Homeಕರ್ನಾಟಕಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ... : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

ಸುಷ್ಮಾ ಸ್ವರಾಜ್‍ ರಿಗೊಂದು ಕಂಬನಿ… : ಜೊತೆಗೆ ಸುಷ್ಮಾ ಸ್ವರಾಜ್ ಸುತ್ತ ಹೆಣೆಯಲ್ಪಟ್ಟ ಕತೆಗಳು

- Advertisement -
- Advertisement -

ಆರು ಸಲ ಸಂಸದರಾಗಿ, ನಾಲ್ಕು ಸಲ ಶಾಸಕಿಯಾಗಿ, ಎರಡು ಸಲ ಸಚಿವೆಯಾಗಿ ಕೆಲಸ ಮಾಡಿದ ಸುಷ್ಮಾ ಸ್ವರಾಜ್ ತೀರಿಕೊಂಡಿದ್ದಾರೆ. ಭಾರತದ ಪುರುಷಕೇಂದ್ರಿತ ರಾಜಕಾರಣದಲ್ಲಿ ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡಿದ್ದು ಪ್ರಶಂಸಾರ್ಹ. ವಿದೇಶಾಂಗ ಸಚಿವೆ ಆಗಿದ್ದಾಗ ಹಲವು ಜನರ ಚಿಕಿತ್ಸೆಗೆ ಅವರು ನೆರವಾದರು, ಅಪ್ಪಟ ದೇಶಪ್ರೇಮಿಯಾಗಿದ್ದರು ಇತ್ಯಾದಿ ವಿವರಗಳನ್ನು ನಮ್ಮ ಮಾಧ್ಯಮಗಳು ಕೊಂಚ ಉತ್ಪ್ರೇಕ್ಷೆಯಿಂದಲೇ ವರದಿ ಮಾಡುತ್ತಿವೆ ಅನಿಸುತ್ತಿದೆ.

ಅದರಲ್ಲೂ ಕರ್ನಾಟಕದ ಜೊತೆಗಿನ ಅವರ ಸಂಬಂಧದ ಕುರಿತು ‘ಅದೊಂದು ಆದರ್ಶದ ರಾಜಕೀಯ’ ಎಂಬಂತೆ ಬಿಂಬಿಸಲಾಗುತ್ತಿದೆ. ಇಂತಹ ಆತ್ಮವಂಚನೆಯ ವರದಿ, ಹೊಗಳಿಕೆಗಳು ನಾಡಿನ ಜನರಲ್ಲಿ ತಪ್ಪು ಕಲ್ಪನೆ ಮೂಡಿಸಬಾರದು ಎಂಬ ಕಾರಣಕ್ಕೆ ಇಲ್ಲಿ ಕೆಲವು ವಾಸ್ತವಗಳನ್ನು ನಿಮ್ಮ ಮುಂದೆ ಇಡಲೇಬೇಕಾಗಿದೆ.

ಅವರ ‘ಅಪ್ಪಟ ದೇಶಪ್ರೇಮ’ ಆರೆಸ್ಸೆಸ್ ಮಾದರಿಯದ್ದಾಗಿತ್ತೇ ಹೊರತು ಅದೆಂದೂ ವಿಶಾಲ ಭಾರತದ ಸರ್ವಜನರನ್ನೂ ಒಳಗೊಳ್ಳುವ ಭಾರತದ ಬಗೆಗಿನ ಪ್ರೇಮವಾಗಿರಲಿಲ್ಲ; ಅದು ಹಿಂದೂ ರಾಷ್ಟ್ರವೆಂಬ ಮತಾಂಧ ಪರಿಕಲ್ಪನೆಯ ಭಾಗವಾಗಿ ಅರಳಿದ ‘ದೇಶಪ್ರೇಮ’ವಾಗಿತ್ತಷ್ಟೇ. ಇನ್ನು ಇಷ್ಟು ಸುದೀರ್ಘ ಕಾಲ ಮಹಿಳೆಯೊಬ್ಬರು ರಾಜಕೀಯ ಮಾಡುವುದು ಕಷ್ಟಸಾಧ್ಯ. ಆದರೆ ಇತರೆಲ್ಲಾ ಪಕ್ಷಗಳ ಮಹಿಳಾ ರಾಜಕಾರಣಿಗಳಂತೆ ಮಹಿಳೆಯರ ಮೇಲೆ ತಮ್ಮ ಪಕ್ಷದವರಿಂದಲೇ ದೌರ್ಜನ್ಯ, ದಬ್ಬಾಳಿಕೆ ನಡೆದಾಗ ಅದರು ವಿರುದ್ಧ ಇವರು ದನಿಯೆತ್ತಿದ್ದು ಕಂಡುಬಂದಿಲ್ಲ.

