Homeಕರ್ನಾಟಕಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ... : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

ಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ… : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

- Advertisement -
- Advertisement -

ಆರು ಸಲ ಸಂಸದರಾಗಿ, ನಾಲ್ಕು ಸಲ ಶಾಸಕಿಯಾಗಿ, ಎರಡು ಸಲ ಸಚಿವೆಯಾಗಿ ಕೆಲಸ ಮಾಡಿದ ಸುಷ್ಮಾ ಸ್ವರಾಜ್ ತೀರಿಕೊಂಡಿದ್ದಾರೆ. ಭಾರತದ ಪುರುಷಕೇಂದ್ರಿತ ರಾಜಕಾರಣದಲ್ಲಿ ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡಿದ್ದು ಪ್ರಶಂಸಾರ್ಹ. ವಿದೇಶಾಂಗ ಸಚಿವೆ ಆಗಿದ್ದಾಗ ಹಲವು ಜನರ ಚಿಕಿತ್ಸೆಗೆ ಅವರು ನೆರವಾದರು, ಅಪ್ಪಟ ದೇಶಪ್ರೇಮಿಯಾಗಿದ್ದರು ಇತ್ಯಾದಿ ವಿವರಗಳನ್ನು ನಮ್ಮ ಮಾಧ್ಯಮಗಳು ಕೊಂಚ ಉತ್ಪ್ರೇಕ್ಷೆಯಿಂದಲೇ ವರದಿ ಮಾಡುತ್ತಿವೆ ಅನಿಸುತ್ತಿದೆ.

ಅದರಲ್ಲೂ ಕರ್ನಾಟಕದ ಜೊತೆಗಿನ ಅವರ ಸಂಬಂಧದ ಕುರಿತು ‘ಅದೊಂದು ಆದರ್ಶದ ರಾಜಕೀಯ’ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ಆತ್ಮವಂಚನೆಯ ವರದಿ, ಹೊಗಳಿಕೆಗಳು ನಾಡಿನ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಬಾರದು ಎಂಬ ಕಾರಣಕ್ಕೆ ಇಲ್ಲಿ ಕೆಲವು ವಾಸ್ತವಗಳನ್ನು ನಿಮ್ಮ ಮುಂದೆ ಇಡಲೇಬೇಕಾಗಿದೆ.

ಅವರ ‘ಅಪ್ಪಟ ದೇಶಪ್ರೇಮ’ ಆರೆಸ್ಸೆಸ್ ಮಾದರಿಯದ್ದಾಗಿತ್ತೇ ಹೊರತು ಅದೆಂದೂ ವಿಶಾಲ ಭಾರತದ ಸರ್ವಜನರನ್ನೂ ಒಳಗೊಳ್ಳುವ ಭಾರತದ ಬಗೆಗಿನ ಪ್ರೇಮವಾಗಿರಲಿಲ್ಲ; ಅದು ಹಿಂದೂ ರಾಷ್ಟ್ರವೆಂಬ ಮತಾಂಧ ಪರಿಕಲ್ಪನೆಯ ಭಾಗವಾಗಿ ಅರಳಿದ ‘ದೇಶಪ್ರೇಮ’ವಾಗಿತ್ತಷ್ಟೇ. ಇನ್ನು ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡುವುದು ಕಷ್ಟಸಾಧ್ಯ. ಆದರೆ ಇತರೆಲ್ಲಾ ಪಕ್ಷಗಳ ಮಹಿಳಾ ರಾಜಕಾರಣಿಗಳಂತೆ ಮಹಿಳೆಯರ ಮೇಲೆ ತಮ್ಮ ಪಕ್ಷದವರಿಂದಲೇ ದೌರ್ಜನ್ಯ, ದಬ್ಬಾಳಿಕೆ ನಡೆದಾಗ ಅದರು ವಿರುದ್ಧ ಇವರು ದನಿಯೆತ್ತಿದ್ದು ಕಂಡುಬಂದಿಲ್ಲ.

