Homeಕರ್ನಾಟಕಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಹಿಂದಿನ ಸರ್ಕಾರ ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಸುಪ್ರಿಮ್ ಕೋರ್ಟ್‍ಗೆ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆಯುವ ಸಣ್ಣ ಪ್ರಯತ್ನವನ್ನು ಯಾವ ಸಂಸದರೂ ಮಾಡಲಿಲ್ಲ..

- Advertisement -
- Advertisement -

ಅಡಿಕೆ ಮಾರುಕಟ್ಟೆ ಹೇಗೆ ಅಸ್ಥಿರವೋ ಹಾಗೇ ಅಡಿಕೆ ತೋಟಿಗರ ಬದುಕೂ ಅನಿಶ್ಚಿತವೇ! ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಇವತ್ತಿಗೂ ‘ಅಡಿಕೆ ನೀತಿ’ ಒಂದನ್ನು ರೂಪಿಸಲಾಗಿಲ್ಲ. ಹಾಲಿ ಸರ್ಕಾರಿ ಧೋರಣೆಯಿಂದ ಅಡಿಕೆ ಬೆಳೆಗಾರರಿಗಿಂತ ದಲ್ಲಾಳಿಗಳಿಗೆ ಮತ್ತು ಕಳ್ಳ ಸಾಗಾಣಿಕೆದಾರರಿಗೇ ಅನುಕೂಲ ಹೆಚ್ಚಾಗಿದೆ. ಅಡಿಕೆ ವಹಿವಾಟಿನಲ್ಲಾಗುವ ಪ್ರತಿ ಏರಿಳಿತ ಅಡಿಕೆ ಕೃಷಿಯನ್ನೇ ಅವಲಂಭಿಸಿರುವ ರಾಜ್ಯದ ಏಳೆಂಟು ಜಿಲ್ಲೆಯ ತೋಟಿಗರನ್ನು ಕಂಗೆಡಿಸುತ್ತಿರುತ್ತದೆ. ಜತೆಗೆ ಕೊಳೆರೋಗ, ಕೇಂದ್ರದ ಅಡಿಕೆ ನಿಷೇಧದ ಗುಮ್ಮ, ಅಡಿಕೆ ಕ್ಯಾನ್ಸರ್‌ಕಾರಕ ಎಂಬ ಕೇಂದ್ರ ಆರೋಗ್ಯ ಸಚಿವಾಲಯ ತಿಳುವಳಿಕೆ, ಕಾಡು ಪ್ರಾಣಿಗಳ ಹಾವಳಿ ಬಹುಸಂಖ್ಯಾತ ಸಣ್ಣ ಹಿಡುವಳಿದಾರರ ನಿದ್ದೆಗೆಡಿಸುತ್ತಲೇ ಇದೆ.

ಶ್ರೀಲಂಕಾ, ಮ್ಯಾನ್ಮಾರ್, ಮಲೇಶ್ಯಾ ದೇಶಗಳು ಮತ್ತು ದೇಶದ ಕೇರಳ, ಗೋವಾ, ಆಸ್ಸಾಮ್ ಮುಂತಾದೆಡೆ ನೈಸರ್ಗಿಕವಾಗಿ ಕಾಡು ಉತ್ಪನ್ನದಂತೆ ಅಡಿಕೆಯನ್ನು ಪಡೆಯಲಾಗುತ್ತಿದೆ; ಕರ್ನಾಟಕದಲ್ಲಿ ಮಾತ್ರ ಕ್ರಮಬದ್ಧ ಬೇಸಾಯದಿಂದ ಅಡಿಕೆ ಬೆಳೆಯಲಾಗುತ್ತದೆ. ಭಾರತದ ಒಟ್ಟೂ 4ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ತೋಟಗಳಿವೆ. ಇದರಲ್ಲಿ 2ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶ ಕರ್ನಾಟಕದಲ್ಲಿದೆ. ಪ್ರತಿ ವರ್ಷ ಉತ್ಪಾದೆಯಾಗುವ 8ಲಕ್ಷ ಟನ್ ಅಡಿಕೆಯಲ್ಲಿ ಶೇಕಡಾ 60ರಷ್ಟು ಕರ್ನಾಟಕದ್ದು. ರಾಜ್ಯದ ಅಡಿಕೆ ಉತ್ಕೃಷ್ಟ ಗುಣಮಟ್ಟದ್ದು. ಕರ್ನಾಟಕದ ಒಟ್ಟು ಮುಕ್ಕಾಲು ಪಾಲು ಉತ್ತರಕನ್ನಡ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಉತ್ಪಾದನೆ ಆಗುತ್ತದೆ.

ಅಡಿಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾವೇರಿ ಹಾಗೂ ತುಮಕೂರು ಜಿಲ್ಲೆಯ ತೋಟಿಗರ ಜೀವನಾಧಾರ ವಾಣಿಜ್ಯ ಬೆಳೆ. ಮಲೆನಾಡಿನ ತೋಟಿಗರಂತೂ ಬದುಕು ಕಟ್ಟಕೊಂಡಿರುವುದೇ ಅಡಿಕೆ ವಹಿವಾಟಿನ ಮೇಲೆ. ಮಲೆನಾಡಿನ ಕೆಂಪಡಿಕೆಗೆ ವಿದೇಶಗಳಲ್ಲೂ ದೊಡ್ಡ ಬೇಡಿಕೆಯಿದೆ. ಇಲ್ಲಿಯ ಸರಕು ಮಾದರಿಯ ಅಡಿಕೆಯನ್ನು ದಕ್ಷಿಣ ಭಾರತೀಯರು ವೀಳ್ಯದೆಲೆಯೊಂದಿಗೆ ಮೆಲ್ಲುತ್ತಾರೆ. ರಾಶಿ ಅಡಿಕೆ, ಬೆಟೆ ಅಡಿಕೆ ಪಾನ್‍ಮಸಲಾಕ್ಕೆ ಉಪಯೋಗಿಸಲಾಗುತ್ತದೆ. ಪಾನ್‍ಮಸಾಲಾ ಕಂಪನಿಗಳು ಮತ್ತು ಸಿಹಿ ಅಡಿಕೆ ಪೊಟ್ಟಣ ತಯಾರಿಕಾ ಘಟಕಗಳಲ್ಲಿ ಹೆಚ್ಚಾಗಿರುವುದು ಉತ್ತರ ಭಾರತದಲ್ಲಿ. ಈ ಗುಟ್ಕ ಕಂಪನಿಗಳಿಗೆ ಅಡಿಕೆ ಒದಗಿಸುವ ಮಧ್ಯವರ್ತಿಗಳ ಅನಾಹುತಕಾರಿ ಮಾಫಿಯಾ ತೋಟಿಗರಿಗೆ ನಾಜೂಕಾಗಿ ವಂಚಿಸುತ್ತಿದೆ.

