Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಪ್ರತ್ಯೇಕ ಘಟನೆಗಳಲ್ಲಿ ಈವರೆಗೆ ಆರು ಭಾರತೀಯರ ಸಾವು, ಒಬ್ಬರು ಕಾಣೆ; ವಿದೇಶಾಂಗ ಸಚಿವಾಲಯ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷದ ಮಧ್ಯೆ ಗಲ್ಫ್ ಪ್ರದೇಶದಾದ್ಯಂತ ನಡೆದ ಪ್ರತ್ಯೇಕ ಘಟನೆಗಳಲ್ಲಿ ಆರು ಭಾರತೀಯ ಪ್ರಜೆಗಳು ಪ್ರಾಣ ಕಳೆದುಕೊಂಡಿದ್ದಾರೆ ಮತ್ತು ಒಬ್ಬರು ಕಾಣೆಯಾಗಿದ್ದಾರೆ ಎಂದು ವಿದೇಶಾಂಗ ಸಚಿವಾಲಯ (MEA) ಶುಕ್ರವಾರ ತಿಳಿಸಿದೆ.  ಭಾರತೀಯ ಕಾರ್ಯಾಚರಣೆಗಳು...

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಇರಾನ್‌ನ ಮತ್ತೊಬ್ಬ ನಾಯಕ, ಐಆರ್‌ಜಿಸಿ ವಕ್ತಾರ ಅಲಿ ಮೊಹಮ್ಮದ್ ನೈನಿ ಸಾವು

ಟೆಹ್ರಾನ್: ಇಸ್ರೇಲಿ-ಅಮೆರಿಕನ್ ಕ್ಷಿಪಣಿ ದಾಳಿಯಲ್ಲಿ ಇರಾನ್ ವಕ್ತಾರ ಜನರಲ್ ಅಲಿ ಮೊಹಮ್ಮದ್ ನೈನಿ ಸಾವನ್ನಪ್ಪಿದ್ದಾರೆ ಎಂದು ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ಶುಕ್ರವಾರ ದೃಢಪಡಿಸಿದೆ. ಸರ್ಕಾರಿ ಸ್ವಾಮ್ಯದ ತಸ್ನಿಮ್ ಸುದ್ದಿ ಸಂಸ್ಥೆ...

ಶಿವಮೊಗ್ಗ: ಚಿಕಿತ್ಸೆ ನೀಡಲು ತೆರಳಿದ್ದ ವೇಳೆ ನೀರಾನೆ ದಾಳಿ; 26 ವರ್ಷದ ಪಶುವೈದ್ಯೆ ಸಾವು

ಶಿವಮೊಗ್ಗದ ತ್ಯಾವರೆಕೊಪ್ಪ ಸಿಂಹ ಮತ್ತು ಹುಲಿ ಸಫಾರಿ ಮೃಗಾಲಯದಲ್ಲಿ ಗುರುವಾರ ತಡರಾತ್ರಿ ನೀರಾನೆ ದಾಳಿಗೆ ಒಳಗಾಗಿದ್ದ 26 ವರ್ಷದ ತರಬೇತಿ ವನ್ಯಜೀವಿ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಶುಕ್ರವಾರ ಬೆಳಿಗ್ಗೆ ಮೃತಪಟ್ಟಿದ್ದಾರೆ. ಬೆಂಗಳೂರಿನ ಬನ್ನೇರುಘಟ್ಟದವರಾದ ಸಮೀಕ್ಷಾ,...

