Homeಕರ್ನಾಟಕಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಅಸ್ಥಿರ ಅಡಿಕೆ ಮಾರುಕಟ್ಟೆಯೂ, ಕಂಗೆಟ್ಟ ತೋಟಿಗರೂ!

ಹಿಂದಿನ ಸರ್ಕಾರ ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಸುಪ್ರಿಮ್ ಕೋರ್ಟ್‍ಗೆ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆಯುವ ಸಣ್ಣ ಪ್ರಯತ್ನವನ್ನು ಯಾವ ಸಂಸದರೂ ಮಾಡಲಿಲ್ಲ..

- Advertisement -
- Advertisement -

ಅಡಿಕೆ ಮಾರುಕಟ್ಟೆ ಹೇಗೆ ಅಸ್ಥಿರವೋ ಹಾಗೇ ಅಡಿಕೆ ತೋಟಿಗರ ಬದುಕೂ ಅನಿಶ್ಚಿತವೇ! ರಾಜ್ಯ ಅಥವಾ ಕೇಂದ್ರ ಸರ್ಕಾರದಿಂದ ಇವತ್ತಿಗೂ ‘ಅಡಿಕೆ ನೀತಿ’ ಒಂದನ್ನು ರೂಪಿಸಲಾಗಿಲ್ಲ. ಹಾಲಿ ಸರ್ಕಾರಿ ಧೋರಣೆಯಿಂದ ಅಡಿಕೆ ಬೆಳೆಗಾರರಿಗಿಂತ ದಲ್ಲಾಳಿಗಳಿಗೆ ಮತ್ತು ಕಳ್ಳ ಸಾಗಾಣಿಕೆದಾರರಿಗೇ ಅನುಕೂಲ ಹೆಚ್ಚಾಗಿದೆ. ಅಡಿಕೆ ವಹಿವಾಟಿನಲ್ಲಾಗುವ ಪ್ರತಿ ಏರಿಳಿತ ಅಡಿಕೆ ಕೃಷಿಯನ್ನೇ ಅವಲಂಭಿಸಿರುವ ರಾಜ್ಯದ ಏಳೆಂಟು ಜಿಲ್ಲೆಯ ತೋಟಿಗರನ್ನು ಕಂಗೆಡಿಸುತ್ತಿರುತ್ತದೆ. ಜತೆಗೆ ಕೊಳೆರೋಗ, ಕೇಂದ್ರದ ಅಡಿಕೆ ನಿಷೇಧದ ಗುಮ್ಮ, ಅಡಿಕೆ ಕ್ಯಾನ್ಸರ್‌ಕಾರಕ ಎಂಬ ಕೇಂದ್ರ ಆರೋಗ್ಯ ಸಚಿವಾಲಯ ತಿಳುವಳಿಕೆ, ಕಾಡು ಪ್ರಾಣಿಗಳ ಹಾವಳಿ ಬಹುಸಂಖ್ಯಾತ ಸಣ್ಣ ಹಿಡುವಳಿದಾರರ ನಿದ್ದೆಗೆಡಿಸುತ್ತಲೇ ಇದೆ.