ಅಧಿಕೃತ ಸಹಕಾರ ಸಂಘಗಳು ಮತ್ತು ಎಪಿಎಂಸಿ ಮೂಲಕ ಶೇಕಡಾ 60ರಷ್ಟು ಅಡಿಕೆ ವಹಿವಾಟಾಗುತ್ತಿದೆಯಷ್ಟೇ. ಶೇ.40ರಷ್ಟು ಅಡಿಕೆಯನ್ನು ಮಧ್ಯವರ್ತಿಗಳು ರೈತರ ಮನೆ ಬಾಗಿಲಲ್ಲೇ ಖರೀದಿಸಿ ಗುಟ್ಕ ಕಂಪನಿಗಳಿಗೆ ಮಾರುತ್ತಾರೆ. ಕಮಿಷನ್, ತೆರಿಗೆ ಉಳಿಸುವ ಆಸೆಗೆ ಬೆಳೆಗಾರರು ದಲ್ಲಾಳಿಗಳಿಗೆ ಬಲಿ ಬೀಳುತ್ತಿದ್ದಾರೆ. ಈ ಅಕ್ರಮ ವ್ಯವಹಾರದಲ್ಲಿ ಸರ್ಕಾರಕ್ಕೆ ಕನಿಷ್ಠವೆಂದರೂ 100 ಕೊಟಿ ತೆರಿಗೆ ವಂಚನೆಯಾಗುತ್ತಿದೆ! ಈ ಅಡಿಕೆ ಮಾಫಿಯಾ ವಿದೇಶದಿಂದಲೂ ಅಗ್ಗದಲ್ಲಿ ಕಳಪೆ ಅಡಿಕೆ ತರಿಸಿಕೊಳ್ಳುತ್ತದೆ. ಕಳ್ಳಸಾಗಾಣಿಕೆಯು ಮಾಡಿಸಿಕೊಳ್ಳುತ್ತದೆ. ಸ್ಥಳೀಯ ಅಡಿಕೆ ಜತೆ ಈ ಕಳಪೆ ಅಡಿಕೆ ಬೆರೆಸಿ ಕಲಬೆರೆಕೆ ದಂಧೆ ನಡೆಸುತ್ತದೆ. ಇದಕ್ಕೆ ಕಡಿವಾಣ ಹಾಕಲೆಂದೇ ಯುಪಿಎ ಸರ್ಕಾರ ಆಮದು ಅಡಿಕೆ ಮೇಲೆ ಶೇ 110ರಷ್ಟು ತೆರಿಗೆ ವಿಧಿಸಿತ್ತು. ಈ ದಂಧೆ ದುಬಾರಿಯಾಗಿದ್ದರಿಂದ ಮಾಫಿಯಾ ವಿದೇಶದಿಂದ ಅಡಿಕೆ ತರಿಸುವುದು ನಿಲ್ಲಿಸಿತ್ತು. ಕಳ್ಳಸಾಗಾಣಿಕೆಗೂ ಕಡಿವಾಣ ಬಿದ್ದಿತ್ತು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಹಿಂದಿನ ಸರ್ಕಾರದ ಬಿಗಿ ಕಡಿಮೆಯಾಗಿ ಮತ್ತೆ ಮಾಫಿಯಾ ಚಿಗುರಿಕೊಂಡಿದೆ! ಹೀಗಾಗಿ 2014ರ ನಂತರ ಅಡಿಕೆ ಬೆಳೆಗಾರರಿಗೆ ಹೇಳಿಕೊಳ್ಳುವಂಥ ಅನುಕೂಲವೇನೂ ಆಗಿಲ್ಲ. ಚಾಲಿಯಂಥ ಅಡಿಕೆ ಧಾರಣೆ ಕ್ವಿಂಟಾಲಿಗೆ 30 ಸಾವಿರದ ಆಸುಪಾಸಿನಲ್ಲಿ ಸುತ್ತಾಡಿದರೆ ರೈತರಿಗೆ ತೀರ ಲಾಭವೇನೂ ಇಲ್ಲದಿದ್ದರೂ ಸಮಚಿತ್ತದ ಬದುಕಿಗೊಂದು ದಾರಿಯಾಗುತ್ತದೆ. ಈ ಬಾರಿ ಧಾರಣೆ ಈ ರೇಂಜಿನಲ್ಲೇ ಇದೆ. ಕಳೆದ ವರ್ಷ ಬಿದ್ದ ವಿಪರೀತ ಮಳೆಯಿಂದ ಬಂದ ಕೊಳೆರೋಗ, ಹವಾಮಾನ ವೈಪರೀತ್ಯದಿಂದ ಅಡಿಕೆಗೆ ಬೆಲೆ ಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಆದರೆ ಇದೇ ಬೆಲೆ ಮುಂದೆಯೂ ಸಿಗುತ್ತದೆಂದು ಹೇಳಲಾಗದು. ಇತ್ತೀಚಿನ ವರ್ಷಗಳಲ್ಲಂತೂ ಅಡಿಕೆ ಇದ್ದಕ್ಕಿದ್ದಂತೆ ವಿವಾದಕ್ಕೆ ಸಿಲುಕಿ ಮಾರುಕಟ್ಟೆ ಮೇಲೆ ಪರಿಣಾಮವಾಗುವ ಆತಂಕ ಆರಂಭವಾಗುತ್ತಿದೆ. ಈ ಗೊಂದಲಕ್ಕೆ ಅಡಿಕೆ ಬೆಳೆಗಾರ ಸಹಜವಾಗೇ ಬೆಚ್ಚೆಳುತ್ತಿದ್ದಾನೆ.

