Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...

ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ್ದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ್‌ಗೆ ಬೆದರಿಕೆ

ಶನಿವಾರ (ಸೆ. 12) ನಡೆದಿದ್ದ ಸುದ್ದಿಗೋಷ್ಠಿಯೊಂದರಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಪ್ರಶ್ನಿಸಿದ ಪತ್ರಕರ್ತೆ ದಿವ್ಯಾ ಶ್ರೀವಾಸ್ತವ ಅವರ ವೀಡಿಯೊ ವೈರಲ್ ಆದ ಬಳಿಕ, ಅವರು ಆನ್‌ಲೈನ್ ಬೆದರಿಕೆಗಳು ಮತ್ತು...

ಅಲಿಗಢ ಮುಸ್ಲಿಂ ವಿವಿ ಪ್ರತಿಭಟನೆಯ ‘ಪಕ್ಷಪಾತಿ’ ನಿರೂಪಣೆ : ಝೀ ನ್ಯೂಸ್‌ಗೆ ₹2 ಲಕ್ಷ ದಂಡ ವಿಧಿಸಿದ ಎನ್‌ಬಿಡಿಎಸ್‌ಎ

ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದಲ್ಲಿ (AMU) ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ಪ್ಯಾಲೆಸ್ತೀನ್ ಪರ ಘೋಷಣೆಗಳನ್ನು ಕೂಗಿದ ಘಟನೆಯನ್ನು ವರದಿ ಮಾಡುವಾಗ ಪ್ರಸಾರ ನೀತಿ ಸಂಹಿತೆಯನ್ನು ಉಲ್ಲಂಘಿಸಿದೆ ಎಂದು ಪರಿಗಣಿಸಿ, 'ಝೀ ನ್ಯೂಸ್' (Zee...

‘ಕೆಲವರು ಮುಸ್ಲಿಮರನ್ನು ಬೈದ್ರೆ ಮಾತ್ರ ಲೀಡರ್‌ ಆಗೋದು ಅನ್ಕೊಂಡಿದಾರೆ!’: ಆರ್‌. ಅಶೋಕ್‌ ಹಳೆಯ ಹೇಳಿಕೆ ಮುಂದಿಟ್ಟು ಪ್ರಿಯಾಂಕ್ ಖರ್ಗೆ ಟೀಕೆ!

ಮೈಸೂರಿನ ಟಿ. ನರಸೀಪುರದಲ್ಲಿ ಗಣಪತಿ ಮೆರವಣಿಗೆ ಸಾಗುವ ಮಾರ್ಗದ ವಿಚಾರವಾಗಿ ಬಿಜೆಪಿ ಪ್ರತಿಭಟನೆಗೆ ಮುಂದಾಗಿರುವ ಬೆನ್ನಲ್ಲೇ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್‌. ಅಶೋಕ್‌ ವಿರುದ್ಧ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ...

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...