Homeಅಂತರಾಷ್ಟ್ರೀಯಟಿಪ್ಪುಸುಲ್ತಾನರ ವಂಶಜರಾದ ನೂರ್ ಇನಾಯತ್‍ಖಾನಳ ಸಾಹಸಗಾಥೆ ನಿಮಗೆ ಗೊತ್ತೆ?

ಟಿಪ್ಪುಸುಲ್ತಾನರ ವಂಶಜರಾದ ನೂರ್ ಇನಾಯತ್‍ಖಾನಳ ಸಾಹಸಗಾಥೆ ನಿಮಗೆ ಗೊತ್ತೆ?

- Advertisement -
- Advertisement -

ವೈಚಾರಿಕ ಚರಿತ್ರೆ ಕೆಲವೊಮ್ಮೆ ಊಹಾತೀತವಾಗಿ ಚಲಿಸಿಬಿಡುತ್ತದೆ. ಇದಕ್ಕೆ ನೂರ್ ಇನಾಯತ್‍ಖಾನಳ (1914-1944) ಬಾಳುವೆ ಸಾಕ್ಷಿ. ಟಿಪ್ಪುಸುಲ್ತಾನರ ವಂಶಜರಾದ ಸೂಫಿದಾರ್ಶನಿಕನ ಮಗಳಾದ ಈಕೆ, ರಷ್ಯಾದಲ್ಲಿ ಹುಟ್ಟಿದವಳು; ಎರಡನೇ ಮಹಾಯುದ್ಧದಲ್ಲಿ ಇಂಗ್ಲೆಂಡಿನ ಗೂಢಚಾರಿಣಿಯಾಗಿ ಫ್ರಾನ್ಸಿಗೆ ಹೋಗಿ, ಜರ್ಮನಿಯ ನಾಜಿಗಳ ಕೈಯಲ್ಲಿ ಸಿಕ್ಕು, ಡಕಾವ್ ಕಾನ್ಸಂಟ್ರೇಶನ್ ಕ್ಯಾಂಪಿನಲ್ಲಿ ಜೀವಂತ ಸುಟ್ಟುಹೋದವಳು.

ಅವಳ ಪೂರ್ವಜ ಟಿಪ್ಪು, ಬ್ರಿಟಿಷರನ್ನು ಆಜನ್ಮವೈರಿಗಳೆಂದು ಪರಿಭಾವಿಸಿ ಜೀವನವಿಡೀ ಅವರ ವಿರುದ್ಧ ಹೋರಾಡುತ್ತ, ರಣರಂಗದಲ್ಲಿ ನೆತ್ತರು ಹರಿಸುತ್ತ ಪ್ರಾಣಬಿಟ್ಟಿದ್ದನು. ಅವನ ವಂಶದ ಕುಡಿಯೊಂದು ಒಂದೂವರೆ ಶತಮಾನದ ನಂತರ, ಇದೇ ಬ್ರಿಟಿಷರ ಪ್ರತಿನಿಧಿಯಾಗಿ ಹೋಗಿ, ಸಜೀವ ದಹನವಾಯಿತು. ಟಿಪ್ಪುವನ್ನು ಕೊಂದು ತಮ್ಮ ಸಾಮ್ರಾಜ್ಯ ವಿಸ್ತರಣೆಗೆ ರಹದಾರಿ ಮಾಡಿಕೊಂಡ ಬ್ರಿಟಿಷರೇ, ಟಿಪ್ಪುವಿನ ವಂಶದ ಕುಡಿಯನ್ನು ತಮ್ಮ ಯುದ್ಧದಲ್ಲಿ ಉಪಕರಣವಾಗಿ ಬಳಸಿದರು. ಚರಿತ್ರೆಯ ವೈರುಧ್ಯವೆಂದರೆ ಇದೇ ಇರಬೇಕು. ಈ ವೈರುಧ್ಯವನ್ನು ಕೊಲ್ಕತ್ತೆಯಲ್ಲಿರುವ ಟಿಪ್ಪುಸುಲ್ತಾನ ಮಸೀದಿಯಲ್ಲಿ ಕೂಡ ಕಾಣಬಹುದು. ಈ ಮಸೀದಿಯನ್ನು ಬ್ರಿಟಿಷರು ಟಿಪ್ಪು ವಂಶಜರಿಗೆ ಕೊಟ್ಟ ಪರಿಹಾರದ ಹಣದಲ್ಲಿ ಕಟ್ಟಲಾಯಿತು. ಅದೂ ಬ್ರಿಟಿಷ್ ವಾಸ್ತುಶಿಲ್ಪದ ವಿನ್ಯಾಸದಲ್ಲಿ!

