನಡೆಸಿದರು. ದೇಶ ವಿದೇಶದ 400 ಮಂದಿಗೆ ಹರಾಜು ಪಟ್ಟಿಯಲ್ಲಿ ಸ್ಥಾನ ಲಭಿಸಿತ್ತು. ಇವರನ್ನು ಖರೀದಿಸಲು 12 ಫ್ರಾಂಚೈಸ್‍ಗಳು ಒಟ್ಟು 46.99 ಕೋಟಿ ಹಣ ವಿನಿಯೋಗಿಸಿದವು. ಇದು ಲೀಗ್‍ನ ‘ಶ್ರೀಮಂತಿಕೆ’ಯನ್ನು ಸಾರಿ ಹೇಳಿತ್ತು.

ಕೋಟಿ ಕುಳಗಳಾದ ಆಟಗಾರರು
ಲೀಗ್ ಶುರುವಾದ ಬಳಿಕ ಆಟಗಾರರ ಬದುಕು ಬದಲಾಯಿತು. ಕೋಚ್‍ಗಳು, ರೆಫರಿಗಳು ಹಾಗೂ ಇತರೆ ಸಿಬ್ಬಂದಿಗಳಿಗೂ `ಬೆಲೆ’ ಸಿಕ್ಕಿತು. ಆಟಗಾರರು ಕುಬೇರರಾಗಿದ್ದಾರೆ. ಕ್ರಿಕೆಟಿಗರಂತೆ ಅವರಿಗೂ ತಾರಾ ವರ್ಚಸ್ಸು ಸಿಕ್ಕಿದೆ. ಹೋದಲ್ಲೆಲ್ಲಾ ಅವರನ್ನು ಜನ ಗುರ್ತಿಸುತ್ತಾರೆ. ಅವರ ಜೊತೆ ಸೆಲ್ಫಿ ತೆಗೆದುಕೊಳ್ಳಲು, ಆಟೋಗ್ರಾಫ್ ಪಡೆಯಲು ಮುಗಿಬೀಳುತ್ತಾರೆ.

ಹರಾಜಿನಲ್ಲಿ ಅವರಿಗೆ ಕೋಟಿ ಕೋಟಿ ಕಾಂಚಾಣ ಲಭಿಸುತ್ತಿದೆ. ಆರನೇ ಆವೃತ್ತಿಯ ಹರಾಜಿನಲ್ಲಿ ಹರಿಯಾಣದ ಮೋನು ಗೋಯತ್ ಅವರನ್ನು ಹರಿಯಾಣ ಸ್ಟೀಲರ್ಸ್ ಫ್ರಾಂಚೈಸ್ 1 ಕೋಟಿ 51 ಲಕ್ಷ ನೀಡಿ ಖರೀದಿಸಿದ್ದು ಇದಕ್ಕೊಂದು ನಿದರ್ಶನ. ರಾಹುಲ್ ಚೌಧರಿ (1.29 ಕೋಟಿ), ದೀಪಕ್ ನಿವಾಸ್ ಹೂಡಾ (1.15 ಕೋಟಿ), ರಿಷಾಂಕ್ ದೇವಾಡಿಗ (1.11 ಕೋಟಿ) ಅವರೂ ಉತ್ತಮ `ಮೌಲ್ಯ’ ಪಡೆದಿದ್ದರು. ಏಳನೇ ಆವೃತ್ತಿಯಲ್ಲಿ 1.45 ಕೋಟಿಗೆ ತೆಲುಗು ಟೈಟನ್ಸ್ ಪಾಲಾಗಿದ್ದ ಮಹಾರಾಷ್ಟ್ರದ ರೈಡರ್ ಸಿದ್ದಾರ್ಥ್ ದೇಸಾಯಿ ಕೂಡ ‘ಕುಬೇರರ ಕ್ಲಬ್’ ಸೇರಿದ್ದು ವಿಶೇಷ.

ಸಿದ್ದಾರ್ಥ್ ದೇಸಾಯಿ

ತಾರಾ ವರ್ಚಸ್ಸು
ಪ್ರೊ.ಕಬಡ್ಡಿ ಜನಸಾಮಾನ್ಯರನ್ನಷ್ಟೇ ಅಲ್ಲ, ಜನಪ್ರಿಯ ತಾರೆಯರನ್ನೂ ಆಕರ್ಷಿಸಿದೆ. ಬಾಲಿವುಡ್ ನಟ ಅಭಿಷೇಕ್ ಬಚ್ಚನ್, ಜೈಪುರ ಪಿಂಕ್ ಪ್ಯಾಂಥರ್ಸ್ ತಂಡದ ಒಡೆಯರಾಗಿದ್ದಾರೆ. ಭಾರತದ ‘ಕ್ರಿಕೆಟ್ ದೇವರು’ ಸಚಿನ್ ತೆಂಡೂಲ್ಕರ್, ತಮಿಳ್ ತಲೈವಾಸ್ ತಂಡದ ಸಹ ಮಾಲೀಕತ್ವ ಹೊಂದಿದ್ದಾರೆ.

