Homeಅಂಕಣಗಳುಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ - ದೇವನೂರ ಮಹಾದೇವ

ಮನ್ ಕಿ ಬಾತ್ ಬಿಟ್ಟು, ದಯವಿಟ್ಟು ಆಲಿಸಿ – ದೇವನೂರ ಮಹಾದೇವ

ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ.

- Advertisement -
- Advertisement -

‘ವ್ಯಾಪಾರಂ ದ್ರೋಹ ಚಿಂತನಂ’ ಎಂಬ ಮಾತಿದೆ. ಇದು ಒಂದು ಸೂಕ್ತಿಯೊ ಅಥವಾ ಜನ ಸಾಮಾನ್ಯರು ವ್ಯಾಪಾರದ ಚಹರೆ ನೋಡಿ ಈ ನುಡಿಗಟ್ಟನ್ನು ಚಾಲ್ತಿ ಮಾಡಿದರೋ ನನಗೆ ಗೊತ್ತಿಲ್ಲ. ಜಾಗತೀಕರಣದ ಅನಂತರ ವ್ಯಾಪಾರವು ದ್ರೋಹವೇ ಆಗಿ ಕುಪ್ಪಳಿಸುತ್ತಿದೆ. ವ್ಯಾಪಾರಕ್ಕೆ ಈಗ ಬುದ್ಧಿಯೂ ಕೂಡಿಕೊಂಡು ಇದೇ ಜ್ಞಾನ ಅನ್ನಿಸಿಕೊಂಡುಬಿಟ್ಟಿದೆ. ಈ ಎರಡೂ ಸೇರಿ ಭೂಮಿಗೇನೆ ಸುಲಿಗೆ ಬಲೆ ಹೆಣೆಯುತ್ತಿವೆ. ಕುತಂತ್ರವೇ ತಂತ್ರಗಾರಿಕೆಯಾಗಿದೆ. ಇದನ್ನು ನಿರ್ವಹಿಸುವವರು ಚಾಣಾಕ್ಷ ಅನ್ನಿಸಿಕೊಳ್ಳುತ್ತಿದ್ದಾರೆ. ಇದು ಘೋರ ದುರಂತ. ಹಾಗಾಗೇ ಇಂದು ಆಳ್ವಿಕೆಯೇ ವ್ಯಾಪಾರದ ಕೈಯಲ್ಲಿದೆ. ದ್ರೋಹ ಮತ್ತು ಕುತಂತ್ರಗಳು ಆಳ್ವಿಕೆ ನಡೆಸುತ್ತಿವೆ. ಜಾಗತೀಕರಣದ ಜಗತ್ತಿನಲ್ಲಿ ವ್ಯಾಪಾರವೇ ಯುದ್ಧವಾಗಿದೆ.

ಇಂಥ ವಿಷಮ ಪರಿಸ್ಥಿತಿಯಲ್ಲಿ- ಭಾರತವೂ 16 ದೇಶಗಳ ಮುಕ್ತ ವ್ಯಾಪಾರಕ್ಕೆ ಸಹಿ ಮಾಡಲು ಹೊರಟಿದೆ. ಇದು ವಿವೇಕ ವಿವೇಚನೆ ಇಲ್ಲದವರು ಮಾಡುವ ಕೆಲಸ. ಯಾಕೆಂದರೆ ಇದರಿಂದಾಗಿ ಈಗಾಗಲೇ ಕುಸಿಯುತ್ತಿರುವ ಉದ್ಯೋಗಗಳು ಮತ್ತೂ ಕುಸಿದು ಹೋಗುತ್ತವೆ. ದಯವಿಟ್ಟು ಪ್ರಧಾನಮಂತ್ರಿಗಳೇ, ದಡ್ಡನಿಗೆ ಧೈರ್ಯ ಜಾಸ್ತಿ ಎಂಬಂತೆ ದುಡುಕಿ ಸಹಿ ಮಾಡಬೇಡಿ. ನಮ್ಮ ಮಾತು ನೀವು ಕೇಳದಿದ್ದರೂ ಪರವಾಗಿಲ್ಲ. ಕನಿಷ್ಠ ಆರ್‌ಎಸ್‍ಎಸ್‍ನ ಸೋದರ ಸಂಘಟನೆಯಾದ ಸ್ವದೇಶಿ ಜಾಗರಣಾ ಮಂಚ್ ಸಂಘಟನೆಯು, ಹೈನುಗಾರಿಕೆ ಉಲ್ಲೇಖಿಸಿ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಭಾರತ ರುಜು ಮಾಡುವ ಬಗ್ಗೆ ಹೇಳುವ ಮಾತುಗಳನ್ನಾದರೂ, ನಿಮ್ಮ ಮನ್ ಕಿ ಬಾತ್ ಬಿಟ್ಟು, ಆಲಿಸಿ.