ಒಂದೇ ಕುಟುಂಬದಲ್ಲಿ ಹುಟ್ಟಿದ ಆದರೆ ಬೇರೆಬೇರೆ ಕಾಲಘಟ್ಟಕ್ಕೆ ಸೇರಿದ ಟಿಪ್ಪು ಮತ್ತು ನೂರ್ ಇಬ್ಬರಲ್ಲೂ ಒಂದು ವಿಷಯದಲ್ಲಿ ಸಮಾನತೆಯಿದೆ. ಅದೆಂದರೆ, ಟಿಪ್ಪು ಹಾಗೂ ನೂರ್, ವಸಾಹತುಶಾಹಿ ಮತ್ತು ಫ್ಯಾಸಿಸಂ ಎಂಬ ನಾಗರಿಕ ಸಮಾಜ ಕಂಡ ಎರಡು ರೋಗಗ್ರಸ್ತ ರಾಜಕೀಯ ವ್ಯವಸ್ಥೆಗಳ ವಿರುದ್ಧ ಸೆಣಸಾಡಿದವರು. ಮನುಕುಲಕ್ಕೆ ಮಹಾಕಂಟಕವಾಗಿದ್ದ ಫ್ಯಾಸಿಸಂ ಮುಂದೆ ವಸಾಹತುಶಾಹಿಯು ಆಮೇಲೆ ವಿಚಾರಿಸಿಕೊಳ್ಳಬಹುದಾದ, ಚಿಕ್ಕಶತ್ರುವಾಗಿ ಕಾಣಿಸಿತು. ಬ್ರಿಟಿಷರ ವಿರುದ್ಧ ಹೋರಾಡುತ್ತಿದ್ದ ಕಾಂಗ್ರೆಸ್, ಸ್ವತಃ ಫ್ಯಾಸಿಸಂ ವಿರುದ್ಧ ಹೋರಾಡಲು ಬ್ರಿಟಿಷರ ಜತೆ ಕೈಜೋಡಿಸಬೇಕೆಂದು ಕರೆಗೊಟ್ಟಿದ್ದು ಇದೇ ಹಿನ್ನೆಲೆಯಲ್ಲಿ. ಇದರ ಭಾಗವಾಗಿ ನೂರಳ ಸೈನಿಕ ಸೇವೆಯನ್ನು ಗಮನಿಸಬೇಕು.

ಇಂತಹ ಅಪರೂಪದ ಮತ್ತು ಬಹಳ ಜನರಿಗೆ ತಿಳಿಯದ ವ್ಯಕ್ತಿಯಾದ ನೂರ್ ಬಗ್ಗೆ, ಕನ್ನಡದ ಯುವಲೇಖಕರಾದ ಚಂದ್ರಶೇಖರ ಮಂಡೆಕೋಲು ಅವರು ವ್ಯಾಪಕವಾದ ಹುಡುಕಾಟ ಮಾಡಿ ಜೀವನಚರಿತ್ರೆಯನ್ನು ರಚಿಸಿದ್ದಾರೆ. ಅದರ ಹಸ್ತಪ್ರತಿಯನ್ನು ಓದುತ್ತ ಅದರ ವಿಶಿಷ್ಟತೆಗಳನ್ನು ಓದುಗರಿಗೆ ಹಂಚಿಕೊಳ್ಳಬೇಕು ಅನಿಸಿತು. ನನಗೆ ನೂರಳ ತಂದೆ ಹಜರತ್ ಇನಾಯತ್ ಖಾನರ ಬಗ್ಗೆ ತುಸು ಗೊತ್ತಿತ್ತು. ಪಂಡಿತ ರವಿಶಂಕರರ ಹಾಗೆ, ನುಸ್ರತ್‍ಫತೇ ಅಲಿಖಾನರ ಹಾಗೆ ಇನಾಯತ್ ಖಾನ್ (1882-1927) ಭಾರತದ ಉಪಖಂಡದ ಸಂಗೀತವನ್ನು ಪಶ್ಚಿಮದ ಜತೆ ಸಮ್ಮಿಲನಗೊಳಿಸುವ ಕಾರ್ಯ ಮಾಡಿದವರು. ಅವರಿಗೆ ಸೂಫೀ ದೀಕ್ಷೆ ಕೊಟ್ಟವರು ಹೈದರಾಬಾದಿನ ಇಬ್ಬರು ಸೂಫಿಸಂತರು.

