Homeಕರ್ನಾಟಕತೆಪ್ಪಗಿರಿ! ಮಾತೆತ್ತಿದರೆ ನೀವು ಭಯೋತ್ಪಾದಕ! : ಯುಎಪಿಎ ಕಾಯ್ದೆಗೆ ತಿದ್ದುಪಡಿ ತಂದ ಕೇಂದ್ರ ಸರ್ಕಾರ

ತೆಪ್ಪಗಿರಿ! ಮಾತೆತ್ತಿದರೆ ನೀವು ಭಯೋತ್ಪಾದಕ! : ಯುಎಪಿಎ ಕಾಯ್ದೆಗೆ ತಿದ್ದುಪಡಿ ತಂದ ಕೇಂದ್ರ ಸರ್ಕಾರ

'ಪೊಟಾ' ಅಡಿಯಲ್ಲಿ 4,349 ಮಂದಿಯನ್ನು ಬಂಧಿಸಿದ್ದರೆ, ಶಿಕ್ಷೆಯಾಗಿರುವುದು ಕೇವಲ 13 ಮಂದಿಗೆ. ಅಂದರೆ ಉಳಿದವರು ಸುಮ್ಮನೇ ಜೈಲಿನಲ್ಲಿ ಕೊಳೆಯಬೇಕಾಯಿತು. ಇದು ಸರ್ವಾಧಿಕಾರಕ್ಕೆ ತಕ್ಕ ಅಸ್ತ್ರ.

- Advertisement -
- Advertisement -

ಕೇಂದ್ರ ಸರಕಾರವು ಪ್ರಜಾಪ್ರಭುತ್ವದ ಮುಸುಕಿನಲ್ಲಿಯೇ ಸರ್ವಾಧಿಕಾರವನ್ನು ತರುವ ದಿಕ್ಕಿನಲ್ಲಿ ದಾಪುಗಾಲು ಇಡುತ್ತಿದೆ. ಸಂಸತ್ತಿನಲ್ಲಿ ದಿನಕ್ಕೊಂದರಂತೆ ವಿಷದ ಮೊಟ್ಟೆಗಳನ್ನು ಇಡುತ್ತಿದೆ. ಲೋಕಸಭೆಯಲ್ಲಿ ತನಗಿರುವ ಬಹುಮತವನ್ನು ತಣ್ಣಗೆ ಬಳಸಿಕೊಳ್ಳುತ್ತಿರುವ ನರೇಂದ್ರ ಮೋದಿ ಸರಕಾರ ಈಗಾಗಲೇ ಕೆಲವು ಕಾನೂನುಗಳಿಗೆ ತಿದ್ದುಪಡಿ ಮಾಡಿದೆ. ಈ ಸಾಲಿನಲ್ಲಿ ಜುಲೈ 15, 2019ರಂದು ಲೋಕಸಭೆಯಲ್ಲಿ ಅಂಗೀಕರಿಸಲಾದ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‍ಐಎ) (ತಿದ್ದುಪಡಿ) ಮಸೂದೆಯನ್ನು ಅಂಗೀಕರಿಸಿದರೆ, ಜುಲೈ 24, 2019ರಂದು ಕಾನೂನುಬಾಹಿರ ಚಟುವಟಿಕೆಗಳ ತಡೆ (ತಿದ್ದುಪಡಿ) ಮಸೂದೆ (ಯುಎಪಿಎ)ಯನ್ನು ಅಂಗೀಕರಿಸಲಾಗಿದೆ. ಈ ಕಾಯಿದೆಗಳು ರಾಜ್ಯ ಸಭೆಯಲ್ಲಿಯೂ ಅಂಗೀಕಾರವಾದರೆ, ವ್ಯಕ್ತಿಗಳ ಮೇಲೆ ತನಿಖೆ ನಡೆಸಿ ವಿಚಾರಣೆಗೆ ಗುರಿಪಡಿಸುವ ಕೇಂದ್ರ ಸರಕಾರದ ಅಧಿಕಾರದ ಸ್ವರೂಪವೇ ಬದಲಾಗಲಿದೆ.


