Homeಮುಖಪುಟತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

- Advertisement -
- Advertisement -

“ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ” ಕಣ್ಣನ್ ಗೋಪಿನಾಥ್ ಹೇಳಿದ ಈ ಸಾಲುಗಳು ಮಕ್ಕಳ ಹೊತ್ತೂಟಕ್ಕೆಂದು ಝಡಿ ಮಳೆಯು ಲೆಕ್ಕಿಸದೆ ತಂಬಾಕು ಹೊಲದಲ್ಲಿ ದುಡಿವ ನನ್ನ ಹಳ್ಳಿಯ ತಾಯಂದಿರಿಂದ ಹಿಡಿದು ದೆಲ್ಲಿಯಲ್ಲಿ ಭಾರತೀಯ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಸಹಿಷ್ಣುತೆಗೆ ಎದುರಾಗಿರುವ ಗ್ರಹಣವನ್ನು ದೂರ ಮಾಡಿ ತಮ್ಮ ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಹೋರಾಡುತ್ತಿರುವ ಶಾಹೀನ್‌ಬಾಗ್ ನ ಹೆಣ್ಣುಗಳವರೆಗು ಅಕ್ಷರಶಃ‌ ಸರ್ವಕಾಲಿಕ ಸತ್ಯ.

ಸ್ವತಂತ್ರ ಭಾರತದ ಇತಿಹಾಸದಲ್ಲೆ ಬಲಿಷ್ಟ ಸರ್ಕಾರವೆಂದು ಮಾಧ್ಯಮಗಳಿಂದ ಬಿಂಬಿತವಾಗಿರುವ ಹಾಲಿ ಕೇಂದ್ರ ಸರ್ಕಾರಕ್ಕೆ ದೆಹಲಿಯಲ್ಲಿ ಅರವತ್ತನಾಲ್ಕು ದಿನಗಳಿಂದ ನಡೆಯುತ್ತಿರುವ ಶಾಂತಿಯುತ ಮಹಿಳಾ ಪ್ರತಿಭಟನೆಯು ಗೋಧಿ ಮೀಡಿಯಾದ ಅಬ್ಬರದ ಪ್ರಚಾರದ ನಡುವೆ, ವಿರೋಧ ಪಕ್ಷಗಳ ದುರ್ಬಲತೆಯ ನಡುವೆ, ಆರು ವರ್ಷಗಳಿಂದ ಎಲ್ಲಾ ಹೋರಾಟಗಳನ್ನು ದಮನಿಸಿದ್ದ ಈ ಸರ್ಕಾರವನ್ನು ಗಂಭೀರವಾಗಿ ನಿದ್ದೆಗೆಡಿಸಿ ದೆಹಲಿಯ ಚುನಾವಣೆಯ ಬಹು ಚರ್ಚಿತ ವಿಷಯವಾಗಿ, ಭಾಜಾಪ ಪಕ್ಷದ ಸೋಲಿನ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದ ನಿರ್ಣಾಯಕ ಅಂಗವಾಗಿ ಮಹಿಳಾ ಪ್ರತಿಭಟನಾ ಶಕ್ತಿಯನ್ನು ಜಗತ್ತಿಗೆ ನೆನಪಿಸಿದ ಕೀರ್ತಿ, ಪ್ರಬಲ ಕೇಂದ್ರ ಸರ್ಕಾರಕ್ಕೆ ನಾರಿ ಶಕ್ತಿಯನ್ನು ರುಜುವಾತು ಮಾಡಿದ ಹಿರಿಮೆ ಶಾಹೀನ್ ಬಾಗ್‌ ಹೆಣ್ಣುಗಳಿಗೆ ಸಲ್ಲುತ್ತದೆ.