ಹಜರತ್ ಇನಾಯತ್ ಖಾನ್

ಹುಮನಾಬಾದಿನ ಮಾಣಿಕಪ್ರಭುಗಳ ಗದ್ದಿಗೆಗೆ ಇನಾಯತ್ ಖಾನರು ಬಂದುಹೋಗುತ್ತಿದ್ದರು. ನಾನು ದೆಹಲಿಗೆ ಹೋದಾಗಲೆಲ್ಲ ಹಜರತ್ ನಿಜಾಮುದ್ದೀನ್ ದರ್ಗಾದ ಹಿಂಬದಿಯಲ್ಲಿರುವ ಅವರ ದರ್ಗಾಕ್ಕೆ ಹೋಗುವುದುಂಟು. ಅವರ ಮೇಲೆ ಲೇಖನವನ್ನೂ ಪ್ರಕಟಿಸಿದ್ದುಂಟು. ಆದರೆ ಅವರ ಮಗಳು ನೂರ್ ಇನಾಯತ್ ಖಾನರ ಬಗ್ಗೆ ಹೆಚ್ಚು ತಿಳಿದಿರಲಿಲ್ಲ. ಮಂಡೆಕೋಲು ಅವರ ವಿಸ್ತಾರವಾದ ಸಂಶೋಧನೆಯ ಫಲಶೃತಿಯಾಗಿರುವ ಈ ಕೃತಿ, ನೂರಳ ಚರಿತ್ರೆಯನ್ನು ತಿಳಿಸಿಕೊಟ್ಟಿತು. ನೂರಳ ಈ ಜೀವನ ಚರಿತ್ರೆಯು ನಾಲ್ಕು ಆಯಾಮಗಳನ್ನು ಒಳಗೊಂಡಿದೆ.

ಮೊದಲನೆಯದು- ಕುಟುಂಬಕೇಂದ್ರಿತ ಆಯಾಮ. ಈ ಭಾಗವು ನೂರ್ ಇನಾಯತ್ ಖಾನರ ಕುಟುಂಬ, ಖಾನರು ಸೂಫಿ ದಾರ್ಶನಿಕರೂ ಸಂಗೀತಗಾರರೂ ಆಗಿ ರೂಪುಗೊಂಡ ಬಗೆ, ಮಾಡಿದ ದೇಶಾಂತರಗಳ ತಿರುಗಾಟ, ಮಕ್ಕಳನ್ನು ಸರ್ವಧರ್ಮದ ಸಮಭಾವದಲ್ಲಿ ಬೆಳೆಸುವ ಕಥನವನ್ನು ಒಳಗೊಂಡಿದೆ.

ಎರಡನೆಯದು- 20ನೇ ಶತಮಾನದ ಮೊದಲ ಭಾಗದಲ್ಲಿ ಸಂಭವಿಸಿದ ವಸಾಹತುಶಾಹಿ ಕಾಲಘಟ್ಟದ ಯುದ್ಧಗಳ ಕಥೆ. ಇಲ್ಲಿ ಫ್ಯಾಸಿಸಂ ವಿರೋಧಿಸುವ ಜಾಗತಿಕ ಚಳುವಳಿಯಲ್ಲಿ ಭಾಗವಹಿಸುವ ಇಂಗ್ಲೆಂಡಿನ ಪ್ರಜೆಯಾದ ನೂರ್ ದಾರುಣವಾಗಿ ಕೊಲೆಯಾಗುವ ಭಾಗ ಬರುತ್ತದೆ. ಇಲ್ಲಿ ನೂರಳ ಜೀವನಚರಿತ್ರೆಯು ದಾರುಣವೂ ಮೈನವಿರೇಳಿಸುವ ಘಟನೆಗಳಿಂದಲೂ ಕೂಡಿದ್ದು, ಪತ್ತೇದಾರಿ ಕಥೆಯಿದ್ದಂತಿದೆ. ಇದಕ್ಕೆ ಕಾರಣ, ಆಕೆ ಗೂಢಚಾರಿಣಿಯಾಗಿ ಅಪಾಯಕರವಾದ ನಾಜಿಗಳ ನಡುವೆ ಕೆಲಸ ಮಾಡಲು ಆಯ್ಕೆ ಮಾಡಿಕೊಂಡಿದ್ದು. ಅದು ಯಾವುದೇ ಕ್ಷಣದಲ್ಲಿ ಪ್ರಾಣಹೋಗುವ ಕಾರ್ಯದಲ್ಲಿ ಮೂವತ್ತು ವರ್ಷದ ಈ ಸುಂದರಿ ಪ್ರಾಣತೆತ್ತಳು.