ಸಾಮೂಹಿಕ ಮತಾಂತರಕ್ಕೆ ಕಾರಣವಾದವರಿಗೆ ಜೀವಾವಧಿ ಶಿಕ್ಷೆ; ಮಸೂದೆ ಅಂಗೀಕರಿಸಿದ ಛತ್ತೀಸ್‌ಗಢ ವಿಧಾನಸಭೆ

ಬಲವಂತ, ಪ್ರಚೋದನೆ, ವಂಚನೆ ಅಥವಾ ತಪ್ಪು ನಿರೂಪಣೆಯ ಮೂಲಕ ನಡೆಸಲಾಗುವ ಧಾರ್ಮಿಕ ಮತಾಂತರಗಳನ್ನು ತಡೆಗಟ್ಟುವ ಗುರಿಯನ್ನು ಹೊಂದಿರುವ ಮಸೂದೆಯನ್ನು ಛತ್ತೀಸ್‌ಗಢ ವಿಧಾನಸಭೆಯು ಗುರುವಾರ ಅಂಗೀಕರಿಸಿದೆ. ಸಾಮೂಹಿಕ ಮತಾಂತರ ಪ್ರಕರಣಗಳಲ್ಲಿ ಜೀವಾವಧಿ ಶಿಕ್ಷೆ ಸೇರಿದಂತೆ...

6 ವರ್ಷಗಳ ಜೈಲುವಾಸದ ನಂತರ ಮಧ್ಯಂತರ ಜಾಮೀನು; ಜೈಲಿನಿಂದ ಹೊರಬಂದ ಶಾರ್ಜೀಲ್ ಇಮಾಮ್‌

ಸಹೋದರನ ಮದುವೆಯಲ್ಲಿ ಭಾಗವಹಿಸಲು ಮತ್ತು ಅನಾರೋಗ್ಯ ಪೀಡಿತ ತಾಯಿಯನ್ನು ನೋಡಿಕೊಳ್ಳಲು ದೆಹಲಿ ನ್ಯಾಯಾಲಯವು 10 ದಿನಗಳ ಮಧ್ಯಂತರ ಜಾಮೀನು ನೀಡಿದ ನಂತರ ವಿದ್ಯಾರ್ಥಿ ಕಾರ್ಯಕರ್ತ ಶಾರ್ಜೀಲ್ ಇಮಾಮ್ ಶುಕ್ರವಾರ ಸುಮಾರು ಆರು ವರ್ಷಗಳ...

ಉತ್ತಮ್ ನಗರದಲ್ಲಿ ಗೌರವಯುತ-ಶಾಂತಿಯುತ ಈದ್ ಆಚರಿಸುವಂತೆ ನೋಡಿಕೊಳ್ಳಿ: ಅಧಿಕಾರಿಗಳಿಗೆ ಎಂದು ದೆಹಲಿ ಹೈಕೋರ್ಟ್ ನಿರ್ದೇಶನ

ರಾಷ್ಟ್ರ ರಾಜಧಾನಿಯ ದೆಹಲಿಯ ಉತ್ತಮ್ ನಗರ ಪ್ರದೇಶದಲ್ಲಿ ಹೆಚ್ಚುತ್ತಿರುವ ಕೋಮು ಉದ್ವಿಗ್ನತೆಯ ನಡುವೆ, ಸಮುದಾಯಗಳ ನಡುವೆ ಶಾಂತಿ ಕಾಪಾಡಿಕೊಳ್ಳುವ ಜೊತೆಗೆ ಶಾಂತಿಯುತ ಮತ್ತು ಘನತೆಯ ಈದ್ ಆಚರಣೆಯನ್ನು ಖಚಿತಪಡಿಸಿಕೊಳ್ಳಲು ಕಾನೂನಿನಡಿಯಲ್ಲಿ ಅನುಮತಿಸಬಹುದಾದ ಎಲ್ಲಾ...

ಕಥುವಾ ಪ್ರಕರಣ: ವೈಯಕ್ತಿಕ ಭದ್ರತೆ ಕಡಿತ; ‘ಮಗಳು ಶಾಲೆಗೆ ಹೋಗುತ್ತಿಲ್ಲ’ ಎಂದು ಕಳವಳ ವ್ಯಕ್ತಪಡಿಸಿದ ವಕೀಲೆ ದೀಪಿಕಾ ಪುಷ್ಕರ್ ನಾಥ್ 

2018 ರ ಕಥುವಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದಲ್ಲಿ ಎಂಟು ವರ್ಷದ ಬಾಲಕಿಯ ಕುಟುಂಬವನ್ನು ಪ್ರತಿನಿಧಿಸಿದ್ದ ಜಮ್ಮುವಿನ ಪ್ರಮುಖ ವಕೀಲೆ ಮತ್ತು ಮಾನವ ಹಕ್ಕುಗಳ ಕಾರ್ಯಕರ್ತೆ ದೀಪಿಕಾ ಪುಷ್ಕರ್ ನಾಥ್, ತಮ್ಮ ವೈಯಕ್ತಿಕ...

