Homeಕರ್ನಾಟಕಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ... : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

ಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ… : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

- Advertisement -
- Advertisement -

ಆರು ಸಲ ಸಂಸದರಾಗಿ, ನಾಲ್ಕು ಸಲ ಶಾಸಕಿಯಾಗಿ, ಎರಡು ಸಲ ಸಚಿವೆಯಾಗಿ ಕೆಲಸ ಮಾಡಿದ ಸುಷ್ಮಾ ಸ್ವರಾಜ್ ತೀರಿಕೊಂಡಿದ್ದಾರೆ. ಭಾರತದ ಪುರುಷಕೇಂದ್ರಿತ ರಾಜಕಾರಣದಲ್ಲಿ ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡಿದ್ದು ಪ್ರಶಂಸಾರ್ಹ. ವಿದೇಶಾಂಗ ಸಚಿವೆ ಆಗಿದ್ದಾಗ ಹಲವು ಜನರ ಚಿಕಿತ್ಸೆಗೆ ಅವರು ನೆರವಾದರು, ಅಪ್ಪಟ ದೇಶಪ್ರೇಮಿಯಾಗಿದ್ದರು ಇತ್ಯಾದಿ ವಿವರಗಳನ್ನು ನಮ್ಮ ಮಾಧ್ಯಮಗಳು ಕೊಂಚ ಉತ್ಪ್ರೇಕ್ಷೆಯಿಂದಲೇ ವರದಿ ಮಾಡುತ್ತಿವೆ ಅನಿಸುತ್ತಿದೆ.

ಅದರಲ್ಲೂ ಕರ್ನಾಟಕದ ಜೊತೆಗಿನ ಅವರ ಸಂಬಂಧದ ಕುರಿತು ‘ಅದೊಂದು ಆದರ್ಶದ ರಾಜಕೀಯ’ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ಆತ್ಮವಂಚನೆಯ ವರದಿ, ಹೊಗಳಿಕೆಗಳು ನಾಡಿನ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಬಾರದು ಎಂಬ ಕಾರಣಕ್ಕೆ ಇಲ್ಲಿ ಕೆಲವು ವಾಸ್ತವಗಳನ್ನು ನಿಮ್ಮ ಮುಂದೆ ಇಡಲೇಬೇಕಾಗಿದೆ.

ಅವರ ‘ಅಪ್ಪಟ ದೇಶಪ್ರೇಮ’ ಆರೆಸ್ಸೆಸ್ ಮಾದರಿಯದ್ದಾಗಿತ್ತೇ ಹೊರತು ಅದೆಂದೂ ವಿಶಾಲ ಭಾರತದ ಸರ್ವಜನರನ್ನೂ ಒಳಗೊಳ್ಳುವ ಭಾರತದ ಬಗೆಗಿನ ಪ್ರೇಮವಾಗಿರಲಿಲ್ಲ; ಅದು ಹಿಂದೂ ರಾಷ್ಟ್ರವೆಂಬ ಮತಾಂಧ ಪರಿಕಲ್ಪನೆಯ ಭಾಗವಾಗಿ ಅರಳಿದ ‘ದೇಶಪ್ರೇಮ’ವಾಗಿತ್ತಷ್ಟೇ. ಇನ್ನು ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡುವುದು ಕಷ್ಟಸಾಧ್ಯ. ಆದರೆ ಇತರೆಲ್ಲಾ ಪಕ್ಷಗಳ ಮಹಿಳಾ ರಾಜಕಾರಣಿಗಳಂತೆ ಮಹಿಳೆಯರ ಮೇಲೆ ತಮ್ಮ ಪಕ್ಷದವರಿಂದಲೇ ದೌರ್ಜನ್ಯ, ದಬ್ಬಾಳಿಕೆ ನಡೆದಾಗ ಅದರು ವಿರುದ್ಧ ಇವರು ದನಿಯೆತ್ತಿದ್ದು ಕಂಡುಬಂದಿಲ್ಲ.

