Homeಚಳವಳಿದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ದೌರ್ಜನ್ಯ ಸಹಿಸಲಾರದೆ ಮಹಾರಾಷ್ಟ್ರದ ಜಿರ್ನಿಯಾ ತಾಲೂಕಿನ ಖಾರ್ಗೊನೆಯಿಂದ ಓಡಿ ಹೋದ ಒಂದಷ್ಟು ಕೂಲಿಕಾರರು ತಮ್ಮೂರು ತಲುಪಿ 6 ಹುಡುಗಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಯುತ್ತಿದ್ದ ಕತೆಗಳನ್ನು ಹೇಳಿಕೊಂಡಿದ್ದಾರೆ.

- Advertisement -
- Advertisement -

ಕಬ್ಬು ಕಟಾವಿಗೆ ಬಂತೆಂದರೆ ಗುತ್ತಿಗೆದಾರರಿಗದು ದುಡ್ಡಿನ ಸುಗ್ಗಿಯ ಸಮಯ. ಪುಣೆ ಬೆಳಗಾವಿ, ಪುಣೆ ಸೊಲ್ಲಾಪುರ ರೋಡುಗಳು ತುಂಬಿದ ಟ್ರ್ಯಾಕ್ಟರುಗಳಿಂದ ಗುಡುಗುಡಿಸುತ್ತವೆ. ಆ ಟ್ರ್ಯಾಕ್ಟರುಗಳಲ್ಲಿ ಮನೆಯ ಎಲ್ಲಾ ಸಾಮಾನುಗಳು, ಹಾಸಿಗೆ ಹೊದಿಕೆ, ಗುಡಾರ, ಪ್ಲಾಸ್ಟಿಕ್ ಹೊದಿಕೆಗಳು, ಅವನ್ನು ನಿಲ್ಲಿಸುವ ಕಂಬಗಳು. . . ಮಕ್ಕಳು ಮರಿಗಳು, ಮನೆಯ ಎಲ್ಲಾ ಸದಸ್ಯರುಗಳು. ಹೊರಡುವುದೆಲ್ಲಿಗೆ? ಸಾಂಗ್ಲಿ, ಸಾತಾರ, ಕೊಲ್ಲಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಕಬ್ಬಿನ ಗದ್ದೆಗಳಿಗೆ. ನೋಡ ನೋಡುವಷ್ಟರಲ್ಲಿ ಗದ್ದೆಗಳಲ್ಲಿ ಕಂಬಗಳು ಎದ್ದು ನಿಲ್ಲುತ್ತವೆ, ಪ್ಲಾಸ್ಟಿಕ್ ಹೊದಿಕೆಯ ಮುಸುಕು ಹಾಕಿಕೊಂಡು ಅವು ಮನೆಗಳೆನಿಸುತ್ತವೆ. ಮನೆಯ ಸಾಮಾನು, ಹಾಸಿಗೆ ಹೊದಿಕೆ ಮಕ್ಕಳೆಲ್ಲ ಟ್ರ್ಯಾಕ್ಟರ್ ಇಳಿದು ಆ ಮನೆಯೊಳಗೆ ತುಂಬಿಕೊಳ್ಳುತ್ತವೆ. ಮುಂದಿನ ಎರಡು ತಿಂಗಳು ಇದೇ ಅವರ ಮನೆ, ಇದೇ ಅವರ ಊರು.

ಎಲ್ಲಿಯ ಜನರಿವರು? ಎಳೆ ಹಿಡಿದು ಹುಡುಕುತ್ತ ಹೋದರೆ ದಾರ ಅತ್ತ ಸಾಂಗ್ಲಿ ಸಾತಾರ ದಾಟಿ ದೂರದ ಮಧ್ಯಪ್ರದೇಶದವರೆಗೂ ಸಾಗುತ್ತದೆ. ದೇಶ ಭಾಷೆ ಗೊತ್ತಿಲ್ಲದ ಈ ಜಾಗಕ್ಕೆ ಕಬ್ಬು ಕಡಿಯಲು ಬಂದಿಳಿದ ಈ ಕುಟುಂಬಗಳಿಗೆ ಗೊತ್ತಿರುವುದೊಂದೇ, ದುಡಿತ ದುಡಿತ ದುಡಿತ. . .

