Homeಮುಖಪುಟತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

- Advertisement -
- Advertisement -

“ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ” ಕಣ್ಣನ್ ಗೋಪಿನಾಥ್ ಹೇಳಿದ ಈ ಸಾಲುಗಳು ಮಕ್ಕಳ ಹೊತ್ತೂಟಕ್ಕೆಂದು ಝಡಿ ಮಳೆಯು ಲೆಕ್ಕಿಸದೆ ತಂಬಾಕು ಹೊಲದಲ್ಲಿ ದುಡಿವ ನನ್ನ ಹಳ್ಳಿಯ ತಾಯಂದಿರಿಂದ ಹಿಡಿದು ದೆಲ್ಲಿಯಲ್ಲಿ ಭಾರತೀಯ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಸಹಿಷ್ಣುತೆಗೆ ಎದುರಾಗಿರುವ ಗ್ರಹಣವನ್ನು ದೂರ ಮಾಡಿ ತಮ್ಮ ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಹೋರಾಡುತ್ತಿರುವ ಶಾಹೀನ್‌ಬಾಗ್ ನ ಹೆಣ್ಣುಗಳವರೆಗು ಅಕ್ಷರಶಃ‌ ಸರ್ವಕಾಲಿಕ ಸತ್ಯ.

ಸ್ವತಂತ್ರ ಭಾರತದ ಇತಿಹಾಸದಲ್ಲೆ ಬಲಿಷ್ಟ ಸರ್ಕಾರವೆಂದು ಮಾಧ್ಯಮಗಳಿಂದ ಬಿಂಬಿತವಾಗಿರುವ ಹಾಲಿ ಕೇಂದ್ರ ಸರ್ಕಾರಕ್ಕೆ ದೆಹಲಿಯಲ್ಲಿ ಅರವತ್ತನಾಲ್ಕು ದಿನಗಳಿಂದ ನಡೆಯುತ್ತಿರುವ ಶಾಂತಿಯುತ ಮಹಿಳಾ ಪ್ರತಿಭಟನೆಯು ಗೋಧಿ ಮೀಡಿಯಾದ ಅಬ್ಬರದ ಪ್ರಚಾರದ ನಡುವೆ, ವಿರೋಧ ಪಕ್ಷಗಳ ದುರ್ಬಲತೆಯ ನಡುವೆ, ಆರು ವರ್ಷಗಳಿಂದ ಎಲ್ಲಾ ಹೋರಾಟಗಳನ್ನು ದಮನಿಸಿದ್ದ ಈ ಸರ್ಕಾರವನ್ನು ಗಂಭೀರವಾಗಿ ನಿದ್ದೆಗೆಡಿಸಿ ದೆಹಲಿಯ ಚುನಾವಣೆಯ ಬಹು ಚರ್ಚಿತ ವಿಷಯವಾಗಿ, ಭಾಜಾಪ ಪಕ್ಷದ ಸೋಲಿನ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದ ನಿರ್ಣಾಯಕ ಅಂಗವಾಗಿ ಮಹಿಳಾ ಪ್ರತಿಭಟನಾ ಶಕ್ತಿಯನ್ನು ಜಗತ್ತಿಗೆ ನೆನಪಿಸಿದ ಕೀರ್ತಿ, ಪ್ರಬಲ ಕೇಂದ್ರ ಸರ್ಕಾರಕ್ಕೆ ನಾರಿ ಶಕ್ತಿಯನ್ನು ರುಜುವಾತು ಮಾಡಿದ ಹಿರಿಮೆ ಶಾಹೀನ್ ಬಾಗ್‌ ಹೆಣ್ಣುಗಳಿಗೆ ಸಲ್ಲುತ್ತದೆ.

