Homeಮುಖಪುಟತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

- Advertisement -
- Advertisement -

“ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ” ಕಣ್ಣನ್ ಗೋಪಿನಾಥ್ ಹೇಳಿದ ಈ ಸಾಲುಗಳು ಮಕ್ಕಳ ಹೊತ್ತೂಟಕ್ಕೆಂದು ಝಡಿ ಮಳೆಯು ಲೆಕ್ಕಿಸದೆ ತಂಬಾಕು ಹೊಲದಲ್ಲಿ ದುಡಿವ ನನ್ನ ಹಳ್ಳಿಯ ತಾಯಂದಿರಿಂದ ಹಿಡಿದು ದೆಲ್ಲಿಯಲ್ಲಿ ಭಾರತೀಯ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಸಹಿಷ್ಣುತೆಗೆ ಎದುರಾಗಿರುವ ಗ್ರಹಣವನ್ನು ದೂರ ಮಾಡಿ ತಮ್ಮ ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಹೋರಾಡುತ್ತಿರುವ ಶಾಹೀನ್‌ಬಾಗ್ ನ ಹೆಣ್ಣುಗಳವರೆಗು ಅಕ್ಷರಶಃ‌ ಸರ್ವಕಾಲಿಕ ಸತ್ಯ.

ಸ್ವತಂತ್ರ ಭಾರತದ ಇತಿಹಾಸದಲ್ಲೆ ಬಲಿಷ್ಟ ಸರ್ಕಾರವೆಂದು ಮಾಧ್ಯಮಗಳಿಂದ ಬಿಂಬಿತವಾಗಿರುವ ಹಾಲಿ ಕೇಂದ್ರ ಸರ್ಕಾರಕ್ಕೆ ದೆಹಲಿಯಲ್ಲಿ ಅರವತ್ತನಾಲ್ಕು ದಿನಗಳಿಂದ ನಡೆಯುತ್ತಿರುವ ಶಾಂತಿಯುತ ಮಹಿಳಾ ಪ್ರತಿಭಟನೆಯು ಗೋಧಿ ಮೀಡಿಯಾದ ಅಬ್ಬರದ ಪ್ರಚಾರದ ನಡುವೆ, ವಿರೋಧ ಪಕ್ಷಗಳ ದುರ್ಬಲತೆಯ ನಡುವೆ, ಆರು ವರ್ಷಗಳಿಂದ ಎಲ್ಲಾ ಹೋರಾಟಗಳನ್ನು ದಮನಿಸಿದ್ದ ಈ ಸರ್ಕಾರವನ್ನು ಗಂಭೀರವಾಗಿ ನಿದ್ದೆಗೆಡಿಸಿ ದೆಹಲಿಯ ಚುನಾವಣೆಯ ಬಹು ಚರ್ಚಿತ ವಿಷಯವಾಗಿ, ಭಾಜಾಪ ಪಕ್ಷದ ಸೋಲಿನ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದ ನಿರ್ಣಾಯಕ ಅಂಗವಾಗಿ ಮಹಿಳಾ ಪ್ರತಿಭಟನಾ ಶಕ್ತಿಯನ್ನು ಜಗತ್ತಿಗೆ ನೆನಪಿಸಿದ ಕೀರ್ತಿ, ಪ್ರಬಲ ಕೇಂದ್ರ ಸರ್ಕಾರಕ್ಕೆ ನಾರಿ ಶಕ್ತಿಯನ್ನು ರುಜುವಾತು ಮಾಡಿದ ಹಿರಿಮೆ ಶಾಹೀನ್ ಬಾಗ್‌ ಹೆಣ್ಣುಗಳಿಗೆ ಸಲ್ಲುತ್ತದೆ.

 

ಭಾರತದಲ್ಲಿ ಸ್ವಾತಂತ್ರ್ಯಾನಂತರ 70ರ‌ ದಶಕ ಹೊರತುಪಡಿಸಿ ಬಹುಕಾಲ ಭಾರತದ ಮಹಿಳಾ ದನಿ ಮರೆಯಾಗಿದ್ದದ್ದು ಒಂದು ರೀತಿಯ ವಿಪರ್ಯಾಸ. ಭಾರತದಲ್ಲಿ ಮಹಿಳಾಪರ ಸಂಗತಿಗಳು ಮುನ್ನೆಲೆಗೆ ಬಂದದ್ದು 70ರ ದಶಕದಲ್ಲಿ. 1971ರಲ್ಲಿ ವಿಶ್ವಸಂಸ್ಥೆಯ ಸೂಚನೆಯ ಮೇರೆಗೆ ಮಹಿಳೆಯರ ಸ್ಥಿತಿಗತಿಗಳನ್ನು ಪರಿಶೀಲಿಸಲು ‘ಕಮಿಟಿ ಆನ್ ದಿ ಸ್ಟೇಟಸ್ ಆಫ್ ವಿಮೆನ್ ಇನ್ ಇಂಡಿಯಾ’ ಎಂಬ ಸಮಿತಿಯೊಂದನ್ನು ರಚಿಸಲಾಯಿತು.

ಹಿರಿಯ ಮಹಿಳಾ ಹೋರಾಟಗಾರರಿದ್ದಂತಹ ಈ ಸಮಿತಿ ಭಾರತದ ತುಂಬೆಲ್ಲಾ ಓಡಾಡಿ ಎಲ್ಲಾ ಸ್ಥರಗಳ ಮಹಿಳೆಯರ ಬದುಕಿನ ಸ್ಥಿತಿಗತಿಗಳನ್ನು ಖುದ್ದಾಗಿ ಅವಲೋಕಿಸಿದಾಗ ಕಂಡಂತಹ ಆಘಾತಕಾರಿ‌ ವಿಚಾರಗಳನ್ನು ಆಧಾರವಾಗಿಟ್ಟುಕೊಂಡು ‘ಸಮಾನತೆಯೆಡೆಗೆ’ ಎಂಬ ವರದಿಯನ್ನು ಈ ಸಮಿತು ಬಿಡುಗಡೆ ಮಾಡಿತು. ಈ ವರದಿ ಭಾರತದ ಮಹಿಳಾಪರ ಮತ್ತು ಪ್ರಜಾತಾಂತ್ರಿಕ ವಲಯಗಳಲ್ಲಿ ಬಹುಚರ್ಚಿತ ವಿಚಾರವಾಯಿತು. ಅನೇಕ ಸ್ವಾಯತ್ತ ಮಹಿಳಾ ಸಂಘಟನೆಗಳು ಆರಂಭವಾದವು. ಶಿಕ್ಷಣ, ಉದ್ಯೋಗಾವಕಾಶ, ಲೈಂಗಿಕ ಕಿರುಕುಳ ಮುಕ್ತ ಔದ್ಯೋಗಿಕ ವಾತಾರವಣ ಮೊದಲಾದ ಅನೇಕ ಅಂಶಗಳು ಧ್ವನಿಸಲು ಶುರುವಾದವು.

ಆರ್ಥಿಕ ಸಧೃಡತೆ ಮಹಿಳಾ ಸಬಲೀಕರಣಕ್ಕೆ ಮೂಲ ಅಸ್ತ್ರ ಎಂಬುದನ್ನು ಸಮಾಜ ಕಂಡುಕೊಂಡಿತು.
ವರದಕ್ಷಿಣೆ ಕಿರುಕುಳ, ಅತ್ಯಾಚಾರಗಳು ಮೊದಲಾದವುಗಳ ವಿರುದ್ಧ ಯಾವುದೇ ಸಂಘಟನೆಯಲ್ಲಿರಲಿ ಅಥವಾ ಇಲ್ಲದಿರಲಿ ಮಹಿಳೆಯರು ಬೀದಿಗಿಳಿದರು. ಮಹಿಳೆಯರ ಕುರಿತ ಸಾಮಾಜಿಕ ಸಂವೇದನೆ ಹೆಚ್ಚಾಗುತ್ತ ಬಂದ ಪರಿಣಾಮ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೆಲವು ಮಹಿಳಾಪರ ಕಾಯ್ದೆಗಳು, ಮಹಿಳಾ ಅಧ್ಯಯನ ಕೇಂದ್ರಗಳು, ಮಹಿಳಾ ಪರ ಯೋಜನೆಗಳನ್ನು ಜಾರಿಗೊಳಿಸಲೇಬೇಕಾದದ್ದು ಅನಿವಾರ್ಯವಾಯಿತು. ಅಷ್ಟೆಯಲ್ಲ‌ ವಿಶ್ವಸಂಸ್ಥೆ 1975ರಲ್ಲಿ ಮಾರ್ಚ್ 08ನ್ನು ಅಂತರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಿಸಿ, ಆ ವರ್ಷವನ್ನು ಮಹಿಳಾ ವರ್ಷ, ಆ ದಶಕವನ್ನು ಮಹಿಳಾ ದಶಕ ಎಂದೂ ಘೋಷಿಸಿತು.

ಕಾಲಕ್ಕೆ ತಕ್ಕಂತೆ ಸಮಸ್ಯೆಗಳ ಸ್ವರೂಪ ಭಿನ್ನವಾಗಿರುತ್ತದೆ, ಸಮಸ್ಯೆಗೆ ತಕ್ಕಂತೆ ಹೋರಾಟದ ಸ್ವರೂಪವೂ ಭಿನ್ನವಾಗುವುದು ಅನಿವಾರ್ಯವಾಗುತ್ತದೆ. ಹೋರಾಟದ ಸ್ವರೂಪಕ್ಕೆ ತಕ್ಕಂತೆ ಪ್ರತಿಫಲಗಳು ಭಿನ್ನವಾಗುತ್ತವೆ. ಎಪ್ಪತ್ತರ ದಶಕದಲ್ಲಿ ಪ್ರಮುಖವಾಗಿ ಭಾರತ ಮತ್ತಿತರ ದೇಶಗಳಲ್ಲಿ ನಡೆದ ಮಹಿಳಾ ಹೋರಾಟದಿಂದಾಗಿ ಆ ಇಡೀ ದಶಕ ಮಹಿಳಾ ದಶಕವಾದಂತೆಯೆ ಈ ಇಡೀ ವರ್ಷ ಭಾರತದಲ್ಲಿ ಮಹಿಳಾ ವರ್ಷವೆ ಆಗಲಿದೆ.
ಈ ಮಹಿಳಾ‌‌ ವರ್ಷದ ಪ್ರತಿರೋಧ ವರ್ಷಧಾರೆ ಪ್ರಾರಂಭವಾದದ್ದು ಡಿಸೆಂಬರ್ 15, 2019ರಂದು‌ ದೆಹಲಿಯ ಜಾಮಿಯ ಮಿಲ್ಲಿಯ ವಿಶ್ವವಿದ್ಯಾಲಯದಲ್ಲಿ NPR NRC CAA ವಿರೋಧಿಸಿ ದಿಟ್ಟ ಪ್ರತಿಭಟನೆ ನಡೆಯಿತು. ನಂತರ ಪೊಲೀಸರು ಕ್ಯಾಂಪಸ್ಸಿನೊಳಗೆ ನುಗ್ಗಿ‌ ಗೂಂಡಾವರ್ತನೆಯೊಂದಿಗೆ ಕೈಗೆ ಸಿಕ್ಕ ಸಿಕ್ಕವರನ್ನು ಥಳಿಸಿದರು. ಆಗ ಒಬ್ಬ ಹುಡುಗನನ್ನು ಹೊಡೆಯುತ್ತಿದ್ದ ಪೊಲೀಸರನ್ನು ತಡೆದು ನಿಲ್ಲಿಸಿ ಎಚ್ಚರಿಕೆ ನೀಡಿದ ಜಾಮಿಯಾ ಮಿಲ್ಲಿಯಾ‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ಕೇರಳಾದ ಲದೀದ ಫ಼ರ್ಜ಼ಾನ ಮತ್ತು ಆಯಿಶಾ ರೆನ್ನ
ಎಂಬ ಇವರಿಬ್ಬರು ಜಾಮಿಯಾ ಹೋರಾಟದ ಚಹರೆಗಳಾದರು.

ಜಾಮಿಯಾದ ಮೇಲಾದ ಹಲ್ಲೆಯನ್ನು ವಿರೋಧಿಸಿ ಮಕ್ಕಳ ಭವಿಷ್ಯಕ್ಕಾಗಿ‌ ಎಂಬ ಧ್ಯೇಯವಾಕ್ಯದೊಂದಿಗೆ ದೆಹಲಿಯ ಸೆಕ್ಟರ್ -13ರಲ್ಲಿ ರಾತ್ರೋರಾತ್ರಿ ದೀಪ ಹಿಡಿದು ನಿಂತ ತಾಯಂದಿರ ಹೋರಾಟ ಶಾಹೀನ್ ಬಾಗ್‌ ಆಗಿ ಬೆಳೆಯಿತು. ಈ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪಂಥೀಯ ಕೋಮುವಾದಿ ಶಕ್ತಿಗಳು ಲಾಟಿಚಾರ್ಜ್, ಗೋಲಿಬಾರ್, ಗಲಭೆಗಳನ್ನು ನಡೆಸಿದರು ಸಹ ಕುಗ್ಗದೆ ಮುನ್ನುಗಿದೆ.

ಶಾಹೀನ್ ಬಾಗ್‌ನ ಹೋರಾಟದ ಮಾದರಿಯಲ್ಲೆ ದೇಶದ ತುಂಬೆಲ್ಲಾ‌ ಶಾಹೀನ್ ಬಾಗ್‌ಗಳು ಪ್ರಾರಂಭವಾಗಿವೆ.
ದಾವಣಗೆರೆ, ರಾಯಚೂರು, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗ, ಭದ್ರಾವತಿ ಸೇರಿದಂತೆ ಬೆಂಗಳೂರಿನ ಬಿಲಾಲ್ ಬಾಗ್‌ ಕರ್ನಾಟಕ ರಾಜ್ಯದ ತುಂಬೆಲ್ಲಾ ಮಹಿಳಾ ನೇತೃತ್ವದ ಹೋರಾಟಗಳು ಮುನ್ನೆಲೆಯಲ್ಲಿವೆ.

ಒಂದು ಕಡೆ ಶಾಹೀನ್ ಬಾಗ್‌ ಹೋರಾಟವನ್ನು ಮಹಿಳೆಯರು ಮುನ್ನಡೆಸುತ್ತಿದ್ದರೆ ದೇಶದ ತುಂಬೆಲ್ಲಾ ಮಹಿಳೆಯರು ಬುರ್ಕಾ-ಬಿಂದಿ ಹೋರಾಟದ ಮೂಲಕ ಧರ್ಮಾತೀತ ರೂಪವನ್ನು ಚಳುವಳಿಗೆ ನೀಡುತ್ತಿದ್ದಾರೆ. ಮತ್ತೊಂದೆಡೆ ಬೀದಿ ತುಂಬೆಲ್ಲಾ ರಂಗೋಲಿ ಬಿಡಿಸಿ ಕೇಂದ್ರದ ಕರಾಳ ಕಾಯ್ದೆಗಳನ್ನು ವಿರೋಧಿಸುತ್ತಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆಯ ಜಾಥಗಳನ್ನು ಹೊರಟ ಸ್ತ್ರೀಯರು, ಕವಿತೆ, ಕವನ, ಚಿತ್ರಕಲೆ ಹೀಗೆ ವಿಭಿನ್ನ ಆಯಾಮಗಳಲ್ಲಿ ಪ್ರತಿಭಟನೆಯನ್ನು ಮಹಿಳೆಯರು ತೆರೆದಿಡುತ್ತಿರುವುದು ವಿಶ್ವದ ಭವಿಷ್ಯವನ್ನು ಕಟ್ಟುಕೊಡುವ ಆಶಾದಾಯಕ ಮುನ್ನೋಟವನ್ನು ನೀಡುತ್ತಿದೆ.

ಒಂದೆಡೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ, ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಸಂವಿಧಾನ ಮತ್ತು ದೇಶದ ಉಳಿವಿಗಾಗಿ ಹೋರಾಡುತ್ತಿದ್ದರೆ ಬೇಟಿ ಬಚಾವ್ ಬೇಟಿ ಪಡಾವ್ ಎನ್ನುವ ಸರ್ಕಾರ ಓದುವ ಹಕ್ಕಿಗಾಗಿಯೆ ಶುಲ್ಕ ಕಡಿಮೆ ಮಾಡಿ ಎಂದು ಕೇಳಿದ ಜೆ.ಎನ್.ಯುವಿನ ವಿದ್ಯಾರ್ಥಿಗಳ ಮೇಲೆ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಶಿ ಘೋಷ್ ಎನ್ನುವ ಹೆಣ್ಣು ಮಗಳ ಮೇಲೆ ಮಾಡಿದ ಹಲ್ಲೆ ಮಾಡಿತು. ಆಕೆಗೆ ಸಾಂತ್ವಾನ ಹೇಳಲು ಹೋದ ದೀಪಿಕಾ ಪಡುಕೋಣೆಯ ಬಗ್ಗೆ ಆಡಿದ ಮಾತುಗಳು ಈ ಸಂಸ್ಕೃತಿ ರಕ್ಷಕರ ಮುಖವಾಡದ ಅನಾವರಣವನ್ನು ಮಾಡಿದ್ದು ಒಂದೆಡೆಯಾದರೆ ಆಯಿಶಿ ಘೋಷ್, ದೀಪಿಕಾ ಪಡುಕೋಣೆಯಂತಹ ಹೆಣ್ಣುಗಳು ಪ್ರಭುತ್ವದ ಎದುರಿಗೆ ತೋರಿದ ಧೈರ್ಯ ನಿಜಕ್ಕೂ ಭರವಸೆಯ ಕಿರಣ.

ಇಷ್ಟೆಲ್ಲದರ ನಡುವೆ ಮಹಿಳಾ ಹೋರಾಟಗಳು ಸಿಂಪತಿಯ ಕಾರಣದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದಕ್ಕಿಂತ ಹಸಿ ಹಸಿ ಸುಳ್ಳು ಮತ್ತೊಂದಿಲ್ಲ. ಮಹಿಳಾ ಪ್ರತಿಭಟನೆ, ಹೋರಾಟ ಈ ಮಟ್ಟಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರಣ ಹೆಣ್ಣೊಳಗಿನ ನೈಜ ಕಾಳಜಿ, ಧೃಡತೆ, ಸ್ಥೈರ್ಯ ಮತ್ತು ಗೆದ್ದೆ ಗೆಲ್ಲುವೆವೆಂಬ ಅಚಲ ನಂಬಿಕೆ. ತಿಂಗಳಾನುಗಟ್ಟಲೆ ಅಲುಗಾಡದೆ ಕೂತಲ್ಲೆ ಕೂರುವ ಮನೋಸ್ಥೈರ್ಯ, ಹೋರಾಟದ ಕಿಚ್ಚು ಹೆಣ್ಣಿನಲ್ಲಿ ಮಾತ್ರ ಕಾಣಲು ಸಾಧ್ಯ.

ನಾಲ್ಕುನೂರು ವರ್ಷದ ಇತಿಹಾಸದಲ್ಲೆ ಕಂಡು ಕೇಳರಿಯದ ಐದು ಡಿಗ್ರಿ ಸೆನ್ಸಸ್ ಚಳಿಯಲ್ಲು ವಯಸ್ಸಿನ ಪರಿಮಿತಿಯಿಲ್ಲದೆ, ಯಾವ ಬೆದರಿಕೆಗೂ ಕುಗ್ಗದೆ ಜಗ್ಗದೆ ಹೋರಾಡುತ್ತಿರುವ, ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

(ಲೇಖಕಿ ಕವಯತ್ರಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...