ಯುಎಪಿಎ ಕಾಯಿದೆ ಜಾರಿಗೆ ಬಂದಲ್ಲಿ ಕೇಂದ್ರ ಸರಕಾರಕ್ಕೆ ಯಾವುದೇ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರ ಬರುತ್ತದೆ. ಬೇರೆ ಕೆಲವು ದೇಶಗಳಲ್ಲಿ ಸರಕಾರಗಳಿಗೆ ಇಂತಹ ಅಧಿಕಾರ ಇದೆಯೆಂದು ಹೇಳುವ ಮೂಲಕ ಕೇಂದ್ರ ಗೃಹಮಂತ್ರಿ ಅಮಿತ್ ಶಾ ಈ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ. ಅವರ ಪ್ರಕಾರ “ಭಯೋತ್ಪಾದಕ ಸಾಹಿತ್ಯ”ವನ್ನು ಮತ್ತು “ಭಯೋತ್ಪಾದಕ ತತ್ವ”ಗಳನ್ನು ಪ್ರಚಾರ ಮಾಡುವ ವ್ಯಕ್ತಿಗಳನ್ನು ಭಯೋತ್ಪಾದಕರೆಂದು ಘೋಷಿಸಬೇಕು. ಈ ಎರಡು ಪದಗಳ ವ್ಯಾಖ್ಯಾನ ಸ್ಪಷ್ಟವಾಗಿಲ್ಲ.

ಈ ತಿದ್ದುಪಡಿಯು ಯಾವುದೇ ಸಾಕ್ಷ್ಯಾಧಾರ, ವಿಚಾರಣೆ ಅಥವಾ ನ್ಯಾಯಾಂಗದ ಕಣ್ಗಾವಲಿಲ್ಲದೆ ಒಬ್ಬ ವ್ಯಕ್ತಿಯನ್ನು ಭಯೋತ್ಪಾದಕ ಎಂದು ಘೋಷಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಈ ತಿದ್ದುಪಡಿ ಎಷ್ಟು ಅಸ್ಪಷ್ಟವಾಗಿದೆ ಎಂದರೆ ಯಾವುದೇ ಸಾಹಿತ್ಯವನ್ನು ಬರೆಯುವುದು, ಹೊಂದಿರುವುದು, ಯಾವುದೇ ಸಂಘಟನೆಗೆ ಸೇರುವುದು, ಒಟ್ಟಿನಲ್ಲಿ ಒಂದು ಚಿಂತನಾ ಪ್ರಕ್ರಿಯೆಯನ್ನೇ ಅಪರಾಧೀಕರಣಗೊಳಿಸಬಹುದು. ಇಂತಹ ಒಂದು ಹಣೆಪಟ್ಟಿ ಕಟ್ಟಲಾದರೆ, ಆ ಕಳಂಕವನ್ನು ಅಳಿಸುವುದು ಸಾಮಾನ್ಯ ವ್ಯಕ್ತಿಗೆ ಸಾಧ್ಯವೇ ಇಲ್ಲ. ಮೇಲ್ಮನವಿ ಪ್ರಕ್ರಿಯೆ ಅಷ್ಟು ಸಂಕೀರ್ಣವಾಗಿದೆ.

ಎನ್‍ಐಎ ತಿದ್ದುಪಡಿ ಮಸೂದೆಯು ಸೈಬರ್ ಅಪರಾಧಗಳೂ ಸೇರಿದಂತೆ ಯಾವುದೇ ಪ್ರಕರಣವು ಭಯೋತ್ಪಾದನೆಗೆ ಸಂಬಂಧಿಸಿದೆ ಎಂದು ನಿರ್ಧರಿಸುವ ಅಧಿಕಾರವನ್ನು ಕೇಂದ್ರ ಸರಕಾರಕ್ಕೆ ನೀಡುತ್ತದೆ. ಅದಲ್ಲದೆ ತಾನು ಭಯೋತ್ಪಾದಕ ಎಂದು ಪರಿಗಣಿಸುವ ಯಾವುದೇ ವ್ಯಕ್ತಿಯ ಬೆನ್ನುಹತ್ತಿಹೋಗುವ ಅಧಿಕಾರವನ್ನೂ ಅದು ನೀಡುತ್ತದೆ.