ಆದರೆ ಅಡಿಕೆ ಬಗ್ಗೆ ವಿವಾದ ಎದ್ದಾಗೆಲ್ಲ ಧಾರಣೆ ಮೇಲೆ ಕೆಟ್ಟ ಪರಿಣಾಮವೇನೂ ಆಗಿದಿಲ್ಲ. ಈ ಗಲಾಟಿಯ ಲಾಭ ದಲ್ಲಾಳಿಗಳು, ಮಧ್ಯವರ್ತಿಗಳು ಎತ್ತಿದ್ದಾರೆ. ಇದರಲ್ಲಿ ರಾಜಕಾರಣೀಗಳೇನೂ ಕಮ್ಮಿಯಿಲ್ಲ. ಅಡಿಕೆ ಬೆಳೆಗಾರರಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದ್ದು 2011ರಲ್ಲಿ. ಆಗ ಅಧಿಕಾರದಲ್ಲಿದ್ದ ಯುಪಿಎ-2 ಸರ್ಕಾರ ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕರವಾದ ಅಂಶಗಳಿದೆಯೆಮದು ಸುಪ್ರೀಮ್ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿತ್ತು. ಇದನ್ನು ಬಿಜೆಪಿಗರು ರಾಜಕೀಯಕ್ಕೆ ಬಳಸಿಕೊಂಡರು; ಕಾಂಗ್ರೆಸ್ ಅಡಿಕೆ ಬೆಳೆಗಾರರ ವೈರಿಯೆಂಬಂತೆ ಬಿಂಬಿಸಿದರು. ಅಡಿಕೆ ನಿಷೇಧಕ್ಕೆ ಕಾಂಗ್ರೆಸ್ ಹವಣಿಸುತ್ತಿದೆಯೆಂದು ಹುಯಿಲೆಬ್ಬಿಸಿದರು.

ಅಡಿಕೆ ಬೆಳೆಗಾರರು ಕಾಂಗ್ರೆಸ್ ವಿರುದ್ಧ ತಿರುಗಿ ಬೀಳುವಂತೆ ಮಾಡಲಾಯಿತು. ಕಾಂಗ್ರೆಸ್ ಅಡಿಕೆ ನಿಷೇದಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರೂ ಬಿಜೆಪಿ ಅಪಪ್ರಚಾರದ ಎದುರು ಬೆಳೆಗಾರರನ್ನು ಅದು ಇಂಪ್ರೆಸ್ ಮಾಡಲಾಗಲಿಲ್ಲ! ಇದು ಅಡಿಕೆ ತೋಟ ಪಟ್ಟಿಯಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ವರವಾಗಿ ಪರಿಣಮಿಸಿತು. ಶಿವಮೊಗ್ಗೆಯ ರಾಘವೇಂದ್ರ, ಉಡುಪಿ-ಚಿಕ್ಕಮಗಳೂರಿನ ಶೋಭಾ ಕರಂದ್ಲಾಜೆ, ಉತ್ತರ ಕನ್ನಡದ ಅನಂತ ಹೆಗಡೆ, ಮಂಗಳೂರಿನ ನಳಿನ್ ಕಟೀಲ್, ದಾವಣಗೆರೆಯ ಸಿದ್ದೇಶ್ವರ್ ಅಡಿಕೆ ಬೆಳೆಗಾರರ ಬಚಾಯಿಸುವ ಭೋಂಗು ಬಿಟ್ಟೇ ಸಂಸದರಾಗಿ ಆಯ್ಕೆಯಾದರು. ತೋಟಿಗರ ಯಮಾರಿಸಿ ದಂಡಿಯಾಗಿ ಓಟು ಪಡೆದು ಗೆದ್ದವರಿಗೆ ಆನಂತರ ತಾವು ಕೊಟ್ಟ ಭರವಸೆಯೇ ಮರೆತುಹೋಗಿತ್ತು.

ತೋಟಿಗರಿಗೆ ಆಗುತ್ತಿರುವ ಅನ್ಯಾಯ-ಆತಂಕದ ಬಗ್ಗೆ ಅಡಿಕೆ ಬೆಳೆ ಏರಿಯಾದ ಒಬ್ಬೇ ಒಬ್ಬ ಸಂಸದ ಮಾತಾಡಲಿಲ್ಲ. ತಾವು ಕೊಂಡಾಡುವ ಮೋದಿ ಸರ್ಕಾರವಿದ್ದರೂ ಹಿಂದಿನ ಸರ್ಕಾರ ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಸುಪ್ರಿಮ್ ಕೋರ್ಟ್‍ಗೆ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆಯುವ ಸಣ್ಣ ಪ್ರಯತ್ನವನ್ನೂ ಮಾಡಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಅಡಿಕೆಯನ್ನು ತಂಬಾಕು ಪಟ್ಟಿಯಿಂದ ಹೊರತರುವ ವೀರಾವೇಷದ ಮಾತಾಡಿದ್ದ ಈ ಪಂಚ ಪ್ರಚಂಡರು ಕೃತಘ್ನರಾಗಿ ಹೋದರು. ಈ ವಂಚಕ ಸಂಸದರ ಉದಾಸೀನದ ಒಟ್ಟೂ ಪರಿಣಾಮ ಎಂಬಂತೆ 2017ರ ಡಿಸೆಂಬರ್‍ನಲ್ಲಿ ಅಂದಿನ ಆರೋಗ್ಯ ಇಲಾಖೆಯ ರಾಜ್ಯ ಮಂತ್ರಿ ಅನುಪ್ರಿಯಾ ಪಟೇಲ್ ಯುಪಿಎ ಸರ್ಕಾರದ ಅನಿಸಿಕೆಯನ್ನೇ ಬಿತ್ತರಿಸಿದ್ದರು. ಆಕೆ ಅಡಿಕೆಯಿಂದ ಬಾಯಿ ಕ್ಯಾನ್ಸರ್ ಬರುತ್ತದೆಂದು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದರು.

