Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...

ಕಾಂಗ್ರೆಸ್ ಶಾಸಕ ಸುಬ್ಬಾರೆಡ್ಡಿ ಚುನಾವಣೆ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

ನವದೆಹಲಿ: 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕ ಎಸ್.ಎನ್. ಸುಬ್ಬಾರೆಡ್ಡಿ ಅವರ ಆಯ್ಕೆಯನ್ನು ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್‌ನ ತೀರ್ಪನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತಡೆಹಿಡಿದಿದೆ. ಭಾರತದ ಮುಖ್ಯ...

ಹಾಜರಾತಿ ಆಧಾರದ ಮೇಲೆ ಪರೀಕ್ಷಾ ನಿಷೇಧ ವಿರೋಧಿಸಿ ಎಎಂಯು ಎಂಜಿನಿಯರಿಂಗ್ ವಿದ್ಯಾರ್ಥಿಗಳಿಂದ ಪ್ರತಿಭಟನೆ; ಬಂಧನ, ಹಲ್ಲೆ ಆರೋಪ 

ಕಡಿಮೆ ಹಾಜರಾತಿ ಕಾರಣ ಸೆಮಿಸ್ಟರ್ ಪರೀಕ್ಷೆಗಳಿಂದ ನಿಷೇಧಿಸಲ್ಪಟ್ಟಿದ್ದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ನಂತರ, ವಿಶ್ವವಿದ್ಯಾಲಯದ ಪ್ರೊಕ್ಟೋರಿಯಲ್ ತಂಡವು ಹಲವಾರು ಅಂತಿಮ ವರ್ಷದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದೆ ಎಂದು ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯದ (AMU)...

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...