Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಹಿಳೆಯನ್ನು ಗರ್ಭಧಾರಣೆ ಪೂರ್ಣಗೊಳಿಸುವಂತೆ ಒತ್ತಾಯಿಸಲು ಸಾಧ್ಯವಿಲ್ಲ’: ಅಪ್ರಾಪ್ತೆಗೆ 30 ವಾರಗಳ ಗರ್ಭಧಾರಣೆ ಅಂತ್ಯಗೊಳಿಸಲು ಸುಪ್ರೀಂ ಅನುಮತಿ

ನವದೆಹಲಿ: 17 ವರ್ಷದ ಬಾಲಕಿಯ 30 ವಾರಗಳ ಗರ್ಭಧಾರಣೆಯನ್ನು ವೈದ್ಯಕೀಯವಾಗಿ ಮುಕ್ತಾಯಗೊಳಿಸುವಂತೆ ನಿರ್ದೇಶಿಸಿದ ಸುಪ್ರೀಂ ಕೋರ್ಟ್, ನ್ಯಾಯಾಲಯಗಳು ಮಹಿಳೆಯನ್ನು, ಅಪ್ರಾಪ್ತ ವಯಸ್ಕಳನ್ನು ಹೊರತುಪಡಿಸಿ, ಗರ್ಭಧಾರಣೆಯನ್ನು ಮುಂದುವರಿಸಲು ಒತ್ತಾಯಿಸಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿದೆ. ನ್ಯಾಯಮೂರ್ತಿಗಳಾದ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಆತ್ಮಾಹುತಿ ಬಾಂಬ್ ದಾಳಿ: ಕನಿಷ್ಠ 30 ಸಾವು, 160 ಕ್ಕೂ ಹೆಚ್ಚು ಜನರಿಗೆ ಗಾಯ

ಇಸ್ಲಾಮಾಬಾದ್: ಶುಕ್ರವಾರ ಇಸ್ಲಾಮಾಬಾದ್‌ನ ಶಿಯಾ ಧಾರ್ಮಿಕ ಕೇಂದ್ರದಲ್ಲಿ ಪ್ರಾರ್ಥನೆ ವೇಳೆ ನಡೆದ ಆತ್ಮಾಹುತಿ ದಾಳಿಯಲ್ಲಿ ಕನಿಷ್ಠ 30 ಜನರು ಸಾವನ್ನಪ್ಪಿ, 160 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ.  ಪಾಕಿಸ್ತಾನ ರಾಜಧಾನಿಯ ಶೆಹಜಾದ್ ಟೌನ್ ಪ್ರದೇಶದ...

ನಾಳೆ ದೊರೈರಾಜ್‌ ಅವರ ‘ನಮ್ಮ ಹಟ್ಟಿ’ ಆತ್ಮಕಥೆ ಬಿಡುಗಡೆ

ದಲಿತ ಚಳವಳಿಯ ಹಿರಿಯ ಮುಖಂಡರಾದ ತುಮಕೂರಿನ ಕೆ.ದೊರೈರಾಜ್‌ ಅವರ 'ನಮ್ಮಹಟ್ಟಿ' ಆತ್ಮಕಥೆ ಶನಿವಾರ ಬೆಂಗಳೂರಿನ ಚಿತ್ರಕಲಾ ಪರಿಷತ್ತಿನಲ್ಲಿ ಬಿಡುಗಡೆಯಾಗಲಿದೆ. ಸರ್ಕಾರಿ ಅಧಿಕಾರಿಯಾಗಿದ್ದ ದೊರೈರಾಜ್‌ ಅವರು, ತಮ್ಮ ವಿದ್ಯಾರ್ಥಿ ಜೀವನದಿಂದಲೇ ದಲಿತ ಚಳವಳಿಯಲ್ಲಿ ಗುರುತಿಸಿಕೊಂಡವರು....

