Homeಚಳವಳಿದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ದೌರ್ಜನ್ಯ ಸಹಿಸಲಾರದೆ ಮಹಾರಾಷ್ಟ್ರದ ಜಿರ್ನಿಯಾ ತಾಲೂಕಿನ ಖಾರ್ಗೊನೆಯಿಂದ ಓಡಿ ಹೋದ ಒಂದಷ್ಟು ಕೂಲಿಕಾರರು ತಮ್ಮೂರು ತಲುಪಿ 6 ಹುಡುಗಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಯುತ್ತಿದ್ದ ಕತೆಗಳನ್ನು ಹೇಳಿಕೊಂಡಿದ್ದಾರೆ.

- Advertisement -
- Advertisement -

ಕಬ್ಬು ಕಟಾವಿಗೆ ಬಂತೆಂದರೆ ಗುತ್ತಿಗೆದಾರರಿಗದು ದುಡ್ಡಿನ ಸುಗ್ಗಿಯ ಸಮಯ. ಪುಣೆ ಬೆಳಗಾವಿ, ಪುಣೆ ಸೊಲ್ಲಾಪುರ ರೋಡುಗಳು ತುಂಬಿದ ಟ್ರ್ಯಾಕ್ಟರುಗಳಿಂದ ಗುಡುಗುಡಿಸುತ್ತವೆ. ಆ ಟ್ರ್ಯಾಕ್ಟರುಗಳಲ್ಲಿ ಮನೆಯ ಎಲ್ಲಾ ಸಾಮಾನುಗಳು, ಹಾಸಿಗೆ ಹೊದಿಕೆ, ಗುಡಾರ, ಪ್ಲಾಸ್ಟಿಕ್ ಹೊದಿಕೆಗಳು, ಅವನ್ನು ನಿಲ್ಲಿಸುವ ಕಂಬಗಳು. . . ಮಕ್ಕಳು ಮರಿಗಳು, ಮನೆಯ ಎಲ್ಲಾ ಸದಸ್ಯರುಗಳು. ಹೊರಡುವುದೆಲ್ಲಿಗೆ? ಸಾಂಗ್ಲಿ, ಸಾತಾರ, ಕೊಲ್ಲಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಕಬ್ಬಿನ ಗದ್ದೆಗಳಿಗೆ. ನೋಡ ನೋಡುವಷ್ಟರಲ್ಲಿ ಗದ್ದೆಗಳಲ್ಲಿ ಕಂಬಗಳು ಎದ್ದು ನಿಲ್ಲುತ್ತವೆ, ಪ್ಲಾಸ್ಟಿಕ್ ಹೊದಿಕೆಯ ಮುಸುಕು ಹಾಕಿಕೊಂಡು ಅವು ಮನೆಗಳೆನಿಸುತ್ತವೆ. ಮನೆಯ ಸಾಮಾನು, ಹಾಸಿಗೆ ಹೊದಿಕೆ ಮಕ್ಕಳೆಲ್ಲ ಟ್ರ್ಯಾಕ್ಟರ್ ಇಳಿದು ಆ ಮನೆಯೊಳಗೆ ತುಂಬಿಕೊಳ್ಳುತ್ತವೆ. ಮುಂದಿನ ಎರಡು ತಿಂಗಳು ಇದೇ ಅವರ ಮನೆ, ಇದೇ ಅವರ ಊರು.

ಎಲ್ಲಿಯ ಜನರಿವರು? ಎಳೆ ಹಿಡಿದು ಹುಡುಕುತ್ತ ಹೋದರೆ ದಾರ ಅತ್ತ ಸಾಂಗ್ಲಿ ಸಾತಾರ ದಾಟಿ ದೂರದ ಮಧ್ಯಪ್ರದೇಶದವರೆಗೂ ಸಾಗುತ್ತದೆ. ದೇಶ ಭಾಷೆ ಗೊತ್ತಿಲ್ಲದ ಈ ಜಾಗಕ್ಕೆ ಕಬ್ಬು ಕಡಿಯಲು ಬಂದಿಳಿದ ಈ ಕುಟುಂಬಗಳಿಗೆ ಗೊತ್ತಿರುವುದೊಂದೇ, ದುಡಿತ ದುಡಿತ ದುಡಿತ. . .

