Homeಮುಖಪುಟಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! - ಬಿ.ಚಂದ್ರೇಗೌಡ

ಯಾಕ್ಸಾರ್ ಮೋದಿ ಖಾಲಿಬಾಟ್ಳಿ ಪ್ಲಾಸ್ಟಿಕ್ ಲೋಟ ಆಯ್ತಾಯಿದ್ರು! – ಬಿ.ಚಂದ್ರೇಗೌಡ

- Advertisement -
- Advertisement -

ಶಿವಮೊಗ್ಗದಿಂದ ಮೈಸೂರಿಗೆ ರೈಲಿನಲ್ಲಿ ಹೋಗುತ್ತಿರಬೇಕಾದರೆ, ಕೆ.ಆರ್.ನಗರದ ಬಳಿ ಮೂವರು ಮುಸ್ಲಿಂ ಯುವಕರು ಓಡಿಬಂದು ರೈಲತ್ತಿಕೊಂಡರು. ಅಲ್ಲದೆ ತಾವು ಕೂರುವುದಕ್ಕೆ ಮೊದಲು ತಮ್ಮ ಕೈಚೀಲಗಳನ್ನು ಸೀಟಿನ ಮೇಲೆ ಎಸೆದು, ಒಬ್ಬರ ಮೇಲೊಬ್ಬರು ಬಿದ್ದು ಓಡಿ ಬಂದು ದಣಿವಾರಿಸಿಕೊಳ್ಳತೊಡಗಿದರು. ಈ ಶ್ರಮಜೀವಿಗಳ ಜೀವನೋತ್ಸಾಹ ನೋಡುವಂತದ್ದು. ಅದೇ ಕಂಪನಿಗಳ, ಸರಕಾರದ ಕರ್ಮಾಚಾರಿಗಳ ನಿರುತ್ಸಾಹದ ಮುಖಗಳನ್ನ ನೋಡಿದರೆ ಅಯ್ಯೋ ಪಾಪ ಎನ್ನಿಸುತ್ತದೆ. ಆದ್ದರಿಂದ ನನ್ನೆದುರು ಕುಳಿತ ಹುಡುಗರನ್ನು ಮಾತನಾಡಬೇಕೆನಿಸಿತು.