2004ರಲ್ಲಿ ಯುಪಿಎಗೆ ಬಹುಮತ ಬಂದು ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಹುದ್ದೆ ಸಿಗುವ ಸಾಧ್ಯತೆಯಿದ್ದಾಗ ಬಿಜೆಪಿ ಮತ್ತು ಸಂಘ ಪರಿವಾರದಿಂದ ತೀವ್ರ ವಿರೋಧ ವ್ಯಕ್ತವಾಗಿತು. ಆಗ ಸಂಘ ಪರಿವಾರ ಬಳಸಿಕೊಂಡಿದ್ದು ಹಣೆ ತುಂಬ ಕುಂಕುಮ ಇಡುವ ‘ಮಾದರಿ’ ಹಿಂದೂ ಮಹಿಳೆ ಸುಷ್ಮಾರನ್ನು. ‘ಸೋನಿಯಾ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುವೆ, ಜೀವನಪರ್ಯಂತ ಬಿಳಿ ಸೀರೆ ಉಡುವೆ’ ಹೀಗೆಲ್ಲ ಅಸಹ್ಯ ಮಾತಾಡಿದ ಸುಷ್ಮಾರನ್ನು ಧೀಮಂತ ನಾಯಕಿ ಎಂದು ಹೇಗೆ ಕರೆಯುವುದು? ಸೋನಿಯಾರನ್ನು ತಡೆಯುವ ಭರದಲ್ಲಿ ಅವರು ತಮಗೆ ತಾವೇ ಅವಮಾನ ಮಾಡಿಕೊಡಿದ್ದರು.

ಕರ್ನಾಟಕದ ಜೊತೆಗೆ ಅವರಿಗೆ ತುಂಬ ಆತ್ಮೀಯ ಸಂಬಂಧ ಇತ್ತು, ಕರ್ನಾಟಕದ ಬಗ್ಗೆ ಅಪಾರ ಕಾಳಜಿ ಇತ್ತು ಎಂದೆಲ್ಲ ನಮ್ಮ ಮಾಧ್ಯಮಗಳು ಹೇಳಿವೆ, ಹೇಳುತ್ತಲೇ ಇವೆ. ಹೌದು ಅವರಿಗೆ ಬಳ್ಳಾರಿಯೊಂದಿಗೆ ಅವರಿಗೆ ‘ಆತ್ಮೀಯ’ ಒಡನಾಟವಿತ್ತೇ ವಿನಃ ಇಡೀ ಕರ್ನಾಟಕದೊಂದಿಗೆ ಅಲ್ಲ. ಬಳ್ಳಾರಿಯ ಜೊತೆಗಿನ ಒಡನಾಟ ಬಳ್ಳಾರಿಯ ಕಾಳಜಿಯಿಂದ ಮೂಡಿದ್ದಲ್ಲ, ಅದು ಸ್ವಾರ್ಥದಿಂದ ಕೂಡಿದ್ದಾಗಿತ್ತು ಅಷ್ಟೇ…

1999ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿದಾಗ ಅವರ ವಿರುದ್ಧ ಸುಷ್ಮಾರನ್ನು ಕಣಕ್ಕಿಳಿಸಲಾಗಿತು. ‘ಸೋನಿಯಾ ವಿದೇಶಿ ಮಹಿಳೆ’ ಎಂದೆಲ್ಲ ಈ ‘ಅಪ್ಪಟ’ ದೇಶೀ ನಾರಿ ಕೂಗಾಡಿಕೊಂಡರೂ 56 ಸಾವಿರ ಮತಗಳಿಂದ ಸೋತರು. ಆಗಲೇ ಅವರಿಗೆ ಬಳ್ಳಾರಿಯ ಜನಾರ್ಧನರೆಡ್ಡಿ ಮತ್ತು ಶ್ರೀರಾಮುಲು ಥರದವರ ಸಂಪರ್ಕ ಪ್ರಾಪ್ತವಾಗಿತು. ಆಗಿನ್ನೂ ಗಣಿ ದಂಧೆ ತಾರಕಕ್ಕೆ ಏರಿರಲಿಲ್ಲ. ‘ಎನ್ನೋಬಲ್’ ಎಂಬ ಹಣಕಾಸಿನ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಟೋಪಿ ಹಾಕಿದ್ದ ರೆಡ್ಡಿಗಳು ಬಿಜೆಪಿಯಲ್ಲಿ ನೆಲೆ ಕಂಡುಕೊಂಡಿದ್ದರು.