ಮಹಾರಾಷ್ಟ್ರ ಕರ್ನಾಟಕಗಳಲ್ಲಿ ಕಬ್ಬು ಬೆಳೆಗಾರರಿಗೆ ನಿಶ್ಚಿಂತೆ. ಲಾರಿ ತಂದು ಕೂಲಿಕಾರರನ್ನು ತಂದು ಫ್ಯಾಕ್ಟರಿಗಳವರು ತಾವೇ ಕಬ್ಬು ಕೊಯ್ದು, ಸುಲಿಸಿ ಒಯ್ಯುತ್ತಾರೆ ಎಂದು. ಆದರೆ ಆ ಫ್ಯಾಕ್ಟರಿಗಳು ಎಲ್ಲಿಂದ ಕೂಲಿಕಾರರನ್ನು ತರುತ್ತಾರೆ, ಹೇಗೆ ತರುತ್ತಾರೆ, ಹೇಗೆ ಅವರನ್ನು ನಡೆಸಿಕೊಳ್ಳುತ್ತಾರೆ ಕಲ್ಪನೆಯೂ ಇಲ್ಲ. ಹೆಚ್ಚಾಗಿ ಮಂತ್ರಿ ಮಹೋದಯರುಗಳ ಒಡೆತನದಲ್ಲಿಯೇ ಇರುವ ಮಹಾರಾಷ್ಟ್ರ ಕರ್ನಾಟಕದ ಈ ಶುಗರ್ ಫ್ಯಾಕ್ಟರಿಗಳು ಅಕ್ರಮ ಗುತ್ತಿಗೆದಾರರ ಮೂಲಕ ಅತೀವ ಬಡತನ ಇರುವಂತಹ ಮಧ್ಯಪ್ರದೇಶದ ಗುಡ್ಡಗಾಡು ಜನರಿಗೆ ಮಳೆಗಾಲವಿನ್ನೂ ಮುಗಿಯುವ ಮೊದಲೇ ಮೂವತ್ತು-ನಲವತ್ತು ಸಾವಿರಗಳ ಆಮಿಷವೊಡ್ಡಿ ಬಲೆ ಹಾಕುತ್ತಾರೆ. ಉದ್ಯೋಗವಿಲ್ಲದೆ ಹಸಿವೆಯಿಂದ ಕಂಗೆಟ್ಟಿರುವ ಬುಡಕಟ್ಟು ಸಮುದಾಯಗಳಿಗೆ ಸಾಲ ಕೊಡುವವನೇ ದೇವರು. ಒಳ್ಳೆಯ ಉದ್ಯೋಗ, ಉತ್ತಮ ವೇತನ, ಉತ್ತಮ ಪರಿಸರ ಎಂದೆಲ್ಲಾ ಹುರಿದುಂಬಿಸಿ ಆ ಮುಗ್ಧರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಾನೆ ಗುತ್ತಿಗೆದಾರ. ಎಂತೆಂಥವರು ಹೇಗೆ ಹೇಗೆ ದೂರದೂರಿಗೆ ಉದ್ಯೋಗಕ್ಕಾಗಿ ಹೋಗಿರುತ್ತಾರೆ ಎಂಬ ಕಲ್ಪನೆ ಎಲ್ಲರಿಗೂ ಲಾಕ್‌ಡೌನ್ ಅವಧಿಯಲ್ಲಿ ಬಂದಿರಲಿಕ್ಕೆ ಸಾಕು. ಅಂದಿಗೂ ಇಂದಿಗೂ ಕೂಲಿಕಾರರ ಪರಿಸ್ಥಿತಿ ಯಾವುದೇ ರೀತಿಯಲ್ಲಿ ಬದಲಾಗಿಲ್ಲ. ಉದ್ಯೋಗ ಭದ್ರತೆ, ಜೀವನ ಭದ್ರತೆ, ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಎಲ್ಲವೂ ಕಾನೂನಿನ ಪುಸ್ತಕಗಳಲ್ಲಿಯೇ ಅವಿತುಕೊಂಡಿರುವಾಗ ಈ ಜನರ ಬದುಕು ಇನ್ನೂ ಎಪ್ಪತ್ತು ವರ್ಷಗಳಾದರೂ ಕತ್ತಲಲ್ಲಿಯೇ!