“ಎಲ್ಲಿಂದ ಬರ್ತಾಯಿದ್ದೀರಿ” ಎಂದೆ.
“ಕೆ.ಆರ್.ನಗರದಿಂದ ಶಾರ್.”
“ಏನು ಮಾಡ್ತಿರಿ.”
“ಪೈಂಟಿಂಗ್ ಮಾಡ್ತಿವಿ ಶಾರ್.”
“ಊರ್ಯಾವುದು.”
“ಮೈಸೂರು” ಎಂದವನು ಸರಿಯಾಗಿ ಕುಳಿತು, ನನ್ನೊಡನೆ ಮಾತನಾಡುವ ಉತ್ಸಾಹ ತೋರಿದ. ಉಳಿದಿಬ್ಬರು ಬಾಗಿಲಲ್ಲಿ ನಿಂತು ಗಾಳಿಗೆ ಮೈವೊಡ್ಡಿದರು.
“ಈ ಹಾಳು ಬಿಜೆಪಿಗಳು ರೈಲಿನ ಬಣ್ಣನೂ ಬದ್ಲಾಸ್ತ ಅವೆ ಕಣಯ್ಯ” ಎಂದೆ.
“ಹೌದು ಶಾರ್, ಮದ್ಲಿಂದು ಬಣ್ಣ ಎಷ್ಟು ದೂಳು ಬಿದ್ರೂ ಕಾಣ್ತಿರಲಿಲ್ಲ. ಈಗ ರೈಲು ನೋಡಿದ್ರೆ ಮೈಮೇಲೆ ಮಣ್ಣು ಹುಯ್ಕಂಡು ಓಡಾಡ್ತವೆ.” ಎಂದ.
“ಬಿಜೆಪಿಗಳು ಬಣ್ಣ ಬದ್ಲಾಯಿಸ್ತವೆ ಅಷ್ಟೇ, ಇನ್ನೇನು ಆಗದಿಲ್ಲ ಅವುರ ಕೈಲಿ” ಎಂದೆ.
“ಈಗ ಯಾರ್ ಬರ್ತರೆ ಸಾರ್ ಸೀಟಿಗೆ.”
“ಯಾವ ಸೀಟಿಗೆ.”
“ಮೋದಿ ಸೀಟಿಗೆ ”
“ಯಾರು ಬರದಿಲ್ಲ.”
“ಮತ್ತೆ ಎಲೆಕ್ಷನ್ ಬಂದುಬಿಟ್ಟಿದೆ.”
“ಅದು ಉಪ ಚುನಾವಣೆ. ನಮ್ಮ ಸ್ಟೇಟಿಗೆ ಬಂದದೆ ಅಷ್ಟೇ.”
“ಓ ಎಡೂರಪ್ಪನ ಸೀಟಿಗೆ ಅನ್ನಿ.”
“ಹೌದು.”
“ಯಾಕ್ಸ ಮತ್ತೆ ರಿಟನ್ ಯಲಕ್ಷನ್ನು”
“ಅದೂ ನಿಮ್ಮ ಕೆ.ಆರ್.ನಗರದ ವಿಶ್ವನಾಥ್ ಗೊತ್ತ, ಅವುನಂತ ಹದಿನೇಳು ಜನನ ಬಿಜೆಪಿಗಳು ಕೊಂಡಕಂಡ್ರು.”
“ಅಂಗೆ ಮನುಸುರ್ನೆ ಕೊಳ್ಳಬವುದ ಶಾರ್.”
“ಮನುಷ್ಯರನ್ನ ಕೊಳ್ಳಕ್ಕಾಗಲ್ಲ. ಶಾಸಕರ ಕೊಳ್ಳಬವುದು.”
“ಒಳ್ಳೆ ಮಜಾ ಇದೆ ಶಾರ್ ಮ್ಯಾಟ್ರು.”
“ನಮಿಗೆ ಮಜಾ. ಸರಿ, ಅವುರ ಪಜೀತಿ ಯಾರಿಗೂ ಬ್ಯಾಡ ಅಂಗಾಗ್ಯದೆ.”
“ಯಾಕ್ ಶಾರ್ ಅಮೌಂಟು ಕೊಡ್ನಿಲ್ವಾ.”
“ಅದೇ ಡೌವುಟು.”
“ನಮ್ಗೂ ಅಂಗೆ ಆಗ್ತದೆ ಸಾ. ಪೈಂಟಿಂಗ್ ವರ್ಕು ಮಾಡಿಸಿಕ್ಯಂಡು ಕೈ ಎತ್ತಿಬಿಡ್ತರೆ. ಅದ್ಕೆ ನಾವು ಸರಿಯಾಗಿ ಅಡ್ವಾನ್ಸ್ ಕೇಳ್ತಿವಿ.”
“ಈ ಶಾಸಕರಿಗೆ ಅಡ್ವಾನ್ಸ್ ದುಡ್ಡು ಬಂದದೆ. ಆದ್ರೆ ಅಧಿಕಾರ ಬರಲಿಲ್ಲ.”
“ಯಾಕ್ಸಾ.”