2004ರಲ್ಲಿ ಯುಪಿಎಗೆ ಬಹುಮತ ಬಂದು ಸೋನಿಯಾ ಗಾಂಧಿಯವರಿಗೆ ಪ್ರಧಾನಿ ಹುದ್ದೆ ಸಿಗುವ ಸಾಧ್ಯತೆಯಿದ್ದಾಗ ಬಿಜೆಪಿ ಮತ್ತು ಸಂಘ ಪರಿವಾರದಿಂದ ತೀವ್ರ ವಿರೋಧ ವ್ಯಕ್ತವಾಗಿತು. ಆಗ ಸಂಘ ಪರಿವಾರ ಬಳಸಿಕೊಂಡಿದ್ದು ಹಣೆ ತುಂಬ ಕುಂಕುಮ ಇಡುವ ‘ಮಾದರಿ’ ಹಿಂದೂ ಮಹಿಳೆ ಸುಷ್ಮಾರನ್ನು. ‘ಸೋನಿಯಾ ಪ್ರಧಾನಿಯಾದರೆ ನಾನು ತಲೆ ಬೋಳಿಸಿಕೊಳ್ಳುವೆ, ಜೀವನಪರ್ಯಂತ ಬಿಳಿ ಸೀರೆ ಉಡುವೆ’ ಹೀಗೆಲ್ಲ ಅಸಹ್ಯ ಮಾತಾಡಿದ ಸುಷ್ಮಾರನ್ನು ಧೀಮಂತ ನಾಯಕಿ ಎಂದು ಹೇಗೆ ಕರೆಯುವುದು? ಸೋನಿಯಾರನ್ನು ತಡೆಯುವ ಭರದಲ್ಲಿ ಅವರು ತಮಗೆ ತಾವೇ ಅವಮಾನ ಮಾಡಿಕೊಡಿದ್ದರು.

ಕರ್ನಾಟಕದ ಜೊತೆಗೆ ಅವರಿಗೆ ತುಂಬ ಆತ್ಮೀಯ ಸಂಬಂಧ ಇತ್ತು, ಕರ್ನಾಟಕದ ಬಗ್ಗೆ ಅಪಾರ ಕಾಳಜಿ ಇತ್ತು ಎಂದೆಲ್ಲ ನಮ್ಮ ಮಾಧ್ಯಮಗಳು ಹೇಳಿವೆ, ಹೇಳುತ್ತಲೇ ಇವೆ. ಹೌದು ಅವರಿಗೆ ಬಳ್ಳಾರಿಯೊಂದಿಗೆ ಅವರಿಗೆ ‘ಆತ್ಮೀಯ’ ಒಡನಾಟವಿತ್ತೇ ವಿನಃ ಇಡೀ ಕರ್ನಾಟಕದೊಂದಿಗೆ ಅಲ್ಲ. ಬಳ್ಳಾರಿಯ ಜೊತೆಗಿನ ಒಡನಾಟ ಬಳ್ಳಾರಿಯ ಕಾಳಜಿಯಿಂದ ಮೂಡಿದ್ದಲ್ಲ, ಅದು ಸ್ವಾರ್ಥದಿಂದ ಕೂಡಿದ್ದಾಗಿತ್ತು ಅಷ್ಟೇ…

