Homeಚಳವಳಿದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ದೌರ್ಜನ್ಯ ಶೋಷಣೆಗಳ ಸುಗ್ಗಿ! ಕಬ್ಬು ಕಟಾವು ಕೂಲಿಗಾರರ ಜೀತವಿಮುಕ್ತಿಯೆಂದು?

ದೌರ್ಜನ್ಯ ಸಹಿಸಲಾರದೆ ಮಹಾರಾಷ್ಟ್ರದ ಜಿರ್ನಿಯಾ ತಾಲೂಕಿನ ಖಾರ್ಗೊನೆಯಿಂದ ಓಡಿ ಹೋದ ಒಂದಷ್ಟು ಕೂಲಿಕಾರರು ತಮ್ಮೂರು ತಲುಪಿ 6 ಹುಡುಗಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಯುತ್ತಿದ್ದ ಕತೆಗಳನ್ನು ಹೇಳಿಕೊಂಡಿದ್ದಾರೆ.

- Advertisement -
- Advertisement -

ಕಬ್ಬು ಕಟಾವಿಗೆ ಬಂತೆಂದರೆ ಗುತ್ತಿಗೆದಾರರಿಗದು ದುಡ್ಡಿನ ಸುಗ್ಗಿಯ ಸಮಯ. ಪುಣೆ ಬೆಳಗಾವಿ, ಪುಣೆ ಸೊಲ್ಲಾಪುರ ರೋಡುಗಳು ತುಂಬಿದ ಟ್ರ್ಯಾಕ್ಟರುಗಳಿಂದ ಗುಡುಗುಡಿಸುತ್ತವೆ. ಆ ಟ್ರ್ಯಾಕ್ಟರುಗಳಲ್ಲಿ ಮನೆಯ ಎಲ್ಲಾ ಸಾಮಾನುಗಳು, ಹಾಸಿಗೆ ಹೊದಿಕೆ, ಗುಡಾರ, ಪ್ಲಾಸ್ಟಿಕ್ ಹೊದಿಕೆಗಳು, ಅವನ್ನು ನಿಲ್ಲಿಸುವ ಕಂಬಗಳು. . . ಮಕ್ಕಳು ಮರಿಗಳು, ಮನೆಯ ಎಲ್ಲಾ ಸದಸ್ಯರುಗಳು. ಹೊರಡುವುದೆಲ್ಲಿಗೆ? ಸಾಂಗ್ಲಿ, ಸಾತಾರ, ಕೊಲ್ಲಾಪುರ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳ ಕಬ್ಬಿನ ಗದ್ದೆಗಳಿಗೆ. ನೋಡ ನೋಡುವಷ್ಟರಲ್ಲಿ ಗದ್ದೆಗಳಲ್ಲಿ ಕಂಬಗಳು ಎದ್ದು ನಿಲ್ಲುತ್ತವೆ, ಪ್ಲಾಸ್ಟಿಕ್ ಹೊದಿಕೆಯ ಮುಸುಕು ಹಾಕಿಕೊಂಡು ಅವು ಮನೆಗಳೆನಿಸುತ್ತವೆ. ಮನೆಯ ಸಾಮಾನು, ಹಾಸಿಗೆ ಹೊದಿಕೆ ಮಕ್ಕಳೆಲ್ಲ ಟ್ರ್ಯಾಕ್ಟರ್ ಇಳಿದು ಆ ಮನೆಯೊಳಗೆ ತುಂಬಿಕೊಳ್ಳುತ್ತವೆ. ಮುಂದಿನ ಎರಡು ತಿಂಗಳು ಇದೇ ಅವರ ಮನೆ, ಇದೇ ಅವರ ಊರು.