ಶ್ರೀಲಂಕಾ, ಮ್ಯಾನ್ಮಾರ್, ಮಲೇಶ್ಯಾ ದೇಶಗಳು ಮತ್ತು ದೇಶದ ಕೇರಳ, ಗೋವಾ, ಆಸ್ಸಾಮ್ ಮುಂತಾದೆಡೆ ನೈಸರ್ಗಿಕವಾಗಿ ಕಾಡು ಉತ್ಪನ್ನದಂತೆ ಅಡಿಕೆಯನ್ನು ಪಡೆಯಲಾಗುತ್ತಿದೆ; ಕರ್ನಾಟಕದಲ್ಲಿ ಮಾತ್ರ ಕ್ರಮಬದ್ಧ ಬೇಸಾಯದಿಂದ ಅಡಿಕೆ ಬೆಳೆಯಲಾಗುತ್ತದೆ. ಭಾರತದ ಒಟ್ಟೂ 4ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಅಡಿಕೆ ತೋಟಗಳಿವೆ. ಇದರಲ್ಲಿ 2ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶ ಕರ್ನಾಟಕದಲ್ಲಿದೆ. ಪ್ರತಿ ವರ್ಷ ಉತ್ಪಾದೆಯಾಗುವ 8ಲಕ್ಷ ಟನ್ ಅಡಿಕೆಯಲ್ಲಿ ಶೇಕಡಾ 60ರಷ್ಟು ಕರ್ನಾಟಕದ್ದು. ರಾಜ್ಯದ ಅಡಿಕೆ ಉತ್ಕೃಷ್ಟ ಗುಣಮಟ್ಟದ್ದು. ಕರ್ನಾಟಕದ ಒಟ್ಟು ಮುಕ್ಕಾಲು ಪಾಲು ಉತ್ತರಕನ್ನಡ, ಶಿವಮೊಗ್ಗ ಮತ್ತು ದಾವಣಗೆರೆ ಜಿಲ್ಲೆಯಲ್ಲಿ ಉತ್ಪಾದನೆ ಆಗುತ್ತದೆ.

ಅಡಿಕೆ ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾವೇರಿ ಹಾಗೂ ತುಮಕೂರು ಜಿಲ್ಲೆಯ ತೋಟಿಗರ ಜೀವನಾಧಾರ ವಾಣಿಜ್ಯ ಬೆಳೆ. ಮಲೆನಾಡಿನ ತೋಟಿಗರಂತೂ ಬದುಕು ಕಟ್ಟಕೊಂಡಿರುವುದೇ ಅಡಿಕೆ ವಹಿವಾಟಿನ ಮೇಲೆ. ಮಲೆನಾಡಿನ ಕೆಂಪಡಿಕೆಗೆ ವಿದೇಶಗಳಲ್ಲೂ ದೊಡ್ಡ ಬೇಡಿಕೆಯಿದೆ. ಇಲ್ಲಿಯ ಸರಕು ಮಾದರಿಯ ಅಡಿಕೆಯನ್ನು ದಕ್ಷಿಣ ಭಾರತೀಯರು ವೀಳ್ಯದೆಲೆಯೊಂದಿಗೆ ಮೆಲ್ಲುತ್ತಾರೆ. ರಾಶಿ ಅಡಿಕೆ, ಬೆಟೆ ಅಡಿಕೆ ಪಾನ್‍ಮಸಲಾಕ್ಕೆ ಉಪಯೋಗಿಸಲಾಗುತ್ತದೆ. ಪಾನ್‍ಮಸಾಲಾ ಕಂಪನಿಗಳು ಮತ್ತು ಸಿಹಿ ಅಡಿಕೆ ಪೊಟ್ಟಣ ತಯಾರಿಕಾ ಘಟಕಗಳಲ್ಲಿ ಹೆಚ್ಚಾಗಿರುವುದು ಉತ್ತರ ಭಾರತದಲ್ಲಿ. ಈ ಗುಟ್ಕ ಕಂಪನಿಗಳಿಗೆ ಅಡಿಕೆ ಒದಗಿಸುವ ಮಧ್ಯವರ್ತಿಗಳ ಅನಾಹುತಕಾರಿ ಮಾಫಿಯಾ ತೋಟಿಗರಿಗೆ ನಾಜೂಕಾಗಿ ವಂಚಿಸುತ್ತಿದೆ.