2004ರಲ್ಲಿ ಯುಪಿಎಗೆ ಬಹುಮತ ಬಂದು ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಹುದ್ದೆ ಸಿಗುವ ಸಾಧ್ಯತೆಯಿದ್ದಾಗ ಬಿಜೆಪಿ ಮತ್ತು ಸಂಘ ಪರಿವಾರದಿಂದ ತೀವ್ರ ವಿರೋಧ ವ್ಯಕ್ತವಾಗಿತು. ಆಗ ಸಂಘ ಪರಿವಾರ ಬಳಸಿಕೊಂಡಿದ್ದು ಹಣೆ ತುಂಬ ಕುಂಕುಮ ಇಡುವ ‘ಮಾದರಿ’ ಹಿಂದೂ ಮಹಿಳೆ ಸುಷ್ಮಾರನ್ನು. ‘ಸೋನಿಯಾ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುವೆ, ಜೀವನಪರ್ಯಂತ ಬಿಳಿ ಸೀರೆ ಉಡುವೆ’ ಹೀಗೆಲ್ಲ ಅಸಹ್ಯ ಮಾತಾಡಿದ ಸುಷ್ಮಾರನ್ನು ಧೀಮಂತ ನಾಯಕಿ ಎಂದು ಹೇಗೆ ಕರೆಯುವುದು? ಸೋನಿಯಾರನ್ನು ತಡೆಯುವ ಭರದಲ್ಲಿ ಅವರು ತಮಗೆ ತಾವೇ ಅವಮಾನ ಮಾಡಿಕೊಡಿದ್ದರು.

ಕರ್ನಾಟಕದ ಜೊತೆಗೆ ಅವರಿಗೆ ತುಂಬ ಆತ್ಮೀಯ ಸಂಬಂಧ ಇತ್ತು, ಕರ್ನಾಟಕದ ಬಗ್ಗೆ ಅಪಾರ ಕಾಳಜಿ ಇತ್ತು ಎಂದೆಲ್ಲ ನಮ್ಮ ಮಾಧ್ಯಮಗಳು ಹೇಳಿವೆ, ಹೇಳುತ್ತಲೇ ಇವೆ. ಹೌದು ಅವರಿಗೆ ಬಳ್ಳಾರಿಯೊಂದಿಗೆ ಅವರಿಗೆ ‘ಆತ್ಮೀಯ’ ಒಡನಾಟವಿತ್ತೇ ವಿನಃ ಇಡೀ ಕರ್ನಾಟಕದೊಂದಿಗೆ ಅಲ್ಲ. ಬಳ್ಳಾರಿಯ ಜೊತೆಗಿನ ಒಡನಾಟ ಬಳ್ಳಾರಿಯ ಕಾಳಜಿಯಿಂದ ಮೂಡಿದ್ದಲ್ಲ, ಅದು ಸ್ವಾರ್ಥದಿಂದ ಕೂಡಿದ್ದಾಗಿತ್ತು ಅಷ್ಟೇ…

1999ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿದಾಗ ಅವರ ವಿರುದ್ಧ ಸುಷ್ಮಾರನ್ನು ಕಣಕ್ಕಿಳಿಸಲಾಗಿತು. ‘ಸೋನಿಯಾ ವಿದೇಶಿ ಮಹಿಳೆ’ ಎಂದೆಲ್ಲ ಈ ‘ಅಪ್ಪಟ’ ದೇಶೀ ನಾರಿ ಕೂಗಾಡಿಕೊಂಡರೂ 56 ಸಾವಿರ ಮತಗಳಿಂದ ಸೋತರು. ಆಗಲೇ ಅವರಿಗೆ ಬಳ್ಳಾರಿಯ ಜನಾರ್ಧನರೆಡ್ಡಿ ಮತ್ತು ಶ್ರೀರಾಮುಲು ಥರದವರ ಸಂಪರ್ಕ ಪ್ರಾಪ್ತವಾಗಿತು. ಆಗಿನ್ನೂ ಗಣಿ ದಂಧೆ ತಾರಕಕ್ಕೆ ಏರಿರಲಿಲ್ಲ. ‘ಎನ್ನೋಬಲ್’ ಎಂಬ ಹಣಕಾಸಿನ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಟೋಪಿ ಹಾಕಿದ್ದ ರೆಡ್ಡಿಗಳು ಬಿಜೆಪಿಯಲ್ಲಿ ನೆಲೆ ಕಂಡುಕೊಂಡಿದ್ದರು.