ಅಕ್ಟೋಬರ್‌ದಿಂದ ತಾವು ಕಬ್ಬಿನ ಹೊಲಗಳಲ್ಲಿ ಕೆಲಸ ಮಾಡಲು ಬರುತ್ತೇವೆಂದು ಹೇಳಿ ಕೂಲಿಕಾರರು ಸಾಲ ಸ್ವೀಕರಿಸಿದವರು ಹೇಳಿದ ವೇಳೆಗೆ ಹೇಳಿದ ಜಾಗದಲ್ಲಿ ಹಾಜರಾಗುತ್ತಾರೆ. ಬೆಳಗಿನ ಜಾವ 5 ರಿಂದ ಸಂಜೆಯವರೆಗೆ ಕಬ್ಬು ಕಟಾವು, ಆ ನಂತರ ಕತ್ತಲಲ್ಲಿಯೇ ಲಾರಿಗೆ ಹೇರುವ ಕೆಲಸ. ದಿನಕ್ಕೆ ಎರಡು ಜನರ ಕೆಲಸ, ಎರಡು ದಿನದ ಕೆಲಸ ಮಾಡಿದರೂ ಕನಿಷ್ಟ ಕೂಲಿಯ ಹೆಸರಿಲ್ಲ. ಗುತ್ತಿಗೆದಾರನ ಕೃಪಾಕಟಾಕ್ಷವಿದ್ದರೆ ಕೂಲಿ. ಸಂಬಳ ಹೇಳದಿದ್ದರೂ ಆತ ಹೇಳಿದಷ್ಟು ಕೆಲಸ, ಆತ ಸಾಕು ಎಂದೆನ್ನುವವರೆಗೆ ಕೆಲಸ. ಈ ಗುತ್ತಿಗೆದಾರರ ಬಳಿ ಲೈಸೆನ್ಸ್ ಇಲ್ಲ. ಅಂತರರಾಜ್ಯ ಕೂಲಿಕಾರರಿಗೆ ಸಂಬಂಧಿಸಿದ ಕಾನೂನಿನ ಪಾಲನೆ ಇಲ್ಲ. ಕೆಲಸಗಾರರ ನೋಂದಣಿ ಇಲ್ಲ. ಅತ್ಯಾಚಾರದಿಂದ ಹಿಡಿದು ಎಲ್ಲಾ ರೀತಿಯ ದೌರ್ಜನ್ಯ ನಡೆಯುವುದಿಲ್ಲಿ.

ದೌರ್ಜನ್ಯ ಸಹಿಸಲಾರದೆ ಮಹಾರಾಷ್ಟ್ರದ ಜಿರ್ನಿಯಾ ತಾಲೂಕಿನ ಖಾರ್ಗೊನೆಯಿಂದ ಓಡಿ ಹೋದ ಒಂದಷ್ಟು ಕೂಲಿಕಾರರು ತಮ್ಮೂರು ತಲುಪಿ 6 ಹುಡುಗಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಯುತ್ತಿದ್ದ ಕತೆಗಳನ್ನು ಹೇಳಿಕೊಂಡಾಗಲೇ ಏನು ನಡೆಯುತ್ತಿದೆ ಎಂಬುದು ಸುತ್ತಲಿನವರಿಗೆ ಅರಿವು. `ನಮ್ಮ ಲೆಕ್ಕ ಪತ್ರ ಮಾಡಿಕೊಡಿ ನಾವು ಹೋಗುತ್ತೇವೆ’ ಎಂದಾಗ ನಾಲ್ವರನ್ನು ನಿರಾಣಿ ಶುಗರ್ಸ್ ಫ್ಯಾಕ್ಟರಿಯಲ್ಲಿ ಲಾಕಪ್‌ನಲ್ಲಿಡಲಾಯಿತೆಂದು ಈ ಕೂಲಿಕಾರರೇ ಹೇಳುತ್ತಾರೆ. ಮಧ್ಯಪ್ರದೇಶದ ಬರ್ವಾನಿಯ `ಜಾಗೃತ ಆದಿವಾಸಿ ದಲಿತ ಸಂಘಟನೆ’ಗೆ ತಿಳಿಸಿದಾಗ ಅವರು ಅಲ್ಲಿನ ಪೊಲೀಸ್ ಸಹಾಯದಿಂದ ಬೆಳಗಾವಿ ಜಿಲ್ಲಾಡಳಿತಕ್ಕೆ ಸಂಪರ್ಕಿಸಿ ಈ ಕೂಲಿಕಾರರ ಬಿಡುಗಡೆಗೆ ಪ್ರಯತ್ನ ಮಾಡಿದರು. ಬೆಳಗಾವಿ, ಬಾಗಲಕೋಟೆ, ಪುಣೆ, ಸಾತಾರಾ, ಜಿಲ್ಲೆಗಳಲ್ಲಿ ಹರಡಿ ಹೋಗಿರುವ ಕೂಲಿಕಾರರನ್ನು ರಕ್ಷಿಸಲು ಮಧ್ಯಪ್ರದೇಶದ ಜಾಗೃತ ಆದಿವಾಸಿ ಸಂಘಟನೆ ಮತ್ತು ಬೆಳಗಾವಿಯ ಸ್ಥಳೀಯ ಸಂಘಟನೆ, ಪಿಯುಸಿಎಲ್ ಎಲ್ಲವೂ ಸತತ ಪ್ರಯತ್ನ ಮಾಡಿ 250 ಕೂಲಿಕಾರರನ್ನು ಜೀತಮುಕ್ತಗೊಳಿಸಿದ್ದಾರೆ.