ಅಧಿಕೃತ ಸಹಕಾರ ಸಂಘಗಳು ಮತ್ತು ಎಪಿಎಂಸಿ ಮೂಲಕ ಶೇಕಡಾ 60ರಷ್ಟು ಅಡಿಕೆ ವಹಿವಾಟಾಗುತ್ತಿದೆಯಷ್ಟೇ. ಶೇ.40ರಷ್ಟು ಅಡಿಕೆಯನ್ನು ಮಧ್ಯವರ್ತಿಗಳು ರೈತರ ಮನೆ ಬಾಗಿಲಲ್ಲೇ ಖರೀದಿಸಿ ಗುಟ್ಕ ಕಂಪನಿಗಳಿಗೆ ಮಾರುತ್ತಾರೆ. ಕಮಿಷನ್, ತೆರಿಗೆ ಉಳಿಸುವ ಆಸೆಗೆ ಬೆಳೆಗಾರರು ದಲ್ಲಾಳಿಗಳಿಗೆ ಬಲಿ ಬೀಳುತ್ತಿದ್ದಾರೆ. ಈ ಅಕ್ರಮ ವ್ಯವಹಾರದಲ್ಲಿ ಸರ್ಕಾರಕ್ಕೆ ಕನಿಷ್ಠವೆಂದರೂ 100 ಕೊಟಿ ತೆರಿಗೆ ವಂಚನೆಯಾಗುತ್ತಿದೆ! ಈ ಅಡಿಕೆ ಮಾಫಿಯಾ ವಿದೇಶದಿಂದಲೂ ಅಗ್ಗದಲ್ಲಿ ಕಳಪೆ ಅಡಿಕೆ ತರಿಸಿಕೊಳ್ಳುತ್ತದೆ. ಕಳ್ಳಸಾಗಾಣಿಕೆಯು ಮಾಡಿಸಿಕೊಳ್ಳುತ್ತದೆ. ಸ್ಥಳೀಯ ಅಡಿಕೆ ಜತೆ ಈ ಕಳಪೆ ಅಡಿಕೆ ಬೆರೆಸಿ ಕಲಬೆರೆಕೆ ದಂಧೆ ನಡೆಸುತ್ತದೆ. ಇದಕ್ಕೆ ಕಡಿವಾಣ ಹಾಕಲೆಂದೇ ಯುಪಿಎ ಸರ್ಕಾರ ಆಮದು ಅಡಿಕೆ ಮೇಲೆ ಶೇ 110ರಷ್ಟು ತೆರಿಗೆ ವಿಧಿಸಿತ್ತು. ಈ ದಂಧೆ ದುಬಾರಿಯಾಗಿದ್ದರಿಂದ ಮಾಫಿಯಾ ವಿದೇಶದಿಂದ ಅಡಿಕೆ ತರಿಸುವುದು ನಿಲ್ಲಿಸಿತ್ತು. ಕಳ್ಳಸಾಗಾಣಿಕೆಗೂ ಕಡಿವಾಣ ಬಿದ್ದಿತ್ತು.

ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಅಸ್ತಿತ್ವಕ್ಕೆ ಬಂದ ಬಳಿಕ ಹಿಂದಿನ ಸರ್ಕಾರದ ಬಿಗಿ ಕಡಿಮೆಯಾಗಿ ಮತ್ತೆ ಮಾಫಿಯಾ ಚಿಗುರಿಕೊಂಡಿದೆ! ಹೀಗಾಗಿ 2014ರ ನಂತರ ಅಡಿಕೆ ಬೆಳೆಗಾರರಿಗೆ ಹೇಳಿಕೊಳ್ಳುವಂಥ ಅನುಕೂಲವೇನೂ ಆಗಿಲ್ಲ. ಚಾಲಿಯಂಥ ಅಡಿಕೆ ಧಾರಣೆ ಕ್ವಿಂಟಾಲಿಗೆ 30 ಸಾವಿರದ ಆಸುಪಾಸಿನಲ್ಲಿ ಸುತ್ತಾಡಿದರೆ ರೈತರಿಗೆ ತೀರ ಲಾಭವೇನೂ ಇಲ್ಲದಿದ್ದರೂ ಸಮಚಿತ್ತದ ಬದುಕಿಗೊಂದು ದಾರಿಯಾಗುತ್ತದೆ. ಈ ಬಾರಿ ಧಾರಣೆ ಈ ರೇಂಜಿನಲ್ಲೇ ಇದೆ. ಕಳೆದ ವರ್ಷ ಬಿದ್ದ ವಿಪರೀತ ಮಳೆಯಿಂದ ಬಂದ ಕೊಳೆರೋಗ, ಹವಾಮಾನ ವೈಪರೀತ್ಯದಿಂದ ಅಡಿಕೆಗೆ ಬೆಲೆ ಬಂದಿದೆ ಎಂದು ಮಾರುಕಟ್ಟೆ ತಜ್ಞರು ಹೇಳುತ್ತಾರೆ. ಆದರೆ ಇದೇ ಬೆಲೆ ಮುಂದೆಯೂ ಸಿಗುತ್ತದೆಂದು ಹೇಳಲಾಗದು. ಇತ್ತೀಚಿನ ವರ್ಷಗಳಲ್ಲಂತೂ ಅಡಿಕೆ ಇದ್ದಕ್ಕಿದ್ದಂತೆ ವಿವಾದಕ್ಕೆ ಸಿಲುಕಿ ಮಾರುಕಟ್ಟೆ ಮೇಲೆ ಪರಿಣಾಮವಾಗುವ ಆತಂಕ ಆರಂಭವಾಗುತ್ತಿದೆ. ಈ ಗೊಂದಲಕ್ಕೆ ಅಡಿಕೆ ಬೆಳೆಗಾರ ಸಹಜವಾಗೇ ಬೆಚ್ಚೆಳುತ್ತಿದ್ದಾನೆ.