“ಆಗಿನ ವಿಧಾನಸಭೆ ಸ್ಪೀಕರ್ ರಮೇಶ್ ಕುಮಾರ್ ಈ ಖರೀದಿ ವ್ಯವಾರನೆ ರದ್ದು ಮಾಡಿಬುಟ್ರು. ಅದ್ಕೆ ಇವುರ್ಯಲ್ಲ ಎಂಎಲ್ಲೆಯೆ ಗಿರಿ ಕಳಕಂಡ್ರು.”
“ನಮಕ್ ಹರಾಮ್‍ಗಳಿಗೆ ಸರಿಯಾಗಿ ಆಗಿದೆ ಬುಡಿ ಶಾರ್.”
ಇದು ಒಟ್ಟರಾಶಿ ಅವನ ಅಭಿಪ್ರಾಯವಿದ್ದಂತೆ ಅನಿಸಿತು. ಶಾಸಕರ ಖರೀದಿ, ಸರಕಾರ ಬೀಳಿಸಿ ಅದರಿಂದಾದ ಅನಾಹುತಗಳು, ಈ ವಿವರವೆಲ್ಲಾ ಅವನ ಅಭಿಪ್ರಾಯದೊಳಗೆ ಸೇರಿರದೆ ಬಿಜೆಪಿಗೆ ಮಾರಾಟದ ವ್ಯವಹಾರದಲ್ಲಿ ಮೋಸಹೋದವರನ್ನ ಬೈದಂತೆ ಕಂಡಿತು.
“ಮೋದಿಗೆ ಏನೊ ಒಳ್ಳೆ ಎಜುಕೇಶನ್ ಇ¯ವಂತಲ್ಲ ಶಾರ್.”
“ಹೌದು.”
“ಎಗ್ಸಾಂಗೆ ಹೋಗಿಲವಂತೆ ಶಾರ್. ಪ್ರೈವೇಟ್ ಇಸ್ಕೂಲ್‍ಗೆ ಹೋಗಿ ಮಾರ್ಕ್ಸ್‌ ಕಾರ್ಡು ತಂದುಬಿಟ್ಟಿದ್ದಾರಂತೆ.”
“ಅವುರು ಪಡದಿರೋ ಶಿಕ್ಷಣದ ಬಗ್ಗೆ ಯಲ್ಲಾರಿಗೂ ಡೌಟಿದೆ.”
“ಮತ್ತೆ ಯಂಗೆ ಶಾರ್ ಪ್ರಧಾನಿ ಸೀಟು ಮ್ಯಾಲೆ ಕುಂತವುರೆ.”
“ಪ್ರಧಾನಿಯಾಗಕ್ಕೆ ತುಂಬ ಓದಿರಬೇಕು ಅಂತ ಇಲ್ಲ. ಅನುಭವ, ಹೃದಯವಂತಿಕೆ ಇರಬೇಕು. ಅಂಗೆ ನೋಡಿದ್ರೆ ನಮ್ಮ ದ್ಯಾವೇಗೌಡ್ರು ಡಿಪ್ಲಮೋ ಇಂಜಿನಿಯರ್. ಮುಖ್ಯಮಂತ್ರಿಯಾಗಿ ಎಷ್ಟು ಚನ್ನಾಗಿ ಆಡಳಿತ ಮಾಡಿದ್ರು, ಪ್ರಧಾನಿಯಾಗಿ ಕಾಶ್ಮೀರದ ಚುನಾವಣೆ ಮಾಡಿದ್ರು.”
“ಅವುರೆ ಇರಬೇಕಿತ್ತು ಶಾರ್. ಈ ಮೋದಿ ಬರ್ತಾನೆ ಇರಲಿಲ್ಲ.”
“ಬಂದುಬುಟ್ಟವುನಲ್ಲ ಸಯಿಸಗಬೇಕು.”
“ನಮ್ದು ರಫೀಕ್ ಮೊಬೈಲಿಗೆ ಒಂದು ಫಿಲಂ ಬಂದಿದೆ ಶಾರ್. ಮೋದಿ ನಮ್ಮ ಜುಬೇರ್ ಸಾಬರ ತರ ಹಳೆ ಸೀಸ, ಪ್ಲಾಸ್ಟಿಕ್ ಡಬ್ಬನೆಲ್ಲಾ ತಗ್ದಿ ತಗ್ದಿ ಚೀಲ್ದವಳಗೆ ತುಂಬಿಕಂಡು ಹೋಗ್ತಾಯಿದ್ರು. ಯಾಕ್ ಶಾರ್ ಅಂಗೆ ಮಾಡಿದಾರೆ.”
“ನೀನಾಗ್ಲೆ ಹೇಳಿದಲ್ಲಯ್ಯ ಎಜುಕೇಶನ್ ಇಲ್ಲ ಅಂತ, ಅದರ ಕೊರತೆ ಇದು. ಅಂತ ಕೆಲ್ಸ ಮಾಡಿ ಪೋಟೊ ವಡಿಸಿಗ್ಯಂಡು ಪೇಪರ್‍ಗಾಕ್ಸಿದ್ರೆ ಪ್ರಧಾನಿ ಎಷ್ಟು ಒಳ್ಳೆಯವರು, ಇಂತ ಮನ್ಸ ಹಿಂದೆ ಪ್ರಧಾನಿಯಾಗಿರಲಿಲ್ಲ ಅಂತ ತಿಳಕತಾರೆ ಅನ್ನಕಂಡು ಗಿಮಿಕ್ ಮಾಡ್ತ ಅವುರೆ.”
“ಅಂಗೆ ಮಾಡಬಾರ್ದು ಶಾರ್. ಆ ಸೀಟ್‍ಮೇಲೆ ಕುಂತಗಂಡಿ ಹಳೇ ಪೇಪರ್, ಖಾಲಿ ಸೀಸದ ಯವಾರ ಮಾಡಬಾರ್ದು.”