ಈಚೆಗೆ ಇಂಗ್ಲೆಂಡು ಆಕೆಯನ್ನು ಹುತಾತ್ಮಳೆಂದು ಕರೆದು ಗೌರವಿಸಿತು. ಆಕೆಯ ಹೆಸರಲ್ಲಿ ಸ್ಮಾರಕವನ್ನೂ ನಿರ್ಮಿಸಿತು. ಈ ಗೌರವವನ್ನು ಬ್ರಿಟಿಷರು ಹೂಡಿದ ಯುದ್ಧಗಳಲ್ಲಿ ಹಲವಾರು ದೇಶಗಳಿಗೆ ಹೋಗಿ ಮಡಿದ ಭಾರತೀಯ ಸೈನಿಕರಿಗೆ ಸಿಕ್ಕಿಲ್ಲ. ಗೌರವ ಸಿಕ್ಕಿರಲಿ ಸಿಗದಿರಲಿ, ವಸಾಹತುಗಳಿಗೆ ಸೇರಿದ ಜನ ವಸಾಹತುಶಾಹಿ ಹೂಡುವ ಯುದ್ಧಗಳಲ್ಲಿ ಉಪಕರಣವಾಗಿ ಬಳಕೆಯಾದ ವಾಸ್ತವವನ್ನು ಅಲ್ಲಗಳೆಯುವಂತಿಲ್ಲ.

ನೂರ್ ಫ್ಯಾಸಿಸಂ ವಿರುದ್ಧ ಹೋರಾಡುವ ದಿಟ್ಟತನ ತೋರಿದಳು. ಆದರೆ ಅವಳು ಬ್ರಿಟಿಷರಿಗೆ ಉಪಕರಣವಾಗಿ ಕೂಡ ಬಳಕೆಯಾದವಳು. ಅವಳ ಕೌಟುಂಬಿಕ ತಬ್ಬಲಿತನ ಬಡತನ ವಲಸೆ ಅಭದ್ರತೆಗಳು ಕೂಡ ಈ ಅಪಾಯಕಾರಿ ಕೆಲಸಕ್ಕೆ ಆಕೆಯನ್ನು ದೂಡಿದವು. ಹೀಗಾಗಿ ನೂರಳ ಜೀವನ ಚರಿತ್ರೆಯು, ಸೂಫಿ ಸಂಗೀತಗಾರನ ಕುಟುಂಬವೊಂದರ ಏಳುಬೀಳುಗಳನ್ನು 19-20ನೇ ಶತಮಾನದ ಜಗತ್ತಿನ ಏಳುಬೀಳಿನ ವಿದ್ಯಮಾನಗಳೊಂದಿಗೆ ಬೆಸೆದುಕೊಂಡಿದೆ. ಈ ಏಳುಬೀಳುಗಳಲ್ಲಿ ಮೈಸೂರು ಒಡೆಯರ ಹಾಗೂ ರಾಜಸ್ಥಾನದ ರಾಜರ ದೇಶೀಚರಿತ್ರೆಯೂ ಸೇರಿಕೊಳ್ಳುತ್ತದೆ. ಮೈಸೂರಿನಿಂದ ಶುರುವಾಗಿ ಅಮೆರಿಕ ರಷ್ಯ ಇಂಗ್ಲೆಂಡ್ ಫ್ರಾನ್ಸ್ ಹೀಗೆ ಸುತ್ತಾಡುವ ಈ ಚರಿತ್ರೆಯು, ಅಂತಾರಾಷ್ಟ್ರೀಯ ಆಯಾಮವುಳ್ಳ ಕರ್ನಾಟಕದ ಚರಿತ್ರೆಯನ್ನು ಕಟ್ಟಿಕೊಡುತ್ತದೆ.

