Homeಕರ್ನಾಟಕಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ... : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

ಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ… : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

- Advertisement -
- Advertisement -

ಆರು ಸಲ ಸಂಸದರಾಗಿ, ನಾಲ್ಕು ಸಲ ಶಾಸಕಿಯಾಗಿ, ಎರಡು ಸಲ ಸಚಿವೆಯಾಗಿ ಕೆಲಸ ಮಾಡಿದ ಸುಷ್ಮಾ ಸ್ವರಾಜ್ ತೀರಿಕೊಂಡಿದ್ದಾರೆ. ಭಾರತದ ಪುರುಷಕೇಂದ್ರಿತ ರಾಜಕಾರಣದಲ್ಲಿ ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡಿದ್ದು ಪ್ರಶಂಸಾರ್ಹ. ವಿದೇಶಾಂಗ ಸಚಿವೆ ಆಗಿದ್ದಾಗ ಹಲವು ಜನರ ಚಿಕಿತ್ಸೆಗೆ ಅವರು ನೆರವಾದರು, ಅಪ್ಪಟ ದೇಶಪ್ರೇಮಿಯಾಗಿದ್ದರು ಇತ್ಯಾದಿ ವಿವರಗಳನ್ನು ನಮ್ಮ ಮಾಧ್ಯಮಗಳು ಕೊಂಚ ಉತ್ಪ್ರೇಕ್ಷೆಯಿಂದಲೇ ವರದಿ ಮಾಡುತ್ತಿವೆ ಅನಿಸುತ್ತಿದೆ.

ಅದರಲ್ಲೂ ಕರ್ನಾಟಕದ ಜೊತೆಗಿನ ಅವರ ಸಂಬಂಧದ ಕುರಿತು ‘ಅದೊಂದು ಆದರ್ಶದ ರಾಜಕೀಯ’ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ಆತ್ಮವಂಚನೆಯ ವರದಿ, ಹೊಗಳಿಕೆಗಳು ನಾಡಿನ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಬಾರದು ಎಂಬ ಕಾರಣಕ್ಕೆ ಇಲ್ಲಿ ಕೆಲವು ವಾಸ್ತವಗಳನ್ನು ನಿಮ್ಮ ಮುಂದೆ ಇಡಲೇಬೇಕಾಗಿದೆ.

ಅವರ ‘ಅಪ್ಪಟ ದೇಶಪ್ರೇಮ’ ಆರೆಸ್ಸೆಸ್ ಮಾದರಿಯದ್ದಾಗಿತ್ತೇ ಹೊರತು ಅದೆಂದೂ ವಿಶಾಲ ಭಾರತದ ಸರ್ವಜನರನ್ನೂ ಒಳಗೊಳ್ಳುವ ಭಾರತದ ಬಗೆಗಿನ ಪ್ರೇಮವಾಗಿರಲಿಲ್ಲ; ಅದು ಹಿಂದೂ ರಾಷ್ಟ್ರವೆಂಬ ಮತಾಂಧ ಪರಿಕಲ್ಪನೆಯ ಭಾಗವಾಗಿ ಅರಳಿದ ‘ದೇಶಪ್ರೇಮ’ವಾಗಿತ್ತಷ್ಟೇ. ಇನ್ನು ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡುವುದು ಕಷ್ಟಸಾಧ್ಯ. ಆದರೆ ಇತರೆಲ್ಲಾ ಪಕ್ಷಗಳ ಮಹಿಳಾ ರಾಜಕಾರಣಿಗಳಂತೆ ಮಹಿಳೆಯರ ಮೇಲೆ ತಮ್ಮ ಪಕ್ಷದವರಿಂದಲೇ ದೌರ್ಜನ್ಯ, ದಬ್ಬಾಳಿಕೆ ನಡೆದಾಗ ಅದರು ವಿರುದ್ಧ ಇವರು ದನಿಯೆತ್ತಿದ್ದು ಕಂಡುಬಂದಿಲ್ಲ.