ಆದರೆ ಅಡಿಕೆ ಬಗ್ಗೆ ವಿವಾದ ಎದ್ದಾಗೆಲ್ಲ ಧಾರಣೆ ಮೇಲೆ ಕೆಟ್ಟ ಪರಿಣಾಮವೇನೂ ಆಗಿದಿಲ್ಲ. ಈ ಗಲಾಟಿಯ ಲಾಭ ದಲ್ಲಾಳಿಗಳು, ಮಧ್ಯವರ್ತಿಗಳು ಎತ್ತಿದ್ದಾರೆ. ಇದರಲ್ಲಿ ರಾಜಕಾರಣೀಗಳೇನೂ ಕಮ್ಮಿಯಿಲ್ಲ. ಅಡಿಕೆ ಬೆಳೆಗಾರರಲ್ಲಿ ಅಲ್ಲೋಲಕಲ್ಲೋಲ ಉಂಟಾಗಿದ್ದು 2011ರಲ್ಲಿ. ಆಗ ಅಧಿಕಾರದಲ್ಲಿದ್ದ ಯುಪಿಎ-2 ಸರ್ಕಾರ ಅಡಿಕೆಯಲ್ಲಿ ಆರೋಗ್ಯಕ್ಕೆ ಹಾನಿಕರವಾದ ಅಂಶಗಳಿದೆಯೆಮದು ಸುಪ್ರೀಮ್ ಕೋರ್ಟ್‍ಗೆ ಅಫಿಡವಿಟ್ ಸಲ್ಲಿಸಿತ್ತು. ಇದನ್ನು ಬಿಜೆಪಿಗರು ರಾಜಕೀಯಕ್ಕೆ ಬಳಸಿಕೊಂಡರು; ಕಾಂಗ್ರೆಸ್ ಅಡಿಕೆ ಬೆಳೆಗಾರರ ವೈರಿಯೆಂಬಂತೆ ಬಿಂಬಿಸಿದರು. ಅಡಿಕೆ ನಿಷೇಧಕ್ಕೆ ಕಾಂಗ್ರೆಸ್ ಹವಣಿಸುತ್ತಿದೆಯೆಂದು ಹುಯಿಲೆಬ್ಬಿಸಿದರು.