1999ರಲ್ಲಿ ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿದಾಗ ಅವರ ವಿರುದ್ಧ ಸುಷ್ಮಾರನ್ನು ಕಣಕ್ಕಿಳಿಸಲಾಗಿತು. ‘ಸೋನಿಯಾ ವಿದೇಶಿ ಮಹಿಳೆ’ ಎಂದೆಲ್ಲ ಈ ‘ಅಪ್ಪಟ’ ದೇಶೀ ನಾರಿ ಕೂಗಾಡಿಕೊಂಡರೂ 56 ಸಾವಿರ ಮತಗಳಿಂದ ಸೋತರು. ಆಗಲೇ ಅವರಿಗೆ ಬಳ್ಳಾರಿಯ ಜನಾರ್ಧನರೆಡ್ಡಿ ಮತ್ತು ಶ್ರೀರಾಮುಲು ಥರದವರ ಸಂಪರ್ಕ ಪ್ರಾಪ್ತವಾಗಿತು. ಆಗಿನ್ನೂ ಗಣಿ ದಂಧೆ ತಾರಕಕ್ಕೆ ಏರಿರಲಿಲ್ಲ. ‘ಎನ್ನೋಬಲ್’ ಎಂಬ ಹಣಕಾಸಿನ ಸಂಸ್ಥೆಯ ಮೂಲಕ ಸಾವಿರಾರು ಜನರಿಗೆ ಟೋಪಿ ಹಾಕಿದ್ದ ರೆಡ್ಡಿಗಳು ಬಿಜೆಪಿಯಲ್ಲಿ ನೆಲೆ ಕಂಡುಕೊಂಡಿದ್ದರು.

1999-2004ರ ವಾಜಪೇಯಿ ಸರ್ಕಾರದಲ್ಲಿ ಸುಷ್ಮಾ ಸಚಿವೆಯಾಗಿದ್ದರು. 2003ರ ವೇಳೆಗೆ ಕಬ್ಬಿಣ ಅದಿರಿಗೆ ಹೊರದೇಶಗಳಲ್ಲಿ, ಅದರಲ್ಲೂ ಮುಖ್ಯವಾಗಿ ಚೀನಾದಲ್ಲಿ ದೊಡ್ಡ ಬೇಡಿಕೆ ಉಂಟಾಗಿತು. ಅಷ್ಟೊತ್ತಿಗೆ ಸುಷ್ಮಾ ಕೃಪೆಯಿಂದ ಗಣಿ ದಂಧೆಗಿಳಿದಿದ್ದ ರೆಡ್ಡಿಗಳು ಅಕ್ರಮ ಗಣಿಗಾರಿಕೆ ನಡೆಸುವ ಮೂಲಕ ಕರ್ನಾಟಕದ ಸಾರ್ವಜನಿಕ ಸಂಪತ್ತನ್ನೆಲ್ಲ ಲೂಟಿ ಮಾಡಿದ್ದರು.