1999-2004ರ ವಾಜಪೇಯಿ ಸರ್ಕಾರದಲ್ಲಿ ಸುಷ್ಮಾ ಸಚಿವೆಯಾಗಿದ್ದರು. 2003ರ ವೇಳೆಗೆ ಕಬ್ಬಿಣ ಅದಿರಿಗೆ ಹೊರದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಚೀನಾದಲ್ಲಿ ದೊಡ್ಡ ಬೇಡಿಕೆ ಉಂಟಾಗಿತು. ಅಷ್ಟೊತ್ತಿಗೆ ಸುಷ್ಮಾ ಕೃಪೆಯಿಂದ ಗಣಿ ದಂಧೆಗಿಳಿದಿದ್ದ ರೆಡ್ಡಿಗಳು ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಕರ್ನಾಟಕದ ಸಾರ್ವಜನಿಕ ಸಂಪತ್ತನ್ನೆಲ್ಲ ಲೂಟಿ ಮಾಡಿದ್ದರು.

1999ರಲ್ಲಿ ಬಳ್ಳಾರಿಯಲ್ಲಿ ಸೋತ ಮೇಲೆಯೂ 2010ರವರೆಗೂ ಸುಷ್ಮಾರವರು ಕರ್ನಾಟಕದ ನಂಟು ಬಿಡಲೇ ಇಲ್ಲ ಎಂದು ಬಹುಪಾಲು ಮಾಧ್ಯಮಗಳು ಹೇಳುತ್ತಿವೆ. ನಿಜ, ಅದು ನಂಟಲ್ಲ, ಗಂಟಿನ ಕತೆ… ಸುಷ್ಮಾರವರು 1999ರಲ್ಲಿ ಸೋತ ನಂತರ ಪ್ರತಿವರ್ಷವೂ ಬಳ್ಳಾರಿಗೆ ಬಂದು ವರ ಮಹಾಲಕ್ಷ್ಮೀ ಹಬ್ಬ ಆಚರಿಸುತ್ತಿದ್ದರು. ರೆಡ್ಡಿ-ಶ್ರೀರಾಮುಲುಗಳನ್ನು ಅವರು ಮಕ್ಕಳೆನ್ನುವುದು, ಈ ಗಣಿಗಳ್ಳರು ಅವರನ್ನು ‘ಅಮ್ಮ’ ಎನ್ನುವುದು ಕೆಲವು ತೆಲುಗು ಸಿನಿಮಾದ ವಿಲಕ್ಷಣ ನಡವಳಿಕೆಗಳಂತೆ ಕಾಣುತ್ತಿದ್ದವು.

ಬಳ್ಳಾರಿಗೆ ಬರುತ್ತಿದ್ದ ‘ಅಮ್ಮ’ ಮಕ್ಕಳ ಮನೆಯಲ್ಲಿ ವರ ಮಹಾಲಕ್ಷ್ಮಿ ಹಬ್ಬ ಮಾಡುತ್ತಿರಲಿಲ್ಲ! ಬದಲಿಗೆ ಬಳ್ಳಾರಿಯ ಬ್ರಾಹ್ಮಣ ಕುಟುಂಬವೊಂದರ ಮನೆಯಲ್ಲಿ ಈ ಡ್ರಾಮಾ ಜರುಗುತ್ತಿತ್ತು! ಇದರಿಂದ ಎಂತಹ ಜಾತಿ ಮನಸ್ಸು ಸುಷ್ಮಾ ಅವರದ್ದು ಎಂದು ವಿವರಿಸುವ ಅಗತ್ಯವಿಲ್ಲ ಅಲ್ಲವೇ? ಆದರೆ ಆ ಬ್ರಾಹ್ಮಣರ ಮನೆಯಲ್ಲಿ ಎಲೆ, ಅಡಿಕೆ, ಕುಂಕುಮ, ಅರಿಷಿಣ, ಸೀರೆಗಳ ಉಡಿ ತುಂಬಿಕೊಳ್ಳುತ್ತಿದ್ದ ನಂತರ ಅವರ ಸವಾರಿ ಸೀದಾ ರೆಡ್ಡಿಗಳ ಮನೆ ಕಡೆ ಹೊರಡುತ್ತಿತ್ತು. ಅಲ್ಲಿ ನಿಜವಾದ ಉಡಿ ತುಂಬುವ ಕಾರ್ಯ ನಡೆಯುತ್ತಿತ್ತು. ಈ ನಾಡಿನ ಸಂಪತ್ತಿನ ಲೂಟಿಯ ಒಂದು ಭಾಗ ಅದಿರಿನ ಧೂಳಿನ ಹಾಗೆ ದೆಹಲಿ ಕಡೆ ಹಾರಿ ಹೋಗುತ್ತಿತ್ತು.