ಎಲ್ಲಿಯ ಜನರಿವರು? ಎಳೆ ಹಿಡಿದು ಹುಡುಕುತ್ತ ಹೋದರೆ ದಾರ ಅತ್ತ ಸಾಂಗ್ಲಿ ಸಾತಾರ ದಾಟಿ ದೂರದ ಮಧ್ಯಪ್ರದೇಶದವರೆಗೂ ಸಾಗುತ್ತದೆ. ದೇಶ ಭಾಷೆ ಗೊತ್ತಿಲ್ಲದ ಈ ಜಾಗಕ್ಕೆ ಕಬ್ಬು ಕಡಿಯಲು ಬಂದಿಳಿದ ಈ ಕುಟುಂಬಗಳಿಗೆ ಗೊತ್ತಿರುವುದೊಂದೇ, ದುಡಿತ ದುಡಿತ ದುಡಿತ. . .

ಮಹಾರಾಷ್ಟ್ರ ಕರ್ನಾಟಕಗಳಲ್ಲಿ ಕಬ್ಬು ಬೆಳೆಗಾರರಿಗೆ ನಿಶ್ಚಿಂತೆ. ಲಾರಿ ತಂದು ಕೂಲಿಕಾರರನ್ನು ತಂದು ಫ್ಯಾಕ್ಟರಿಗಳವರು ತಾವೇ ಕಬ್ಬು ಕೊಯ್ದು, ಸುಲಿಸಿ ಒಯ್ಯುತ್ತಾರೆ ಎಂದು. ಆದರೆ ಆ ಫ್ಯಾಕ್ಟರಿಗಳು ಎಲ್ಲಿಂದ ಕೂಲಿಕಾರರನ್ನು ತರುತ್ತಾರೆ, ಹೇಗೆ ತರುತ್ತಾರೆ, ಹೇಗೆ ಅವರನ್ನು ನಡೆಸಿಕೊಳ್ಳುತ್ತಾರೆ ಕಲ್ಪನೆಯೂ ಇಲ್ಲ. ಹೆಚ್ಚಾಗಿ ಮಂತ್ರಿ ಮಹೋದಯರುಗಳ ಒಡೆತನದಲ್ಲಿಯೇ ಇರುವ ಮಹಾರಾಷ್ಟ್ರ ಕರ್ನಾಟಕದ ಈ ಶುಗರ್ ಫ್ಯಾಕ್ಟರಿಗಳು ಅಕ್ರಮ ಗುತ್ತಿಗೆದಾರರ ಮೂಲಕ ಅತೀವ ಬಡತನ ಇರುವಂತಹ ಮಧ್ಯಪ್ರದೇಶದ ಗುಡ್ಡಗಾಡು ಜನರಿಗೆ ಮಳೆಗಾಲವಿನ್ನೂ ಮುಗಿಯುವ ಮೊದಲೇ ಮೂವತ್ತು-ನಲವತ್ತು ಸಾವಿರಗಳ ಆಮಿಷವೊಡ್ಡಿ ಬಲೆ ಹಾಕುತ್ತಾರೆ. ಉದ್ಯೋಗವಿಲ್ಲದೆ ಹಸಿವೆಯಿಂದ ಕಂಗೆಟ್ಟಿರುವ ಬುಡಕಟ್ಟು ಸಮುದಾಯಗಳಿಗೆ ಸಾಲ ಕೊಡುವವನೇ ದೇವರು. ಒಳ್ಳೆಯ ಉದ್ಯೋಗ, ಉತ್ತಮ ವೇತನ, ಉತ್ತಮ ಪರಿಸರ ಎಂದೆಲ್ಲಾ ಹುರಿದುಂಬಿಸಿ ಆ ಮುಗ್ಧರನ್ನು ಬುಟ್ಟಿಗೆ ಹಾಕಿಕೊಳ್ಳುತ್ತಾನೆ ಗುತ್ತಿಗೆದಾರ. ಎಂತೆಂಥವರು ಹೇಗೆ ಹೇಗೆ ದೂರದೂರಿಗೆ ಉದ್ಯೋಗಕ್ಕಾಗಿ ಹೋಗಿರುತ್ತಾರೆ ಎಂಬ ಕಲ್ಪನೆ ಎಲ್ಲರಿಗೂ ಲಾಕ್‌ಡೌನ್ ಅವಧಿಯಲ್ಲಿ ಬಂದಿರಲಿಕ್ಕೆ ಸಾಕು. ಅಂದಿಗೂ ಇಂದಿಗೂ ಕೂಲಿಕಾರರ ಪರಿಸ್ಥಿತಿ ಯಾವುದೇ ರೀತಿಯಲ್ಲಿ ಬದಲಾಗಿಲ್ಲ. ಉದ್ಯೋಗ ಭದ್ರತೆ, ಜೀವನ ಭದ್ರತೆ, ಸಾಮಾಜಿಕ ಭದ್ರತೆ, ಆಹಾರ ಭದ್ರತೆ ಎಲ್ಲವೂ ಕಾನೂನಿನ ಪುಸ್ತಕಗಳಲ್ಲಿಯೇ ಅವಿತುಕೊಂಡಿರುವಾಗ ಈ ಜನರ ಬದುಕು ಇನ್ನೂ ಎಪ್ಪತ್ತು ವರ್ಷಗಳಾದರೂ ಕತ್ತಲಲ್ಲಿಯೇ!

