Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...