ಮಹಾರಾಷ್ಟ್ರ ಕರ್ನಾಟಕಗಳಲ್ಲಿ ಕಬ್ಬು ಬೆಳೆಗಾರರಿಗೆ ನಿಶ್ಚಿಂತೆ. ಲಾರಿ ತಂದು ಕೂಲಿಕಾರರನ್ನು ತಂದು ಫ್ಯಾಕ್ಟರಿಗಳವರು ತಾವೇ ಕಬ್ಬು ಕೊಯ್ದು, ಸುಲಿಸಿ ಒಯ್ಯುತ್ತಾರೆ ಎಂದು. ಆದರೆ ಆ ಫ್ಯಾಕ್ಟರಿಗಳು ಎಲ್ಲಿಂದ ಕೂಲಿಕಾರರನ್ನು ತರುತ್ತಾರೆ, ಹೇಗೆ ತರುತ್ತಾರೆ, ಹೇಗೆ ಅವರನ್ನು ನಡೆಸಿಕೊಳ್ಳುತ್ತಾರೆ ಕಲ್ಪನೆಯೂ ಇಲ್ಲ. ಹೆಚ್ಚಾಗಿ ಮಂತ್ರಿ ಮಹೋದಯರುಗಳ ಒಡೆತನದಲ್ಲಿಯೇ ಇರುವ ಮಹಾರಾಷ್ಟ್ರ ಕರ್ನಾಟಕದ ಈ ಶುಗರ್ ಫ್ಯಾಕ್ಟರಿಗಳು ಅಕ್ರಮ ಗುತ್ತಿಗೆದಾರರ ಮೂಲಕ ಅತೀವ ಬಡತನ ಇರುವಂತಹ ಮಧ್ಯಪ್ರದೇಶದ ಗುಡ್ಡಗಾಡು ಜನರಿಗೆ ಮಳೆಗಾಲವಿನ್ನೂ ಮುಗಿಯುವ ಮೊದಲೇ ಮೂವತ್ತು-ನಲವತ್ತು ಸಾವಿರಗಳ ಆಮಿಷವೊಡ್ಡಿ ಬಲೆ ಹಾಕುತ್ತಾರೆ. ಉದ್ಯೋಗವಿಲ್ಲದೆ ಹಸಿವೆಯಿಂದ ಕಂಗೆಟ್ಟಿರುವ ಬುಡಕಟ್ಟು ಸಮುದಾಯಗಳಿಗೆ ಸಾಲ ಕೊಡುವವನೇ ದೇವರು. ಒಳ್ಳೆಯ ಉದ್ಯೋಗ, ಉತ್ತಮ ವೇತನ, ಉತ್ತಮ ಪರಿಸರ ಎಂದೆಲ್ಲಾ ಹುರಿದುಂಬಿಸಿ ಆ ಮುಗ್ಧರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಾನೆ ಗುತ್ತಿಗೆದಾರ. ಎಂತೆಂಥವರು ಹೇಗೆ ಹೇಗೆ ದೂರದೂರಿಗೆ ಉದ್ಯೋಗಕ್ಕಾಗಿ ಹೋಗಿರುತ್ತಾರೆ ಎಂಬ ಕಲ್ಪನೆ ಎಲ್ಲರಿಗೂ ಲಾಕ್‌ಡೌನ್ ಅವಧಿಯಲ್ಲಿ ಬಂದಿರಲಿಕ್ಕೆ ಸಾಕು. ಅಂದಿಗೂ ಇಂದಿಗೂ ಕೂಲಿಕಾರರ ಪರಿಸ್ಥಿತಿ ಯಾವುದೇ ರೀತಿಯಲ್ಲಿ ಬದಲಾಗಿಲ್ಲ. ಉದ್ಯೋಗ ಭದ್ರತೆ, ಜೀವನ ಭದ್ರತೆ, ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಎಲ್ಲವೂ ಕಾನೂನಿನ ಪುಸ್ತಕಗಳಲ್ಲಿಯೇ ಅವಿತುಕೊಂಡಿರುವಾಗ ಈ ಜನರ ಬದುಕು ಇನ್ನೂ ಎಪ್ಪತ್ತು ವರ್ಷಗಳಾದರೂ ಕತ್ತಲಲ್ಲಿಯೇ!