 

ಭಾರತದಲ್ಲಿ ಸ್ವಾತಂತ್ರ್ಯಾನಂತರ 70ರ‌ ದಶಕ ಹೊರತುಪಡಿಸಿ ಬಹುಕಾಲ ಭಾರತದ ಮಹಿಳಾ ದನಿ ಮರೆಯಾಗಿದ್ದದ್ದು ಒಂದು ರೀತಿಯ ವಿಪರ್ಯಾಸ. ಭಾರತದಲ್ಲಿ ಮಹಿಳಾಪರ ಸಂಗತಿಗಳು ಮುನ್ನೆಲೆಗೆ ಬಂದದ್ದು 70ರ ದಶಕದಲ್ಲಿ. 1971ರಲ್ಲಿ ವಿಶ್ವಸಂಸ್ಥೆಯ ಸೂಚನೆಯ ಮೇರೆಗೆ ಮಹಿಳೆಯರ ಸ್ಥಿತಿಗತಿಗಳನ್ನು ಪರಿಶೀಲಿಸಲು ‘ಕಮಿಟಿ ಆನ್ ದಿ ಸ್ಟೇಟಸ್ ಆಫ್ ವಿಮೆನ್ ಇನ್ ಇಂಡಿಯಾ’ ಎಂಬ ಸಮಿತಿಯೊಂದನ್ನು ರಚಿಸಲಾಯಿತು.

ಹಿರಿಯ ಮಹಿಳಾ ಹೋರಾಟಗಾರರಿದ್ದಂತಹ ಈ ಸಮಿತಿ ಭಾರತದ ತುಂಬೆಲ್ಲಾ ಓಡಾಡಿ ಎಲ್ಲಾ ಸ್ಥರಗಳ ಮಹಿಳೆಯರ ಬದುಕಿನ ಸ್ಥಿತಿಗತಿಗಳನ್ನು ಖುದ್ದಾಗಿ ಅವಲೋಕಿಸಿದಾಗ ಕಂಡಂತಹ ಆಘಾತಕಾರಿ‌ ವಿಚಾರಗಳನ್ನು ಆಧಾರವಾಗಿಟ್ಟುಕೊಂಡು ‘ಸಮಾನತೆಯೆಡೆಗೆ’ ಎಂಬ ವರದಿಯನ್ನು ಈ ಸಮಿತು ಬಿಡುಗಡೆ ಮಾಡಿತು. ಈ ವರದಿ ಭಾರತದ ಮಹಿಳಾಪರ ಮತ್ತು ಪ್ರಜಾತಾಂತ್ರಿಕ ವಲಯಗಳಲ್ಲಿ ಬಹುಚರ್ಚಿತ ವಿಚಾರವಾಯಿತು. ಅನೇಕ ಸ್ವಾಯತ್ತ ಮಹಿಳಾ ಸಂಘಟನೆಗಳು ಆರಂಭವಾದವು. ಶಿಕ್ಷಣ, ಉದ್ಯೋಗಾವಕಾಶ, ಲೈಂಗಿಕ ಕಿರುಕುಳ ಮುಕ್ತ ಔದ್ಯೋಗಿಕ ವಾತಾರವಣ ಮೊದಲಾದ ಅನೇಕ ಅಂಶಗಳು ಧ್ವನಿಸಲು ಶುರುವಾದವು.

ಆರ್ಥಿಕ ಸಧೃಡತೆ ಮಹಿಳಾ ಸಬಲೀಕರಣಕ್ಕೆ ಮೂಲ ಅಸ್ತ್ರ ಎಂಬುದನ್ನು ಸಮಾಜ ಕಂಡುಕೊಂಡಿತು.
ವರದಕ್ಷಿಣೆ ಕಿರುಕುಳ, ಅತ್ಯಾಚಾರಗಳು ಮೊದಲಾದವುಗಳ ವಿರುದ್ಧ ಯಾವುದೇ ಸಂಘಟನೆಯಲ್ಲಿರಲಿ ಅಥವಾ ಇಲ್ಲದಿರಲಿ ಮಹಿಳೆಯರು ಬೀದಿಗಿಳಿದರು. ಮಹಿಳೆಯರ ಕುರಿತ ಸಾಮಾಜಿಕ ಸಂವೇದನೆ ಹೆಚ್ಚಾಗುತ್ತ ಬಂದ ಪರಿಣಾಮ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೆಲವು ಮಹಿಳಾಪರ ಕಾಯ್ದೆಗಳು, ಮಹಿಳಾ ಅಧ್ಯಯನ ಕೇಂದ್ರಗಳು, ಮಹಿಳಾ ಪರ ಯೋಜನೆಗಳನ್ನು ಜಾರಿಗೊಳಿಸಲೇಬೇಕಾದದ್ದು ಅನಿವಾರ್ಯವಾಯಿತು. ಅಷ್ಟೆಯಲ್ಲ‌ ವಿಶ್ವಸಂಸ್ಥೆ 1975ರಲ್ಲಿ ಮಾರ್ಚ್ 08ನ್ನು ಅಂತರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಿಸಿ, ಆ ವರ್ಷವನ್ನು ಮಹಿಳಾ ವರ್ಷ, ಆ ದಶಕವನ್ನು ಮಹಿಳಾ ದಶಕ ಎಂದೂ ಘೋಷಿಸಿತು.