ಮೂರನೆಯದು- ದಾರ್ಶನಿಕವಾಗಿ ಸೂಫಿಸಂ ಹಾಗೂ ಕಲೆಯಾದ ಸಂಗೀತಗಳು ಭಾರತದಲ್ಲಿ ಪರಸ್ಪರ ಕೂಡಿಬೆರೆತು ರೂಪುಗೊಂಡ ಸಾಂಸ್ಕೃತಿಕ ಕಥನ. ಅದು ರೂಪಿಸುವ ಅಂತಾರಾಷ್ಟ್ರೀಯ ಪ್ರಜ್ಞೆ, ಮಾನವತಾವಾದ ಹಾಗೂ ವಿಶ್ವಮಾನವ ಪ್ರಜ್ಞೆಗಳು. ಚರಿತ್ರೆ ಸಂಗೀತ ಮತ್ತು ದರ್ಶನಗಳನ್ನು ವಸಾಹತುಶಾಹಿ ಆಳ್ವಿಕೆಯ ವಿದ್ಯಮಾನಗಳ ಚೌಕಟ್ಟಿನಲ್ಲಿಟ್ಟು ಕಾಣಿಸುವುದರಿಂದ, ಕೃತಿಯು ಏಕಕಾಲಕ್ಕೆ ಕಲೆ ತತ್ವಶಾಸ್ತ್ರ ರಾಜಕಾರಣ ಹಾಗೂ ಚರಿತ್ರೆಯ ಕೃತಿಯಾಗಿದೆ. ಗಂಡುಹೆಣ್ಣಿನ ಪ್ರೇಮವನ್ನು, ವ್ಯಕ್ತಿಗಳ ಅನುಭಾವದ ಸಾಧನೆಯನ್ನು, ಸಂಗೀತದ ಅಭಿರುಚಿಯನ್ನು ಒಂದು ಕೇಂದ್ರಕ್ಕೆ ತರುತ್ತದೆ. ಈ ಮೂಲಕ ಭಾರತದ ಧಾರ್ಮಿಕ ಸಾಮರಸ್ಯದ ಅಪೂರ್ವ ಪರಂಪರೆಯನ್ನು ಕಾಣಿಸುತ್ತದೆ. ಈ ಪರಂಪರೆಯ ಒಳಗಿನ ಮಾನವೀಯ ಸಂಬಂಧಗಳನ್ನು ಶೋಧಿಸುತ್ತದೆ. ಈ ಕಾರಣಕ್ಕಾಗಿ ಇದು ಸಾಂಸ್ಕೃತಿಕ ಪಠ್ಯವೂ ಆಗಿದೆ.

ನಾಲ್ಕನೆಯದು-ಮಹಿಳೆಯರ ಚೈತನ್ಯಶೋಧಕ ಕೃತಿಯಾಗಿರುವುದು. ಇಲ್ಲಿ ನೂರಳ ಸಾಹಸಗಾಥೆಯ ಜತೆಗೆ ಎಲೆಮರೆಯ ಪಾತ್ರದಂತಿರುವ ನೂರಳ ತಾಯಿ ನೋರಾ ಬೇಕರ್ ಉರುಫ್ ಶಾರದಾ ಅಮೀನಾಬೇಗಮರ ಕತೆ ಸೆಳೆಯುತ್ತದೆ. ತಾನು ಪ್ರೀತಿಸಿದ ಇನಾಯತ್‍ಖಾನರ ಜತೆ ಬದುಕಲು, ತನ್ನ ಕುಟುಂಬದವರ ಪ್ರತಿರೋಧವನ್ನು ಲೆಕ್ಕಿಸದೆ, ಸಿರಿವಂತ ಬದುಕನ್ನು ತೊರೆದು ಆಕೆ ಬಂದವರು. ಬಂದಬಳಿಕ ಅಲೆಮಾರಿಯಾಗಿದ್ದ ಇನಾಯತ್ ಖಾನರ ಜತೆ ನಿಂತು, ದೇಶಾಂತರ ತಿರುಗುವ, ನಿರಂತರ ಕಷ್ಟಗಳನ್ನು ಹಂಚಿಕೊಂಡು ಬದುಕುವ ಕಠೋರದಾರಿಗೆ ಮೈಯೊಡ್ಡಿದವರು. ಬದುಕಿನ ಯಾವುದೊ ಒಂದು ಘಟ್ಟದಲ್ಲಿ ಗಂಡಸರು ಸಂಸಾರ ವಿಮುಖರಾಗಿ ತಮ್ಮ ಕಲೆಯಲ್ಲೊ ಅನುಭಾವದಲ್ಲೊ ತಲೆಮರೆಸಿಕೊಂಡಾಗ, ಸಂತಾನವನ್ನು ಪೋಷಿಸುವ ಹಾಗೂ ಕುಟುಂಬವು ಕುಸಿಯದಂತೆ ಹಿಡಿದುಕೊಳ್ಳುವ ಹೊಣೆಯನ್ನು ಮಹಿಳೆಯರು ಹೊರುತ್ತಾರೆ. ಅದು ಫ್ಯಾಸಿಸಂ ವಿರುದ್ಧದ ಯುದ್ಧಕ್ಕಿಂತ ಯಾವ ಬಗೆಯಲ್ಲೂ ಕಡಿಮೆಯಿಲ್ಲ. ಹೀಗಾಗಿ ಈ ಕೃತಿಯ ಅದೃಶ್ಯ ನಾಯಕಿ ನೂರಳ ತಾಯಿ. ಈಕೆ ಗಾರ್ಕಿಯ ‘ಮದರ್’ ಕಾದಂಬರಿಯ ತಾಯಿಯನ್ನು ನೆನಪಿಸುವರು.