2004ರಲ್ಲಿ ಯುಪಿಎಗೆ ಬಹುಮತ ಬಂದು ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಹುದ್ದೆ ಸಿಗುವ ಸಾಧ್ಯತೆಯಿದ್ದಾಗ ಬಿಜೆಪಿ ಮತ್ತು ಸಂಘ ಪರಿವಾರದಿಂದ ತೀವ್ರ ವಿರೋಧ ವ್ಯಕ್ತವಾಗಿತು. ಆಗ ಸಂಘ ಪರಿವಾರ ಬಳಸಿಕೊಂಡಿದ್ದು ಹಣೆ ತುಂಬ ಕುಂಕುಮ ಇಡುವ ‘ಮಾದರಿ’ ಹಿಂದೂ ಮಹಿಳೆ ಸುಷ್ಮಾರನ್ನು. ‘ಸೋನಿಯಾ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುವೆ, ಜೀವನಪರ್ಯಂತ ಬಿಳಿ ಸೀರೆ ಉಡುವೆ’ ಹೀಗೆಲ್ಲ ಅಸಹ್ಯ ಮಾತಾಡಿದ ಸುಷ್ಮಾರನ್ನು ಧೀಮಂತ ನಾಯಕಿ ಎಂದು ಹೇಗೆ ಕರೆಯುವುದು? ಸೋನಿಯಾರನ್ನು ತಡೆಯುವ ಭರದಲ್ಲಿ ಅವರು ತಮಗೆ ತಾವೇ ಅವಮಾನ ಮಾಡಿಕೊಡಿದ್ದರು.

ಕರ್ನಾಟಕದ ಜೊತೆಗೆ ಅವರಿಗೆ ತುಂಬ ಆತ್ಮೀಯ ಸಂಬಂಧ ಇತ್ತು, ಕರ್ನಾಟಕದ ಬಗ್ಗೆ ಅಪಾರ ಕಾಳಜಿ ಇತ್ತು ಎಂದೆಲ್ಲ ನಮ್ಮ ಮಾಧ್ಯಮಗಳು ಹೇಳಿವೆ, ಹೇಳುತ್ತಲೇ ಇವೆ. ಹೌದು ಅವರಿಗೆ ಬಳ್ಳಾರಿಯೊಂದಿಗೆ ಅವರಿಗೆ ‘ಆತ್ಮೀಯ’ ಒಡನಾಟವಿತ್ತೇ ವಿನಃ ಇಡೀ ಕರ್ನಾಟಕದೊಂದಿಗೆ ಅಲ್ಲ. ಬಳ್ಳಾರಿಯ ಜೊತೆಗಿನ ಒಡನಾಟ ಬಳ್ಳಾರಿಯ ಕಾಳಜಿಯಿಂದ ಮೂಡಿದ್ದಲ್ಲ, ಅದು ಸ್ವಾರ್ಥದಿಂದ ಕೂಡಿದ್ದಾಗಿತ್ತು ಅಷ್ಟೇ…

1999ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿದಾಗ ಅವರ ವಿರುದ್ಧ ಸುಷ್ಮಾರನ್ನು ಕಣಕ್ಕಿಳಿಸಲಾಗಿತು. ‘ಸೋನಿಯಾ ವಿದೇಶಿ ಮಹಿಳೆ’ ಎಂದೆಲ್ಲ ಈ ‘ಅಪ್ಪಟ’ ದೇಶೀ ನಾರಿ ಕೂಗಾಡಿಕೊಂಡರೂ 56 ಸಾವಿರ ಮತಗಳಿಂದ ಸೋತರು. ಆಗಲೇ ಅವರಿಗೆ ಬಳ್ಳಾರಿಯ ಜನಾರ್ಧನರೆಡ್ಡಿ ಮತ್ತು ಶ್ರೀರಾಮುಲು ಥರದವರ ಸಂಪರ್ಕ ಪ್ರಾಪ್ತವಾಗಿತು. ಆಗಿನ್ನೂ ಗಣಿ ದಂಧೆ ತಾರಕಕ್ಕೆ ಏರಿರಲಿಲ್ಲ. ‘ಎನ್ನೋಬಲ್’ ಎಂಬ ಹಣಕಾಸಿನ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಟೋಪಿ ಹಾಕಿದ್ದ ರೆಡ್ಡಿಗಳು ಬಿಜೆಪಿಯಲ್ಲಿ ನೆಲೆ ಕಂಡುಕೊಂಡಿದ್ದರು.