ಭಾರತೀಯ ಸಂವಿಧಾನವು ವಿಧಿ 19ರ ಮೂಲಕ ಅಭಿವ್ಯಕ್ತಿ ಸ್ವಾತಂತ್ರ್ಯ, ಸಭೆ ಸೇರುವ, ಸಂಘಟನೆಯ ಸ್ವಾತಂತ್ರ್ಯವನ್ನು ನೀಡಿದೆ. ವಿಧಿ 14 ಸಮಾನತೆಯ ಹಕ್ಕು ನೀಡುತ್ತದೆ. 19 ಮತ್ತು 21ನೇ ವಿಧಿಗಳು ಜೀವದ ಮತ್ತು ವೈಯಕ್ತಿಕ ಸ್ವಾತಂತ್ರ್ಯದ ಹಕ್ಕುಗಳನ್ನು ನೀಡುತ್ತದೆ. ಇದನ್ನೇ ಸಂವಿಧಾನತಜ್ಞರು ‘ಸುವರ್ಣ ತ್ರಿಭುಜ’ ಎಂದು ಕರೆದಿದ್ದಾರೆ. ಈ ಮೂಲಭೂತ ಹಕ್ಕುಗಳನ್ನೇ ಕಸಿಯುವ ದಿಕ್ಕಿನಲ್ಲಿ ಇಟ್ಟ ಹೆಜ್ಜೆಗಳೇ ಈ ತಿದ್ದುಪಡಿಗಳು.

ನಮ್ಮ ಮೂಲಭೂತ ಹಕ್ಕುಗಳನ್ನು ರಕ್ಷಿಸುವ ಹೋರಾಟವು ನವ ಭಾರತದಷ್ಟೇ ಹಳೆಯದು. 1950ರಲ್ಲಿ, ಸಂವಿಧಾನವು ಅಂಗೀಕಾರವಾದ ಒಂದೇ ವರ್ಷದಲ್ಲಿ ಸರಕಾರವು ತನ್ನನ್ನು ಟೀಕಿಸುವ ಸಾಹಿತ್ಯವನ್ನು ನಿಷೇಧಿಸಲು ಹೊರಟಾಗ, ಸಂವಿಧಾನದ ವಿಧಿ 19, ತೀವ್ರವಾದಿ ಸಾಹಿತ್ಯಕ್ಕೂ ರಕ್ಷಣೆ ನೀಡುತ್ತದೆ ಎಂದು ನ್ಯಾಯಾಲಯಗಳು ಸೂಚಿಸಿದ್ದವು. ಅದಕ್ಕಾಗಿ ಸಂವಿಧಾನವನ್ನೇ ತಿದ್ದುಪಡಿ ಮಾಡಲಾಯಿತು. ಇದುವೇ ಸಂವಿಧಾನದ ಮೊದಲ ತಿದ್ದುಪಡಿ. ಅದು ಸಂವಿಧಾನದ ವಿಧಿ 19ರಲ್ಲಿ ನೀಡಲಾಗಿರುವ ನಾಗರಿಕ ಹಕ್ಕುಗಳಿಗೆ ‘ಸಾಧುವಾದ ಕಾರಣ’ಗಳಿಗೆ ಮಿತಿಯನ್ನು ಹೇರುವ ಹಕ್ಕನ್ನು ಸರಕಾರಕ್ಕೆ ನೀಡುತ್ತದೆ. ಈ ಕಾರಣಗಳಲ್ಲಿ ‘ಸಾರ್ವಜನಿಕ ಶಿಸ್ತಿನ ರಕ್ಷಣೆ’ಯೂ ಒಂದು.