ಅಕ್ಟೋಬರ್‌ದಿಂದ ತಾವು ಕಬ್ಬಿನ ಹೊಲಗಳಲ್ಲಿ ಕೆಲಸ ಮಾಡಲು ಬರುತ್ತೇವೆಂದು ಹೇಳಿ ಕೂಲಿಕಾರರು ಸಾಲ ಸ್ವೀಕರಿಸಿದವರು ಹೇಳಿದ ವೇಳೆಗೆ ಹೇಳಿದ ಜಾಗದಲ್ಲಿ ಹಾಜರಾಗುತ್ತಾರೆ. ಬೆಳಗಿನ ಜಾವ 5 ರಿಂದ ಸಂಜೆಯವರೆಗೆ ಕಬ್ಬು ಕಟಾವು, ಆ ನಂತರ ಕತ್ತಲಲ್ಲಿಯೇ ಲಾರಿಗೆ ಹೇರುವ ಕೆಲಸ. ದಿನಕ್ಕೆ ಎರಡು ಜನರ ಕೆಲಸ, ಎರಡು ದಿನದ ಕೆಲಸ ಮಾಡಿದರೂ ಕನಿಷ್ಟ ಕೂಲಿಯ ಹೆಸರಿಲ್ಲ. ಗುತ್ತಿಗೆದಾರನ ಕೃಪಾಕಟಾಕ್ಷವಿದ್ದರೆ ಕೂಲಿ. ಸಂಬಳ ಹೇಳದಿದ್ದರೂ ಆತ ಹೇಳಿದಷ್ಟು ಕೆಲಸ, ಆತ ಸಾಕು ಎಂದೆನ್ನುವವರೆಗೆ ಕೆಲಸ. ಈ ಗುತ್ತಿಗೆದಾರರ ಬಳಿ ಲೈಸೆನ್ಸ್ ಇಲ್ಲ. ಅಂತರರಾಜ್ಯ ಕೂಲಿಕಾರರಿಗೆ ಸಂಬಂಧಿಸಿದ ಕಾನೂನಿನ ಪಾಲನೆ ಇಲ್ಲ. ಕೆಲಸಗಾರರ ನೋಂದಣಿ ಇಲ್ಲ. ಅತ್ಯಾಚಾರದಿಂದ ಹಿಡಿದು ಎಲ್ಲಾ ರೀತಿಯ ದೌರ್ಜನ್ಯ ನಡೆಯುವುದಿಲ್ಲಿ.