2008ರಲ್ಲಿ ಯಡಿಯೂರಪ್ಪ ಸರ್ಕಾರವಿದ್ದಾಗಲಂತೂ ರೆಡ್ಡಿ-ಶ್ರೀರಾಮುಲುಗಳ ಕಾರುಬಾರು ಭಾರೀ ಜೋರಾಗಿತ್ತಲ್ಲ? ಒಮ್ಮೆ ಯಡಿಯೂರಪ್ಪರನ್ನೇ ಕೆಡವಲು ಈ ಅಡವಿ-ದೊಂಗುಲುಗಳು ಕೈ ಹಾಕಿದಾಗ ಉಡಿ ತುಂಬಿಸಿಕೊಂಡವರ ಸಪೋರ್ಟೂ ಅದಕ್ಕಿತ್ತು! ಮುಂದೆ ಅಡ್ವಾಣಿ ಸಮ್ಮುಖದಲ್ಲಿ ಯಡಿಯೂರಪ್ಪ ಮತ್ತು ರೆಡ್ಡಿ – ರಾಮುಲಗಳ ನಡುವೆ ರಾಜಿ ಮಾಡಿಸಿದ್ದು ಇದೇ ಸುಷ್ಮಾ ಮೇಡಮ್ಮು.

ಯಾವಾಗ ಜನಾರ್ಧನರೆಡ್ಡಿ ಜೈಲು ಪಾಲಾದರೋ ಆಗ ಯು ಟರ್ನ್ ತೆಗೆದುಕೊಂಡ ಸುಷ್ಮಾರವರು, ‘ರೆಡ್ಡಿ-ರಾಮುಲು ಇತ್ಯಾದಿ ಎಲ್ಲ ನನಗೆ ವಿಶೇಷವಾಗಿ ಗೊತ್ತಿಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರಂತೆ ಅವರೂ ಪರಿಚಯ ಅಷ್ಟೇ’ ಎಂದು ಕೈ ಎತ್ತಿಬಿಟ್ಟರು! ಈಗ ಹೇಳಿ, ಸುಷ್ಮಾ ಧೀಮಂತ ನಾಯಕಿ ಆಗಿದ್ದರೇ? ಆದರೆ ಅವರ ನಂತರದಲ್ಲಿ ಪ್ರವರ್ಧಮಾನಕ್ಕೆ ಬಂದ ನರೇಂದ್ರಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಥರಹದ ತೀವ್ರಗಾಮಿ ನಾಯಕರನ್ನು ನೋಡಿದಾಗ ಸುಷ್ಮಾರವರಂತವರು ಸಭ್ಯರಂತೆ ಕಂಡುಬರುವುದು ಈ ಕಾಲದ ದುರಂತಗಳಲ್ಲೊಂದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಸ್ತುನಿಷ್ಟ ವಿಶ್ಲೇಷಣೆ.
    ವ್ಯಕ್ತಿಯೋರ್ವ ಇಲ್ಲವಾದಾಗ ಔಪೋಚಾರಿಕ ಸ್ಮರಣೆ ನಾಗರೀಕ ಲಕ್ಷಣ ನಿಜ, ಆದರೆ ಅತಿಶಯ ಗುಣಗಾನ ಆತ್ಮವಂಚನೆ ಮತ್ತು ಸುಳ್ಳುಗಳ ಮಾದರಿ ಕಟ್ಟಿಕೊಡುವ ಕೆಲಸವೇ ಆಗಿರುತ್ತದೆ.
    ಚರಿತ್ರೆಯೇ ಅರಿವಿಲ್ಲದ ಮಾಧ್ಯಮಗಳು ಸಮೂಹ ಸನ್ನಿಯಂತೆ ಪರಾಕು ಹಾಕುತ್ತಿರುವುದು ಅಸಹ್ಯವಷ್ಟೆ.
    ಇದರ ನಡುವೆ ಮಲ್ಲನಗೌಡರು ಅಸಲಿ ಸುಷ್ಮಾ ಅವರನ್ನು ಮತ್ತೆ ಪರಿಚಯಿಸಿದ್ದಾರೆ.

  2. ತಲೆ ಬೋಲಸಕೋತಿನಿ ಅಂತ ಹೇಳಿದ್ದು ಉಮಾ ಭಾರತಿ ಇವರಲ್ಲ . ಉಳಿದೆರೋ ನಿಮ್ಮ ಮಾತು ನಿಜವಾಗಿದೆ .

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...