ಸ್ಯಾಂಡಲ್‍ವುಡ್ ನಟರಾದ ಪುನೀತ್ ರಾಜ್‍ಕುಮಾರ ಮತ್ತು ರಾಕಿಂಗ್ ಸ್ಟಾರ್ ಯಶ್ ಅವರು ಬೆಂಗಳೂರು ಬುಲ್ಸ್ ತಂಡದ ರಾಯಭಾರಿಗಳಾಗಿದ್ದಾರೆ. ಇತರ ತಂಡಗಳೂ ಜನಪ್ರಿಯ ನಟ-ನಟಿಯರನ್ನು ಪ್ರಚಾರ ರಾಯಭಾರಿಗಳನ್ನಾಗಿ ನೇಮಿಸಿಕೊಂಡಿವೆ. ಹೀಗಾಗಿ ಲೀಗ್ ಜನರಿಗೆ ಇನ್ನಷ್ಟು ಹತ್ತಿರವಾಗಿದೆ.

ಎಂಟು ಭಾಷೆಗಳಲ್ಲಿ ನೇರ ಪ್ರಸಾರ
ಲೀಗ್‍ನ ಮಾಧ್ಯಮ ಹಕ್ಕು ಹೊಂದಿರುವ ಸ್ಟಾರ್ ಇಂಡಿಯಾ, ಇಂಗ್ಲಿಷ್ ಮತ್ತು ಹಿಂದಿ ಹೊರತುಪಡಿಸಿ, ಕನ್ನಡ ತಮಿಳು ಹಾಗೂ ತೆಲುಗು ಸೇರಿದಂತೆ ಒಟ್ಟು ಆರು ಪ್ರಾದೇಶಿಕ ಭಾಷೆಗಳಲ್ಲಿ ಪಂದ್ಯಗಳ ನೇರ ಪ್ರಸಾರ ಮಾಡುತ್ತಿದೆ. ಆಯಾ ಭಾಷೆಯಲ್ಲೇ ವೀಕ್ಷಕ ವಿವರಣೆ ನೀಡುವ ಪದ್ಧತಿಗೂ ನಾಂದಿ ಹಾಡಿದೆ. ಜೊತೆಗೆ ಆನ್‍ಲೈನ್‍ನಲ್ಲೂ ಪಂದ್ಯಗಳ ನೇರ ಪ್ರಸಾರ ಮಾಡಿ ವೀಕ್ಷಕರನ್ನು ಹಿಡಿದಿಟ್ಟುಕೊಳ್ಳುವ ಕೆಲಸ ಮಾಡಿದೆ.

ಕನ್ನಡಿಗರ ಕಮಾಲ್
ಲೀಗ್‍ನಲ್ಲಿ ಕರ್ನಾಟಕದ ಆಟಗಾರರೂ ಕಮಾಲ್ ಮಾಡುತ್ತಿದ್ದಾರೆ. ರಿಷಾಂಕ್ ದೇವಾಡಿಗ, ಕೆ.ಪ್ರಪಂಜನ್, ಸುಕೇಶ್ ಹೆಗ್ಡೆ, ಪ್ರಶಾಂತ್ ಕುಮಾರ್ ರೈ ಅವರು `ಸ್ಟಾರ್’ ರೈಡರ್‍ಗಳೆಂದು ಖ್ಯಾತಿ ಹೊಂದಿದ್ದಾರೆ. ಜೀವಕುಮಾರ್, ಶಬೀರ್ ಬಾಪು, ಜೆ.ದರ್ಶನ್, ಜವಾಹರ ವಿವೇಕ್ ಮತ್ತು ಹರೀಶ್ ನಾಯಕ್ ಅವರೂ ಛಾಪು ಒತ್ತಿದ್ದಾರೆ. ಈ ಸಲದ ಲೀಗ್‍ನಲ್ಲಿ ರಾಜ್ಯದ 11 ಮಂದಿ ವಿವಿಧ ತಂಡಗಳಲ್ಲಿ ಆಡುತ್ತಿದ್ದಾರೆ.

ರಿಷಾಂಕ್ ದೇವಾಡಿಗ

ಕನ್ನಡಿಗ ಬಿ.ಸಿ.ರಮೇಶ್, ಬೆಂಗಾಲ್ ವಾರಿಯರ್ಸ್ ತಂಡದ ಮುಖ್ಯ ಕೋಚ್ ಆಗಿದ್ದಾರೆ. ಹೋದವರ್ಷ ಬೆಂಗಳೂರು ಬುಲ್ಸ್ ತಂಡ ಚೊಚ್ಚಲ ಪ್ರಶಸ್ತಿ ಗೆಲ್ಲುವಲ್ಲಿ ರಮೇಶ್ ಪಾತ್ರ ನಿರ್ಣಾಯಕ ಎನಿಸಿತ್ತು. ಜಗದೀಶ್ ಕುಂಬ್ಳೆ ತಂಡವೊಂದರ ಸಹಾಯಕ ಕೋಚ್ ಆಗಿದ್ದಾರೆ. ರಾಜ್ಯದ ಹಲವರು ಲೀಗ್‍ನಲ್ಲಿ ರೆಫರಿಗಳಾಗಿಯೂ ಕಾರ್ಯನಿರ್ಹಿಸುತ್ತಿದ್ದಾರೆ. ಈ ಖುಷಿಯ ನಡುವೆ ಬೆಂಗಳೂರಿನ ತಂಡದಲ್ಲಿ ಕನ್ನಡಿಗರಿಲ್ಲವಲ್ಲ ಎಂಬ ಕೊರಗು ಅಭಿಮಾನಿಗಳನ್ನು ಕಾಡುತ್ತಿದೆ. ಹೀಗಿದ್ದರೂ ಉದ್ಯಾನನಗರಿಯ ಜನ, ಬುಲ್ಸ್ ಬೆನ್ನಿಗೆ ನಿಲ್ಲುವುದನ್ನು ಮರೆತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...