1999-2004ರ ವಾಜಪೇಯಿ ಸರ್ಕಾರದಲ್ಲಿ ಸುಷ್ಮಾ ಸಚಿವೆಯಾಗಿದ್ದರು. 2003ರ ವೇಳೆಗೆ ಕಬ್ಬಿಣ ಅದಿರಿಗೆ ಹೊರದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಚೀನಾದಲ್ಲಿ ದೊಡ್ಡ ಬೇಡಿಕೆ ಉಂಟಾಗಿತು. ಅಷ್ಟೊತ್ತಿಗೆ ಸುಷ್ಮಾ ಕೃಪೆಯಿಂದ ಗಣಿ ದಂಧೆಗಿಳಿದಿದ್ದ ರೆಡ್ಡಿಗಳು ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಕರ್ನಾಟಕದ ಸಾರ್ವಜನಿಕ ಸಂಪತ್ತನ್ನೆಲ್ಲ ಲೂಟಿ ಮಾಡಿದ್ದರು.

1999ರಲ್ಲಿ ಬಳ್ಳಾರಿಯಲ್ಲಿ ಸೋತ ಮೇಲೆಯೂ 2010ರವರೆಗೂ ಸುಷ್ಮಾರವರು ಕರ್ನಾಟಕದ ನಂಟು ಬಿಡಲೇ ಇಲ್ಲ ಎಂದು ಬಹುಪಾಲು ಮಾಧ್ಯಮಗಳು ಹೇಳುತ್ತಿವೆ. ನಿಜ, ಅದು ನಂಟಲ್ಲ, ಗಂಟಿನ ಕತೆ… ಸುಷ್ಮಾರವರು 1999ರಲ್ಲಿ ಸೋತ ನಂತರ ಪ್ರತಿವರ್ಷವೂ ಬಳ್ಳಾರಿಗೆ ಬಂದು ವರ ಮಹಾಲಕ್ಷ್ಮೀ ಹಬ್ಬ ಆಚರಿಸುತ್ತಿದ್ದರು. ರೆಡ್ಡಿ-ಶ್ರೀರಾಮುಲುಗಳನ್ನು ಅವರು ಮಕ್ಕಳೆನ್ನುವುದು, ಈ ಗಣಿಗಳ್ಳರು ಅವರನ್ನು ‘ಅಮ್ಮ’ ಎನ್ನುವುದು ಕೆಲವು ತೆಲುಗು ಸಿನಿಮಾದ ವಿಲಕ್ಷಣ ನಡವಳಿಕೆಗಳಂತೆ ಕಾಣುತ್ತಿದ್ದವು.

ಬಳ್ಳಾರಿಗೆ ಬರುತ್ತಿದ್ದ ‘ಅಮ್ಮ’ ಮಕ್ಕಳ ಮನೆಯಲ್ಲಿ ವರ ಮಹಾಲಕ್ಷ್ಮಿ ಹಬ್ಬ ಮಾಡುತ್ತಿರಲಿಲ್ಲ! ಬದಲಿಗೆ ಬಳ್ಳಾರಿಯ ಬ್ರಾಹ್ಮಣ ಕುಟುಂಬವೊಂದರ ಮನೆಯಲ್ಲಿ ಈ ಡ್ರಾಮಾ ಜರುಗುತ್ತಿತ್ತು! ಇದರಿಂದ ಎಂತಹ ಜಾತಿ ಮನಸ್ಸು ಸುಷ್ಮಾ ಅವರದ್ದು ಎಂದು ವಿವರಿಸುವ ಅಗತ್ಯವಿಲ್ಲ ಅಲ್ಲವೇ? ಆದರೆ ಆ ಬ್ರಾಹ್ಮಣರ ಮನೆಯಲ್ಲಿ ಎಲೆ, ಅಡಿಕೆ, ಕುಂಕುಮ, ಅರಿಷಿಣ, ಸೀರೆಗಳ ಉಡಿ ತುಂಬಿಕೊಳ್ಳುತ್ತಿದ್ದ ನಂತರ ಅವರ ಸವಾರಿ ಸೀದಾ ರೆಡ್ಡಿಗಳ ಮನೆ ಕಡೆ ಹೊರಡುತ್ತಿತ್ತು. ಅಲ್ಲಿ ನಿಜವಾದ ಉಡಿ ತುಂಬುವ ಕಾರ್ಯ ನಡೆಯುತ್ತಿತ್ತು. ಈ ನಾಡಿನ ಸಂಪತ್ತಿನ ಲೂಟಿಯ ಒಂದು ಭಾಗ ಅದಿರಿನ ಧೂಳಿನ ಹಾಗೆ ದೆಹಲಿ ಕಡೆ ಹಾರಿ ಹೋಗುತ್ತಿತ್ತು.