ಅವಧಿ ಮೀರಿ ಕೆಲಸ ಮಾಡಿಸುವುದು, ಸಂಬಳ ಕೊಡದೆ ಕೆಲಸ ಮಾಡಿಸುವುದು, ಸಾಲ ಕೊಟ್ಟು ಕನಿಷ್ಟ ಕೂಲಿಗಿಂತಲೂ ಕಡಿಮೆ ಸಂಬಳ ಕೊಡುವುದು ಇವೆಲ್ಲವೂ ಜೀತ (ವಿಮುಕ್ತಿ) ಕಾನೂನಿನ ಪ್ರಕಾರ ಜೀತವೆನಿಸಿಕೊಳ್ಳುತ್ತವೆ. ಬುಡಕಟ್ಟು ಜನರನ್ನು ಒತ್ತಾಯದಿಂದ ದುಡಿಸಿಕೊಳ್ಳುವುದು, ದೌರ್ಜನ್ಯವೆಸಗುವುದು ಎಸ್‌ಸಿ, ಎಸ್ಟಿ ದೌರ್ಜನ್ಯ (ತಡೆ) ಕಾನೂನಿನಡಿ ಅಪರಾಧವಾಗುತ್ತದೆ. 1979ರ ಅಂತರರಾಜ್ಯ ವಲಸೆ ಕಾನೂನಿನಡಿಯಲ್ಲಿ ಈ ರೀತಿ ಕೆಲಸಗಾರರನ್ನು ಒಯ್ಯುವವ ಲೈಸೆನ್ಸ್ ಇರುವ ಗುತ್ತಿಗೆದಾರನಾಗಿರಬೇಕಲ್ಲದೆ ಆ ಕೂಲಿಕಾರರನ್ನು ಎರಡೂ ರಾಜ್ಯಗಳಲ್ಲಿ ನೋಂದಣಿ ಮಾಡಿಸಿರಬೇಕು. ತಾವು ಎಲ್ಲಿ, ಏನು ಕೆಲಸ ಮಾಡುತ್ತಿದ್ದೇವೆ, ನಿಯಮಿತವಾಗಿ ಕನಿಷ್ಟ ಕೂಲಿಗಿಂತ ಹೆಚ್ಚು ಹಣವನ್ನು ಕೂಲಿಯಾಗಿ ಪಡೆಯುತ್ತಿದ್ದೇವೆ, ಜೀವನ ಸೌಲಭ್ಯಗಳೆಲ್ಲ ಇವೆ ಎಂದು ಹೇಳುವಂಥ ಪಾಸ್ ಬುಕ್ ಒಂದನ್ನು ಕೂಲಿಕಾರರಿಗೆ ಕೊಟ್ಟಿರಬೇಕು. ಇವೊಂದನ್ನೂ ಮಾಡದ ಈ ಗುತ್ತಿಗೆದಾರರು ಮಾನವ ಕಳ್ಳಸಾಗಾಣಿಕೆಯಲ್ಲಿ ನಿರತರಾಗಿರುವಂತೇ ಅಪರಾಧಿಗಳು.
ಜೀತಕ್ಕೊಳಪಟ್ಟ ಕೂಲಿಕಾರರನ್ನು ಬಿಡುಗಡೆಗೊಳಿಸಿ ಸೂಕ್ತ ರಕ್ಷಣೆ ಮತ್ತು ಪುನರ್ವಸತಿ ಒದಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೂಡ ಜಿಲ್ಲಾ ನ್ಯಾಯಾಧೀಶರುಗಳಿಗೆ ಸೂಕ್ತವಾದ ಆದೇಶಗಳನ್ನು ಕೊಟ್ಟಿದೆ. ಆದಾಗ್ಯೂ ಇನ್ನೂವರೆಗೆ ಯಾವುದೇ ನ್ಯಾಯಾಲಯ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಅಘಾತಕಾರಿ ವಿಚಾರ.