1960ರ ದಶಕದ ಆರಂಭದಲ್ಲಿ ಡಿಎಂಕೆ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ‘ಭಾರತದಿಂದ ಸ್ವಾತಂತ್ರ್ಯ’ವನ್ನು ಸೇರಿಸಿದಾಗ ಮತ್ತು ಭಾರತ-ಚೀನಾ ಯುದ್ಧದ ವೇಳೆ ಚೀನಾದ ಗುಪ್ತಚರ ಚಟುವಟಿಕೆಗಳನ್ನು ನಿಯಂತ್ರಿಸಲು ಸರಕಾರವು ರಾಷ್ಟ್ರೀಯ ಭದ್ರತೆಯ ನಿಟ್ಟಿನಲ್ಲಿ ಸಂವಿಧಾನದ ವಿಧಿ 19ರಲ್ಲಿರುವ ಕೆಲವು ಹಕ್ಕುಗಳನ್ನು ನಿಯಂತ್ರಿಸುವ ಕುರಿತು ಪರಿಶೀಲಿಸಲು ಸಮಿತಿಯೊಂದನ್ನು ರೂಪಿಸಿತ್ತು. 1963ರಲ್ಲಿ ನಡೆದ 16ನೇ ಸಂವಿಧಾನ ತಿದ್ದುಪಡಿ 19ನೇ ವಿಧಿಯಲ್ಲಿನ ಹಕ್ಕುಗಳಿಗೆ ನಿಯಂತ್ರಣಗಳನ್ನು ಹೇರುವ ಕಾನೂನುಗಳನ್ನು ತರುವ ಅಧಿಕಾರವನ್ನು ಸಂಸತ್ತಿಗೆ ನೀಡಿತು. 1967ರ ಡಿಸೆಂಬರ್ ತಿಂಗಳಲ್ಲಿ ಯುಎಪಿಎ ಜಾರಿಗೆ ಬಂತು. ಅದು ನ್ಯಾಯಾಂಗದ ಮಧ್ಯಪ್ರವೇಶ ಇಲ್ಲದೇ ರಾಷ್ಟ್ರೀಯ ಸಾರ್ವಭೌಮತೆಗೆ ಬೆದರಿಕೆ ಒಡ್ಡುವ ಸಂಘಟನೆಗಳನ್ನು ನಿಷೇಧಿಸುವ ಅಧಿಕಾರವನ್ನು ಸರಕಾರಕ್ಕೆ ನೀಡುತ್ತದೆ.

2000ದ ದಶಕದ ಆರಂಭದಲ್ಲಿ ಮೊದಲ ಎನ್‍ಡಿಎ ಸರಕಾರವು ನ್ಯಾಯಾಂಗ ಪ್ರಕ್ರಿಯೆಯನ್ನು ಉಲ್ಲಂಘಿಸಲು ಸರಕಾರಕ್ಕೆ ಅವಕಾಶ ನೀಡುವ ಕೆಲವು ಕಾನೂನುಗಳನ್ನು ತಂದಿತು. ಅವುಗಳಲ್ಲಿ ಭಯೋತ್ಪಾದನೆ ತಡೆ ಕಾಯಿದೆ (ಪೊಟಾ POTA) ಒಂದು. ಯುಪಿಎ ಮರಳಿ ಅಧಿಕಾರಕ್ಕೆ ಬಂದಾಗ ಆ ಕಾಯಿದೆಯನ್ನು ಕಿತ್ತುಹಾಕಿದರೂ, ಅದರ ಕೆಲವು ಅಂಶಗಳನ್ನು ಯುಎಪಿಎಯಲ್ಲಿ ಸೇರಿಸಿತು. ಇದು ‘ಪೊಟಾ’ದ ಅತ್ಯಂತ ಕೆಟ್ಟ ಅಂಶಗಳಾಗಿದ್ದವು. ಅವೆಂದರೆ ಯಾವುದೇ ಆರೋಪಪಟ್ಟಿ ಇಲ್ಲದೇ, ಯಾವುದೇ ಮೇಲ್ಮನವಿ ಇಲ್ಲದೇ ಯಾವುದೇ ಸಂಘಟನೆಯನ್ನು ನಿಷೇಧಿಸುವ ಅಥವಾ ವ್ಯಕ್ತಿಗತ ಸ್ವಾತಂತ್ರ್ಯವನ್ನು ಮೊಟಕುಗೊಳಿಸುವ ಅಧಿಕಾರವನ್ನು ಸರಕಾರಕ್ಕೆ ನೀಡಿರುವುದು.