 

ಭಾರತದಲ್ಲಿ ಸ್ವಾತಂತ್ರ್ಯಾನಂತರ 70ರ‌ ದಶಕ ಹೊರತುಪಡಿಸಿ ಬಹುಕಾಲ ಭಾರತದ ಮಹಿಳಾ ದನಿ ಮರೆಯಾಗಿದ್ದದ್ದು ಒಂದು ರೀತಿಯ ವಿಪರ್ಯಾಸ. ಭಾರತದಲ್ಲಿ ಮಹಿಳಾಪರ ಸಂಗತಿಗಳು ಮುನ್ನೆಲೆಗೆ ಬಂದದ್ದು 70ರ ದಶಕದಲ್ಲಿ. 1971ರಲ್ಲಿ ವಿಶ್ವಸಂಸ್ಥೆಯ ಸೂಚನೆಯ ಮೇರೆಗೆ ಮಹಿಳೆಯರ ಸ್ಥಿತಿಗತಿಗಳನ್ನು ಪರಿಶೀಲಿಸಲು ‘ಕಮಿಟಿ ಆನ್ ದಿ ಸ್ಟೇಟಸ್ ಆಫ್ ವಿಮೆನ್ ಇನ್ ಇಂಡಿಯಾ’ ಎಂಬ ಸಮಿತಿಯೊಂದನ್ನು ರಚಿಸಲಾಯಿತು.

ಹಿರಿಯ ಮಹಿಳಾ ಹೋರಾಟಗಾರರಿದ್ದಂತಹ ಈ ಸಮಿತಿ ಭಾರತದ ತುಂಬೆಲ್ಲಾ ಓಡಾಡಿ ಎಲ್ಲಾ ಸ್ಥರಗಳ ಮಹಿಳೆಯರ ಬದುಕಿನ ಸ್ಥಿತಿಗತಿಗಳನ್ನು ಖುದ್ದಾಗಿ ಅವಲೋಕಿಸಿದಾಗ ಕಂಡಂತಹ ಆಘಾತಕಾರಿ‌ ವಿಚಾರಗಳನ್ನು ಆಧಾರವಾಗಿಟ್ಟುಕೊಂಡು ‘ಸಮಾನತೆಯೆಡೆಗೆ’ ಎಂಬ ವರದಿಯನ್ನು ಈ ಸಮಿತು ಬಿಡುಗಡೆ ಮಾಡಿತು. ಈ ವರದಿ ಭಾರತದ ಮಹಿಳಾಪರ ಮತ್ತು ಪ್ರಜಾತಾಂತ್ರಿಕ ವಲಯಗಳಲ್ಲಿ ಬಹುಚರ್ಚಿತ ವಿಚಾರವಾಯಿತು. ಅನೇಕ ಸ್ವಾಯತ್ತ ಮಹಿಳಾ ಸಂಘಟನೆಗಳು ಆರಂಭವಾದವು. ಶಿಕ್ಷಣ, ಉದ್ಯೋಗಾವಕಾಶ, ಲೈಂಗಿಕ ಕಿರುಕುಳ ಮುಕ್ತ ಔದ್ಯೋಗಿಕ ವಾತಾರವಣ ಮೊದಲಾದ ಅನೇಕ ಅಂಶಗಳು ಧ್ವನಿಸಲು ಶುರುವಾದವು.

ಆರ್ಥಿಕ ಸಧೃಡತೆ ಮಹಿಳಾ ಸಬಲೀಕರಣಕ್ಕೆ ಮೂಲ ಅಸ್ತ್ರ ಎಂಬುದನ್ನು ಸಮಾಜ ಕಂಡುಕೊಂಡಿತು.
ವರದಕ್ಷಿಣೆ ಕಿರುಕುಳ, ಅತ್ಯಾಚಾರಗಳು ಮೊದಲಾದವುಗಳ ವಿರುದ್ಧ ಯಾವುದೇ ಸಂಘಟನೆಯಲ್ಲಿರಲಿ ಅಥವಾ ಇಲ್ಲದಿರಲಿ ಮಹಿಳೆಯರು ಬೀದಿಗಿಳಿದರು. ಮಹಿಳೆಯರ ಕುರಿತ ಸಾಮಾಜಿಕ ಸಂವೇದನೆ ಹೆಚ್ಚಾಗುತ್ತ ಬಂದ ಪರಿಣಾಮ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೆಲವು ಮಹಿಳಾಪರ ಕಾಯ್ದೆಗಳು, ಮಹಿಳಾ ಅಧ್ಯಯನ ಕೇಂದ್ರಗಳು, ಮಹಿಳಾ ಪರ ಯೋಜನೆಗಳನ್ನು ಜಾರಿಗೊಳಿಸಲೇಬೇಕಾದದ್ದು ಅನಿವಾರ್ಯವಾಯಿತು. ಅಷ್ಟೆಯಲ್ಲ‌ ವಿಶ್ವಸಂಸ್ಥೆ 1975ರಲ್ಲಿ ಮಾರ್ಚ್ 08ನ್ನು ಅಂತರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಿಸಿ, ಆ ವರ್ಷವನ್ನು ಮಹಿಳಾ ವರ್ಷ, ಆ ದಶಕವನ್ನು ಮಹಿಳಾ ದಶಕ ಎಂದೂ ಘೋಷಿಸಿತು.

ಕಾಲಕ್ಕೆ ತಕ್ಕಂತೆ ಸಮಸ್ಯೆಗಳ ಸ್ವರೂಪ ಭಿನ್ನವಾಗಿರುತ್ತದೆ, ಸಮಸ್ಯೆಗೆ ತಕ್ಕಂತೆ ಹೋರಾಟದ ಸ್ವರೂಪವೂ ಭಿನ್ನವಾಗುವುದು ಅನಿವಾರ್ಯವಾಗುತ್ತದೆ. ಹೋರಾಟದ ಸ್ವರೂಪಕ್ಕೆ ತಕ್ಕಂತೆ ಪ್ರತಿಫಲಗಳು ಭಿನ್ನವಾಗುತ್ತವೆ. ಎಪ್ಪತ್ತರ ದಶಕದಲ್ಲಿ ಪ್ರಮುಖವಾಗಿ ಭಾರತ ಮತ್ತಿತರ ದೇಶಗಳಲ್ಲಿ ನಡೆದ ಮಹಿಳಾ ಹೋರಾಟದಿಂದಾಗಿ ಆ ಇಡೀ ದಶಕ ಮಹಿಳಾ ದಶಕವಾದಂತೆಯೆ ಈ ಇಡೀ ವರ್ಷ ಭಾರತದಲ್ಲಿ ಮಹಿಳಾ ವರ್ಷವೆ ಆಗಲಿದೆ.
ಈ ಮಹಿಳಾ‌‌ ವರ್ಷದ ಪ್ರತಿರೋಧ ವರ್ಷಧಾರೆ ಪ್ರಾರಂಭವಾದದ್ದು ಡಿಸೆಂಬರ್ 15, 2019ರಂದು‌ ದೆಹಲಿಯ ಜಾಮಿಯ ಮಿಲ್ಲಿಯ ವಿಶ್ವವಿದ್ಯಾಲಯದಲ್ಲಿ NPR NRC CAA ವಿರೋಧಿಸಿ ದಿಟ್ಟ ಪ್ರತಿಭಟನೆ ನಡೆಯಿತು. ನಂತರ ಪೊಲೀಸರು ಕ್ಯಾಂಪಸ್ಸಿನೊಳಗೆ ನುಗ್ಗಿ‌ ಗೂಂಡಾವರ್ತನೆಯೊಂದಿಗೆ ಕೈಗೆ ಸಿಕ್ಕ ಸಿಕ್ಕವರನ್ನು ಥಳಿಸಿದರು. ಆಗ ಒಬ್ಬ ಹುಡುಗನನ್ನು ಹೊಡೆಯುತ್ತಿದ್ದ ಪೊಲೀಸರನ್ನು ತಡೆದು ನಿಲ್ಲಿಸಿ ಎಚ್ಚರಿಕೆ ನೀಡಿದ ಜಾಮಿಯಾ ಮಿಲ್ಲಿಯಾ‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ಕೇರಳಾದ ಲದೀದ ಫ಼ರ್ಜ಼ಾನ ಮತ್ತು ಆಯಿಶಾ ರೆನ್ನ
ಎಂಬ ಇವರಿಬ್ಬರು ಜಾಮಿಯಾ ಹೋರಾಟದ ಚಹರೆಗಳಾದರು.

