Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...