ಮಧ್ಯ ಪ್ರದೇಶದ ಸರಕಾರ ಬ್ರಿಟಿಷರ ವಿರುದ್ಧ ಹೋರಾಡಿದ ಬುಡಕಟ್ಟು ಮುಂದಾಳು ಬಿರ್ಸಾ ಅವರ ಜಯಂತಿ ಅಂಗವಾಗಿ 23 ಕೋಟಿ ಖರ್ಚು ಮಾಡಿ ಬುಡಕಟ್ಟು ವೀರರನ್ನು ಸ್ಮರಿಸಿದೆ. ಆದರೆ ಇದೇ ಸರಕಾರ ತನ್ನಲ್ಲಿರುವ ಅಪಾರ ಸಂಖ್ಯೆಯ ಬುಡಕಟ್ಟು ಜನರ ಹಸಿವು, ದೈನೇಸಿ ಸ್ಥಿತಿಯಲ್ಲಿ ಬದಲಾವಣೆ ತರಲು ಏನೂ ಮಾಡುತ್ತಿಲ್ಲ. ಪೊಲೀಸರು ಮತ್ತು ಆಡಳಿತದ ನಿಷ್ಕ್ರಿಯತೆ ಆದಿವಾಸಿಗಳಿಗೆ ಹೊಸದೇನೂ ಅಲ್ಲ. ನರ್ಮದಾ ಹೋರಾಟದ ದಿನಗಳಿಂದಲೂ ನೋಡುತ್ತಲೇ ಬರುತ್ತಿದ್ದೇವೆ ಅದನ್ನು. ಆದರೂ ಎದೆಗುಂದದ ಆದಿವಾಸಿಗಳು ತಮ್ಮ ಸಂಘಟನೆಯ ಮೂಲಕ ಅಕ್ರಮ ಗುತ್ತಿಗೆದಾರರನ್ನು ಜೈಲಿಗಟ್ಟುವ ದಿಶೆಯಲ್ಲಿ ಮುಂದುವರೆಯುತ್ತಿದ್ದಾರೆ.
ಸರಕಾರ ಬೃಹತ್ ಅಣೆಕಟ್ಟು ಕಟ್ಟುತ್ತದೆ. ಆದಿವಾಸಿಗಳ ಜೀವನವನ್ನು ಮುಳುಗಿಸುತ್ತದೆ. ಜಲಾಶಯದಿಂದ ನೀರು ಹರಿಸಿ ಕಬ್ಬು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ. ಮಂತ್ರಿ ಮಹೋದಯರುಗಳ ಸಕ್ಕರೆ ಕಾರ್ಖಾನೆಗಳೇಳುತ್ತವೆ. ಜೋಳ, ಗೋಧಿ, ಭತ್ತ ಬೆಳೆಗಳ ಜಾಗದಲ್ಲಿ ಎದ್ದು ನಿಂತ ಕಬ್ಬು. ಅತ್ತ ಭೂಮಿ ಕಳೆದುಕೊಂಡು, ಪುನರ್ವಸತಿ ಇಲ್ಲದೆಯೇ, ಉದ್ಯೋಗವೂ ಇಲ್ಲದೆಯೇ ಹಸಿವಿನಿಂದ ಕಂಗೆಟ್ಟುಹೋದ ಬುಡಕಟ್ಟು ಜನರು. ಅವರನ್ನು ಕೂಲಿಕಾರರನ್ನಾಗಿ ಬಳಸಿಕೊಳ್ಳಲು ಅದೇ ಫ್ಯಾಕ್ಟರಿಗಳಿಂದ ಅಕ್ರಮ ಗುತ್ತಿಗೆದಾರರು. ವೃತ್ತ ಪೂರ್ಣಗೊಂಡಿತಲ್ಲವೇ?

  • ಶಾರದಾ ಗೋಪಾಲ

(ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಆಹಾರದ ಹಕ್ಕಿಗಾಗಿ ಆಂದೋಲನ, ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.)


ಇದನ್ನೂ ಓದಿ: ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...