ಕಾಲಕ್ಕೆ ತಕ್ಕಂತೆ ಸಮಸ್ಯೆಗಳ ಸ್ವರೂಪ ಭಿನ್ನವಾಗಿರುತ್ತದೆ, ಸಮಸ್ಯೆಗೆ ತಕ್ಕಂತೆ ಹೋರಾಟದ ಸ್ವರೂಪವೂ ಭಿನ್ನವಾಗುವುದು ಅನಿವಾರ್ಯವಾಗುತ್ತದೆ. ಹೋರಾಟದ ಸ್ವರೂಪಕ್ಕೆ ತಕ್ಕಂತೆ ಪ್ರತಿಫಲಗಳು ಭಿನ್ನವಾಗುತ್ತವೆ. ಎಪ್ಪತ್ತರ ದಶಕದಲ್ಲಿ ಪ್ರಮುಖವಾಗಿ ಭಾರತ ಮತ್ತಿತರ ದೇಶಗಳಲ್ಲಿ ನಡೆದ ಮಹಿಳಾ ಹೋರಾಟದಿಂದಾಗಿ ಆ ಇಡೀ ದಶಕ ಮಹಿಳಾ ದಶಕವಾದಂತೆಯೆ ಈ ಇಡೀ ವರ್ಷ ಭಾರತದಲ್ಲಿ ಮಹಿಳಾ ವರ್ಷವೆ ಆಗಲಿದೆ.
ಈ ಮಹಿಳಾ‌‌ ವರ್ಷದ ಪ್ರತಿರೋಧ ವರ್ಷಧಾರೆ ಪ್ರಾರಂಭವಾದದ್ದು ಡಿಸೆಂಬರ್ 15, 2019ರಂದು‌ ದೆಹಲಿಯ ಜಾಮಿಯ ಮಿಲ್ಲಿಯ ವಿಶ್ವವಿದ್ಯಾಲಯದಲ್ಲಿ NPR NRC CAA ವಿರೋಧಿಸಿ ದಿಟ್ಟ ಪ್ರತಿಭಟನೆ ನಡೆಯಿತು. ನಂತರ ಪೊಲೀಸರು ಕ್ಯಾಂಪಸ್ಸಿನೊಳಗೆ ನುಗ್ಗಿ‌ ಗೂಂಡಾವರ್ತನೆಯೊಂದಿಗೆ ಕೈಗೆ ಸಿಕ್ಕ ಸಿಕ್ಕವರನ್ನು ಥಳಿಸಿದರು. ಆಗ ಒಬ್ಬ ಹುಡುಗನನ್ನು ಹೊಡೆಯುತ್ತಿದ್ದ ಪೊಲೀಸರನ್ನು ತಡೆದು ನಿಲ್ಲಿಸಿ ಎಚ್ಚರಿಕೆ ನೀಡಿದ ಜಾಮಿಯಾ ಮಿಲ್ಲಿಯಾ‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ಕೇರಳಾದ ಲದೀದ ಫ಼ರ್ಜ಼ಾನ ಮತ್ತು ಆಯಿಶಾ ರೆನ್ನ
ಎಂಬ ಇವರಿಬ್ಬರು ಜಾಮಿಯಾ ಹೋರಾಟದ ಚಹರೆಗಳಾದರು.