ಜಾಮಿಯಾದ ಮೇಲಾದ ಹಲ್ಲೆಯನ್ನು ವಿರೋಧಿಸಿ ಮಕ್ಕಳ ಭವಿಷ್ಯಕ್ಕಾಗಿ‌ ಎಂಬ ಧ್ಯೇಯವಾಕ್ಯದೊಂದಿಗೆ ದೆಹಲಿಯ ಸೆಕ್ಟರ್ -13ರಲ್ಲಿ ರಾತ್ರೋರಾತ್ರಿ ದೀಪ ಹಿಡಿದು ನಿಂತ ತಾಯಂದಿರ ಹೋರಾಟ ಶಾಹೀನ್ ಬಾಗ್‌ ಆಗಿ ಬೆಳೆಯಿತು. ಈ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪಂಥೀಯ ಕೋಮುವಾದಿ ಶಕ್ತಿಗಳು ಲಾಟಿಚಾರ್ಜ್, ಗೋಲಿಬಾರ್, ಗಲಭೆಗಳನ್ನು ನಡೆಸಿದರು ಸಹ ಕುಗ್ಗದೆ ಮುನ್ನುಗಿದೆ.

ಶಾಹೀನ್ ಬಾಗ್‌ನ ಹೋರಾಟದ ಮಾದರಿಯಲ್ಲೆ ದೇಶದ ತುಂಬೆಲ್ಲಾ‌ ಶಾಹೀನ್ ಬಾಗ್‌ಗಳು ಪ್ರಾರಂಭವಾಗಿವೆ.
ದಾವಣಗೆರೆ, ರಾಯಚೂರು, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗ, ಭದ್ರಾವತಿ ಸೇರಿದಂತೆ ಬೆಂಗಳೂರಿನ ಬಿಲಾಲ್ ಬಾಗ್‌ ಕರ್ನಾಟಕ ರಾಜ್ಯದ ತುಂಬೆಲ್ಲಾ ಮಹಿಳಾ ನೇತೃತ್ವದ ಹೋರಾಟಗಳು ಮುನ್ನೆಲೆಯಲ್ಲಿವೆ.

ಒಂದು ಕಡೆ ಶಾಹೀನ್ ಬಾಗ್‌ ಹೋರಾಟವನ್ನು ಮಹಿಳೆಯರು ಮುನ್ನಡೆಸುತ್ತಿದ್ದರೆ ದೇಶದ ತುಂಬೆಲ್ಲಾ ಮಹಿಳೆಯರು ಬುರ್ಕಾ-ಬಿಂದಿ ಹೋರಾಟದ ಮೂಲಕ ಧರ್ಮಾತೀತ ರೂಪವನ್ನು ಚಳುವಳಿಗೆ ನೀಡುತ್ತಿದ್ದಾರೆ. ಮತ್ತೊಂದೆಡೆ ಬೀದಿ ತುಂಬೆಲ್ಲಾ ರಂಗೋಲಿ ಬಿಡಿಸಿ ಕೇಂದ್ರದ ಕರಾಳ ಕಾಯ್ದೆಗಳನ್ನು ವಿರೋಧಿಸುತ್ತಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆಯ ಜಾಥಗಳನ್ನು ಹೊರಟ ಸ್ತ್ರೀಯರು, ಕವಿತೆ, ಕವನ, ಚಿತ್ರಕಲೆ ಹೀಗೆ ವಿಭಿನ್ನ ಆಯಾಮಗಳಲ್ಲಿ ಪ್ರತಿಭಟನೆಯನ್ನು ಮಹಿಳೆಯರು ತೆರೆದಿಡುತ್ತಿರುವುದು ವಿಶ್ವದ ಭವಿಷ್ಯವನ್ನು ಕಟ್ಟುಕೊಡುವ ಆಶಾದಾಯಕ ಮುನ್ನೋಟವನ್ನು ನೀಡುತ್ತಿದೆ.

ಒಂದೆಡೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ, ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಸಂವಿಧಾನ ಮತ್ತು ದೇಶದ ಉಳಿವಿಗಾಗಿ ಹೋರಾಡುತ್ತಿದ್ದರೆ ಬೇಟಿ ಬಚಾವ್ ಬೇಟಿ ಪಡಾವ್ ಎನ್ನುವ ಸರ್ಕಾರ ಓದುವ ಹಕ್ಕಿಗಾಗಿಯೆ ಶುಲ್ಕ ಕಡಿಮೆ ಮಾಡಿ ಎಂದು ಕೇಳಿದ ಜೆ.ಎನ್.ಯುವಿನ ವಿದ್ಯಾರ್ಥಿಗಳ ಮೇಲೆ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಶಿ ಘೋಷ್ ಎನ್ನುವ ಹೆಣ್ಣು ಮಗಳ ಮೇಲೆ ಮಾಡಿದ ಹಲ್ಲೆ ಮಾಡಿತು. ಆಕೆಗೆ ಸಾಂತ್ವಾನ ಹೇಳಲು ಹೋದ ದೀಪಿಕಾ ಪಡುಕೋಣೆಯ ಬಗ್ಗೆ ಆಡಿದ ಮಾತುಗಳು ಈ ಸಂಸ್ಕೃತಿ ರಕ್ಷಕರ ಮುಖವಾಡದ ಅನಾವರಣವನ್ನು ಮಾಡಿದ್ದು ಒಂದೆಡೆಯಾದರೆ ಆಯಿಶಿ ಘೋಷ್, ದೀಪಿಕಾ ಪಡುಕೋಣೆಯಂತಹ ಹೆಣ್ಣುಗಳು ಪ್ರಭುತ್ವದ ಎದುರಿಗೆ ತೋರಿದ ಧೈರ್ಯ ನಿಜಕ್ಕೂ ಭರವಸೆಯ ಕಿರಣ.

ಇಷ್ಟೆಲ್ಲದರ ನಡುವೆ ಮಹಿಳಾ ಹೋರಾಟಗಳು ಸಿಂಪತಿಯ ಕಾರಣದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದಕ್ಕಿಂತ ಹಸಿ ಹಸಿ ಸುಳ್ಳು ಮತ್ತೊಂದಿಲ್ಲ. ಮಹಿಳಾ ಪ್ರತಿಭಟನೆ, ಹೋರಾಟ ಈ ಮಟ್ಟಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರಣ ಹೆಣ್ಣೊಳಗಿನ ನೈಜ ಕಾಳಜಿ, ಧೃಡತೆ, ಸ್ಥೈರ್ಯ ಮತ್ತು ಗೆದ್ದೆ ಗೆಲ್ಲುವೆವೆಂಬ ಅಚಲ ನಂಬಿಕೆ. ತಿಂಗಳಾನುಗಟ್ಟಲೆ ಅಲುಗಾಡದೆ ಕೂತಲ್ಲೆ ಕೂರುವ ಮನೋಸ್ಥೈರ್ಯ, ಹೋರಾಟದ ಕಿಚ್ಚು ಹೆಣ್ಣಿನಲ್ಲಿ ಮಾತ್ರ ಕಾಣಲು ಸಾಧ್ಯ.

ನಾಲ್ಕುನೂರು ವರ್ಷದ ಇತಿಹಾಸದಲ್ಲೆ ಕಂಡು ಕೇಳರಿಯದ ಐದು ಡಿಗ್ರಿ ಸೆನ್ಸಸ್ ಚಳಿಯಲ್ಲು ವಯಸ್ಸಿನ ಪರಿಮಿತಿಯಿಲ್ಲದೆ, ಯಾವ ಬೆದರಿಕೆಗೂ ಕುಗ್ಗದೆ ಜಗ್ಗದೆ ಹೋರಾಡುತ್ತಿರುವ, ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

(ಲೇಖಕಿ ಕವಯತ್ರಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...