ಸ್ವದೇಶಿ ಜಾಗರಣಾ ಮಂಚ್ ಹೇಳುತ್ತದೆ- “ಇದು ಕೇಂದ್ರ ಸರ್ಕಾರದ ಅತ್ಯಂತ ಆತ್ಮಹತ್ಯಾತ್ಮಕ ನಡೆ, ಸ್ವಾತಂತ್ರ್ಯ ಬಂದಾಗಲಿಂದಲೂ ಇಂಥದೊಂದು ಆತ್ಮಹತ್ಯಾತ್ಮಕ ನಡೆ ಸಂಭವಿಸಿರಲಿಲ್ಲ” ಎಂದು. ಇದೇ ಮಾತುಗಳನ್ನು ಬೇರೆಯವರು ಹೇಳಿದ್ದರೆ ನೀವು ಮತ್ತು ನಿಮ್ಮ ಹಿಂಬಾಲಕರು ಹೇಳುವವರನ್ನು ದೇಶದ್ರೋಹಿಗಳೆಂದು ಹಣೆಪಟ್ಟಿ ಕಟ್ಟಿ ಥರಾವರಿ ಹಿಂಸೆ ಮಾಡುತ್ತಿದ್ದಿರಿ. ಈಗ? ಆರ್‌ಎಸ್‍ಎಸ್‍ನ ಸೋದರ ಸಂಘಟನೆ ಸ್ವದೇಶಿ ಜಾಗರಣಾ ಮಂಚ್ ಹೇಳುತ್ತಿದೆ. ಅವರನ್ನು ದೇಶದ್ರೋಹಿಗಳೆಂದು ಕರೆಯುವ ಧೈರ್ಯವನ್ನು ನೀವು ಮಾಡಲಾರಿರಿ ಎಂಬ ನಂಬಿಕೆ ನನಗಿದೆ. ನೆನಪಿಟ್ಟುಕೊಳ್ಳಿ, ಬಡತನ ನಿರ್ಮೂಲನೆ ಎಂದರೆ ಬಡವರನ್ನು ಸಾವಿನ ದವಡೆಗೆ ನೂಕುವುದಲ್ಲ. ಇಂದು ದುಡಿಯುವ ವರ್ಗ ಎಂದರೆ ಉಂಡು ಎಸೆಯುವ ಬಾಳೆ ಎಲೆ ಆಗಿಬಿಟ್ಟಿದ್ದಾರೆ.

ಕೊನೆಗೊಂದು ಮಾತು. ರಾಷ್ಟ್ರಕ್ಕೂ ದೇಶಕ್ಕೂ ಏನು ವ್ಯತ್ಯಾಸ ಎಂದು ಯಾರೋ ಕೇಳಿದರು. ಏನು ಹೇಳುವುದು? ಸರಳವಾಗಿ, ರಾಷ್ಟ್ರ ಎಂದರೆ- ಅಹಂ, ಪ್ರತಿಷ್ಠೆ. ದೇಶವೆಂದರೆ- ಜನರು. ಇನ್ನೂ ಸ್ಪಷ್ಟಪಡಿಸಬೇಕು ಎಂದರೆ, ರಾಷ್ಟ್ರವು ಪ್ರತಿಷ್ಠೆಯನ್ನು ಹಿಂಬಾಲಿಸುತ್ತದೆ. ಆದರೆ ದೇಶವು ಜನರ ಹಿತ, ಕಲ್ಯಾಣವನ್ನು ಹಿಂಬಾಲಿಸುತ್ತದೆ. ಅಥವಾ ಹೀಗೂ ಹೇಳಬಹುದು. ರಾಷ್ಟ್ರ ಎಂದರೆ- ಜುಟ್ಟಿಗೆ ಮಲ್ಲಿಗೆ ಹೂ. ದೇಶ ಎಂದರೆ ಹೊಟ್ಟೆಗೆ ಹಿಟ್ಟು. ಇದುವರೆಗೂ ಜುಟ್ಟಿಗೆ ಮಲ್ಲಿಗೆ ಹೂ ಸಿಕ್ಕಿಸಿಕೊಂಡು ಓಡಾಡಿದ್ದು ಸಾಕು ಎಂದು ತಮ್ಮಲ್ಲಿ ವಿನಂತಿಸುವೆ.

ಭಾರತದ ಸ್ವಾತಂತ್ರ್ಯ ಹೋರಾಟದ ಸಂದರ್ಭದಲ್ಲಿ ವಿದೇಶಿ ವಸ್ತ್ರ ಸುಡುವ ಆಂದೋಲನದಿಂದಾಗಿ ಇಂಗ್ಲೆಂಡಿನ ಲ್ಯಾಂಕಾಶೈರ್‍ನ ಗಿರಣಿ ಮುಚ್ಚುವಂತಾಗಿ ಅಲ್ಲಿನ ನಿರುದ್ಯೋಗಿ ಕಾರ್ಮಿಕರು ಗಾಂಧಿಯೊಡನೆ ಅವರ ಬವಣೆ ಹೇಳಿಕೊಂಡಾಗ ಗಾಂಧಿ ಹೇಳುತ್ತಾರೆ- “ಭಾರತದಲ್ಲಿ ಉದ್ಯೋಗವಿಲ್ಲದ ಲಕ್ಷಾಂತರ ಅರೆಹೊಟ್ಟೆಯ ಜನರ ಜೀವ (ಹಸಿವಿನಿಂದ) ಕೊನೆಗೊಂಡರೆ ಉಳಿದವರು ಬದುಕಬಹುದು ಅನ್ನುವ ಗುಂಪೂ ಇದೆ”. ಈ ಗುಂಪಿಗೆ ನೀವು, ನಿಮ್ಮ ಪಕ್ಷ, ನಿಮ್ಮ ಸಂಘ ಮತ್ತು ಅದರ ಪರಿವಾರ ಸೇರ್ಪಡೆಯಾಗದಿರಲಿ ಎಂದು ಆಶಿಸುತ್ತೇನೆ. ಈಗ ಭಾರತಕ್ಕೆ ಬೇಕಾಗಿರುವುದು- ಗೌರವಯುತ ಉದ್ಯೋಗ ಮತ್ತು ಸ್ವಾವಲಂಬನೆ…

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...