1999ರಲ್ಲಿ ಬಳ್ಳಾರಿಯಲ್ಲಿ ಸೋತ ಮೇಲೆಯೂ 2010ರವರೆಗೂ ಸುಷ್ಮಾರವರು ಕರ್ನಾಟಕದ ನಂಟು ಬಿಡಲೇ ಇಲ್ಲ ಎಂದು ಬಹುಪಾಲು ಮಾಧ್ಯಮಗಳು ಹೇಳುತ್ತಿವೆ. ನಿಜ, ಅದು ನಂಟಲ್ಲ, ಗಂಟಿನ ಕತೆ… ಸುಷ್ಮಾರವರು 1999ರಲ್ಲಿ ಸೋತ ನಂತರ ಪ್ರತಿವರ್ಷವೂ ಬಳ್ಳಾರಿಗೆ ಬಂದು ವರ ಮಹಾಲಕ್ಷ್ಮೀ ಹಬ್ಬ ಆಚರಿಸುತ್ತಿದ್ದರು. ರೆಡ್ಡಿ-ಶ್ರೀರಾಮುಲುಗಳನ್ನು ಅವರು ಮಕ್ಕಳೆನ್ನುವುದು, ಈ ಗಣಿಗಳ್ಳರು ಅವರನ್ನು ‘ಅಮ್ಮ’ ಎನ್ನುವುದು ಕೆಲವು ತೆಲುಗು ಸಿನಿಮಾದ ವಿಲಕ್ಷಣ ನಡವಳಿಕೆಗಳಂತೆ ಕಾಣುತ್ತಿದ್ದವು.

ಬಳ್ಳಾರಿಗೆ ಬರುತ್ತಿದ್ದ ‘ಅಮ್ಮ’ ಮಕ್ಕಳ ಮನೆಯಲ್ಲಿ ವರ ಮಹಾಲಕ್ಷ್ಮಿ ಹಬ್ಬ ಮಾಡುತ್ತಿರಲಿಲ್ಲ! ಬದಲಿಗೆ ಬಳ್ಳಾರಿಯ ಬ್ರಾಹ್ಮಣ ಕುಟುಂಬವೊಂದರ ಮನೆಯಲ್ಲಿ ಈ ಡ್ರಾಮಾ ಜರುಗುತ್ತಿತ್ತು! ಇದರಿಂದ ಎಂತಹ ಜಾತಿ ಮನಸ್ಸು ಸುಷ್ಮಾ ಅವರದ್ದು ಎಂದು ವಿವರಿಸುವ ಅಗತ್ಯವಿಲ್ಲ ಅಲ್ಲವೇ? ಆದರೆ ಆ ಬ್ರಾಹ್ಮಣರ ಮನೆಯಲ್ಲಿ ಎಲೆ, ಅಡಿಕೆ, ಕುಂಕುಮ, ಅರಿಷಿಣ, ಸೀರೆಗಳ ಉಡಿ ತುಂಬಿಕೊಳ್ಳುತ್ತಿದ್ದ ನಂತರ ಅವರ ಸವಾರಿ ಸೀದಾ ರೆಡ್ಡಿಗಳ ಮನೆ ಕಡೆ ಹೊರಡುತ್ತಿತ್ತು. ಅಲ್ಲಿ ನಿಜವಾದ ಉಡಿ ತುಂಬುವ ಕಾರ್ಯ ನಡೆಯುತ್ತಿತ್ತು. ಈ ನಾಡಿನ ಸಂಪತ್ತಿನ ಲೂಟಿಯ ಒಂದು ಭಾಗ ಅದಿರಿನ ಧೂಳಿನ ಹಾಗೆ ದೆಹಲಿ ಕಡೆ ಹಾರಿ ಹೋಗುತ್ತಿತ್ತು.

2008ರಲ್ಲಿ ಯಡಿಯೂರಪ್ಪ ಸರ್ಕಾರವಿದ್ದಾಗಲಂತೂ ರೆಡ್ಡಿ-ಶ್ರೀರಾಮುಲುಗಳ ಕಾರುಬಾರು ಭಾರೀ ಜೋರಾಗಿತ್ತಲ್ಲ? ಒಮ್ಮೆ ಯಡಿಯೂರಪ್ಪರನ್ನೇ ಕೆಡವಲು ಈ ಅಡವಿ-ದೊಂಗುಲುಗಳು ಕೈ ಹಾಕಿದಾಗ ಉಡಿ ತುಂಬಿಸಿಕೊಂಡವರ ಸಪೋರ್ಟೂ ಅದಕ್ಕಿತ್ತು! ಮುಂದೆ ಅಡ್ವಾಣಿ ಸಮ್ಮುಖದಲ್ಲಿ ಯಡಿಯೂರಪ್ಪ ಮತ್ತು ರೆಡ್ಡಿ – ರಾಮುಲಗಳ ನಡುವೆ ರಾಜಿ ಮಾಡಿಸಿದ್ದು ಇದೇ ಸುಷ್ಮಾ ಮೇಡಮ್ಮು.