ಇಷ್ಟಾದರೂ ಅನಂತ್, ಶೋಭಾ, ಕಟೀಲ್, ಸಿದ್ದೇಶ್ವರ್, ರಾಘವೇಂದ್ರ ತಲೆಕೆಡಿಸಿಕೊಳ್ಳಲಿಲ್ಲ. ತೋಟಿಗರ ನೋವು ಅವರಿಗೆ ಅರ್ಥವಾಗಲಿಲ್ಲ. 2019ರಲ್ಲಿ ಮತ್ತೆ ಈ ಐವರು ಸಂಸದರಾಗಿ ಆಯ್ಕೆಯೂ ಆದರು. ಈ ಬಾರಿಯಾದರೂ ತಮ್ಮ ಸಮಸ್ಯೆಗೆ ಸ್ಪಂದಿಸಬಹುದೆಂದು ಭಾವಿಸಿದ್ದ ತೋಟಿಗರಿಗೆ ಮತ್ತದೇ ಆಘಾತ ಕಾದಿತ್ತು! 12-7-2019 ರಂದು ಆರೋಗ್ಯ ಇಲಾಖೆಯ ಸಹಾಯಕ ಸಚಿವ ಅಶ್ವಿನಿಕುಮಾರ್ ಚೌಬೆ “ಅಡಿಕೆ ದೇಹದ ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಯಿ, ಅನ್ನನಾಳ, ಗಂಟಲು ಮತ್ತಿತರ ಅಂಗಗಳಿಗೆ ಕ್ಯಾನ್ಸರ್ ಬರುವಂತೆ ಮಾಡುತ್ತದೆಂದು ಕೆಲವು ಅಧ್ಯಯನದಿಂದ ತಿಳಿದು ಬಂದಿದೆಯೆಂದು” ಹೇಳಿದರು. ಮಂತ್ರಿಗಳ ಈ ಮಾತಿಂದ ತೋಟಿಗ ಸಮುದಾಯದಲ್ಲಿ ಆತಂಕ-ಆಕ್ರೋಶ ಮೂಡಿತು.

ಇದರಿಂದ ಕಕ್ಕಾಬಿಕ್ಕಿಯಾದ ಕಟೀಲು, ಶೋಭಾ, ಸಿದ್ದೇಶ್ವರ್ ಅವರುಗಳಿಗೆ ಗಡಿಬಿಡಿಯಲ್ಲಿ ಕೇಂದ್ರ ಆರೋಗ್ಯ ಮಂತ್ರಿಯನ್ನು ಭೇಟಿಯಾದ ಪೋಟೋ ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಾಗಿ ಬಂತು. ಅಡಿಕೆ ಬೆಳೆಗಾರರ ಹಿತರಕ್ಷಿಸುವುದಾಗಿ ಹೇಳಿಕೆಯನ್ನೂ ಕೊಟ್ಟರು. ಆದರೆ ಇವತ್ತಿಗೂ ಅಡಿಕೆ ತೋಟಗಳಿಗೆ ಕೇಂದ್ರ ಸರ್ಕಾರ ಬಿಟ್ಟ ಕ್ಯಾನ್ಸರ್ ಗುಮ್ಮ ಮಾತ್ರ ಅಲ್ಲೇ ಕುಂತಿದೆ. ತೋಟಿಗರು ಅಂಜುತ್ತಲೇ ಬದುಕುತ್ತಿದ್ದಾರೆ. ಸಿಗರೇಟ್ ಲಾಬಿ ಮತ್ತು ಗುಟ್ಕ ಲಾಬಿ ನಡುವೆ ವ್ಯವಹಾರಿಕ ಸಂಘರ್ಷ ಮೊದಲಿನಿಂದಲೂ ನಡೆಯುತ್ತಿದೆ. ಕೇಂದ್ರದ ಆಹಾರ ಸುರಕ್ಷೆ ಮತ್ತು ಗುಣಮಟ್ಟಗಳ ನಿಯಾಮಾವಳಿಯಂತೆ ತಂಬಾಕಿನೊಂದಿಗೆ ಅಡಿಕೆ ಉತ್ಪನ್ನಗಳನ್ನೂ ಸೇರಿಸಿರುವುದೇ ಸಮಸ್ಯೆಯ ಮೂಲ.