ಅಡಿಕೆ ಬೆಳೆಗಾರರು ಕಾಂಗ್ರೆಸ್ ವಿರುದ್ಧ ತಿರುಗಿ ಬೀಳುವಂತೆ ಮಾಡಲಾಯಿತು. ಕಾಂಗ್ರೆಸ್ ಅಡಿಕೆ ನಿಷೇದಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರೂ ಬಿಜೆಪಿ ಅಪಪ್ರಚಾರದ ಎದುರು ಬೆಳೆಗಾರರನ್ನು ಅದು ಇಂಪ್ರೆಸ್ ಮಾಡಲಾಗಲಿಲ್ಲ! ಇದು ಅಡಿಕೆ ತೋಟ ಪಟ್ಟಿಯಲ್ಲಿ 2014ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಗೆ ವರವಾಗಿ ಪರಿಣಮಿಸಿತು. ಶಿವಮೊಗ್ಗೆಯ ರಾಘವೇಂದ್ರ, ಉಡುಪಿ-ಚಿಕ್ಕಮಗಳೂರಿನ ಶೋಭಾ ಕರಂದ್ಲಾಜೆ, ಉತ್ತರ ಕನ್ನಡದ ಅನಂತ ಹೆಗಡೆ, ಮಂಗಳೂರಿನ ನಳಿನ್ ಕಟೀಲ್, ದಾವಣಗೆರೆಯ ಸಿದ್ದೇಶ್ವರ್ ಅಡಿಕೆ ಬೆಳೆಗಾರರ ಬಚಾಯಿಸುವ ಭೋಂಗು ಬಿಟ್ಟೇ ಸಂಸದರಾಗಿ ಆಯ್ಕೆಯಾದರು. ತೋಟಿಗರ ಯಮಾರಿಸಿ ದಂಡಿಯಾಗಿ ಓಟು ಪಡೆದು ಗೆದ್ದವರಿಗೆ ಆನಂತರ ತಾವು ಕೊಟ್ಟ ಭರವಸೆಯೇ ಮರೆತುಹೋಗಿತ್ತು.

ತೋಟಿಗರಿಗೆ ಆಗುತ್ತಿರುವ ಅನ್ಯಾಯ-ಆತಂಕದ ಬಗ್ಗೆ ಅಡಿಕೆ ಬೆಳೆ ಏರಿಯಾದ ಒಬ್ಬೇ ಒಬ್ಬ ಸಂಸದ ಮಾತಾಡಲಿಲ್ಲ. ತಾವು ಕೊಂಡಾಡುವ ಮೋದಿ ಸರ್ಕಾರವಿದ್ದರೂ ಹಿಂದಿನ ಸರ್ಕಾರ ‘ಅಡಿಕೆ ಆರೋಗ್ಯಕ್ಕೆ ಹಾನಿಕರ’ ಎಂದು ಸುಪ್ರಿಮ್ ಕೋರ್ಟ್‍ಗೆ ಸಲ್ಲಿಸಿದ್ದ ಅಫಿಡವಿಟ್ ಹಿಂಪಡೆಯುವ ಸಣ್ಣ ಪ್ರಯತ್ನವನ್ನೂ ಮಾಡಲಿಲ್ಲ. ಕಾನೂನಿಗೆ ತಿದ್ದುಪಡಿ ತಂದು ಅಡಿಕೆಯನ್ನು ತಂಬಾಕು ಪಟ್ಟಿಯಿಂದ ಹೊರತರುವ ವೀರಾವೇಷದ ಮಾತಾಡಿದ್ದ ಈ ಪಂಚ ಪ್ರಚಂಡರು ಕೃತಘ್ನರಾಗಿ ಹೋದರು. ಈ ವಂಚಕ ಸಂಸದರ ಉದಾಸೀನದ ಒಟ್ಟೂ ಪರಿಣಾಮ ಎಂಬಂತೆ 2017ರ ಡಿಸೆಂಬರ್‍ನಲ್ಲಿ ಅಂದಿನ ಆರೋಗ್ಯ ಇಲಾಖೆಯ ರಾಜ್ಯ ಮಂತ್ರಿ ಅನುಪ್ರಿಯಾ ಪಟೇಲ್ ಯುಪಿಎ ಸರ್ಕಾರದ ಅನಿಸಿಕೆಯನ್ನೇ ಬಿತ್ತರಿಸಿದ್ದರು. ಆಕೆ ಅಡಿಕೆಯಿಂದ ಬಾಯಿ ಕ್ಯಾನ್ಸರ್ ಬರುತ್ತದೆಂದು ಲೋಕಸಭೆಯಲ್ಲಿ ಹೇಳಿಕೆ ನೀಡಿದ್ದರು.