ದೌರ್ಜನ್ಯ ಸಹಿಸಲಾರದೆ ಮಹಾರಾಷ್ಟ್ರದ ಜಿರ್ನಿಯಾ ತಾಲೂಕಿನ ಖಾರ್ಗೊನೆಯಿಂದ ಓಡಿ ಹೋದ ಒಂದಷ್ಟು ಕೂಲಿಕಾರರು ತಮ್ಮೂರು ತಲುಪಿ 6 ಹುಡುಗಿಯರ ಮೇಲೆ ಸತತವಾಗಿ ಅತ್ಯಾಚಾರ ನಡೆಯುತ್ತಿದ್ದ ಕತೆಗಳನ್ನು ಹೇಳಿಕೊಂಡಾಗಲೇ ಏನು ನಡೆಯುತ್ತಿದೆ ಎಂಬುದು ಸುತ್ತಲಿನವರಿಗೆ ಅರಿವು. `ನಮ್ಮ ಲೆಕ್ಕ ಪತ್ರ ಮಾಡಿಕೊಡಿ ನಾವು ಹೋಗುತ್ತೇವೆ’ ಎಂದಾಗ ನಾಲ್ವರನ್ನು ನಿರಾಣಿ ಶುಗರ್ಸ್ ಫ್ಯಾಕ್ಟರಿಯಲ್ಲಿ ಲಾಕಪ್‌ನಲ್ಲಿಡಲಾಯಿತೆಂದು ಈ ಕೂಲಿಕಾರರೇ ಹೇಳುತ್ತಾರೆ. ಮಧ್ಯಪ್ರದೇಶದ ಬರ್ವಾನಿಯ `ಜಾಗೃತ ಆದಿವಾಸಿ ದಲಿತ ಸಂಘಟನೆ’ಗೆ ತಿಳಿಸಿದಾಗ ಅವರು ಅಲ್ಲಿನ ಪೊಲೀಸ್ ಸಹಾಯದಿಂದ ಬೆಳಗಾವಿ ಜಿಲ್ಲಾಡಳಿತಕ್ಕೆ ಸಂಪರ್ಕಿಸಿ ಈ ಕೂಲಿಕಾರರ ಬಿಡುಗಡೆಗೆ ಪ್ರಯತ್ನ ಮಾಡಿದರು. ಬೆಳಗಾವಿ, ಬಾಗಲಕೋಟೆ, ಪುಣೆ, ಸಾತಾರಾ, ಜಿಲ್ಲೆಗಳಲ್ಲಿ ಹರಡಿ ಹೋಗಿರುವ ಕೂಲಿಕಾರರನ್ನು ರಕ್ಷಿಸಲು ಮಧ್ಯಪ್ರದೇಶದ ಜಾಗೃತ ಆದಿವಾಸಿ ಸಂಘಟನೆ ಮತ್ತು ಬೆಳಗಾವಿಯ ಸ್ಥಳೀಯ ಸಂಘಟನೆ, ಪಿಯುಸಿಎಲ್ ಎಲ್ಲವೂ ಸತತ ಪ್ರಯತ್ನ ಮಾಡಿ 250 ಕೂಲಿಕಾರರನ್ನು ಜೀತಮುಕ್ತಗೊಳಿಸಿದ್ದಾರೆ.