“ಇನ್ನೂ ನೋಡಿವಿರು. ಹೋಟ್ಳಿಗೆ ಬಂದು ಕಡಕ್ ಟೀ ಮಾಡಿ, ಯಲ್ಲಾರಿಗೂ ಕೊಟ್ಟು ಪೋಟೊ ವಡಿಸಿಗ್ಯಂಡು ಪೇಪರ್‍ಗಾಕುಸ್ತರೆ.”
“ಎಜುಕೇಶನ್ ಇಲ್ಲ ಅಂದ್ರೆ ಇಂಗೆ ಅಲವ ಶಾರ್. ಮೋದಿ ಹಿಂಗೆ ಮಾಡ್ತ ಹೋದ್ರೆ ಪುನ ಇಂಗ್ಲಿಸ್‍ನೋರು ಬಂದು ಸೀಟ್ ಮೇಲೆ ಕೂರ್ತರೆ ಅಷ್ಟೇ.”
“ಅವುರೀಗ ಬರಲ್ಲ.”
“ಯಾಕ್ ಬರಲ್ಲ ಶಾರ್. ನಮ್ ನಮ್ಗೆ ಜಗಳ ತಂದುಹಾಕಿ ನಾವೆಲ್ಲ ಹಿಂಗೆ ಜಗಳ ಮಾಡ್ತಯಿದ್ರೆ ಸೈಲೆಂಟಾಗಿ ಬಂದು ಬ್ರಿಟಿಷ್ ಜನ ಸೀಟ್ ಮೇಲೆ ಕೂರ್ತರೆ. ಆಗ ನಮ್ದು ಕತೆ ಹೋಗ್ಲಿ, ಮೋದಿಗೆ ಹಳೆ ಪೇಪರ್ ಪ್ಲಾಸ್ಟಿಕ್ ಸೀಸ ಬಾಟ್ಳಿನೆ ಗತಿ” ಎಂದು ನಕ್ಕ. ಈ ಮಾತಿಗೆ ಎಲ್ಲರೂ ನಕ್ಕರು.