ಇಷ್ಟಾದರೂ ಅನಂತ್, ಶೋಭಾ, ಕಟೀಲ್, ಸಿದ್ದೇಶ್ವರ್, ರಾಘವೇಂದ್ರ ತಲೆಕೆಡಿಸಿಕೊಳ್ಳಲಿಲ್ಲ. ತೋಟಿಗರ ನೋವು ಅವರಿಗೆ ಅರ್ಥವಾಗಲಿಲ್ಲ. 2019ರಲ್ಲಿ ಮತ್ತೆ ಈ ಐವರು ಸಂಸದರಾಗಿ ಆಯ್ಕೆಯೂ ಆದರು. ಈ ಬಾರಿಯಾದರೂ ತಮ್ಮ ಸಮಸ್ಯೆಗೆ ಸ್ಪಂದಿಸಬಹುದೆಂದು ಭಾವಿಸಿದ್ದ ತೋಟಿಗರಿಗೆ ಮತ್ತದೇ ಆಘಾತ ಕಾದಿತ್ತು! 12-7-2019 ರಂದು ಆರೋಗ್ಯ ಇಲಾಖೆಯ ಸಹಾಯಕ ಸಚಿವ ಅಶ್ವಿನಿಕುಮಾರ್ ಚೌಬೆ “ಅಡಿಕೆ ದೇಹದ ವಿವಿಧ ಅಂಗಗಳ ಮೇಲೆ ದುಷ್ಪರಿಣಾಮ ಬೀರುತ್ತದೆ. ಬಾಯಿ, ಅನ್ನನಾಳ, ಗಂಟಲು ಮತ್ತಿತರ ಅಂಗಗಳಿಗೆ ಕ್ಯಾನ್ಸರ್ ಬರುವಂತೆ ಮಾಡುತ್ತದೆಂದು ಕೆಲವು ಅಧ್ಯಯನದಿಂದ ತಿಳಿದು ಬಂದಿದೆಯೆಂದು” ಹೇಳಿದರು. ಮಂತ್ರಿಗಳ ಈ ಮಾತಿಂದ ತೋಟಿಗ ಸಮುದಾಯದಲ್ಲಿ ಆತಂಕ-ಆಕ್ರೋಶ ಮೂಡಿತು.

ಇದರಿಂದ ಕಕ್ಕಾಬಿಕ್ಕಿಯಾದ ಕಟೀಲು, ಶೋಭಾ, ಸಿದ್ದೇಶ್ವರ್ ಅವರುಗಳಿಗೆ ಗಡಿಬಿಡಿಯಲ್ಲಿ ಕೇಂದ್ರ ಆರೋಗ್ಯ ಮಂತ್ರಿಯನ್ನು ಭೇಟಿಯಾದ ಪೋಟೋ ಮಾಧ್ಯಮಗಳಿಗೆ ಬಿಡುಗಡೆ ಮಾಡಬೇಕಾಗಿ ಬಂತು. ಅಡಿಕೆ ಬೆಳೆಗಾರರ ಹಿತರಕ್ಷಿಸುವುದಾಗಿ ಹೇಳಿಕೆಯನ್ನೂ ಕೊಟ್ಟರು. ಆದರೆ ಇವತ್ತಿಗೂ ಅಡಿಕೆ ತೋಟಗಳಿಗೆ ಕೇಂದ್ರ ಸರ್ಕಾರ ಬಿಟ್ಟ ಕ್ಯಾನ್ಸರ್ ಗುಮ್ಮ ಮಾತ್ರ ಅಲ್ಲೇ ಕುಂತಿದೆ. ತೋಟಿಗರು ಅಂಜುತ್ತಲೇ ಬದುಕುತ್ತಿದ್ದಾರೆ. ಸಿಗರೇಟ್ ಲಾಬಿ ಮತ್ತು ಗುಟ್ಕ ಲಾಬಿ ನಡುವೆ ವ್ಯವಹಾರಿಕ ಸಂಘರ್ಷ ಮೊದಲಿನಿಂದಲೂ ನಡೆಯುತ್ತಿದೆ. ಕೇಂದ್ರದ ಆಹಾರ ಸುರಕ್ಷೆ ಮತ್ತು ಗುಣಮಟ್ಟಗಳ ನಿಯಾಮಾವಳಿಯಂತೆ ತಂಬಾಕಿನೊಂದಿಗೆ ಅಡಿಕೆ ಉತ್ಪನ್ನಗಳನ್ನೂ ಸೇರಿಸಿರುವುದೇ ಸಮಸ್ಯೆಯ ಮೂಲ.