ಅವಧಿ ಮೀರಿ ಕೆಲಸ ಮಾಡಿಸುವುದು, ಸಂಬಳ ಕೊಡದೆ ಕೆಲಸ ಮಾಡಿಸುವುದು, ಸಾಲ ಕೊಟ್ಟು ಕನಿಷ್ಟ ಕೂಲಿಗಿಂತಲೂ ಕಡಿಮೆ ಸಂಬಳ ಕೊಡುವುದು ಇವೆಲ್ಲವೂ ಜೀತ (ವಿಮುಕ್ತಿ) ಕಾನೂನಿನ ಪ್ರಕಾರ ಜೀತವೆನಿಸಿಕೊಳ್ಳುತ್ತವೆ. ಬುಡಕಟ್ಟು ಜನರನ್ನು ಒತ್ತಾಯದಿಂದ ದುಡಿಸಿಕೊಳ್ಳುವುದು, ದೌರ್ಜನ್ಯವೆಸಗುವುದು ಎಸ್‌ಸಿ, ಎಸ್ಟಿ ದೌರ್ಜನ್ಯ (ತಡೆ) ಕಾನೂನಿನಡಿ ಅಪರಾಧವಾಗುತ್ತದೆ. 1979ರ ಅಂತರರಾಜ್ಯ ವಲಸೆ ಕಾನೂನಿನಡಿಯಲ್ಲಿ ಈ ರೀತಿ ಕೆಲಸಗಾರರನ್ನು ಒಯ್ಯುವವ ಲೈಸೆನ್ಸ್ ಇರುವ ಗುತ್ತಿಗೆದಾರನಾಗಿರಬೇಕಲ್ಲದೆ ಆ ಕೂಲಿಕಾರರನ್ನು ಎರಡೂ ರಾಜ್ಯಗಳಲ್ಲಿ ನೋಂದಣಿ ಮಾಡಿಸಿರಬೇಕು. ತಾವು ಎಲ್ಲಿ, ಏನು ಕೆಲಸ ಮಾಡುತ್ತಿದ್ದೇವೆ, ನಿಯಮಿತವಾಗಿ ಕನಿಷ್ಟ ಕೂಲಿಗಿಂತ ಹೆಚ್ಚು ಹಣವನ್ನು ಕೂಲಿಯಾಗಿ ಪಡೆಯುತ್ತಿದ್ದೇವೆ, ಜೀವನ ಸೌಲಭ್ಯಗಳೆಲ್ಲ ಇವೆ ಎಂದು ಹೇಳುವಂಥ ಪಾಸ್ ಬುಕ್ ಒಂದನ್ನು ಕೂಲಿಕಾರರಿಗೆ ಕೊಟ್ಟಿರಬೇಕು. ಇವೊಂದನ್ನೂ ಮಾಡದ ಈ ಗುತ್ತಿಗೆದಾರರು ಮಾನವ ಕಳ್ಳಸಾಗಾಣಿಕೆಯಲ್ಲಿ ನಿರತರಾಗಿರುವಂತೇ ಅಪರಾಧಿಗಳು.
ಜೀತಕ್ಕೊಳಪಟ್ಟ ಕೂಲಿಕಾರರನ್ನು ಬಿಡುಗಡೆಗೊಳಿಸಿ ಸೂಕ್ತ ರಕ್ಷಣೆ ಮತ್ತು ಪುನರ್ವಸತಿ ಒದಗಿಸಬೇಕೆಂದು ರಾಷ್ಟ್ರೀಯ ಮಾನವ ಹಕ್ಕು ಆಯೋಗ ಕೂಡ ಜಿಲ್ಲಾ ನ್ಯಾಯಾಧೀಶರುಗಳಿಗೆ ಸೂಕ್ತವಾದ ಆದೇಶಗಳನ್ನು ಕೊಟ್ಟಿದೆ. ಆದಾಗ್ಯೂ ಇನ್ನೂವರೆಗೆ ಯಾವುದೇ ನ್ಯಾಯಾಲಯ ಗುತ್ತಿಗೆದಾರರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳದಿರುವುದು ಅಘಾತಕಾರಿ ವಿಚಾರ.