1999-2004ರ ವಾಜಪೇಯಿ ಸರ್ಕಾರದಲ್ಲಿ ಸುಷ್ಮಾ ಸಚಿವೆಯಾಗಿದ್ದರು. 2003ರ ವೇಳೆಗೆ ಕಬ್ಬಿಣ ಅದಿರಿಗೆ ಹೊರದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಚೀನಾದಲ್ಲಿ ದೊಡ್ಡ ಬೇಡಿಕೆ ಉಂಟಾಗಿತು. ಅಷ್ಟೊತ್ತಿಗೆ ಸುಷ್ಮಾ ಕೃಪೆಯಿಂದ ಗಣಿ ದಂಧೆಗಿಳಿದಿದ್ದ ರೆಡ್ಡಿಗಳು ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಕರ್ನಾಟಕದ ಸಾರ್ವಜನಿಕ ಸಂಪತ್ತನ್ನೆಲ್ಲ ಲೂಟಿ ಮಾಡಿದ್ದರು.

1999ರಲ್ಲಿ ಬಳ್ಳಾರಿಯಲ್ಲಿ ಸೋತ ಮೇಲೆಯೂ 2010ರವರೆಗೂ ಸುಷ್ಮಾರವರು ಕರ್ನಾಟಕದ ನಂಟು ಬಿಡಲೇ ಇಲ್ಲ ಎಂದು ಬಹುಪಾಲು ಮಾಧ್ಯಮಗಳು ಹೇಳುತ್ತಿವೆ. ನಿಜ, ಅದು ನಂಟಲ್ಲ, ಗಂಟಿನ ಕತೆ… ಸುಷ್ಮಾರವರು 1999ರಲ್ಲಿ ಸೋತ ನಂತರ ಪ್ರತಿವರ್ಷವೂ ಬಳ್ಳಾರಿಗೆ ಬಂದು ವರ ಮಹಾಲಕ್ಷ್ಮೀ ಹಬ್ಬ ಆಚರಿಸುತ್ತಿದ್ದರು. ರೆಡ್ಡಿ-ಶ್ರೀರಾಮುಲುಗಳನ್ನು ಅವರು ಮಕ್ಕಳೆನ್ನುವುದು, ಈ ಗಣಿಗಳ್ಳರು ಅವರನ್ನು ‘ಅಮ್ಮ’ ಎನ್ನುವುದು ಕೆಲವು ತೆಲುಗು ಸಿನಿಮಾದ ವಿಲಕ್ಷಣ ನಡವಳಿಕೆಗಳಂತೆ ಕಾಣುತ್ತಿದ್ದವು.

ಬಳ್ಳಾರಿಗೆ ಬರುತ್ತಿದ್ದ ‘ಅಮ್ಮ’ ಮಕ್ಕಳ ಮನೆಯಲ್ಲಿ ವರ ಮಹಾಲಕ್ಷ್ಮಿ ಹಬ್ಬ ಮಾಡುತ್ತಿರಲಿಲ್ಲ! ಬದಲಿಗೆ ಬಳ್ಳಾರಿಯ ಬ್ರಾಹ್ಮಣ ಕುಟುಂಬವೊಂದರ ಮನೆಯಲ್ಲಿ ಈ ಡ್ರಾಮಾ ಜರುಗುತ್ತಿತ್ತು! ಇದರಿಂದ ಎಂತಹ ಜಾತಿ ಮನಸ್ಸು ಸುಷ್ಮಾ ಅವರದ್ದು ಎಂದು ವಿವರಿಸುವ ಅಗತ್ಯವಿಲ್ಲ ಅಲ್ಲವೇ? ಆದರೆ ಆ ಬ್ರಾಹ್ಮಣರ ಮನೆಯಲ್ಲಿ ಎಲೆ, ಅಡಿಕೆ, ಕುಂಕುಮ, ಅರಿಷಿಣ, ಸೀರೆಗಳ ಉಡಿ ತುಂಬಿಕೊಳ್ಳುತ್ತಿದ್ದ ನಂತರ ಅವರ ಸವಾರಿ ಸೀದಾ ರೆಡ್ಡಿಗಳ ಮನೆ ಕಡೆ ಹೊರಡುತ್ತಿತ್ತು. ಅಲ್ಲಿ ನಿಜವಾದ ಉಡಿ ತುಂಬುವ ಕಾರ್ಯ ನಡೆಯುತ್ತಿತ್ತು. ಈ ನಾಡಿನ ಸಂಪತ್ತಿನ ಲೂಟಿಯ ಒಂದು ಭಾಗ ಅದಿರಿನ ಧೂಳಿನ ಹಾಗೆ ದೆಹಲಿ ಕಡೆ ಹಾರಿ ಹೋಗುತ್ತಿತ್ತು.