ಒಡಿಶಾ| ದಲಿತ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಸಾಮಾಜಿಕ ಬಹಿಷ್ಕಾರದ ಆತಂಕಕಾರಿ ಪ್ರಕರಣವೊಂದು ಒಡಿಶಾ ರಾಜ್ಯದ ಗಂಜಾಂ ಜಿಲ್ಲೆಯ ಕಬಿಸೂರ್ಯನಗರ ಪೊಲೀಸ್ ವ್ಯಾಪ್ತಿಯಲ್ಲಿರುವ ಅರ್ಜುನಪಲ್ಲಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ. ಪರಿಶಿಷ್ಟ ಜಾತಿ (ಎಸ್‌ಸಿ) ಗೆ ಸೇರಿದ ವ್ಯಕ್ತಿಗೆ ಭೂಮಿ ಮಾರಾಟ ಮಾಡಿದ್ದಕ್ಕಾಗಿ...

‘ಕೇವಲ ಗಾಳಿಯಲ್ಲಿ ಕ್ರಾಂತಿ ಸಾಧ್ಯವಿಲ್ಲ, ನೆಲದ ಘಟಕವೂ ಬೇಕು’; ಇರಾನ್ ಮೇಲಿನ ಯುದ್ಧದಲ್ಲಿ ‘ಭೂ-ದಾಳಿ’ಯ ಸುಳಿವು ನೀಡಿದ ನೆತನ್ಯಾಹು

‘ನೀವು ಗಾಳಿಯಿಂದ ಕ್ರಾಂತಿಗಳನ್ನು ಮಾಡಲು ಸಾಧ್ಯವಿಲ್ಲ’ ಈ ಹೇಳಿಕೆಯ ಮೂಲಕ ಇರಾನ್ ವಿರುದ್ಧ ಅಮೆರಿಕ-ಇಸ್ರೇಲ್ ಯುದ್ಧಕ್ಕೆ 'ನೆಲದ ಅಂಶ'ದ ಸಾಧ್ಯತೆಯ ಬಗ್ಗೆ ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಸುಳಿವು ನೀಡಿದ್ದಾರೆ ಎನ್ನುವ ಸುದ್ದಿ...

ನಕಲಿ ಆಪಲ್ ಪರಿಕರಗಳ ದಂಧೆ ಭೇದಿಸಿದ ಮುಂಬೈ ಪೊಲೀಸರು; ₹16.33 ಲಕ್ಷ ಮೌಲ್ಯದ ಸರಕುಗಳ ವಶ; ಆರು ಜನರ ವಿರುದ್ಧ ಪ್ರಕರಣ 

ಮುಂಬೈ: ನಕಲಿ ಬ್ರಾಂಡ್ ಸರಕುಗಳ ಮಾರಾಟದ ಮೇಲೆ ಪ್ರಮುಖ ದಾಳಿ ನಡೆಸಿರುವ ಮುಂಬೈ ಪೊಲೀಸರು, ಘಾಟ್ಕೋಪರ್ ಪೂರ್ವದಲ್ಲಿ ನಕಲಿ ಆಪಲ್ ಪರಿಕರಗಳನ್ನು ಮಾರಾಟ ಮಾಡುತ್ತಿದ್ದ ಸಂಘಟಿತ ದಂಧೆಯನ್ನು ಭೇದಿಸಿದ್ದಾರೆ. ಈ ಪ್ರಕರಣದಲ್ಲಿ 16.33...