ಮಧ್ಯ ಪ್ರದೇಶದ ಸರಕಾರ ಬ್ರಿಟಿಷರ ವಿರುದ್ಧ ಹೋರಾಡಿದ ಬುಡಕಟ್ಟು ಮುಂದಾಳು ಬಿರ್ಸಾ ಅವರ ಜಯಂತಿ ಅಂಗವಾಗಿ 23 ಕೋಟಿ ಖರ್ಚು ಮಾಡಿ ಬುಡಕಟ್ಟು ವೀರರನ್ನು ಸ್ಮರಿಸಿದೆ. ಆದರೆ ಇದೇ ಸರಕಾರ ತನ್ನಲ್ಲಿರುವ ಅಪಾರ ಸಂಖ್ಯೆಯ ಬುಡಕಟ್ಟು ಜನರ ಹಸಿವು, ದೈನೇಸಿ ಸ್ಥಿತಿಯಲ್ಲಿ ಬದಲಾವಣೆ ತರಲು ಏನೂ ಮಾಡುತ್ತಿಲ್ಲ. ಪೊಲೀಸರು ಮತ್ತು ಆಡಳಿತದ ನಿಷ್ಕ್ರಿಯತೆ ಆದಿವಾಸಿಗಳಿಗೆ ಹೊಸದೇನೂ ಅಲ್ಲ. ನರ್ಮದಾ ಹೋರಾಟದ ದಿನಗಳಿಂದಲೂ ನೋಡುತ್ತಲೇ ಬರುತ್ತಿದ್ದೇವೆ ಅದನ್ನು. ಆದರೂ ಎದೆಗುಂದದ ಆದಿವಾಸಿಗಳು ತಮ್ಮ ಸಂಘಟನೆಯ ಮೂಲಕ ಅಕ್ರಮ ಗುತ್ತಿಗೆದಾರರನ್ನು ಜೈಲಿಗಟ್ಟುವ ದಿಶೆಯಲ್ಲಿ ಮುಂದುವರೆಯುತ್ತಿದ್ದಾರೆ.
ಸರಕಾರ ಬೃಹತ್ ಅಣೆಕಟ್ಟು ಕಟ್ಟುತ್ತದೆ. ಆದಿವಾಸಿಗಳ ಜೀವನವನ್ನು ಮುಳುಗಿಸುತ್ತದೆ. ಜಲಾಶಯದಿಂದ ನೀರು ಹರಿಸಿ ಕಬ್ಬು ಬೆಳೆಯುವಂತೆ ರೈತರನ್ನು ಪ್ರೋತ್ಸಾಹಿಸಲಾಗುತ್ತದೆ. ಮಂತ್ರಿ ಮಹೋದಯರುಗಳ ಸಕ್ಕರೆ ಕಾರ್ಖಾನೆಗಳೇಳುತ್ತವೆ. ಜೋಳ, ಗೋಧಿ, ಭತ್ತ ಬೆಳೆಗಳ ಜಾಗದಲ್ಲಿ ಎದ್ದು ನಿಂತ ಕಬ್ಬು. ಅತ್ತ ಭೂಮಿ ಕಳೆದುಕೊಂಡು, ಪುನರ್ವಸತಿ ಇಲ್ಲದೆಯೇ, ಉದ್ಯೋಗವೂ ಇಲ್ಲದೆಯೇ ಹಸಿವಿನಿಂದ ಕಂಗೆಟ್ಟುಹೋದ ಬುಡಕಟ್ಟು ಜನರು. ಅವರನ್ನು ಕೂಲಿಕಾರರನ್ನಾಗಿ ಬಳಸಿಕೊಳ್ಳಲು ಅದೇ ಫ್ಯಾಕ್ಟರಿಗಳಿಂದ ಅಕ್ರಮ ಗುತ್ತಿಗೆದಾರರು. ವೃತ್ತ ಪೂರ್ಣಗೊಂಡಿತಲ್ಲವೇ?

  • ಶಾರದಾ ಗೋಪಾಲ

(ಶಾರದಾ ಮಹಿಳಾಪರ ಕಾಳಜಿಯ ಚಿಂತಕಿ, ಬರಹಗಾರ್ತಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಆಹಾರದ ಹಕ್ಕಿಗಾಗಿ ಆಂದೋಲನ, ಜನಾರೋಗ್ಯದ ಪ್ರಯತ್ನಗಳಲ್ಲಿ ಗಂಭೀರವಾಗಿ ದಶಕಗಳಿಂದ ತೊಡಗಿಸಿಕೊಂಡವರು. ಎಲ್ಲ ಸಮಾಜಮುಖಿ ಚಟುವಟಿಕೆಗಳ ಒಡನಾಡಿ. ಪ್ರಸ್ತುತ ಧಾರವಾಡದಲ್ಲಿ ನೆಲೆಸಿದ್ದಾರೆ.)