2008ರಲ್ಲಿ ಯಡಿಯೂರಪ್ಪ ಸರ್ಕಾರವಿದ್ದಾಗಲಂತೂ ರೆಡ್ಡಿ-ಶ್ರೀರಾಮುಲುಗಳ ಕಾರುಬಾರು ಭಾರೀ ಜೋರಾಗಿತ್ತಲ್ಲ? ಒಮ್ಮೆ ಯಡಿಯೂರಪ್ಪರನ್ನೇ ಕೆಡವಲು ಈ ಅಡವಿ-ದೊಂಗುಲುಗಳು ಕೈ ಹಾಕಿದಾಗ ಉಡಿ ತುಂಬಿಸಿಕೊಂಡವರ ಸಪೋರ್ಟೂ ಅದಕ್ಕಿತ್ತು! ಮುಂದೆ ಅಡ್ವಾಣಿ ಸಮ್ಮುಖದಲ್ಲಿ ಯಡಿಯೂರಪ್ಪ ಮತ್ತು ರೆಡ್ಡಿ – ರಾಮುಲಗಳ ನಡುವೆ ರಾಜಿ ಮಾಡಿಸಿದ್ದು ಇದೇ ಸುಷ್ಮಾ ಮೇಡಮ್ಮು.

ಯಾವಾಗ ಜನಾರ್ಧನರೆಡ್ಡಿ ಜೈಲು ಪಾಲಾದರೋ ಆಗ ಯು ಟರ್ನ್ ತೆಗೆದುಕೊಂಡ ಸುಷ್ಮಾರವರು, ‘ರೆಡ್ಡಿ-ರಾಮುಲು ಇತ್ಯಾದಿ ಎಲ್ಲ ನನಗೆ ವಿಶೇಷವಾಗಿ ಗೊತ್ತಿಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರಂತೆ ಅವರೂ ಪರಿಚಯ ಅಷ್ಟೇ’ ಎಂದು ಕೈ ಎತ್ತಿಬಿಟ್ಟರು! ಈಗ ಹೇಳಿ, ಸುಷ್ಮಾ ಧೀಮಂತ ನಾಯಕಿ ಆಗಿದ್ದರೇ? ಆದರೆ ಅವರ ನಂತರದಲ್ಲಿ ಪ್ರವರ್ಧಮಾನಕ್ಕೆ ಬಂದ ನರೇಂದ್ರಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಥರಹದ ತೀವ್ರಗಾಮಿ ನಾಯಕರನ್ನು ನೋಡಿದಾಗ ಸುಷ್ಮಾರವರಂತವರು ಸಭ್ಯರಂತೆ ಕಂಡುಬರುವುದು ಈ ಕಾಲದ ದುರಂತಗಳಲ್ಲೊಂದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಸ್ತುನಿಷ್ಟ ವಿಶ್ಲೇಷಣೆ.
    ವ್ಯಕ್ತಿಯೋರ್ವ ಇಲ್ಲವಾದಾಗ ಔಪೋಚಾರಿಕ ಸ್ಮರಣೆ ನಾಗರೀಕ ಲಕ್ಷಣ ನಿಜ, ಆದರೆ ಅತಿಶಯ ಗುಣಗಾನ ಆತ್ಮವಂಚನೆ ಮತ್ತು ಸುಳ್ಳುಗಳ ಮಾದರಿ ಕಟ್ಟಿಕೊಡುವ ಕೆಲಸವೇ ಆಗಿರುತ್ತದೆ.
    ಚರಿತ್ರೆಯೇ ಅರಿವಿಲ್ಲದ ಮಾಧ್ಯಮಗಳು ಸಮೂಹ ಸನ್ನಿಯಂತೆ ಪರಾಕು ಹಾಕುತ್ತಿರುವುದು ಅಸಹ್ಯವಷ್ಟೆ.
    ಇದರ ನಡುವೆ ಮಲ್ಲನಗೌಡರು ಅಸಲಿ ಸುಷ್ಮಾ ಅವರನ್ನು ಮತ್ತೆ ಪರಿಚಯಿಸಿದ್ದಾರೆ.

  2. ತಲೆ ಬೋಲಸಕೋತಿನಿ ಅಂತ ಹೇಳಿದ್ದು ಉಮಾ ಭಾರತಿ ಇವರಲ್ಲ . ಉಳಿದೆರೋ ನಿಮ್ಮ ಮಾತು ನಿಜವಾಗಿದೆ .

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...