ಅಕ್ಟೋಬರ್‌ದಿಂದ ತಾವು ಕಬ್ಬಿನ ಹೊಲಗಳಲ್ಲಿ ಕೆಲಸ ಮಾಡಲು ಬರುತ್ತೇವೆಂದು ಹೇಳಿ ಕೂಲಿಕಾರರು ಸಾಲ ಸ್ವೀಕರಿಸಿದವರು ಹೇಳಿದ ವೇಳೆಗೆ ಹೇಳಿದ ಜಾಗದಲ್ಲಿ ಹಾಜರಾಗುತ್ತಾರೆ. ಬೆಳಗಿನ ಜಾವ 5 ರಿಂದ ಸಂಜೆಯವರೆಗೆ ಕಬ್ಬು ಕಟಾವು, ಆ ನಂತರ ಕತ್ತಲಲ್ಲಿಯೇ ಲಾರಿಗೆ ಹೇರುವ ಕೆಲಸ. ದಿನಕ್ಕೆ ಎರಡು ಜನರ ಕೆಲಸ, ಎರಡು ದಿನದ ಕೆಲಸ ಮಾಡಿದರೂ ಕನಿಷ್ಟ ಕೂಲಿಯ ಹೆಸರಿಲ್ಲ. ಗುತ್ತಿಗೆದಾರನ ಕೃಪಾಕಟಾಕ್ಷವಿದ್ದರೆ ಕೂಲಿ. ಸಂಬಳ ಹೇಳದಿದ್ದರೂ ಆತ ಹೇಳಿದಷ್ಟು ಕೆಲಸ, ಆತ ಸಾಕು ಎಂದೆನ್ನುವವರೆಗೆ ಕೆಲಸ. ಈ ಗುತ್ತಿಗೆದಾರರ ಬಳಿ ಲೈಸೆನ್ಸ್ ಇಲ್ಲ. ಅಂತರರಾಜ್ಯ ಕೂಲಿಕಾರರಿಗೆ ಸಂಬಂಧಿಸಿದ ಕಾನೂನಿನ ಪಾಲನೆ ಇಲ್ಲ. ಕೆಲಸಗಾರರ ನೋಂದಣಿ ಇಲ್ಲ. ಅತ್ಯಾಚಾರದಿಂದ ಹಿಡಿದು ಎಲ್ಲಾ ರೀತಿಯ ದೌರ್ಜನ್ಯ ನಡೆಯುವುದಿಲ್ಲಿ.

ದೌರ್ಜನ್ಯ ಸಹಿಸಲಾರದೆ ಮಹಾರಾಷ್ಟ್ರದ ಜಿರ್ನಿಯಾ ತಾಲೂಕಿನ ಖಾರ್ಗೊನೆಯಿಂದ ಓಡಿ ಹೋದ ಒಂದಷ್ಟು ಕೂಲಿಕಾರರು ತಮ್ಮೂರು ತಲುಪಿ 6 ಹುಡುಗಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಯುತ್ತಿದ್ದ ಕತೆಗಳನ್ನು ಹೇಳಿಕೊಂಡಾಗಲೇ ಏನು ನಡೆಯುತ್ತಿದೆ ಎಂಬುದು ಸುತ್ತಲಿನವರಿಗೆ ಅರಿವು. `ನಮ್ಮ ಲೆಕ್ಕ ಪತ್ರ ಮಾಡಿಕೊಡಿ ನಾವು ಹೋಗುತ್ತೇವೆ’ ಎಂದಾಗ ನಾಲ್ವರನ್ನು ನಿರಾಣಿ ಶುಗರ್ಸ್ ಫ್ಯಾಕ್ಟರಿಯಲ್ಲಿ ಲಾಕಪ್‌ನಲ್ಲಿಡಲಾಯಿತೆಂದು ಈ ಕೂಲಿಕಾರರೇ ಹೇಳುತ್ತಾರೆ. ಮಧ್ಯಪ್ರದೇಶದ ಬರ್ವಾನಿಯ `ಜಾಗೃತ ಆದಿವಾಸಿ ದಲಿತ ಸಂಘಟನೆ’ಗೆ ತಿಳಿಸಿದಾಗ ಅವರು ಅಲ್ಲಿನ ಪೊಲೀಸ್ ಸಹಾಯದಿಂದ ಬೆಳಗಾವಿ ಜಿಲ್ಲಾಡಳಿತಕ್ಕೆ ಸಂಪರ್ಕಿಸಿ ಈ ಕೂಲಿಕಾರರ ಬಿಡುಗಡೆಗೆ ಪ್ರಯತ್ನ ಮಾಡಿದರು. ಬೆಳಗಾವಿ, ಬಾಗಲಕೋಟೆ, ಪುಣೆ, ಸಾತಾರಾ, ಜಿಲ್ಲೆಗಳಲ್ಲಿ ಹರಡಿ ಹೋಗಿರುವ ಕೂಲಿಕಾರರನ್ನು ರಕ್ಷಿಸಲು ಮಧ್ಯಪ್ರದೇಶದ ಜಾಗೃತ ಆದಿವಾಸಿ ಸಂಘಟನೆ ಮತ್ತು ಬೆಳಗಾವಿಯ ಸ್ಥಳೀಯ ಸಂಘಟನೆ, ಪಿಯುಸಿಎಲ್ ಎಲ್ಲವೂ ಸತತ ಪ್ರಯತ್ನ ಮಾಡಿ 250 ಕೂಲಿಕಾರರನ್ನು ಜೀತಮುಕ್ತಗೊಳಿಸಿದ್ದಾರೆ.