‘ತಿರುಪತಿ ಲಡ್ಡುಗಳಲ್ಲಿ ರಾಸಾಯನಿಕಗಳಿಂದ ಮಾಡಿದ ತುಪ್ಪ ಬಳಸಲಾಗುತ್ತಿತ್ತು’: ವೈಎಸ್ಆರ್ಸಿಪಿ ಸರ್ಕಾರದ ವಿರುದ್ಧ ಆಂಧ್ರ ಸಿಎಂ ಆರೋಪ

ಹಿಂದಿನ ವೈಎಸ್‌ಆರ್‌ಸಿಪಿ ಸರ್ಕಾರದ ಅವಧಿಯಲ್ಲಿ ತಿರುಪತಿ ಲಡ್ಡುಗಳನ್ನು ತುಪ್ಪ ಬಳಸಿ ತಯಾರಿಸಲಾಗುತ್ತಿತ್ತು, ಅದರಲ್ಲಿ ಬಾತ್ ರೂಂ(ಸ್ನಾನಗೃಹಗಳನ್ನು) ಸ್ವಚ್ಛಗೊಳಿಸಲು ಬಳಸುವ ರಾಸಾಯನಿಕಗಳನ್ನು ಬೆರೆಸಲಾಗುತ್ತಿತ್ತು ಎಂದು ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್ ಚಂದ್ರಬಾಬು ನಾಯ್ಡು ಶುಕ್ರವಾರ ಆರೋಪಿಸಿದ್ದಾರೆ. ಕರ್ನೂಲು...

ಜಲಂಧರ್‌ನ ಗುರುದ್ವಾರದ ಹೊರಗೆ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಗುಂಡಿಕ್ಕಿ ಹತ್ಯೆ ಮಾಡಿದ ದುಷ್ಕರ್ಮಿಗಳು

ಪಂಜಾಬ್‌ನ ಜಲಂಧರ್‌ನಲ್ಲಿ ಶುಕ್ರವಾರ ಹಾಡಹಗಲೇ ಎಎಪಿ ನಾಯಕ ಲಕ್ಕಿ ಒಬೆರಾಯ್ ಅವರನ್ನು ಮಾಡೆಲ್ ಟೌನ್ ಪ್ರದೇಶದ ಗುರುದ್ವಾರದ ಬಳಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಮಾಡಿದ್ದಾರೆ.  ಈ ಘಟನೆ ಬೆಳಿಗ್ಗೆ ನಡೆದಿದ್ದು, ಗುಂಡೇಟಿನಿಂದ ಗಾಯಗೊಂಡಿದ್ದ ಅವರನ್ನು...

ದೆಹಲಿ: ಜಲ ಮಂಡಳಿ ತೋಡಿದ ಗುಂಡಿಗೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶಿಸಿದ ಸರ್ಕಾರ 

ಪಶ್ಚಿಮ ದೆಹಲಿಯ ಜನಕಪುರಿ ಪ್ರದೇಶದಲ್ಲಿ ದೆಹಲಿ ಜಲ ಮಂಡಳಿ (ಡಿಜೆಬಿ) ನಿರ್ಮಾಣ ಕಾರ್ಯಕ್ಕಾಗಿ ಅಗೆದ ಹೊಂಡಕ್ಕೆ ಬೈಕ್ ಬಿದ್ದು ಸವಾರನೊಬ್ಬ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ದೆಹಲಿ...