2008ರಲ್ಲಿ ಯಡಿಯೂರಪ್ಪ ಸರ್ಕಾರವಿದ್ದಾಗಲಂತೂ ರೆಡ್ಡಿ-ಶ್ರೀರಾಮುಲುಗಳ ಕಾರುಬಾರು ಭಾರೀ ಜೋರಾಗಿತ್ತಲ್ಲ? ಒಮ್ಮೆ ಯಡಿಯೂರಪ್ಪರನ್ನೇ ಕೆಡವಲು ಈ ಅಡವಿ-ದೊಂಗುಲುಗಳು ಕೈ ಹಾಕಿದಾಗ ಉಡಿ ತುಂಬಿಸಿಕೊಂಡವರ ಸಪೋರ್ಟೂ ಅದಕ್ಕಿತ್ತು! ಮುಂದೆ ಅಡ್ವಾಣಿ ಸಮ್ಮುಖದಲ್ಲಿ ಯಡಿಯೂರಪ್ಪ ಮತ್ತು ರೆಡ್ಡಿ – ರಾಮುಲಗಳ ನಡುವೆ ರಾಜಿ ಮಾಡಿಸಿದ್ದು ಇದೇ ಸುಷ್ಮಾ ಮೇಡಮ್ಮು.

ಯಾವಾಗ ಜನಾರ್ಧನರೆಡ್ಡಿ ಜೈಲು ಪಾಲಾದರೋ ಆಗ ಯು ಟರ್ನ್ ತೆಗೆದುಕೊಂಡ ಸುಷ್ಮಾರವರು, ‘ರೆಡ್ಡಿ-ರಾಮುಲು ಇತ್ಯಾದಿ ಎಲ್ಲ ನನಗೆ ವಿಶೇಷವಾಗಿ ಗೊತ್ತಿಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರಂತೆ ಅವರೂ ಪರಿಚಯ ಅಷ್ಟೇ’ ಎಂದು ಕೈ ಎತ್ತಿಬಿಟ್ಟರು! ಈಗ ಹೇಳಿ, ಸುಷ್ಮಾ ಧೀಮಂತ ನಾಯಕಿ ಆಗಿದ್ದರೇ? ಆದರೆ ಅವರ ನಂತರದಲ್ಲಿ ಪ್ರವರ್ಧಮಾನಕ್ಕೆ ಬಂದ ನರೇಂದ್ರಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಥರಹದ ತೀವ್ರಗಾಮಿ ನಾಯಕರನ್ನು ನೋಡಿದಾಗ ಸುಷ್ಮಾರವರಂತವರು ಸಭ್ಯರಂತೆ ಕಂಡುಬರುವುದು ಈ ಕಾಲದ ದುರಂತಗಳಲ್ಲೊಂದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಸ್ತುನಿಷ್ಟ ವಿಶ್ಲೇಷಣೆ.
    ವ್ಯಕ್ತಿಯೋರ್ವ ಇಲ್ಲವಾದಾಗ ಔಪೋಚಾರಿಕ ಸ್ಮರಣೆ ನಾಗರೀಕ ಲಕ್ಷಣ ನಿಜ, ಆದರೆ ಅತಿಶಯ ಗುಣಗಾನ ಆತ್ಮವಂಚನೆ ಮತ್ತು ಸುಳ್ಳುಗಳ ಮಾದರಿ ಕಟ್ಟಿಕೊಡುವ ಕೆಲಸವೇ ಆಗಿರುತ್ತದೆ.
    ಚರಿತ್ರೆಯೇ ಅರಿವಿಲ್ಲದ ಮಾಧ್ಯಮಗಳು ಸಮೂಹ ಸನ್ನಿಯಂತೆ ಪರಾಕು ಹಾಕುತ್ತಿರುವುದು ಅಸಹ್ಯವಷ್ಟೆ.
    ಇದರ ನಡುವೆ ಮಲ್ಲನಗೌಡರು ಅಸಲಿ ಸುಷ್ಮಾ ಅವರನ್ನು ಮತ್ತೆ ಪರಿಚಯಿಸಿದ್ದಾರೆ.

  2. ತಲೆ ಬೋಲಸಕೋತಿನಿ ಅಂತ ಹೇಳಿದ್ದು ಉಮಾ ಭಾರತಿ ಇವರಲ್ಲ . ಉಳಿದೆರೋ ನಿಮ್ಮ ಮಾತು ನಿಜವಾಗಿದೆ .

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...