ಅವಧಿ ಮೀರಿ ಕೆಲಸ ಮಾಡಿಸುವುದು, ಸಂಬಳ ಕೊಡದೆ ಕೆಲಸ ಮಾಡಿಸುವುದು, ಸಾಲ ಕೊಟ್ಟು ಕನಿಷ್ಟ ಕೂಲಿಗಿಂತಲೂ ಕಡಿಮೆ ಸಂಬಳ ಕೊಡುವುದು ಇವೆಲ್ಲವೂ ಜೀತ (ವಿಮುಕ್ತಿ) ಕಾನೂನಿನ ಪ್ರಕಾರ ಜೀತವೆನಿಸಿಕೊಳ್ಳುತ್ತವೆ. ಬುಡಕಟ್ಟು ಜನರನ್ನು ಒತ್ತಾಯದಿಂದ ದುಡಿಸಿಕೊಳ್ಳುವುದು, ದೌರ್ಜನ್ಯವೆಸಗುವುದು ಎಸ್‌ಸಿ, ಎಸ್ಟಿ ದೌರ್ಜನ್ಯ (ತಡೆ) ಕಾನೂನಿನಡಿ ಅಪರಾಧವಾಗುತ್ತದೆ. 1979ರ ಅಂತರರಾಜ್ಯ ವಲಸೆ ಕಾನೂನಿನಡಿಯಲ್ಲಿ ಈ ರೀತಿ ಕೆಲಸಗಾರರನ್ನು ಒಯ್ಯುವವ ಲೈಸೆನ್ಸ್ ಇರುವ ಗುತ್ತಿಗೆದಾರನಾಗಿರಬೇಕಲ್ಲದೆ ಆ ಕೂಲಿಕಾರರನ್ನು ಎರಡೂ ರಾಜ್ಯಗಳಲ್ಲಿ ನೋಂದಣಿ ಮಾಡಿಸಿರಬೇಕು. ತಾವು ಎಲ್ಲಿ, ಏನು ಕೆಲಸ ಮಾಡುತ್ತಿದ್ದೇವೆ, ನಿಯಮಿತವಾಗಿ ಕನಿಷ್ಟ ಕೂಲಿಗಿಂತ ಹೆಚ್ಚು ಹಣವನ್ನು ಕೂಲಿಯಾಗಿ ಪಡೆಯುತ್ತಿದ್ದೇವೆ, ಜೀವನ ಸೌಲಭ್ಯಗಳೆಲ್ಲ ಇವೆ ಎಂದು ಹೇಳುವಂಥ ಪಾಸ್ ಬುಕ್ ಒಂದನ್ನು ಕೂಲಿಕಾರರಿಗೆ ಕೊಟ್ಟಿರಬೇಕು. ಇವೊಂದನ್ನೂ ಮಾಡದ ಈ ಗುತ್ತಿಗೆದಾರರು ಮಾನವ ಕಳ್ಳಸಾಗಾಣಿಕೆಯಲ್ಲಿ ನಿರತರಾಗಿರುವಂತೇ ಅಪರಾಧಿಗಳು.
ಜೀತಕ್ಕೊಳಪಟ್ಟ ಕೂಲಿಕಾರರನ್ನು ಬಿಡುಗಡೆಗೊಳಿಸಿ ಸೂಕ್ತ ರಕ್ಷಣೆ ಮತ್ತು ಪುನರ್ವಸತಿ ಒದಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೂಡ ಜಿಲ್ಲಾ ನ್ಯಾಯಾಧೀಶರುಗಳಿಗೆ ಸೂಕ್ತವಾದ ಆದೇಶಗಳನ್ನು ಕೊಟ್ಟಿದೆ. ಆದಾಗ್ಯೂ ಇನ್ನೂವರೆಗೆ ಯಾವುದೇ ನ್ಯಾಯಾಲಯ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಅಘಾತಕಾರಿ ವಿಚಾರ.