ಯಾವಾಗ ಜನಾರ್ಧನರೆಡ್ಡಿ ಜೈಲು ಪಾಲಾದರೋ ಆಗ ಯು ಟರ್ನ್ ತೆಗೆದುಕೊಂಡ ಸುಷ್ಮಾರವರು, ‘ರೆಡ್ಡಿ-ರಾಮುಲು ಇತ್ಯಾದಿ ಎಲ್ಲ ನನಗೆ ವಿಶೇಷವಾಗಿ ಗೊತ್ತಿಲ್ಲ. ಎಲ್ಲ ಬಿಜೆಪಿ ಕಾರ್ಯಕರ್ತರಂತೆ ಅವರೂ ಪರಿಚಯ ಅಷ್ಟೇ’ ಎಂದು ಕೈ ಎತ್ತಿಬಿಟ್ಟರು! ಈಗ ಹೇಳಿ, ಸುಷ್ಮಾ ಧೀಮಂತ ನಾಯಕಿ ಆಗಿದ್ದರೇ? ಆದರೆ ಅವರ ನಂತರದಲ್ಲಿ ಪ್ರವರ್ಧಮಾನಕ್ಕೆ ಬಂದ ನರೇಂದ್ರಮೋದಿ, ಅಮಿತ್ ಶಾ, ಯೋಗಿ ಆದಿತ್ಯನಾಥ್ ಥರಹದ ತೀವ್ರಗಾಮಿ ನಾಯಕರನ್ನು ನೋಡಿದಾಗ ಸುಷ್ಮಾರವರಂತವರು ಸಭ್ಯರಂತೆ ಕಂಡುಬರುವುದು ಈ ಕಾಲದ ದುರಂತಗಳಲ್ಲೊಂದು..

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. ವಸ್ತುನಿಷ್ಟ ವಿಶ್ಲೇಷಣೆ.
    ವ್ಯಕ್ತಿಯೋರ್ವ ಇಲ್ಲವಾದಾಗ ಔಪೋಚಾರಿಕ ಸ್ಮರಣೆ ನಾಗರೀಕ ಲಕ್ಷಣ ನಿಜ, ಆದರೆ ಅತಿಶಯ ಗುಣಗಾನ ಆತ್ಮವಂಚನೆ ಮತ್ತು ಸುಳ್ಳುಗಳ ಮಾದರಿ ಕಟ್ಟಿಕೊಡುವ ಕೆಲಸವೇ ಆಗಿರುತ್ತದೆ.
    ಚರಿತ್ರೆಯೇ ಅರಿವಿಲ್ಲದ ಮಾಧ್ಯಮಗಳು ಸಮೂಹ ಸನ್ನಿಯಂತೆ ಪರಾಕು ಹಾಕುತ್ತಿರುವುದು ಅಸಹ್ಯವಷ್ಟೆ.
    ಇದರ ನಡುವೆ ಮಲ್ಲನಗೌಡರು ಅಸಲಿ ಸುಷ್ಮಾ ಅವರನ್ನು ಮತ್ತೆ ಪರಿಚಯಿಸಿದ್ದಾರೆ.

  2. ತಲೆ ಬೋಲಸಕೋತಿನಿ ಅಂತ ಹೇಳಿದ್ದು ಉಮಾ ಭಾರತಿ ಇವರಲ್ಲ . ಉಳಿದೆರೋ ನಿಮ್ಮ ಮಾತು ನಿಜವಾಗಿದೆ .

LEAVE A REPLY

Please enter your comment!
Please enter your name here

- Advertisment -

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....