ಚಂದ್ರಶೇಖರ ಮಂಡೆಕೋಲು

ಚಂದ್ರಶೇಖರ ಮಂಡೆಕೋಲು ಅವರು ಈಗಾಗಲೇ ಭಾರತದ ಮೊದಲ ವೈದ್ಯೆ ಆನಂದಿಬಾಯಿ ಮೇಲೆ ಕೃತಿ ರಚಿಸಿದವರು. ಕನ್ನಡದಲ್ಲಿ ಮಂಡೆಕೋಲು, ಎಂ.ಆರ್.ಕಮಲಾ, ಜಗದೀಶ ಕೊಪ್ಪ, ವೇಣುಗೋಪಾಲ-ಶೈಲಜ ಅವರು, ಕಳೆದ ಕೆಲವು ವರ್ಷಗಳಿಂದ ಮಹಿಳಾ ಸಾಧಕಿಯರ ಮೇಲೆ ಕೃತಿ ರಚಿಸಿದರು. ವೃತ್ತಿಪರ ಇತಿಹಾಸಕಾರರಲ್ಲದ ಇವರು, ರಾಜಮಹಾರಾಜರ ಕ್ಲಾಸಿಕಲ್ ಚರಿತ್ರೆಯು ಅವಗಣಿಸಿರುವ ಅಜ್ಞಾತರೂ ಮಹತ್ವದವರೂ ಆದ ವ್ಯಕ್ತಿಗಳ ಮೇಲೆ ಚರಿತ್ರೆ ಕಟ್ಟುತ್ತಿರುವರು. ಇದು ಸಾಂಪ್ರದಾಯಿಕ ಚರಿತ್ರೆಯನ್ನು ಬೇರೊಂದೇ ಬಗೆಯಲ್ಲಿ ನೋಡಲು ನಮ್ಮನ್ನು ಒತ್ತಾಯಿಸಬಲ್ಲದಾಗಿದೆ.

ಹೀಗೆ ವ್ಯಕ್ತಿ, ಕುಟುಂಬ, ದೇಶ ಮತ್ತು ಪರಂಪರೆಗಳ ನಾಲ್ಕು ಆಯಾಮಗಳನ್ನು ಒಳಗೊಂಡಿರುವ, ಒಬ್ಬ ಮಹಿಳೆಯ ಮೇಲೆ ಜೀವನಚರಿತ್ರೆಯನ್ನು ಶ್ರದ್ಧೆಯಿಂದ ರಚಿಸಿರುವುದಕ್ಕಾಗಿ ಚಂದ್ರಶೇಖರ ಮಂಡೆಕೋಲು ಅವರಿಗೆ ಕನ್ನಡದ ಓದುಗರ ವತಿಯಿಂದ ಕೃತಜ್ಞತೆ ಸಲ್ಲಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಆಯೋಗ ಚಲೋ: ನಟ ಪ್ರಕಾಶ್ ರಾಜ್ ಸೇರಿದಂತೆ ನೂರಾರು SIR ಸಂತ್ರಸ್ತರು, ಹೋರಾಟಗಾರರನ್ನು ವಶಕ್ಕೆ ಪಡೆದ ಪೊಲೀಸರು

ಕರ್ನಾಟಕ ರಾಜ್ಯದ ಅರ್ಹ ಮತದಾರರ ‘ಮತಹರಣ’ ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಮ್ಮಿಕೊಂಡಿದ್ದ ‘ಚುನಾವಣಾ ಆಯೋಗ ಚಲೋ’ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬಹುಭಾಷಾ ನಟ ಪ್ರಕಾಶ್ ರಾಜ್, ಕಿಶೋರ್ ಹಾಗೂ ಪ್ರಮುಖ ನಾಯಕರು ಸೇರಿದಂತೆ...