ಸ್ವಲ್ಪ ತಿಂದರೆ ಅಡಿಕೆಯಲ್ಲಿ ಔಷಧಿ ಗುಣವಿದೆ. ಅತಿಯಾದರೆ ಹಾನಿಯೇ ಎಂದು ಸಂಶೋಧಕರು ಹೇಳುತ್ತಾರೆ. ಅಡಿಕೆ ವಹಿವಾಟು ನಡೆಸುವ ಸಹಕಾರ ಸಂಸ್ಥೆಗಳು ಕಾಸರಗೋಡಿನ ಸಿಪಿಸಿಆರ್‌ಐ ಮೂಲಕ ಅಡಿಕೆಯ ಗುಣಾವಗುಣದ ಬಗ್ಗೆ ಸಂಶೋಧನೆ ನಡೆಯುವಂತೆ ನೋಡಿಕೊಂಡಿದ್ದವು. ಈ ವರದಿ ಆಡಿಕೆ ಕ್ಯಾನ್ಸರ್‍ಕಾರಕವಲ್ಲ; ಆರೋಗ್ಯ ವರ್ಧಕ ಎಂದು ಹೇಳಿದೆ. ಹಿಂದೆ ಕೆಲವು ಕಂಪನಿಗಳು ಅಡಿಕೆಯನ್ನು ಚಾಕೊಲೆಟ್ ತಯಾರಿಕೆಗೆ ಬಳಸಿದ್ದವು. ಈ ಪ್ರಯೋಗ ಯಶಸ್ವಿಯಾಗಲಿಲ್ಲ. ವೈನ್ ತಯಾರಿಕೆ ಪ್ರಯತ್ನ ನಡೆದರೂ ದುಬಾರಿ ಎಂದಾಯಿತು. ಚಹಾ, ಬಣ್ಣ ಮತ್ತಿತರ ಉದ್ದೇಶಕ್ಕೆ ಅಡಿಕೆ ಬಳಸುವ ಸಂಶೋಧನೆಗಳು ನಡೆಯುತ್ತಿವೆ.

ಅಡಿಕೆ ನಿಷೇಧದ ಸಮಸ್ಯೆ ಇರುವುದು ತೋಟಪಟ್ಟಿಯ ಸಂಸದರ ಇಚ್ಛಾಶಕ್ತಿಯ ಕೊರತೆಯಲ್ಲಿ. ಸಂಸತ್ತಿನಲ್ಲಿ ಚರ್ಚೆ, ಕಾನೂನಿನಲ್ಲಿ ತಿದ್ದುಪಡಿ ಮೂಲಕ ಮಾತ್ರ ಅಡಿಕೆ ಮಾನಕ್ಕೆ ಬಂದಿರುವ ಕಳಂಕ ತೆಗೆಯಬಹುದು. ಆದರೆ ಅದು ಆಗುತ್ತಿಲ್ಲ.


ಇದನ್ನೂ ಓದಿ: ಅಡಿಕೆ ಬೆಳೆಗಾರರನ್ನು ರಕ್ಷಿಸುವರೆ ಈ ಆರು ಜನ ಮಾನಗೇಡಿ ಸಂಸದರು?
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಇಂಪ್ರೆಸ್ >ತಟ್ಟು
    ರಕ್ಷಿಸು(ಸಂಸ್ಕ್ರುತ)>ಕಾಪಾಡು(ಕನ್ನಡ)
    ಸ್ವಲ್ಪ(ಸಂಸ್ಕ್ರುತ)>ತುಸು(ಕ)

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...