ಜಾಮಿಯಾದ ಮೇಲಾದ ಹಲ್ಲೆಯನ್ನು ವಿರೋಧಿಸಿ ಮಕ್ಕಳ ಭವಿಷ್ಯಕ್ಕಾಗಿ‌ ಎಂಬ ಧ್ಯೇಯವಾಕ್ಯದೊಂದಿಗೆ ದೆಹಲಿಯ ಸೆಕ್ಟರ್ -13ರಲ್ಲಿ ರಾತ್ರೋರಾತ್ರಿ ದೀಪ ಹಿಡಿದು ನಿಂತ ತಾಯಂದಿರ ಹೋರಾಟ ಶಾಹೀನ್ ಬಾಗ್‌ ಆಗಿ ಬೆಳೆಯಿತು. ಈ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪಂಥೀಯ ಕೋಮುವಾದಿ ಶಕ್ತಿಗಳು ಲಾಟಿಚಾರ್ಜ್, ಗೋಲಿಬಾರ್, ಗಲಭೆಗಳನ್ನು ನಡೆಸಿದರು ಸಹ ಕುಗ್ಗದೆ ಮುನ್ನುಗಿದೆ.

ಶಾಹೀನ್ ಬಾಗ್‌ನ ಹೋರಾಟದ ಮಾದರಿಯಲ್ಲೆ ದೇಶದ ತುಂಬೆಲ್ಲಾ‌ ಶಾಹೀನ್ ಬಾಗ್‌ಗಳು ಪ್ರಾರಂಭವಾಗಿವೆ.
ದಾವಣಗೆರೆ, ರಾಯಚೂರು, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗ, ಭದ್ರಾವತಿ ಸೇರಿದಂತೆ ಬೆಂಗಳೂರಿನ ಬಿಲಾಲ್ ಬಾಗ್‌ ಕರ್ನಾಟಕ ರಾಜ್ಯದ ತುಂಬೆಲ್ಲಾ ಮಹಿಳಾ ನೇತೃತ್ವದ ಹೋರಾಟಗಳು ಮುನ್ನೆಲೆಯಲ್ಲಿವೆ.

ಒಂದು ಕಡೆ ಶಾಹೀನ್ ಬಾಗ್‌ ಹೋರಾಟವನ್ನು ಮಹಿಳೆಯರು ಮುನ್ನಡೆಸುತ್ತಿದ್ದರೆ ದೇಶದ ತುಂಬೆಲ್ಲಾ ಮಹಿಳೆಯರು ಬುರ್ಕಾ-ಬಿಂದಿ ಹೋರಾಟದ ಮೂಲಕ ಧರ್ಮಾತೀತ ರೂಪವನ್ನು ಚಳುವಳಿಗೆ ನೀಡುತ್ತಿದ್ದಾರೆ. ಮತ್ತೊಂದೆಡೆ ಬೀದಿ ತುಂಬೆಲ್ಲಾ ರಂಗೋಲಿ ಬಿಡಿಸಿ ಕೇಂದ್ರದ ಕರಾಳ ಕಾಯ್ದೆಗಳನ್ನು ವಿರೋಧಿಸುತ್ತಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆಯ ಜಾಥಗಳನ್ನು ಹೊರಟ ಸ್ತ್ರೀಯರು, ಕವಿತೆ, ಕವನ, ಚಿತ್ರಕಲೆ ಹೀಗೆ ವಿಭಿನ್ನ ಆಯಾಮಗಳಲ್ಲಿ ಪ್ರತಿಭಟನೆಯನ್ನು ಮಹಿಳೆಯರು ತೆರೆದಿಡುತ್ತಿರುವುದು ವಿಶ್ವದ ಭವಿಷ್ಯವನ್ನು ಕಟ್ಟುಕೊಡುವ ಆಶಾದಾಯಕ ಮುನ್ನೋಟವನ್ನು ನೀಡುತ್ತಿದೆ.

ಒಂದೆಡೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ, ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಸಂವಿಧಾನ ಮತ್ತು ದೇಶದ ಉಳಿವಿಗಾಗಿ ಹೋರಾಡುತ್ತಿದ್ದರೆ ಬೇಟಿ ಬಚಾವ್ ಬೇಟಿ ಪಡಾವ್ ಎನ್ನುವ ಸರ್ಕಾರ ಓದುವ ಹಕ್ಕಿಗಾಗಿಯೆ ಶುಲ್ಕ ಕಡಿಮೆ ಮಾಡಿ ಎಂದು ಕೇಳಿದ ಜೆ.ಎನ್.ಯುವಿನ ವಿದ್ಯಾರ್ಥಿಗಳ ಮೇಲೆ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಶಿ ಘೋಷ್ ಎನ್ನುವ ಹೆಣ್ಣು ಮಗಳ ಮೇಲೆ ಮಾಡಿದ ಹಲ್ಲೆ ಮಾಡಿತು. ಆಕೆಗೆ ಸಾಂತ್ವಾನ ಹೇಳಲು ಹೋದ ದೀಪಿಕಾ ಪಡುಕೋಣೆಯ ಬಗ್ಗೆ ಆಡಿದ ಮಾತುಗಳು ಈ ಸಂಸ್ಕೃತಿ ರಕ್ಷಕರ ಮುಖವಾಡದ ಅನಾವರಣವನ್ನು ಮಾಡಿದ್ದು ಒಂದೆಡೆಯಾದರೆ ಆಯಿಶಿ ಘೋಷ್, ದೀಪಿಕಾ ಪಡುಕೋಣೆಯಂತಹ ಹೆಣ್ಣುಗಳು ಪ್ರಭುತ್ವದ ಎದುರಿಗೆ ತೋರಿದ ಧೈರ್ಯ ನಿಜಕ್ಕೂ ಭರವಸೆಯ ಕಿರಣ.

ಇಷ್ಟೆಲ್ಲದರ ನಡುವೆ ಮಹಿಳಾ ಹೋರಾಟಗಳು ಸಿಂಪತಿಯ ಕಾರಣದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದಕ್ಕಿಂತ ಹಸಿ ಹಸಿ ಸುಳ್ಳು ಮತ್ತೊಂದಿಲ್ಲ. ಮಹಿಳಾ ಪ್ರತಿಭಟನೆ, ಹೋರಾಟ ಈ ಮಟ್ಟಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರಣ ಹೆಣ್ಣೊಳಗಿನ ನೈಜ ಕಾಳಜಿ, ಧೃಡತೆ, ಸ್ಥೈರ್ಯ ಮತ್ತು ಗೆದ್ದೆ ಗೆಲ್ಲುವೆವೆಂಬ ಅಚಲ ನಂಬಿಕೆ. ತಿಂಗಳಾನುಗಟ್ಟಲೆ ಅಲುಗಾಡದೆ ಕೂತಲ್ಲೆ ಕೂರುವ ಮನೋಸ್ಥೈರ್ಯ, ಹೋರಾಟದ ಕಿಚ್ಚು ಹೆಣ್ಣಿನಲ್ಲಿ ಮಾತ್ರ ಕಾಣಲು ಸಾಧ್ಯ.

ನಾಲ್ಕುನೂರು ವರ್ಷದ ಇತಿಹಾಸದಲ್ಲೆ ಕಂಡು ಕೇಳರಿಯದ ಐದು ಡಿಗ್ರಿ ಸೆನ್ಸಸ್ ಚಳಿಯಲ್ಲು ವಯಸ್ಸಿನ ಪರಿಮಿತಿಯಿಲ್ಲದೆ, ಯಾವ ಬೆದರಿಕೆಗೂ ಕುಗ್ಗದೆ ಜಗ್ಗದೆ ಹೋರಾಡುತ್ತಿರುವ, ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

(ಲೇಖಕಿ ಕವಯತ್ರಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...