‘ಚುನಾವಣಾ ಆಯೋಗ ಚಲೋ’: ‘ಮುಚ್ಚಿದ ಬಾಗಿಲಿನ ಮಾತುಕತೆ ಬೇಡ, ಎಲ್ಲವೂ ಸಾರ್ವಜನಿಕರ ಮುಂದೆಯೇ ಇತ್ಯರ್ಥವಾಗಬೇಕು’: ನೂರ್ ಶ್ರೀಧರ್ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ನಡೆದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ರಾಜ್ಯದ ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಬೃಹತ್ ಕಳವಳವನ್ನು ಸೃಷ್ಟಿಸಿದೆ. ಕೇಂದ್ರ ಚುನಾವಣಾ ಆಯೋಗವು ಬಿಡುಗಡೆ ಮಾಡಿರುವ ನೂತನ ಕರಡು ಮತದಾರರ...

SIR ಎಂಬುದು ಪ್ರಜಾಪ್ರಭುತ್ವವನ್ನು ಹಾಳುಮಾಡುವ ದೊಡ್ಡ ಸಂಚು ಮತ್ತು ಮೋಸ: ಪ್ರಕಾಶ್ ರಾಜ್

"ನಾನು ಸಣ್ಣವನಿದ್ದಾಗ ಮುಕ್ಕೂಟಿ ಕನ್ನಡಿಗರು ಎನ್ನುತ್ತಿದ್ದರು. ದಶಕಗಳ ನಂತರ ಪಂಚಕೋಟಿ ಕನ್ನಡಿಗರಾಗಿ, ಈಗ ಶತಕೋಟಿ ಆಗಬೇಕಿತ್ತು. ಆದರೆ ಮತದಾರರ ಪಟ್ಟಿ ವಿಶೇಷ ಸಾಂದ್ರ ಪರಿಷ್ಕರಣೆ (SIR) ಹೆಸರಿನಲ್ಲಿ ಮತ್ತೆ ಮುಕ್ಕೂಟಿಗೆ ತಂದು ನಿಲ್ಲಿಸಲಾಗುತ್ತಿದೆ....

‘ಚುನಾವಣಾ ಆಯೋಗ ಚಲೋ’: ಎಸ್ಐಆರ್ ಅನ್ಯಾಯವನ್ನು ಪ್ರಶ್ನಿಸಲು ನಾವು ಚುನಾವಣಾ ಆಯೋಗಕ್ಕೆ ಮುತ್ತಿಗೆ ಹಾಕುತ್ತಿದ್ದೇವೆ: ಯೂಸುಫ್ ಕನ್ನಿ

ಬೆಂಗಳೂರು: ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಹೆಸರಿನಲ್ಲಿ ಅರ್ಹ ನಾಗರಿಕರ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ವೇದಿಕೆಯು 2026 ಸೆಪ್ಟಂಬರ್ 01, ಮಂಗಳವಾರ ಹಮ್ಮಿಕೊಂಡಿದ್ದ...

SIR:‘ನಾವು ಕಳ್ಳರಲ್ಲ, ಈ ದೇಶದ ಮೂಲ ನಿವಾಸಿಗಳು’ SIR ಸಂತ್ರಸ್ತರ ಜೊತೆ ಪ್ರಕಾಶ್ ರಾಜ್ ಸಂವಾದ

"ನಾವು ಈ ದೇಶದ ನಾಗರಿಕರು, ಕಳ್ಳರಲ್ಲ. ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್ ಮಾಡಿ ನಮ್ಮ ಸ್ವಾಭಿಮಾನಕ್ಕೆ ಧಕ್ಕೆ ತರಲಾಗುತ್ತಿದೆ. ನಮ್ಮ ಹಕ್ಕನ್ನು ಉಳಿಸಿಕೊಳ್ಳಲು ನಾವು ಹೋರಾಟ ನಡೆಸುತ್ತಿದ್ದೇವೆ," ಎಂದು ಬಹುಭಾಷಾ ನಟ ಹಾಗೂ...