ಸ್ವಲ್ಪ ತಿಂದರೆ ಅಡಿಕೆಯಲ್ಲಿ ಔಷಧಿ ಗುಣವಿದೆ. ಅತಿಯಾದರೆ ಹಾನಿಯೇ ಎಂದು ಸಂಶೋಧಕರು ಹೇಳುತ್ತಾರೆ. ಅಡಿಕೆ ವಹಿವಾಟು ನಡೆಸುವ ಸಹಕಾರ ಸಂಸ್ಥೆಗಳು ಕಾಸರಗೋಡಿನ ಸಿಪಿಸಿಆರ್‌ಐ ಮೂಲಕ ಅಡಿಕೆಯ ಗುಣಾವಗುಣದ ಬಗ್ಗೆ ಸಂಶೋಧನೆ ನಡೆಯುವಂತೆ ನೋಡಿಕೊಂಡಿದ್ದವು. ಈ ವರದಿ ಆಡಿಕೆ ಕ್ಯಾನ್ಸರ್‍ಕಾರಕವಲ್ಲ; ಆರೋಗ್ಯ ವರ್ಧಕ ಎಂದು ಹೇಳಿದೆ. ಹಿಂದೆ ಕೆಲವು ಕಂಪನಿಗಳು ಅಡಿಕೆಯನ್ನು ಚಾಕೊಲೆಟ್ ತಯಾರಿಕೆಗೆ ಬಳಸಿದ್ದವು. ಈ ಪ್ರಯೋಗ ಯಶಸ್ವಿಯಾಗಲಿಲ್ಲ. ವೈನ್ ತಯಾರಿಕೆ ಪ್ರಯತ್ನ ನಡೆದರೂ ದುಬಾರಿ ಎಂದಾಯಿತು. ಚಹಾ, ಬಣ್ಣ ಮತ್ತಿತರ ಉದ್ದೇಶಕ್ಕೆ ಅಡಿಕೆ ಬಳಸುವ ಸಂಶೋಧನೆಗಳು ನಡೆಯುತ್ತಿವೆ.

ಅಡಿಕೆ ನಿಷೇಧದ ಸಮಸ್ಯೆ ಇರುವುದು ತೋಟಪಟ್ಟಿಯ ಸಂಸದರ ಇಚ್ಛಾಶಕ್ತಿಯ ಕೊರತೆಯಲ್ಲಿ. ಸಂಸತ್ತಿನಲ್ಲಿ ಚರ್ಚೆ, ಕಾನೂನಿನಲ್ಲಿ ತಿದ್ದುಪಡಿ ಮೂಲಕ ಮಾತ್ರ ಅಡಿಕೆ ಮಾನಕ್ಕೆ ಬಂದಿರುವ ಕಳಂಕ ತೆಗೆಯಬಹುದು. ಆದರೆ ಅದು ಆಗುತ್ತಿಲ್ಲ.


ಇದನ್ನೂ ಓದಿ: ಅಡಿಕೆ ಬೆಳೆಗಾರರನ್ನು ರಕ್ಷಿಸುವರೆ ಈ ಆರು ಜನ ಮಾನಗೇಡಿ ಸಂಸದರು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಪ್ರೆಸ್ >ತಟ್ಟು
    ರಕ್ಷಿಸು(ಸಂಸ್ಕ್ರುತ)>ಕಾಪಾಡು(ಕನ್ನಡ)
    ಸ್ವಲ್ಪ(ಸಂಸ್ಕ್ರುತ)>ತುಸು(ಕ)

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...