ಈ ತಿದ್ದುಪಡಿಗೆ ಮೊದಲೇ ಯುಎಪಿಎ ಒಂದು ಕರಾಳ ಕಾನೂನೆಂದು ಕುಖ್ಯಾತವಾಗಿದೆ. ಅದು ಬಂಧನ ಅಥವಾ ನಿಷೇಧವನ್ನು ಅನುಷ್ಠಾನಗೊಳಿಸಬೇಕು. ಅಥವಾ ವಿಚಾರ ಮತ್ತು ನಂಬಿಕೆಗಳನ್ನು ಯಾವ ಮಾನದಂಡದ ಮೇಲೆ ನಿರ್ಧರಿಸಬೇಕು ಎಂಬ ಕುರಿತು ಸರಕಾರಕ್ಕೆ ಯಾವುದೇ ನಿರ್ದೇಶನ ನೀಡುವುದಿಲ್ಲ. ಕಾನೂನುಬಾಹಿರ ಚಟುವಟಿಕೆ ಯಾವುದು, ಭಯೋತ್ಪಾದನೆ ಯಾವುದು ಎಂಬ ಬಗ್ಗೆ ಯಾವುದೇ ವ್ಯಾಖ್ಯಾನ ಇಲ್ಲ. ರಾಜಕೀಯ ವಿರೋಧಿಗಳನ್ನು ಜೀವನಪರ್ಯಂತ ರಾಜಕೀಯ ಕೈದಿಗಳಾಗಿ ಬಂಧಿಸಿಡಲು ಅದು ಅವಕಾಶ ಒದಗಿಸುತ್ತದೆ.

ಇಂತಹ ಕಾಯಿದೆ ಕರಾಳತನವನ್ನು ವಿವರಿಸಲು ಒಂದು ಉದಾಹರಣೆ ಸಾಕು. ‘ಪೊಟಾ’ ಅಡಿಯಲ್ಲಿ 4,349 ಮಂದಿಯನ್ನು ಬಂಧಿಸಿದ್ದರೆ, ಶಿಕ್ಷೆಯಾಗಿರುವುದು ಕೇವಲ 13 ಮಂದಿಗೆ. ಅಂದರೆ ಉಳಿದವರು ಸುಮ್ಮನೇ ಜೈಲಿನಲ್ಲಿ ಕೊಳೆಯಬೇಕಾಯಿತು. ಇದು ಸರ್ವಾಧಿಕಾರಕ್ಕೆ ತಕ್ಕ ಅಸ್ತ್ರ.

ಎನ್‍ಐಎಯನ್ನು 2008ರಲ್ಲಿ ಮುಂಬಯಿ ಭಯೋತ್ಪಾದಕ ದಾಳಿಯ ಬಳಿಕ ರೂಪಿಸಲಾಗಿತ್ತು. ಈಗಿನ ತಿದ್ದುಪಡಿ ಕಾಯಿದೆಯನ್ನು ಲೋಕಸಭೆಯಲ್ಲಿ ವಿರೋಧಿಸಿದವರು ಕೇವಲ ಎಂಟು ಮಂದಿ ಮಾತ್ರ. ಈ ತಿದ್ದುಪಡಿಯು ಅದರ ಅಧಿಕಾರ ವ್ಯಾಪ್ತಿಯನ್ನು ವಿಶೇಷವಾಗಿ ವಿಸ್ತರಿಸುತ್ತದೆ. ಅದಕ್ಕೆ ಈಗ ಮಾನವ ಕಳ್ಳಸಾಗಣೆ, ನಕಲಿ ನೋಟು, ಶಸ್ತ್ರಾಸ್ತ್ರ, ಸ್ಫೋಟಕ, ಸೈಬರ್ ಅಪರಾಧ ಇತ್ಯಾದಿಗಳ ಕುಳಿತು ತನಿಖೆ ನಡೆಸುವ ಅಧಿಕಾರ ಬರುತ್ತದೆ. ಮರಣದಂಡನೆ ವಿಧಿಸಬಹುದಾದ ವಿಶೇಷ ನ್ಯಾಯಾಲಯಗಳನ್ನು ಸ್ಥಾಪಿಸಬಹುದಾದ ಅಧಿಕಾರವನ್ನೂ ಈ ತಿದ್ದುಪಡಿ ಎನ್‍ಐಎಗೆ ನೀಡುತ್ತದೆ.

ಆತಂಕದ ವಿಷಯ ಎಂದರೆ, ಕೋಮುವಾದಿ, ಹುಸಿ ದೇಶಪ್ರೇಮದ ಈಗಿನ ಸರಕಾರ ಈ ಅತ್ಯಂತ ಪ್ರಬಲ ಅಸ್ತ್ರಗಳನ್ನು ಯಾರ ವಿರುದ್ಧ ಬಳಸಲಿದೆ ಎಂಬುದಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...