ಮಧ್ಯ ಪ್ರದೇಶದ ಸರಕಾರ ಬ್ರಿಟಿಷರ ವಿರುದ್ಧ ಹೋರಾಡಿದ ಬುಡಕಟ್ಟು ಮುಂದಾಳು ಬಿರ್ಸಾ ಅವರ ಜಯಂತಿ ಅಂಗವಾಗಿ 23 ಕೋಟಿ ಖರ್ಚು ಮಾಡಿ ಬುಡಕಟ್ಟು ವೀರರನ್ನು ಸ್ಮರಿಸಿದೆ. ಆದರೆ ಇದೇ ಸರಕಾರ ತನ್ನಲ್ಲಿರುವ ಅಪಾರ ಸಂಖ್ಯೆಯ ಬುಡಕಟ್ಟು ಜನರ ಹಸಿವು, ದೈನೇಸಿ ಸ್ಥಿತಿಯಲ್ಲಿ ಬದಲಾವಣೆ ತರಲು ಏನೂ ಮಾಡುತ್ತಿಲ್ಲ. ಪೊಲೀಸರು ಮತ್ತು ಆಡಳಿತದ ನಿಷ್ಕ್ರಿಯತೆ ಆದಿವಾಸಿಗಳಿಗೆ ಹೊಸದೇನೂ ಅಲ್ಲ. ನರ್ಮದಾ ಹೋರಾಟದ ದಿನಗಳಿಂದಲೂ ನೋಡುತ್ತಲೇ ಬರುತ್ತಿದ್ದೇವೆ ಅದನ್ನು. ಆದರೂ ಎದೆಗುಂದದ ಆದಿವಾಸಿಗಳು ತಮ್ಮ ಸಂಘಟನೆಯ ಮೂಲಕ ಅಕ್ರಮ ಗುತ್ತಿಗೆದಾರರನ್ನು ಜೈಲಿಗಟ್ಟುವ ದಿಶೆಯಲ್ಲಿ ಮುಂದುವರೆಯುತ್ತಿದ್ದಾರೆ.
ಸರಕಾರ ಬೃಹತ್ ಅಣೆಕಟ್ಟು ಕಟ್ಟುತ್ತದೆ. ಆದಿವಾಸಿಗಳ ಜೀವನವನ್ನು ಮುಳುಗಿಸುತ್ತದೆ. ಜಲಾಶಯದಿಂದ ನೀರು ಹರಿಸಿ ಕಬ್ಬು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ. ಮಂತ್ರಿ ಮಹೋದಯರುಗಳ ಸಕ್ಕರೆ ಕಾರ್ಖಾನೆಗಳೇಳುತ್ತವೆ. ಜೋಳ, ಗೋಧಿ, ಭತ್ತ ಬೆಳೆಗಳ ಜಾಗದಲ್ಲಿ ಎದ್ದು ನಿಂತ ಕಬ್ಬು. ಅತ್ತ ಭೂಮಿ ಕಳೆದುಕೊಂಡು, ಪುನರ್ವಸತಿ ಇಲ್ಲದೆಯೇ, ಉದ್ಯೋಗವೂ ಇಲ್ಲದೆಯೇ ಹಸಿವಿನಿಂದ ಕಂಗೆಟ್ಟುಹೋದ ಬುಡಕಟ್ಟು ಜನರು. ಅವರನ್ನು ಕೂಲಿಕಾರರನ್ನಾಗಿ ಬಳಸಿಕೊಳ್ಳಲು ಅದೇ ಫ್ಯಾಕ್ಟರಿಗಳಿಂದ ಅಕ್ರಮ ಗುತ್ತಿಗೆದಾರರು. ವೃತ್ತ ಪೂರ್ಣಗೊಂಡಿತಲ್ಲವೇ?

  • ಶಾರದಾ ಗೋಪಾಲ

(ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಆಹಾರದ ಹಕ್ಕಿಗಾಗಿ ಆಂದೋಲನ, ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.)


ಇದನ್ನೂ ಓದಿ: ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...