ಚಿಕ್ಕಮಗಳೂರು ಕಡೆಯಿಂದ ದಸರಾ ನೋಡಲು ಹೋಗುತ್ತಿದ್ದ ಕೆಲವರಿಗೆ ಈ ಸಾಬರ ಹುಡುಗ ಮಾಡುತ್ತಿರುವ ಟೀಕೆ ಸಹಿಸಲಾಗದ್ದನ್ನು ಅವರ ಮುಖಗಳೇ ಹೇಳುತ್ತಿದ್ದವು. ಅಷ್ಟರಲ್ಲಿ ಸೀತಾಫಲ ಮಾರುವ ವ್ಯಕ್ತಿ ಬಂದ. ಹುಡುಗ ಸೀತಾಫಲ ತೆಗೆದುಕೊಂಡು ಅರ್ಧರ್ಧ ಹಿಸಿದು ಎದುರು ಕುಳಿತವರಿಗೆ ಕೊಟ್ಟ. ನಂತರ ಬಂದ ಸಪೋಟವನ್ನು ತೆಗೆದುಕೊಂಡು ಕೊಡಲು ಬಂದ “ಬ್ಯಾಡ ಕಣಪ್ಪ, ಅದು ತುಂಬ ಶುಗರು” ಎಂದೆ. “ತಿನ್ನಿ ಶಾರ್ ಹಣ್ಣು ತಿಂದ್ರೆ ವಳ್ಳೇದು.” ಎಂದು ಅರ್ಧ ಭಾಗಕೊಟ್ಟ. ಅವನ ಆಂತರ್ಯದಲ್ಲಿ ಬಿಜೆಪಿ ಜನ, ಜನಾಂಗೀಯ ದ್ವೇಷವನ್ನು ಹುಟ್ಟುಹಾಕುವುದಕ್ಕೆ ದಿಗಲುಗೊಂಡು ಸಾಮರಸ್ಯದಿಂದ ಬದುಕುವ ಮನಸ್ಸು, ಹಣ್ಣು ಹಂಚಿಕೆಯ ಹಿಂದೆ ಗೋಚರಿಸಿತು. ಅಷ್ಟರಲ್ಲಿ ಎಲ್ಲ ಜನಾಂಗವೂ ಸೇರಿ ಸಂಭ್ರಮದಿಂದ ಆಚರಿಸುವ ದಸರಾ ತಾಣ ಮೈಸೂರು ಬಂತು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...

ಗೃಹಲಕ್ಷ್ಮಿ ಯೋಜನೆಯಿಂದ 52 ಸಾವಿರಕ್ಕೂ ಹೆಚ್ಚಿನ ಮಹಿಳೆಯರು ಹೊರಕ್ಕೆ: ಆದಾಯ ತೆರಿಗೆ ಇಲಾಖೆ ದಾಖಲೆಗಳು ಕಾರಣ ಎಂದ ಲಕ್ಷ್ಮಿ ಹೆಬ್ಬಾಳ್ಕರ್

ಬೆಂಗಳೂರು: ರಾಜ್ಯಾದ್ಯಂತ 1.26 ಕೋಟಿ ಫಲಾನುಭವಿಗಳಲ್ಲಿ 52,000 ಕ್ಕೂ ಹೆಚ್ಚು ಮಹಿಳೆಯರನ್ನು ಗೃಹಲಕ್ಷ್ಮಿ ಯೋಜನೆಯಿಂದ ತೆಗೆದುಹಾಕಲಾಗಿದೆ, ಏಕೆಂದರೆ ಅವರು ಜಿಎಸ್ಟಿ ಅಥವಾ ಆದಾಯ ತೆರಿಗೆ ಇಲಾಖೆಗಳ ದಾಖಲೆಗಳಲ್ಲಿ ತೆರಿಗೆದಾರರಾಗಿದ್ದಾರೆ ಎಂದು ಮಹಿಳಾ ಮತ್ತು...

ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ಧ ವಿಧಾನಸಭೆಯಲ್ಲಿ ನಿರ್ಣಯ ಮಂಡನೆ

ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು. ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ,...

‘ಖಾಸಗಿ ಮಾಹಿತಿಯ ಕಳ್ಳತನ’ : ವಿವಾದಾತ್ಮಕ ಗೌಪ್ಯತೆ ನೀತಿ ಸಂಬಂಧ ವಾಟ್ಸಾಪ್, ಮೆಟಾ ವಿರುದ್ಧ ಸುಪ್ರೀಂ ಕೋರ್ಟ್ ಕಿಡಿ

ನಾಗರಿಕರ ಗೌಪ್ಯತೆಯ ಹಕ್ಕನ್ನು ಉಲ್ಲಂಘಿಸಲಾಗಿದೆ ಎಂದು ಮಂಗಳವಾರ ಸುಪ್ರೀಂ ಕೋರ್ಟ್ ವಾಟ್ಸಾಪ್ ಮತ್ತು ಅದರ ಪೋಷಕ ಕಂಪನಿ ಮೆಟಾವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ. ಡೇಟಾ ಹಂಚಿಕೆಯ ಹೆಸರಿನಲ್ಲಿ ಬಳಕೆದಾರರ ಖಾಸಗಿ ಡೇಟಾವನ್ನು ಬಳಸಿಕೊಳ್ಳಲು...