2025ರ ಬಿಹಾರ ವಿಧಾನಸಭಾ ಚುನಾವಣೆ ಪ್ರಶ್ನಿಸಿ ಜನ ಸುರಾಜ್ ಪಕ್ಷದಿಂದ ಅರ್ಜಿ: ವಿಚಾರಣೆ ನಿರಾಕರಿಸಿದ ಸುಪ್ರೀಂ ಕೋರ್ಟ್ 

2025 ರ ಬಿಹಾರ ವಿಧಾನಸಭಾ ಚುನಾವಣೆಯ ನಡವಳಿಕೆ ಮತ್ತು ಫಲಿತಾಂಶವನ್ನು ಪ್ರಶ್ನಿಸಿ ಪ್ರಶಾಂತ್ ಕಿಶೋರ್ ನೇತೃತ್ವದ ಜನ್ ಸುರಾಜ್ ಪಕ್ಷ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಶುಕ್ರವಾರ ನಿರಾಕರಿಸಿದೆ. ರಾಜಕೀಯ...

ಗುಜರಾತ್‌| ನರ್ಸಿಂಗ್ ಓದುತ್ತಿದ್ದ ದಲಿತ ವಿದ್ಯಾರ್ಥಿ ಆತ್ಮಹತ್ಯೆಗೆ ಪ್ರಚೋದನೆ ಆರೋಪ; ಪ್ರಿನ್ಸಿಪಲ್ ಸೇರಿ ಐವರ ವಿರುದ್ಧ ಪ್ರಕರಣ ದಾಖಲು

ಗುಜರಾತ್‌ನ ಖೇಡಾ ಜಿಲ್ಲೆಯ ನರ್ಸಿಂಗ್ ಕಾಲೇಜಿನ 19 ವರ್ಷದ ದಲಿತ ವಿದ್ಯಾರ್ಥಿಯೊಬ್ಬ, "ಪುರಾವೆಗಳಿಲ್ಲದೆ ಮೇಡಂ ನನ್ನ ಮೇಲೆ ಆರೋಪ ಮಾಡುತ್ತಿದ್ದಾರೆ" ಎಂದು ಚಿತ್ರಹಿಂಸೆ ಉಲ್ಲೇಖಿಸುವ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾದ...

1.50 ಕೋಟಿ ರೂ. ಐಟಿ ದಂಡ ಪ್ರಶ್ನಿಸಿ ಟಿವಿಕೆ ಮುಖ್ಯಸ್ಥ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಮದ್ರಾಸ್ ಹೈಕೋರ್ಟ್ 

ಚೆನ್ನೈ: 2015–16ರ ಮೌಲ್ಯಮಾಪನ ವರ್ಷದಲ್ಲಿ ಆದಾಯ ಬಹಿರಂಗಪಡಿಸದಿದ್ದಕ್ಕಾಗಿ 1.50 ಕೋಟಿ ರೂ. ದಂಡ ವಿಧಿಸಿದ ಆದಾಯ ತೆರಿಗೆ ಇಲಾಖೆಯ ಆದೇಶವನ್ನು ಪ್ರಶ್ನಿಸಿ ನಟ-ರಾಜಕಾರಣಿ ವಿಜಯ್ ಸಲ್ಲಿಸಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ಶುಕ್ರವಾರ ವಜಾಗೊಳಿಸಿದೆ. ಆದಾಯ...

ಮೇಘಾಲಯ ಗಣಿ ಸ್ಫೋಟ: ಸಾವನ್ನಪ್ಪಿದ ಮೂವರು ಅಸ್ಸಾಂ ಮೂಲದ ಕಾರ್ಮಿಕರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ

ಗುವಾಹಟಿ: ಮೇಘಾಲಯದ ಪಕ್ಕದ ಕಲ್ಲಿದ್ದಲು ಗಣಿ ಸ್ಫೋಟದಲ್ಲಿ ಸಾವನ್ನಪ್ಪಿದ ಅಸ್ಸಾಂ ರಾಜ್ಯದ ಮೂವರು ಕಾರ್ಮಿಕರ ಕುಟುಂಬಗಳಿಗೆ  ಸರ್ಕಾರ ತಲಾ 5 ಲಕ್ಷ ರೂ.ಗಳ ಪರಿಹಾರ ಘೋಷಿಸಿದೆ.  ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ, ಸಂತ್ರಸ್ತರು...