ಇದನ್ನೂ ಓದಿ: ಹಿಜಾಬ್-ಕೇಸರಿ ವಿಚಾರ: ಎರಡೂ ಕಡೆಯ ವಿದ್ಯಾರ್ಥಿಗಳೆ ಬಲಿಪಶುಗಳು – ದೇವನೂರು ಮಹಾದೇವ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ: ‘ಮಾಳವೀಯ ನಗರ’ ಅಗ್ನಿ ದುರಂತಕ್ಕೆ 21 ಜನರು ಬಲಿ: ವ್ಯವಸ್ಥೆಯ ವೈಫಲ್ಯದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿರುವ ನಾಗರೀಕರು 

ದೆಹಲಿಯ ಅತ್ಯಂತ ಜನನಿಬಿಡ ಮತ್ತು ವಾಣಿಜ್ಯ ಪ್ರದೇಶವಾದ ಮಾಳವೀಯ ನಗರದಲ್ಲಿ 2026 ಜೂನ್ 3, ಬುಧವಾರ ನಸುಕಿನ ಜಾವ ಸಂಭವಿಸಿದ ಭೀಕರ ಅಗ್ನಿ ದುರಂತವು ಇಡೀ ದೇಶವನ್ನು ಬೆಚ್ಚಿಬೀಳಿಸಿದೆ. 'ಫ್ಲೋರಿಶ್ ಸ್ಟೇ ಬಿ...

“ವಿಷ ಕಾರದೆ ಮಾತನಾಡಿ”: ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್ ತಾಕೀತು

ಹೆಚ್ಚು ಮಕ್ಕಳನ್ನು ಹೆರುವ ಮುಸ್ಲಿಂ ಮಹಿಳೆಯರನ್ನು ಲೇವಡಿ ಮಾಡುವ ಮೂಲಕ ಕೋಮು ದ್ವೇಷ ಹರಡಿದ್ದಾರೆ ಎಂಬ ಆರೋಪ ಎದುರಿಸುತ್ತಿರುವ ಹಿಂದುತ್ವ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಕಲ್ಲಡ್ಕ ಅವರಿಗೆ ತಮ್ಮ ಮುಂದಿನ ಭಾಷಣಗಳಲ್ಲಿ...

ಪತ್ರಕರ್ತ- ಚಿತ್ರ ನಿರ್ಮಾಪಕ ಸೇರಿದಂತೆ ಹಲವು ಕ್ಷೇತ್ರಗಳ ಪ್ರಮುಖರನ್ನು ವಕ್ತಾರರನ್ನಾಗಿ ನೇಮಿಸಿದ ಸಿಜೆಪಿ

ಆನ್‌ಲೈನ್ ಸೆನ್ಸೇಷನ್ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ)ಯು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳ ವಿರುದ್ಧ ಪ್ರಸ್ತಾಪಿಸಿದ ಪ್ರತಿಭಟನೆಗೆ ಮುಂಚಿತವಾಗಿ ತನ್ನ ವ್ಯಾಪ್ತಿಯನ್ನು ವಿಸ್ತರಿಸುವ ಸಲುವಾಗಿ ಮೂವರು ವಕ್ತಾರರ ಹೆಸರನ್ನು ಘೋಷಿಸಿದೆ. ಎಕ್ಸ್‌ನಲ್ಲಿನ ಪೋಸ್ಟ್‌ ಮಾಡಿರುವ ಅಭಿಜೀತ್...

CBSE ಪರೀಕ್ಷೆಯಲ್ಲಿ OSM ವಿವಾದ | ಸಂಸದೀಯ ಸಮಿತಿಯ ಮುಂದೆ ಹಾಜರಾದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಸಿ) ಆನ್-ಸ್ಕ್ರೀನ್ ಮಾರ್ಕಿಂಗ್ (ಒಎಸ್‌ಎಂ) ಮೌಲ್ಯಮಾಪನ ವ್ಯವಸ್ಥೆಯಲ್ಲಿನ ಗಂಭೀರ ಲೋಪಗಳ ಕುರಿತು ವಿವಾದ ಭುಗಿಲೆದ್ದಿರುವ ನಡುವೆ, 17 ವರ್ಷದ ವಿದ್ಯಾರ್ಥಿ ಸಾರ್ಥಕ್ ಸಿದ್ಧಾಂತ್ ನವದೆಹಲಿಯ ಸಂಸತ್ ಭವನದಲ್ಲಿ...

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...