‘ವಿದೇಶದಲ್ಲಿ ಚಿನ್ನ ಖರೀದಿಸಬೇಡಿ, ವಿವಾಹವಾಗಬೇಡಿ’: ಭಾರತೀಯರಿಗೆ ಮೋದಿ ಮನವಿ

ಭಾರತೀಯರು ಅನಗತ್ಯವಾಗಿ ವಿದೇಶಿ ಪ್ರವಾಸ ಕೈಗೊಳ್ಳುವುದನ್ನು, ವಿದೇಶಗಳಲ್ಲಿ ವಿವಾಹವಾಗುವುದನ್ನು ಹಾಗೂ ಅಗತ್ಯವಿಲ್ಲದಿದ್ದರೆ ವಿದೇಶದಿಂದ ಚಿನ್ನ ಖರೀದಿಸುವುದನ್ನು ಸಂಪೂರ್ಣವಾಗಿ ತಪ್ಪಿಸಬೇಕು ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. ಸ್ವಾವಲಂಬನೆಗೆ ಉತ್ತೇಜನ ನೀಡುವುದರ...

ಧಾರವಾಡ | ಪ್ರಕಾಶ್ ರಾಜ್ ಭಾಗವಹಿಸಿದ್ದ ಸಮುದಾಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನ : ದೂರು ದಾಖಲು

ಭಾನುವಾರ (ಆ.30) ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ಸಭಾ ಭವನದಲ್ಲಿ ಆಯೋಜಿಸಿದ್ದ ಸಮುದಾಯ ಸಂಘಟನೆಯ ಕಾರ್ಯಕ್ರಮಕ್ಕೆ ಅಡ್ಡಿಪಡಿಸಲು ಯತ್ನಿಸಿ ಗಲಾಟೆ ಎಬ್ಬಿಸಿದ ಬಿಜೆಪಿ-ಸಂಘಪರಿವಾರದ ಬೆಂಬಲಿಗರ ವಿರುದ್ಧ ದೂರು ದಾಖಲಿಸಲಾಗಿದೆ. ಸಮುದಾಯ ಸಂಘಟನೆಯ ಧಾರವಾಡದ...

ಚಲಿಸುತ್ತಿದ್ದ ಸ್ಲೀಪರ್ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಚಾಲಕ, ಕಂಡಕ್ಟರ್ ಬಂಧನ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 2012ರಲ್ಲಿ ನಡೆದ ನಿರ್ಭಯಾ ಪ್ರಕರಣವನ್ನು ನೆನಪಿಸುವಂತಹ ಆಘಾತಕಾರಿ ಘಟನೆಯೊಂದು ನಡೆದಿದೆ. ಸ್ಲೀಪರ್‌ ಬಸ್‌ನಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ. indiatoday.in ವರದಿಯ ಪ್ರಕಾರ, ಈ ಘಟನೆಯು ಆಗಸ್ಟ್ 4ರ...

ಜಗತ್ತಿನ ಪ್ರತಿಯೊಬ್ಬರಿಗೂ ಲ್ಯಾಪ್‌ಟಾಪ್ ಕೊಳ್ಳುವಷ್ಟು ಕಪ್ಪು ಹಣ ಪ್ರಪಂಚದಲ್ಲಿದೆ: ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್

ಅಕ್ರಮ ಹಣ ವರ್ಗಾವಣೆ (Money Laundering) ಮತ್ತು 'ಡಿಜಿಟಲ್ ಅರೆಸ್ಟ್' ನಂತಹ ಆನ್‌ಲೈನ್ ವಂಚನೆಗಳ ಪ್ರಮಾಣದ ಕುರಿತು ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಈ ರೀತಿಯ...

ಪೆಟ್ರೋಲ್‌ನಲ್ಲಿ ಎಥನಾಲ್ ಪ್ರಮಾಣ ಬಹಿರಂಗಪಡಿಸುವಂತೆ ಕೋರಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್

ಪೆಟ್ರೋಲ್‌ನಲ್ಲಿ ಬೆರೆಸಲಾಗುವ ಎಥನಾಲ್ ಪ್ರಮಾಣವನ್ನು ಕಡ್ಡಾಯವಾಗಿ ನಮೂದಿಸಬೇಕು ಮತ್ತು ವಾಹನಗಳಿಗೆ ಎಥನಾಲ್ ಮಿಶ್ರಿತ ಇಂಧನದ ಹೊಂದಾಣಿಕೆಯ ಬಗ್ಗೆ ಹೆಚ್ಚಿನ ಪಾರದರ್ಶಕತೆ ತರಬೇಕು ಎಂದು ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆ...