Homeಮುಖಪುಟತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ..

ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

- Advertisement -
- Advertisement -

“ತಾಯಂದಿರು ತಮ್ಮ ಮಕ್ಕಳಿಗಾಗಿ ಮಾಡುವ ಹೋರಾಟದಲ್ಲಿ ಸೋಲು ಎಂಬುದೆ ಇಲ್ಲ” ಕಣ್ಣನ್ ಗೋಪಿನಾಥ್ ಹೇಳಿದ ಈ ಸಾಲುಗಳು ಮಕ್ಕಳ ಹೊತ್ತೂಟಕ್ಕೆಂದು ಝಡಿ ಮಳೆಯು ಲೆಕ್ಕಿಸದೆ ತಂಬಾಕು ಹೊಲದಲ್ಲಿ ದುಡಿವ ನನ್ನ ಹಳ್ಳಿಯ ತಾಯಂದಿರಿಂದ ಹಿಡಿದು ದೆಲ್ಲಿಯಲ್ಲಿ ಭಾರತೀಯ ಸೌಹಾರ್ದ, ಸಾಮರಸ್ಯ, ಸಹಬಾಳ್ವೆ, ಭ್ರಾತೃತ್ವ, ಸಹಿಷ್ಣುತೆಗೆ ಎದುರಾಗಿರುವ ಗ್ರಹಣವನ್ನು ದೂರ ಮಾಡಿ ತಮ್ಮ ಮಕ್ಕಳ ಭವ್ಯ ಭವಿಷ್ಯಕ್ಕಾಗಿ ಹೋರಾಡುತ್ತಿರುವ ಶಾಹೀನ್‌ಬಾಗ್ ನ ಹೆಣ್ಣುಗಳವರೆಗು ಅಕ್ಷರಶಃ‌ ಸರ್ವಕಾಲಿಕ ಸತ್ಯ.

ಸ್ವತಂತ್ರ ಭಾರತದ ಇತಿಹಾಸದಲ್ಲೆ ಬಲಿಷ್ಟ ಸರ್ಕಾರವೆಂದು ಮಾಧ್ಯಮಗಳಿಂದ ಬಿಂಬಿತವಾಗಿರುವ ಹಾಲಿ ಕೇಂದ್ರ ಸರ್ಕಾರಕ್ಕೆ ದೆಹಲಿಯಲ್ಲಿ ಅರವತ್ತನಾಲ್ಕು ದಿನಗಳಿಂದ ನಡೆಯುತ್ತಿರುವ ಶಾಂತಿಯುತ ಮಹಿಳಾ ಪ್ರತಿಭಟನೆಯು ಗೋಧಿ ಮೀಡಿಯಾದ ಅಬ್ಬರದ ಪ್ರಚಾರದ ನಡುವೆ, ವಿರೋಧ ಪಕ್ಷಗಳ ದುರ್ಬಲತೆಯ ನಡುವೆ, ಆರು ವರ್ಷಗಳಿಂದ ಎಲ್ಲಾ ಹೋರಾಟಗಳನ್ನು ದಮನಿಸಿದ್ದ ಈ ಸರ್ಕಾರವನ್ನು ಗಂಭೀರವಾಗಿ ನಿದ್ದೆಗೆಡಿಸಿ ದೆಹಲಿಯ ಚುನಾವಣೆಯ ಬಹು ಚರ್ಚಿತ ವಿಷಯವಾಗಿ, ಭಾಜಾಪ ಪಕ್ಷದ ಸೋಲಿನ ಶವಪೆಟ್ಟಿಗೆಗೆ ಕೊನೆ ಮೊಳೆ ಹೊಡೆದ ನಿರ್ಣಾಯಕ ಅಂಗವಾಗಿ ಮಹಿಳಾ ಪ್ರತಿಭಟನಾ ಶಕ್ತಿಯನ್ನು ಜಗತ್ತಿಗೆ ನೆನಪಿಸಿದ ಕೀರ್ತಿ, ಪ್ರಬಲ ಕೇಂದ್ರ ಸರ್ಕಾರಕ್ಕೆ ನಾರಿ ಶಕ್ತಿಯನ್ನು ರುಜುವಾತು ಮಾಡಿದ ಹಿರಿಮೆ ಶಾಹೀನ್ ಬಾಗ್‌ ಹೆಣ್ಣುಗಳಿಗೆ ಸಲ್ಲುತ್ತದೆ.

 

ಭಾರತದಲ್ಲಿ ಸ್ವಾತಂತ್ರ್ಯಾನಂತರ 70ರ‌ ದಶಕ ಹೊರತುಪಡಿಸಿ ಬಹುಕಾಲ ಭಾರತದ ಮಹಿಳಾ ದನಿ ಮರೆಯಾಗಿದ್ದದ್ದು ಒಂದು ರೀತಿಯ ವಿಪರ್ಯಾಸ. ಭಾರತದಲ್ಲಿ ಮಹಿಳಾಪರ ಸಂಗತಿಗಳು ಮುನ್ನೆಲೆಗೆ ಬಂದದ್ದು 70ರ ದಶಕದಲ್ಲಿ. 1971ರಲ್ಲಿ ವಿಶ್ವಸಂಸ್ಥೆಯ ಸೂಚನೆಯ ಮೇರೆಗೆ ಮಹಿಳೆಯರ ಸ್ಥಿತಿಗತಿಗಳನ್ನು ಪರಿಶೀಲಿಸಲು ‘ಕಮಿಟಿ ಆನ್ ದಿ ಸ್ಟೇಟಸ್ ಆಫ್ ವಿಮೆನ್ ಇನ್ ಇಂಡಿಯಾ’ ಎಂಬ ಸಮಿತಿಯೊಂದನ್ನು ರಚಿಸಲಾಯಿತು.

ಹಿರಿಯ ಮಹಿಳಾ ಹೋರಾಟಗಾರರಿದ್ದಂತಹ ಈ ಸಮಿತಿ ಭಾರತದ ತುಂಬೆಲ್ಲಾ ಓಡಾಡಿ ಎಲ್ಲಾ ಸ್ಥರಗಳ ಮಹಿಳೆಯರ ಬದುಕಿನ ಸ್ಥಿತಿಗತಿಗಳನ್ನು ಖುದ್ದಾಗಿ ಅವಲೋಕಿಸಿದಾಗ ಕಂಡಂತಹ ಆಘಾತಕಾರಿ‌ ವಿಚಾರಗಳನ್ನು ಆಧಾರವಾಗಿಟ್ಟುಕೊಂಡು ‘ಸಮಾನತೆಯೆಡೆಗೆ’ ಎಂಬ ವರದಿಯನ್ನು ಈ ಸಮಿತು ಬಿಡುಗಡೆ ಮಾಡಿತು. ಈ ವರದಿ ಭಾರತದ ಮಹಿಳಾಪರ ಮತ್ತು ಪ್ರಜಾತಾಂತ್ರಿಕ ವಲಯಗಳಲ್ಲಿ ಬಹುಚರ್ಚಿತ ವಿಚಾರವಾಯಿತು. ಅನೇಕ ಸ್ವಾಯತ್ತ ಮಹಿಳಾ ಸಂಘಟನೆಗಳು ಆರಂಭವಾದವು. ಶಿಕ್ಷಣ, ಉದ್ಯೋಗಾವಕಾಶ, ಲೈಂಗಿಕ ಕಿರುಕುಳ ಮುಕ್ತ ಔದ್ಯೋಗಿಕ ವಾತಾರವಣ ಮೊದಲಾದ ಅನೇಕ ಅಂಶಗಳು ಧ್ವನಿಸಲು ಶುರುವಾದವು.

ಆರ್ಥಿಕ ಸಧೃಡತೆ ಮಹಿಳಾ ಸಬಲೀಕರಣಕ್ಕೆ ಮೂಲ ಅಸ್ತ್ರ ಎಂಬುದನ್ನು ಸಮಾಜ ಕಂಡುಕೊಂಡಿತು.
ವರದಕ್ಷಿಣೆ ಕಿರುಕುಳ, ಅತ್ಯಾಚಾರಗಳು ಮೊದಲಾದವುಗಳ ವಿರುದ್ಧ ಯಾವುದೇ ಸಂಘಟನೆಯಲ್ಲಿರಲಿ ಅಥವಾ ಇಲ್ಲದಿರಲಿ ಮಹಿಳೆಯರು ಬೀದಿಗಿಳಿದರು. ಮಹಿಳೆಯರ ಕುರಿತ ಸಾಮಾಜಿಕ ಸಂವೇದನೆ ಹೆಚ್ಚಾಗುತ್ತ ಬಂದ ಪರಿಣಾಮ ಸರ್ಕಾರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕೆಲವು ಮಹಿಳಾಪರ ಕಾಯ್ದೆಗಳು, ಮಹಿಳಾ ಅಧ್ಯಯನ ಕೇಂದ್ರಗಳು, ಮಹಿಳಾ ಪರ ಯೋಜನೆಗಳನ್ನು ಜಾರಿಗೊಳಿಸಲೇಬೇಕಾದದ್ದು ಅನಿವಾರ್ಯವಾಯಿತು. ಅಷ್ಟೆಯಲ್ಲ‌ ವಿಶ್ವಸಂಸ್ಥೆ 1975ರಲ್ಲಿ ಮಾರ್ಚ್ 08ನ್ನು ಅಂತರಾಷ್ಟ್ರೀಯ ಮಹಿಳಾ ದಿನ ಎಂದು ಘೋಷಿಸಿ, ಆ ವರ್ಷವನ್ನು ಮಹಿಳಾ ವರ್ಷ, ಆ ದಶಕವನ್ನು ಮಹಿಳಾ ದಶಕ ಎಂದೂ ಘೋಷಿಸಿತು.

ಕಾಲಕ್ಕೆ ತಕ್ಕಂತೆ ಸಮಸ್ಯೆಗಳ ಸ್ವರೂಪ ಭಿನ್ನವಾಗಿರುತ್ತದೆ, ಸಮಸ್ಯೆಗೆ ತಕ್ಕಂತೆ ಹೋರಾಟದ ಸ್ವರೂಪವೂ ಭಿನ್ನವಾಗುವುದು ಅನಿವಾರ್ಯವಾಗುತ್ತದೆ. ಹೋರಾಟದ ಸ್ವರೂಪಕ್ಕೆ ತಕ್ಕಂತೆ ಪ್ರತಿಫಲಗಳು ಭಿನ್ನವಾಗುತ್ತವೆ. ಎಪ್ಪತ್ತರ ದಶಕದಲ್ಲಿ ಪ್ರಮುಖವಾಗಿ ಭಾರತ ಮತ್ತಿತರ ದೇಶಗಳಲ್ಲಿ ನಡೆದ ಮಹಿಳಾ ಹೋರಾಟದಿಂದಾಗಿ ಆ ಇಡೀ ದಶಕ ಮಹಿಳಾ ದಶಕವಾದಂತೆಯೆ ಈ ಇಡೀ ವರ್ಷ ಭಾರತದಲ್ಲಿ ಮಹಿಳಾ ವರ್ಷವೆ ಆಗಲಿದೆ.
ಈ ಮಹಿಳಾ‌‌ ವರ್ಷದ ಪ್ರತಿರೋಧ ವರ್ಷಧಾರೆ ಪ್ರಾರಂಭವಾದದ್ದು ಡಿಸೆಂಬರ್ 15, 2019ರಂದು‌ ದೆಹಲಿಯ ಜಾಮಿಯ ಮಿಲ್ಲಿಯ ವಿಶ್ವವಿದ್ಯಾಲಯದಲ್ಲಿ NPR NRC CAA ವಿರೋಧಿಸಿ ದಿಟ್ಟ ಪ್ರತಿಭಟನೆ ನಡೆಯಿತು. ನಂತರ ಪೊಲೀಸರು ಕ್ಯಾಂಪಸ್ಸಿನೊಳಗೆ ನುಗ್ಗಿ‌ ಗೂಂಡಾವರ್ತನೆಯೊಂದಿಗೆ ಕೈಗೆ ಸಿಕ್ಕ ಸಿಕ್ಕವರನ್ನು ಥಳಿಸಿದರು. ಆಗ ಒಬ್ಬ ಹುಡುಗನನ್ನು ಹೊಡೆಯುತ್ತಿದ್ದ ಪೊಲೀಸರನ್ನು ತಡೆದು ನಿಲ್ಲಿಸಿ ಎಚ್ಚರಿಕೆ ನೀಡಿದ ಜಾಮಿಯಾ ಮಿಲ್ಲಿಯಾ‌ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯರಾದ ಕೇರಳಾದ ಲದೀದ ಫ಼ರ್ಜ಼ಾನ ಮತ್ತು ಆಯಿಶಾ ರೆನ್ನ
ಎಂಬ ಇವರಿಬ್ಬರು ಜಾಮಿಯಾ ಹೋರಾಟದ ಚಹರೆಗಳಾದರು.

ಜಾಮಿಯಾದ ಮೇಲಾದ ಹಲ್ಲೆಯನ್ನು ವಿರೋಧಿಸಿ ಮಕ್ಕಳ ಭವಿಷ್ಯಕ್ಕಾಗಿ‌ ಎಂಬ ಧ್ಯೇಯವಾಕ್ಯದೊಂದಿಗೆ ದೆಹಲಿಯ ಸೆಕ್ಟರ್ -13ರಲ್ಲಿ ರಾತ್ರೋರಾತ್ರಿ ದೀಪ ಹಿಡಿದು ನಿಂತ ತಾಯಂದಿರ ಹೋರಾಟ ಶಾಹೀನ್ ಬಾಗ್‌ ಆಗಿ ಬೆಳೆಯಿತು. ಈ ಹೋರಾಟವನ್ನು ಹತ್ತಿಕ್ಕಲು ಕೇಂದ್ರ ಸರ್ಕಾರ ಬಲಪಂಥೀಯ ಕೋಮುವಾದಿ ಶಕ್ತಿಗಳು ಲಾಟಿಚಾರ್ಜ್, ಗೋಲಿಬಾರ್, ಗಲಭೆಗಳನ್ನು ನಡೆಸಿದರು ಸಹ ಕುಗ್ಗದೆ ಮುನ್ನುಗಿದೆ.

ಶಾಹೀನ್ ಬಾಗ್‌ನ ಹೋರಾಟದ ಮಾದರಿಯಲ್ಲೆ ದೇಶದ ತುಂಬೆಲ್ಲಾ‌ ಶಾಹೀನ್ ಬಾಗ್‌ಗಳು ಪ್ರಾರಂಭವಾಗಿವೆ.
ದಾವಣಗೆರೆ, ರಾಯಚೂರು, ಹುಬ್ಬಳ್ಳಿ, ಬಿಜಾಪುರ, ಗುಲ್ಬರ್ಗ, ಭದ್ರಾವತಿ ಸೇರಿದಂತೆ ಬೆಂಗಳೂರಿನ ಬಿಲಾಲ್ ಬಾಗ್‌ ಕರ್ನಾಟಕ ರಾಜ್ಯದ ತುಂಬೆಲ್ಲಾ ಮಹಿಳಾ ನೇತೃತ್ವದ ಹೋರಾಟಗಳು ಮುನ್ನೆಲೆಯಲ್ಲಿವೆ.

ಒಂದು ಕಡೆ ಶಾಹೀನ್ ಬಾಗ್‌ ಹೋರಾಟವನ್ನು ಮಹಿಳೆಯರು ಮುನ್ನಡೆಸುತ್ತಿದ್ದರೆ ದೇಶದ ತುಂಬೆಲ್ಲಾ ಮಹಿಳೆಯರು ಬುರ್ಕಾ-ಬಿಂದಿ ಹೋರಾಟದ ಮೂಲಕ ಧರ್ಮಾತೀತ ರೂಪವನ್ನು ಚಳುವಳಿಗೆ ನೀಡುತ್ತಿದ್ದಾರೆ. ಮತ್ತೊಂದೆಡೆ ಬೀದಿ ತುಂಬೆಲ್ಲಾ ರಂಗೋಲಿ ಬಿಡಿಸಿ ಕೇಂದ್ರದ ಕರಾಳ ಕಾಯ್ದೆಗಳನ್ನು ವಿರೋಧಿಸುತ್ತಿರುವ ಹಳ್ಳಿಗಾಡಿನ ಹೆಣ್ಣುಮಕ್ಕಳು, ಕಿಲೋಮೀಟರುಗಟ್ಟಲೆ ಕಾಲ್ನಡಿಗೆಯ ಜಾಥಗಳನ್ನು ಹೊರಟ ಸ್ತ್ರೀಯರು, ಕವಿತೆ, ಕವನ, ಚಿತ್ರಕಲೆ ಹೀಗೆ ವಿಭಿನ್ನ ಆಯಾಮಗಳಲ್ಲಿ ಪ್ರತಿಭಟನೆಯನ್ನು ಮಹಿಳೆಯರು ತೆರೆದಿಡುತ್ತಿರುವುದು ವಿಶ್ವದ ಭವಿಷ್ಯವನ್ನು ಕಟ್ಟುಕೊಡುವ ಆಶಾದಾಯಕ ಮುನ್ನೋಟವನ್ನು ನೀಡುತ್ತಿದೆ.

ಒಂದೆಡೆ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ, ತಮ್ಮ ಮಕ್ಕಳ ಭವಿಷ್ಯಕ್ಕಾಗಿ, ಸಂವಿಧಾನ ಮತ್ತು ದೇಶದ ಉಳಿವಿಗಾಗಿ ಹೋರಾಡುತ್ತಿದ್ದರೆ ಬೇಟಿ ಬಚಾವ್ ಬೇಟಿ ಪಡಾವ್ ಎನ್ನುವ ಸರ್ಕಾರ ಓದುವ ಹಕ್ಕಿಗಾಗಿಯೆ ಶುಲ್ಕ ಕಡಿಮೆ ಮಾಡಿ ಎಂದು ಕೇಳಿದ ಜೆ.ಎನ್.ಯುವಿನ ವಿದ್ಯಾರ್ಥಿಗಳ ಮೇಲೆ, ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಆಯಿಶಿ ಘೋಷ್ ಎನ್ನುವ ಹೆಣ್ಣು ಮಗಳ ಮೇಲೆ ಮಾಡಿದ ಹಲ್ಲೆ ಮಾಡಿತು. ಆಕೆಗೆ ಸಾಂತ್ವಾನ ಹೇಳಲು ಹೋದ ದೀಪಿಕಾ ಪಡುಕೋಣೆಯ ಬಗ್ಗೆ ಆಡಿದ ಮಾತುಗಳು ಈ ಸಂಸ್ಕೃತಿ ರಕ್ಷಕರ ಮುಖವಾಡದ ಅನಾವರಣವನ್ನು ಮಾಡಿದ್ದು ಒಂದೆಡೆಯಾದರೆ ಆಯಿಶಿ ಘೋಷ್, ದೀಪಿಕಾ ಪಡುಕೋಣೆಯಂತಹ ಹೆಣ್ಣುಗಳು ಪ್ರಭುತ್ವದ ಎದುರಿಗೆ ತೋರಿದ ಧೈರ್ಯ ನಿಜಕ್ಕೂ ಭರವಸೆಯ ಕಿರಣ.

ಇಷ್ಟೆಲ್ಲದರ ನಡುವೆ ಮಹಿಳಾ ಹೋರಾಟಗಳು ಸಿಂಪತಿಯ ಕಾರಣದಿಂದ ದೊಡ್ಡಮಟ್ಟದಲ್ಲಿ ಸುದ್ದಿಯಾಗುತ್ತವೆ ಎಂಬುದಕ್ಕಿಂತ ಹಸಿ ಹಸಿ ಸುಳ್ಳು ಮತ್ತೊಂದಿಲ್ಲ. ಮಹಿಳಾ ಪ್ರತಿಭಟನೆ, ಹೋರಾಟ ಈ ಮಟ್ಟಿಗೆ ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಕಾರಣ ಹೆಣ್ಣೊಳಗಿನ ನೈಜ ಕಾಳಜಿ, ಧೃಡತೆ, ಸ್ಥೈರ್ಯ ಮತ್ತು ಗೆದ್ದೆ ಗೆಲ್ಲುವೆವೆಂಬ ಅಚಲ ನಂಬಿಕೆ. ತಿಂಗಳಾನುಗಟ್ಟಲೆ ಅಲುಗಾಡದೆ ಕೂತಲ್ಲೆ ಕೂರುವ ಮನೋಸ್ಥೈರ್ಯ, ಹೋರಾಟದ ಕಿಚ್ಚು ಹೆಣ್ಣಿನಲ್ಲಿ ಮಾತ್ರ ಕಾಣಲು ಸಾಧ್ಯ.

ನಾಲ್ಕುನೂರು ವರ್ಷದ ಇತಿಹಾಸದಲ್ಲೆ ಕಂಡು ಕೇಳರಿಯದ ಐದು ಡಿಗ್ರಿ ಸೆನ್ಸಸ್ ಚಳಿಯಲ್ಲು ವಯಸ್ಸಿನ ಪರಿಮಿತಿಯಿಲ್ಲದೆ, ಯಾವ ಬೆದರಿಕೆಗೂ ಕುಗ್ಗದೆ ಜಗ್ಗದೆ ಹೋರಾಡುತ್ತಿರುವ, ತನ್ನ ಹೆತ್ತ ಕರುಳನ್ನು ಕಳೆದುಕೊಂಡರು ಛಲಬಿಡದೆ ಹೋರಾಟದ ಕಂದೀಲು ಹಿಡಿದು ಸಾಗುತ್ತಿರುವ ಈ ನೆಲದ ಭಾರತ ಮಾತೆಯರೆಲ್ಲರಿಗು ಮಹಿಳಾ ದಿನಾಚರಣೆಯ ಶುಭಾಶಯಗಳು.

(ಲೇಖಕಿ ಕವಯತ್ರಿ ಮತ್ತು ಸಾಮಾಜಿಕ ಕಾರ್ಯಕರ್ತೆ. ಅಭಿಪ್ರಾಯಗಳು ವಯಕ್ತಿಕವಾದವುಗಳು)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...